ವಿಶೇಷ ಅಂಚೆ ಲಕೋಟೆ ಬಿಡುಗಡೆ
Team Udayavani, Feb 24, 2019, 1:00 AM IST
ಮಂಗಳೂರು: ಗಾಂಧೀಜಿಯವರ ಮಂಗಳೂರು ಭೇಟಿ ಸ್ಮರಣಾರ್ಥ ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗದ ವತಿಯಿಂದ ವಿಶೇಷ ಅಂಚೆ ಲಕೋಟೆಯನ್ನು ಶನಿವಾರ ಬಿಡುಗಡೆಗೊಳಿಸಲಾಯಿತು.
ಗಾಂಧೀಜಿ 1934ರಲ್ಲಿ ಇಲ್ಲಿಗೆ ಆಗಮಿಸಿ ಉಪನ್ಯಾಸ ನೀಡಿದ್ದ ಹೊಗೆ ಬಜಾರ್ನ ಜ್ಞಾನೋದಯ ಸಮಾಜ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ದಕ್ಷಿಣ ವಲಯದ ಪೋಸ್ಟ್ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ಅಂಚೆ ಲಕೋಟೆ ಬಿಡುಗಡೆಗೊಳಿಸಿದರು.
ಗಾಂಧೀಜಿಯವರ 150ನೇ ಜನ್ಮ ದಿನಾಚರಣೆ ಸಂದರ್ಭ ಇಲಾಖೆ 12 ವಿಶೇಷ ಅಂಚೆ ಲಕೋಟೆಗಳನ್ನು ಬಿಡುಗಡೆ ಮಾಡುತ್ತಿದೆ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಮಾತನಾಡಿ, ಗಾಂಧೀಜಿಯವರ ಆದರ್ಶ ಮತ್ತು ಸಂದೇಶಗಳನ್ನು ಜನರಿಗೆ ತಲುಪಿಸಬೇಕು ಎಂದರು. ಸಮಾಜ ಮಂದಿರದ ಅಧ್ಯಕ್ಷ ಪ್ರೇಮ್ಚಂದ್ರ ತಿಂಗಳಾಯ ಅವರು ಗಾಂಧೀಜಿಯವರ ಭೇಟಿ ಬಗ್ಗೆ ವಿವರಿಸಿದರು. ಡಾ| ಜಿ.ಜಿ. ಲಕ್ಷ್ಮಣ ಪ್ರಭು ಮಾತನಾಡಿದರು.ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಶ್ರೀಹರ್ಷ ಎನ್. ಸ್ವಾಗತಿಸಿದರು. ಹಿರಿಯ ಅಧಿಕಾರಿಗಳಾದ ಮ್ಯಾಕ್ಸಿ ಜಿ. ಪಿಂಟೋ ವಂದಿಸಿ, ಜೋಸೆಫ್ ರಾಡ್ರಿಗಸ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