ಮಾ.19: ಪ್ರಥಮ ಪಿಯು ಫಲಿತಾಂಶ
Team Udayavani, Mar 17, 2019, 3:05 AM IST
ಮಂಗಳೂರು / ಉಡುಪಿ: ಈ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಮಾ. 19ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಪ್ರಕಟಿಸಲಾಗುವುದು. ದ.ಕ. ಜಿಲ್ಲೆಯ ವ್ಯಾಪ್ತಿಗೆ ಒಳಪಟ್ಟ ಪದವಿಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್ಲೈನ್ನಲ್ಲಿ ಪಡೆಯಲು ಅವಕಾಶ ಇದೆ. ಮಾ. 19ರ ಬೆಳಗ್ಗೆ 7ರಿಂದ results.dkpucpa.comನಲ್ಲಿ ವಿದ್ಯಾರ್ಥಿಯು ತನ್ನ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸಿ ಪಡೆದುಕೊಳ್ಳಬಹುದು. ಉತ್ತೀರ್ಣರಾದ ವಿದ್ಯಾರ್ಥಿಗಳು ತಾತ್ಕಾಲಿಕ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶವಿದೆ.
ಉಡುಪಿ ಜಿಲ್ಲೆಯಲ್ಲಿ ಆನ್ಲೈನ್ ಫಲಿತಾಂಶಕ್ಕೆ ಅನುಮತಿ ಸಿಗದ ಕಾರಣ ಕಾಲೇಜುಗಳಲ್ಲಿ ಫಲಿತಾಂಶ ಪಡೆದುಕೊಳ್ಳಬೇಕು.
ಅನುತ್ತೀರ್ಣಗೊಂಡ ವಿದ್ಯಾರ್ಥಿ ಗಳಿಗೆ ಎ.28ರಿಂದ ಮೇ 10ರ ವರೆಗೆ ಪೂರಕ ಪರೀಕ್ಷೆಯನ್ನು ದ.ಕ. ಜಿಲ್ಲೆಯ 7 ಮತ್ತು ಉಡುಪಿ ಜಿಲ್ಲೆಯ 3 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು. ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಎಂಸಿಎ (ಮಾರ್ಕ್ಸ್ ಕಮ್ ಅಪ್ಲಿಕೇಶನ್) ಡೌನ್ಲೋಡ್ ಮಾಡಿಕೊಂಡು ಮಾ. 30ರೊಳಗಾಗಿ ನಿಗದಿತ ಶುಲ್ಕದೊಂದಿಗೆ ಸಂಬಂಧಪಟ್ಟ ಕಾಲೇಜಿಗೆ ಸಲ್ಲಿಸಬೇಕು. ಪೂರಕ ಪರೀಕ್ಷೆಯ ಫಲಿತಾಂಶವನ್ನು ಮೇ 15ರಂದು ಪ್ರಕಟಿಸಲು ಇಲಾಖೆಯು ಆದೇಶಿಸಿದೆ ಹಾಗೂ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿಗೆ ದಾಖಲಾಗಲು ಅವಕಾಶವಿದೆ ಎಂದು ಡಿಡಿಪಿಯು ತಿಳಿಸಿದ್ದಾರೆ.
ದ್ವಿತೀಯ ಪಿಯು ಪರೀಕ್ಷೆ: 374 ಗೈರು
ಮಂಗಳೂರು/ಉಡುಪಿ: ದ್ವಿತೀಯ ಪಿಯುಸಿಗೆ ಶನಿವಾರ ಕನ್ನಡ ಪರೀಕ್ಷೆ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 23,226 ಮಂದಿ ವಿದ್ಯಾರ್ಥಿಗಳ ಪೈಕಿ 22,958 ಮಂದಿ ಹಾಜರಾಗಿದ್ದಾರೆ. 268 ಮಂದಿ ಗೈರು ಹಾಜರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 9,489 ವಿದ್ಯಾರ್ಥಿಗಳಲ್ಲಿ 106 ಮಂದಿ ಗೈರುಹಾಜರಾಗಿ 9,383 ಮಂದಿ ಹಾಜರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್