ದ.ಕ.ದಲ್ಲಿ  ಹೆಚ್ಚಿದ ಆಕಾಂಕ್ಷಿಗಳು!


Team Udayavani, Mar 15, 2019, 12:30 AM IST

dk-s.jpg

ಮಂಗಳೂರು: ಚುನಾವಣೆ ಕಾವು ಜೋರಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪಾಳೆಯದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹಾಗೂ ಟಿಕೆಟ್‌ಗಾಗಿ ಲಾಬಿ ಜೋರಾಗುತ್ತಿದೆ. ಉಡುಪಿ -ಚಿಕ್ಕಮಗಳೂರು ಕ್ಷೇತ್ರವು ಕಾಂಗ್ರೆಸ್‌ ಕೈತಪ್ಪಿದ್ದು, ಅದರ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್‌ ನಾಯಕರೆಲ್ಲ ಈಗ ದಕ್ಷಿಣ ಕನ್ನಡದತ್ತ ಮುಖ ಮಾಡಿದ್ದಾರೆ. 

ಬಿಜೆಪಿಯಲ್ಲಿ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಮೂರನೇ ಬಾರಿಗೆ ಕಣಕ್ಕಿಳಿಯುವುದು ಬಹು ತೇಕ ಖಚಿತಗೊಂಡಿದೆ. ಆದರೆ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆ ಕಸರತ್ತು ಮುಂದುವರಿದಿದ್ದು, ಕುತೂಹಲಕ್ಕೆ ಎಡೆ ಮಾಡಿದೆ. ಬಿಜೆಪಿ ಅಭ್ಯರ್ಥಿ ಹೆಸರು ಮಾ.18ರ ವೇಳೆಗೆ ಘೋಷಣೆಯಾಗುವ ಸಾಧ್ಯತೆ ಯಿದ್ದರೆ, ಕಾಂಗ್ರೆಸ್‌ ನಾಮಪತ್ರ ಸಲ್ಲಿಕೆಗೆ ಒಂದೆರಡು ದಿನಕ್ಕೆ ಮೊದಲು ಪ್ರಕಟಿಸುವ ನಿರೀಕ್ಷೆ ಇದೆ. 

ಘಟಾನುಘಟಿ ಆಕಾಂಕ್ಷಿಗಳು
ಈ ಬಾರಿಯ ಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್‌ ಹೈಕಮಾಂಡ್‌ನ‌ ಪಾಲಿಗೆ ದೊಡ್ಡ ಸವಾಲಾಗಿದೆೆ. ಘಟಾನುಘಟಿ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದು ಇದಕ್ಕೆ ಕಾರಣ. ಮಾಜಿ ಸಚಿವ ರಮಾನಾಥ ರೈ, ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌, ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಮಾಜಿ ಸಚಿವ ವಿನಯಕುಮಾರ್‌ ಸೊರಕೆ, ಯುವ ನಾಯಕ ಮಿಥುನ್‌ ರೈ ಹಾಗೂ ಉದ್ಯಮಿ ಯು.ಕೆ. ಮೋನು ಪ್ರಮುಖರು. ಇವರಲ್ಲದೆ ಸಹಕಾರಿ ಧುರೀಣ, ಎಸ್‌ಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಹೆಸರು ಕೂಡ ಮುಂಚೂಣಿಯಲ್ಲಿ ಕೇಳಿಬರುತ್ತಿದೆ.

ಉಡುಪಿ – ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದು ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿ ಆಯ್ಕೆ ವಿಚಾರವನ್ನು ಜಟಿಲಗೊಳಿಸಿದೆ. ಕಾಂಗ್ರೆಸ್‌ ಟಿಕೆಟ್‌ ಪ್ರಬಲ ಆಕಾಂಕ್ಷಿಯಾಗಿರುವ ಬಿ.ಕೆ. ಹರಿಪ್ರಸಾದ್‌ ಒಂದೊಮ್ಮೆ ಇಲ್ಲಿ ಅವಕಾಶ ಕೈತಪ್ಪಿದರೆ ಉಡುಪಿ ಕ್ಷೇತ್ರವನ್ನು ಆಯ್ದುಕೊಳ್ಳಲು ಬಯಸಿದ್ದರು. ಆದರೆ ಈಗ ಉಡುಪಿ ಜೆಡಿಎಸ್‌ ಪಾಲಾಗಿದೆ. ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹೆಸರು ಕೂಡ ಮುಂಚೂಣಿ ಯಲ್ಲಿದೆ. ಕರಾವಳಿಯಲ್ಲಿ ಬಿಲ್ಲವ – ಬಂಟ ಸಮುದಾಯದ ಪ್ರಾಬಲ್ಯವಿದ್ದು, ಜಾತಿ ಸಮೀಕರಣದಲ್ಲೂ ಸಮಸ್ಯೆ ಎದುರಾಗಿದೆ.

