ವಿದ್ಯಾವಂತರ ಜಿಲ್ಲೆಯಲ್ಲಿ 4,300 ಅಕ್ಷರ ವಂಚಿತರು!


Team Udayavani, Feb 20, 2019, 1:00 AM IST

vidyavantaru.jpg

ಮಂಗಳೂರು: ವಿದ್ಯಾವಂತರ ಜಿಲ್ಲೆ ಎಂದು ಗುರುತಿಸಿ ಕೊಂಡ ದಕ್ಷಿಣ ಕನ್ನಡದಲ್ಲಿ ಒಟ್ಟು 4,300 ಮಂದಿ ಅನಕ್ಷರಸ್ಥರನ್ನು ಗುರುತಿಸಲಾಗಿದೆ. 2009ರಿಂದ ಸ್ಥಗಿತಗೊಂಡಿದ್ದ ಸಾಕ್ಷರತಾ ಚಟು ವಟಿಕೆಗಳಿಗೆ ಸರಕಾರ ಮತ್ತೆ 
ಚಾಲನೆ ನೀಡಿದೆ.

ಜಿಲ್ಲೆಯನ್ನು ಈ ಹಿಂದೆ ಸಾಕ್ಷರತಾ ಜಿಲ್ಲೆ ಎಂದು ಘೋಷಿಸಲಾಗಿತ್ತು. ಆದರೆ ಇನ್ನೂ ಅಕ್ಷರ ಜ್ಞಾನ ವಂಚಿತರಿದ್ದಾರೆ ಎಂಬ ಅನುಮಾನದ ಮೇರೆಗೆ ಅಂಗನವಾಡಿ ಕಾರ್ಯಕರ್ತೆಯರ ಮೂಲಕ 15ರಿಂದ 50 ವರ್ಷ ದೊಳಗಿನವರನ್ನು ಗುರಿಯಾಗಿಸಿ ಕೊಂಡು ಸಮೀಕ್ಷೆ ನಡೆಸಲಾಗಿತ್ತು.

ಅದರ ಪ್ರಕಾರ ಮಂಗಳೂರಿನಲ್ಲಿ 1,791, ಬೆಳ್ತಂಗಡಿಯಲ್ಲಿ 943, ಸುಳ್ಯದಲ್ಲಿ 591, ಪುತ್ತೂರಿನಲ್ಲಿ 633 ಹಾಗೂ ಬಂಟ್ವಾಳದಲ್ಲಿ 342 ಮಂದಿ ಅನಕ್ಷರಸ್ಥರನ್ನು ಗುರುತಿಸಲಾಗಿದೆ. ಅವರಿಗೆ ಅಕ್ಷರಾಭ್ಯಾಸ ಆರಂಭಿಸಲು ತಾಲೂಕು ಮಟ್ಟದಲ್ಲಿ ಗ್ರಾ.ಪಂ. ಗಳ ಪಿಡಿಒ ಹಾಗೂ ಪ್ರೇರಕರ ಸಭೆಗಳನ್ನು ನಡೆಸಲಾಗುತ್ತಿದೆ. ಸಮೀಕ್ಷೆಯಲ್ಲಿ ಗುರುತಿಸಲ್ಪಟ್ಟವರಿಗೆ ಬೋಧನೆ, ಮೌಲ್ಯಮಾಪನ ಕಾರ್ಯ ನಡೆಯಲಿದೆ.

