“ತುಳು ಜ್ಞಾತಿ ಪದಕೋಶ ಮಹತ್ವದ ಕೃತಿ’ ಡಾ| ಹಂಪನಾ


Team Udayavani, Mar 16, 2019, 12:30 AM IST

z-22.jpg

ಉಳ್ಳಾಲ: ತುಳು ಭಾಷೆಯನ್ನು ಮೂಲವಾಗಿಟ್ಟುಕೊಂಡು ರಚಿತವಾಗಿರುವ “ತುಳು ಜ್ಞಾತಿ ಪದಕೋಶ’ ಬಹು ದೀರ್ಘ‌ಕಾಲ ನಿಲ್ಲುವಂತಹ ಮಹತ್ವದ ಕೃತಿ ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ| ಹಂಪ ನಾಗರಾಜಯ್ಯ ಅಭಿಪ್ರಾಯಪಟ್ಟರು. 

ದೇರಳಕಟ್ಟೆಯ ನಿಟ್ಟೆ ಪರಿಗಣಿಸಲಾಗಿರುವ ವಿ.ವಿ.ಯ ತುಳು ಭಾಷಾ ವಿಭಾಗದ ಆಶ್ರಯದಲ್ಲಿ ತುಳು ಭಾಷಾ ತಜ್ಞರಾದ ಡಾ| ಪದ್ಮನಾಭ ಕೇಕುಣ್ಣಾಯ ಹಾಗೂ ಡಾ| ಸಾಯಿ ಗೀತಾ ಸಂಪಾದಕತ್ವದಲ್ಲಿ ರಚಿಸಲಾದ ತುಳು ಭಾಷಾ ನಿಘಂಟು “ತುಳು ಜ್ಞಾತಿ ಪದಕೋಶ’ವನ್ನು ಶುಕ್ರವಾರ ನಿಟ್ಟೆ ವಿ.ವಿ.ಯಲ್ಲಿ ನಡೆದ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿ ಮಾತನಾಡಿ ದರು. ಇಂತಹ ಮಹಾಕೃತಿ ರಚನೆಗೆ ಪ್ರೇರಣೆಯೊಂದಿಗೆ ಆರ್ಥಿಕ ಸಹಾಯ ನೀಡಿದ ನಿಟ್ಟೆ ವಿ.ವಿ.ಯ ಕಾರ್ಯ ಶ್ಲಾಘನೀಯ ಎಂದರು.

ಹಂಪಿ ಕನ್ನಡ ವಿ.ವಿ. ಹಾಗೂ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿ.ವಿ. ವಿಶ್ರಾಂತ ಕುಲಪತಿ ಪ್ರೊ| ಬಿ.ಎ. ವಿವೇಕ ರೈ ಮಾತನಾಡಿ, ಭಾಷಾ ಶಾಸ್ತ್ರ ವಿಚಾರದಲ್ಲಿ ತುಳು ಭಾಷೆ ಯನ್ನು ಮೂಲವನ್ನಾಗಿಸಿ ರಚನೆಗೊಂಡ ಎರಡು ಪ್ರಮುಖ ಜ್ಞಾತಿ ಪದಕೋಶ ಗಳಲ್ಲಿ ಒಂದು ಉಡುಪಿಯಲ್ಲಿ ಕು.ಶಿ. ಹರಿದಾಸ ಭಟ್‌ ಮುಂದಾಳತ್ವದಲ್ಲಿ ತುಳು – ಕನ್ನಡ -ಇಂಗ್ಲಿಷ್‌ ನಿಘಂಟಿನ ಆರು ಸಂಪುಟ ಮೊದಲನೆಯದಾದರೆ ಎರಡನೆಯದು ಇಂದು ಬಿಡುಗಡೆ ಯಾದ ಜ್ಞಾತಿ ಪದಕೋಶಗಳು. ಇದನ್ನು ಆನ್‌ಲೈನ್‌ಗೆ ತರುವ ಕೆಲಸ ಆಗಬೇಕು ಎಂದರು.

ನಿಟ್ಟೆ ವಿ.ವಿ. ಸಹ ಕುಲಾಧಿಪತಿ ಡಾ| ಎಂ. ಶಾಂತರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ, ಬೆಂಗಳೂರಿನ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿ.ವಿ. ಹಾಗೂ ನಿಟ್ಟೆ ವಿ.ವಿ. ವಿಶ್ರಾಂತ ಕುಲಪತಿ ಡಾ| ಎಸ್‌. ರಮಾನಂದ ಶೆಟ್ಟಿ, ನಿಟ್ಟೆ ವಿ.ವಿ. ಕುಲಪತಿ ಡಾ| ಕೆ. ಸತೀಶ್‌ ಕುಮಾರ್‌ ಭಂಡಾರಿ, ಸಹ ಕುಲಪತಿ ಡಾ| ಎಂ.ಎಸ್‌. ಮೂಡಿತ್ತಾಯ, ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್‌ ಚಂದ್ರಹಾಸ ರೈ ಉಪಸ್ಥಿತರಿದ್ದರು. “ತುಳು ಜ್ಞಾತಿ ಪದಕೋಶ’ ಸಂಪಾದಕಿ ಡಾ| ಸಾಯಿಗೀತಾ ಸ್ವಾಗತಿಸಿದರು. ಸಂಪಾದಕ ಡಾ| ಪದ್ಮನಾಭ ಕೇಕುಣ್ಣಾಯ ವಂದಿಸಿದರು.

ಕನ್ನಡ ಸಾಹಿತ್ಯ ಪರಿಷತ್‌ ಕೈಗೊಂಡ ಕನ್ನಡ-ಕನ್ನಡ ನಿಘಂಟು ರಚನೆಗೆ 48 ವರ್ಷಗಳ ಪ್ರಯತ್ನ ನಡೆಯಿತು. ಈ ವೇಳೆ ಸಂಪಾದಕ ಮಂಡಳಿಯ ಸುಮಾರು 18 ಮಂದಿ ಅಗಲಿದ್ದರು. ಆದರೆ ನಿಟ್ಟೆ ವಿ.ವಿ. ಹೊರತಂದ ಜ್ಞಾತಿಪದಕೋಶ ಗಾತ್ರ, ಪಾತ್ರ, ಮಹತ್ವದಲ್ಲಿ ವಿಶಿಷ್ಟವಾದ ಕೃತಿಯಾಗಿದ್ದು, ಅಲ್ಪ ಅವಧಿಯಲ್ಲಿ ಸಂಪಾದನೆ ಮಾಡಿರುವುದು ಶ್ಲಾಘನೀಯ.
 ಡಾ| ಹಂಪ ನಾಗರಾಜಯ್ಯ

ಉಳ್ಳಾಲ: ತುಳು ಭಾಷಾ ನಿಘಂಟು “ತುಳು ಜ್ಞಾತಿ ಪದಕೋಶ’ವನ್ನು ನಿಟ್ಟೆ ವಿ.ವಿ.ಯಲ್ಲಿ ಬಿಡುಗಡೆಗೊಳಿಸಲಾಯಿತು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.