“ಪರಿಸರ ಸಂರಕ್ಷಣೆ ಜೀವನ ಧ್ಯೇಯವಾಗಬೇಕು’
Team Udayavani, Feb 22, 2019, 1:05 AM IST
ಮಂಗಳೂರು: ಪರಿಸರವನ್ನು ಅಭಿವೃದ್ಧಿ, ಅನುಕೂಲಗಳ ಹೆಸರಿನಲ್ಲಿ ನಾಶ ಮಾಡುತ್ತಿರುವುದನ್ನು ಕಾಣುತ್ತಿದ್ದೇವೆ. ಈ ಕಾಲಘಟ್ಟದಲ್ಲಿ ಮಕ್ಕಳಲ್ಲಿ ಪರಿಸರ ಸಂರಕ್ಷಣೆ ಪ್ರಜ್ಞೆಯನ್ನು ಬೆಳೆಸುವ ಕಾರ್ಯ ಅಗತ್ಯ ಮತ್ತು ಇದು ಜೀವನ ಧ್ಯೇಯವಾಗಬೇಕು ಎಂದು ಮಂಗಳೂರಿನ 3ನೇ ಹೆಚ್ಚುವರಿ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಮುರಲೀಧರ್ ಪೈ ಬಿ. ಹೇಳಿದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಜಿಲ್ಲಾಡಳಿತ, ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಸಹಯೋಗದಲ್ಲಿ ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಪರಿಸರ ಮಿತ್ರ ಶಾಲೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಪರಿಸರ ಪ್ರಶಸ್ತಿ ಮೂಲಕ ಶಾಲೆಗಳಲ್ಲಿ ಪರಿಸರ ಸಂರಕ್ಷಣೆಗೆ ಪ್ರೋತ್ಸಾಹ ನೀಡುತ್ತಿರುವುದು ಉತ್ತಮ ಕಾರ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿ ಗೋಡು ಮಾತನಾಡಿ, ಮಕ್ಕಳಲ್ಲಿ ಪರಿಸರ ಸಂರಕ್ಷಣೆ ಅರಿವು ಮೂಡಿಸುವುದು ಅಗತ್ಯ. ಪರಿಸರ ಮಿತ್ರ ಶಾಲೆ ಪ್ರಶಸ್ತಿ ಈ ನಿಟ್ಟಿನಲ್ಲಿ ಪ್ರೋತ್ಸಾಹದಾಯಕವಾಗಿದೆ ಎಂದು ಹೇಳಿ ಪ್ರಶಸ್ತಿ ವಿಜೇತ ಶಾಲೆಗಳನ್ನು ಅಭಿನಂದಿಸಿದರು.
ಮೀನುಗಾರಿಕೆ ಕಾಲೇಜಿನ ಪ್ರಾಧ್ಯಾಪಕ ಡಾ| ಎಸ್.ಎಂ. ಶಿವಪ್ರಕಾಶ್ ಉಪನ್ಯಾಸ ನೀಡಿದರು.
ಸುರಿಬೈಲು ದ.ಕ. ಜಿ.ಪಂ. ಉನ್ನತೀಕರಿಸಿದ ಹಿ.ಪ್ರಾ. ಶಾಲೆಗೆ ಜಿಲ್ಲಾ ಪರಿಸರ ಮಿತ್ರ ಶಾಲಾ ಪ್ರಶಸ್ತಿ ವಿತರಿಸಲಾಯಿತು. ಜಿಲ್ಲೆಯ 10 ಶಾಲೆಗೆ ಹಸಿರು ಶಾಲೆ, 10 ಶಾಲೆಗಳಿಗೆ ಹಳದಿ ಶಾಲೆ ಪ್ರಶಸ್ತಿ ವಿತರಿಸಲಾಯಿತು. ಲೋಕೇಶ್ ಅವರು ಉತ್ತಮ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಸ್ತಿ ವಿಜೇತರಾದರು.
ನ್ಯಾ| ಗಂಗಾಧರ್, ಮೇಯರ್ ಭಾಸ್ಕರ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಶ್ ಎಲ್. ರಾಡ್ರಿಗಸ್, ಡಿಡಿಪಿಐ ಶಿವರಾಮಯ್ಯ, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ದೇಶಕ ಡಾ| ಕೆ.ವಿ. ರಾವ್, ವಿಜ್ಞಾನ ಪರಿಷತ್ ಜಿಲ್ಲಾ ಅಧ್ಯಕ್ಷ ಡಾ| ಹಾಜಿ ಅಬೂಬಕ್ಕರ್ ಉಪಸ್ಥಿತರಿದ್ದರು. ರಾಜಶೇಖರ ಬಿ. ಪುರಾಣಿಕ್ ಸ್ವಾಗತಿಸಿದರು. ಜಯಪ್ರಕಾಶ್ ಬಿ. ಪುರಾಣಿಕ್ ಪ್ರಸ್ತಾವನೆಗೈದರು. ಕರುಣಾಕರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್