ಅಕ್ಷರ ಕಲಿಕೆ ಪ್ರಕ್ರಿಯೆಯನ್ನು ಸೇವಾ ಸಂಸ್ಥೆಗಳ ಮೂಲಕ ನಡೆಸಲು ತೀರ್ಮಾನಿಸಲಾಗಿತ್ತಾದರೂ ಈಗ ಗ್ರಾ.ಪಂ.ಗಳೇ ಕೈಗೊಳ್ಳಲಿವೆ. ಅನುಷ್ಠಾನದ ಹೊಣೆಯನ್ನು ಪಿಡಿಒಗಳಿಗೆ ವಹಿಸಲಾಗುತ್ತಿದೆ. ಗ್ರಾ.ಪಂ. ಮಟ್ಟದಲ್ಲಿ ಈಗಾಗಲೇ ಪ್ರೇರಕರು ಕಾರ್ಯ ನಿರ್ವಹಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಸಾಕ್ಷರತಾ ಕಾರ್ಯ ಕ್ರಮದಡಿ ಚಾಲನೆಯಲ್ಲಿದ್ದ ಮುಂದು ವರಿಕಾ ಶಿಕ್ಷಣವನ್ನು 2009ರ ಮಾರ್ಚ್‌ನಲ್ಲಿ ನಿಲ್ಲಿಸಲಾಗಿತ್ತು. 

ಆರು ತಿಂಗಳ ಕಲಿಕೆ
ಅಕ್ಷರ ವಂಚಿತರಿಗೆ ಅಕ್ಷರಾಭ್ಯಾಸ ಕಲಿಸಲು ಲೋಕ ಶಿಕ್ಷಣ ನಿರ್ದೇಶನಾಲಯದ ರಾಜ್ಯ ಸಾಕ್ಷರತಾ ಮಿಷನ್‌ ಪ್ರಾಧಿಕಾರ “ಬಾಳಿಗೆ ಬೆಳಕು’ ಪಠ್ಯಪುಸ್ತಕ ಸಿದ್ಧಪಡಿಸಿದೆ. ಸಾಮಾನ್ಯವಾಗಿ ಶಾಲೆಗಳಲ್ಲಿ “ಅಕ್ಷರ- ಅಕ್ಷರದಿಂದ ಶಬ್ದ- ಶಬ್ದದಿಂದ ವಾಕ್ಯ’ ರಚನೆ ಕಲಿಕಾ ಕ್ರಮವಾಗಿರುತ್ತದೆ. ಆದರೆ ಈ ಯೋಜನೆಯಲ್ಲಿ “ವಾಕ್ಯ-ವಾಕ್ಯದಿಂದ ಶಬ್ದ- ಶಬ್ದದಿಂದ ಅಕ್ಷರ’ ಮಾದರಿಯ ಕಲಿಕೆ. ಕಲಿಕೆ ಅವಧಿ ಆರು ತಿಂಗಳು. ದಿನಕ್ಕೆ ಎರಡು ಗಂಟೆ ಕಲಿಕೆ. ಓದುವುದು, ಬರೆಯುವುದು ಹಾಗೂ ಲೆಕ್ಕವೆಂದು ವಿಂಗಡಿಸಲಾಗಿದ್ದು ಪ್ರತಿಯೊಂದಕ್ಕೂ 50 ಅಂಕಗಳಂತೆ ಒಟ್ಟು 150 ಅಂಕಗಳಿರುತ್ತವೆ. ಶೇ. 40 ಅಂಕ ಗಳಿಸಿದರೆ ಉತ್ತೀರ್ಣ ಎಂದು ಪರಿಗಣಿಸಲಾಗುವುದು.

ಸರಕಾರದ ಆದೇಶದಂತೆ 
15ರಿಂದ 50 ವಯೋಮಾನದವರ ಸಮೀಕ್ಷೆ ನಡೆಸಿ ಅಕ್ಷರ ವಂಚಿತರ ಮಾಹಿತಿ ಕಲೆಹಾಕಿದ್ದು, ಅವರನ್ನು ಸಾಕ್ಷರರನ್ನಾಗಿಸಲು ಜಿಲ್ಲೆಯಲ್ಲಿ ಸಾಕ್ಷರತಾ ಚಟುವಟಿಕೆ ಮತ್ತೆ ಆರಂಭಗೊಂಡಿದೆ. ಪ್ರತಿ ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.
– ಸುಧಾಕರ್‌ ಕೆ., ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ

– ಕೇಶವ ಕುಂದರ್

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.