ವಿನಯ ಕುಮಾರ್‌ ಸೊರಕೆ ಉಡುಪಿಯಿಂದ ಪ್ರಬಲ ಆಕಾಂಕ್ಷಿಯಾಗಿದ್ದರು. ಈಗ ಅವರೂ ದ. ಕ.ದಲ್ಲೇ ಪ್ರಯತ್ನ ನಡೆಸಬೇಕಾಗಿದೆ. ಈ ನಡುವೆ ಈ ಬಾರಿ ಅಲ್ಪಸಂಖ್ಯಾಕ ಸಮು ದಾಯಕ್ಕೆ ಅವಕಾಶ ನೀಡಬೇಕೆಂಬ ಬೇಡಿಕೆ ಪ್ರಬಲವಾಗಿದ್ದು, ಐವನ್‌ ಮತ್ತು ಯು.ಕೆ. ಮೋನು ಟಿಕೆಟ್‌ಗೆ ಬೇಡಿಕೆ ಸಲ್ಲಿಸಿದ್ದಾರೆ.

ಆದರೆ ಬಿಜೆಪಿಯಲ್ಲಿ ಹಾಲಿ ಸಂಸದ ನಳಿನ್‌ ಹೆಸರು ಬಹುತೇಕ ಅಂತಿಮಗೊಂಡಿದೆ. ಮಾ.15ಕ್ಕೆ ಬೆಂಗಳೂರಿನಲ್ಲಿ ಕೋರ್‌ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮಗೊಳ್ಳಲಿದೆ. ಮಾ.18ರಂದು ಹೊಸದಿಲ್ಲಿಯಲ್ಲಿ ನಡೆಯುವ ಬಿಜೆಪಿ ಚುನಾವಣಾ ಸಮಿತಿ ಸಭೆ ಯಲ್ಲಿ ಮಂಡನೆಯಾಗಿ ಅಧಿಕೃತ ವಾಗಿ ಘೋಷಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಯಲ್ಲಿಯೂ ಕೆಲವು ಆಕಾಂಕ್ಷಿಗಳಿದ್ದರೂ ಅವರೆಲ್ಲ ಹಿಂದೆ ಸರಿದಿದ್ದು, ನಳಿನ್‌ ಆಯ್ಕೆಯನ್ನು ಸುಗಮವಾಗಿಸಿದೆ. ಸಂಚಲನ ಮೂಡಿಸಿದ ಪೂಜಾರಿ ಹೇಳಿಕೆ ಕಾಂಗ್ರೆಸ್‌ ಪಕ್ಷದ ವರಿಷ್ಠ ಮಂಡಳಿ ಬಯಸಿದರೆ ತಾನು ಈ ಬಾರಿಯೂ ಸ್ಪರ್ಧಿಸಲು ಸಿದ್ಧ ಎಂದು ಹಿರಿಯ ನಾಯಕ ಜನಾರ್ದನ ಪೂಜಾರಿ ಹೇಳಿರುವುದು ಸಂಚಲನ ಮೂಡಿಸಿದೆ.

ಹೊಸ ಆಯ್ಕೆ ತಲೆನೋವು
ಇದೆಲ್ಲದರ  ನಡುವೆ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಹೆಸರು ಪ್ರಬಲವಾಗಿ ಕೇಳಿ ಬರತೊಡಗಿದೆ. ಡಾ|ರಾಜೇಂದ್ರ ಕುಮಾರ್‌ ಇತ್ತೀಚೆಗೆ ಮಂಗಳೂರಿನಲ್ಲಿ ಕಾಂಗ್ರೆಸ್‌ ಜಿಲ್ಲಾ ಸಮಾವೇಶದ ವೇದಿಕೆಯ ಮುಂದಿನ ಸಾಲಿನಲ್ಲಿ ಕಾಣಿಸಿಕೊಂಡಿದ್ದು, ಅಭ್ಯರ್ಥಿಗಳ ಆಯ್ಕೆ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದೆ. ಮೂರ್‍ನಾಲ್ಕು ಮಂದಿ ಪ್ರಬಲ ಟಿಕೆಟ್‌ ಆಕಾಂಕ್ಷಿಗಳಿದ್ದು, ಯಾರನ್ನು ಅಭ್ಯರ್ಥಿಯನ್ನಾಗಿ ಘೋಷಿಸಬೇಕೆ ನ್ನುವುದು ಕಾಂಗ್ರೆಸ್‌ ತಲೆನೋವು. 

-   ಕೇಶವ ಕುಂದರ್‌

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.