ಮೂಲರಪಟ್ಣ ತಾತ್ಕಾಲಿಕ ರಸ್ತೆ ಬಂದ್‌ ; ಮನವೊಲಿಕೆ ಬಳಿಕ ತೆರವು


Team Udayavani, Feb 21, 2019, 6:27 AM IST

21-february-7.jpg

ಎಡಪದವು : ಮೂಲರಪಟ್ಣ ಫಲ್ಗುಣಿ ನದಿಗೆ ಅಡ್ಡಲಾಗಿ ಸಾರ್ವಜನಿಕರು ನಿರ್ಮಿಸಿರುವ ಮಣ್ಣಿನ ರಸ್ತೆಯಲ್ಲಿ ಲಾರಿಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ರಸ್ತೆ ಹಾದುಹೋಗಿರುವ ಖಾಸಗಿ ಜಾಗದ ಮಾಲಕರಿಗೆ ಬಜಪೆ ಪೊಲೀಸರು ನೋಟಿಸ್‌ ನೀಡಿದ ಕಾರಣ ಜಾಗದ ಮಾಲಕರು ರಸ್ತೆಯನ್ನು ಬಂದ್‌ ಮಾಡಿದ ಘಟನೆ ಬುಧವಾರ ಬೆಳಗ್ಗೆ ಮುತ್ತೂರು ಭಾಗದಲ್ಲಿ ನಡೆದಿದೆ.

ಕಳೆದ ವರ್ಷ ಮೂಲರಪಟ್ಣ ಸೇತುವೆ ಮುರಿದು ಬಿದ್ದ ಅನಂತರ ಮುತ್ತೂರು- ಬಂಟ್ವಾಳ ಸಂಚಾರ ಮೊಟಕುಗೊಂಡಿದ್ದು, ಸಂಚಾರಕ್ಕಾಗಿ ಸಾರ್ವಜನಿಕರು ತೂಗು ಸೇತುವೆಯನ್ನು ಅವಲಂಬಿಸಿಕೊಂಡಿದ್ದರು. ಆದರೆ ಹೊಸ ಸೇತುವೆ ವಿಳಂಬವಾಗಿರುವುದನ್ನು ಗಮನಿಸಿದ ಸಾರ್ವಜನಿಕರು ಫಲ್ಗುಣಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗುತ್ತಿದ್ದಂತೆ ಮೂಲರಪಟ್ಣ ಮಸೀದಿ ಸಮೀಪದಿಂದ ಮುತ್ತೂರಿನ ಖಾಸಗಿ ಜಾಗದವರೆಗೆ ನದಿಗೆ ಅಡ್ಡಲಾಗಿ ಮೋರಿ ಅಳವಡಿಸಿ, ಲೋಡ್‌ಗಟ್ಟಲೆ ಮಣ್ಣು ತುಂಬಿಸಿ ತಾತ್ಕಾಲಿಕ ಮಣ್ಣಿನ ರಸ್ತೆ ಯನ್ನು ನಿರ್ಮಿಸಿದ್ದರು. ಬಸ್‌ಗಳನ್ನು ಹೊರತುಪಡಿಸಿ ಇನ್ನಿತರ ಎಲ್ಲ ವಾಹನಗಳು ಸಂಚರಿಸುತ್ತಿರುವುದರಿಂದ ಸಾರ್ವಜನಿಕರಿಗೆ ಬಹಳ ಅನುಕೂಲವಾಗಿತ್ತು. ಈ ನಡುವೆ ನಿನ್ನೆ ವ್ಯಕ್ತಿ ಯೋರ್ವರು ಬಜಪೆ ಠಾಣೆಗೆ ದೂರವಾಣಿ ಕರೆ ಮಾಡಿ ತಾತ್ಕಾಲಿಕ ಮಣ್ಣಿನ ರಸ್ತೆಯಲ್ಲಿ ಅಕ್ರಮವಾಗಿ ಮರಳನ್ನು ಸಾಗಾಟ ಮಾಡಲಾಗುತ್ತಿದೆ ಎಂದು ದೂರು ನೀಡಿದ್ದರು.

ನದಿಯ ದಡದಿಂದ ಮುತ್ತೂರಿನ ಮುಖ್ಯ ರಸ್ತೆಯನ್ನು ಸಂಪರ್ಕಿಸುವ ಒಳ ರಸ್ತೆಯು ಖಾಸಗಿಯವರ ಜಮೀನಿ ನಲ್ಲಿ ಹಾದುಹೋಗಿತ್ತು. ಬಜಪೆ ಪೊಲೀಸರು ಖಾಸಗಿಯವರಿಗೆ ಇರುವ ಜಮೀನ ಲ್ಲಿರುವ ರಸ್ತೆಯ ಮೂಲಕ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂದು ನೋಟಿಸ್‌ ಜಾರಿ ಮಾಡಿದ್ದರು.

ಇದರಿಂದ ಬೇಸರಗೊಂಡ ಖಾಸಗಿ ವ್ಯಕ್ತಿ ಸಾರ್ವಜನಿಕರಿಗೆ ಅನುಕೂಲವಾಗಲೆಂದು ತನ್ನ ಜಮೀನಿನಲ್ಲಿ ರಸ್ತೆ ನಿರ್ಮಿಸಿಕೊಟ್ಟರೆ ನನಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ ಎಂದು ಆಕ್ರೋಶಗೊಂಡು ಈ ಜಾಗದಲ್ಲಿ ಗೇಟ್‌ ಹಾಕಿ ಮುಚ್ಚಿದ್ದರಿಂದ ಸಾರ್ವ ಜನಿಕರಿಗೆ ಸಂಚಾರಕ್ಕೆ ಅನಾನುಕೂಲ ಉಂಟಾಗಿತ್ತು.

ವಿಷಯ ತಿಳಿದ ಸಾರ್ವಜನಿಕರು ಸ್ಥಳಕ್ಕೆ ಜಮಾಯಿಸಿ ಸ್ಥಳಕ್ಕಾಗಮಿಸಿದ ಪೊಲೀಸರ ಜತೆ ನೋಟಿಸ್‌ ನೀಡಿರುವಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ದೂರು ನೀಡಿದ ವ್ಯಕ್ತಿ ಯಾರೆಂದು ಕೇಳಿದರು. ಲಿಖೀತ ದೂರು ನೀಡದೆ ಕೇವಲ ಫೋನಿನ ಮೂಲಕ ನೀಡಿದ ದೂರಿನ ಆಧಾರದಲ್ಲಿ ನೋಟಿಸ್‌ ನೀಡಿದ್ದು ಯಾಕೆ? ಈಗ ರಸ್ತೆ ಮುಚ್ಚಿರುವುದರಿಂದ ಸಾರ್ವ ಜನಿಕರಿಗೆ ಅನಾನುಕೂಲವಾಗಿದೆ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದರು.

ಕೊನೆಗೆ ಪೊಲೀಸರು, ಜಮೀನು ಮಾಲಕರು ಹಾಗೂ ಸಾರ್ವಜನಿಕರ ಜತೆ ಪರಸ್ಪರ ಮಾತುಕತೆ ನಡೆಸಿ, ಮನವೊಲಿಸಿ ಮುಚ್ಚಿದ ಗೇಟನ್ನು ತೆರವುಗೊಳಿಸಿದರು. ಈಗ ತಾತ್ಕಾಲಿಕ ಮಣ್ಣಿನ ರಸ್ತೆಯಲ್ಲಿ ಮತ್ತೆ ಸಂಚಾರ ಆರಂಭಗೊಂಡಿದೆ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.