ವಿದ್ಯುತ್‌ ದರ ಹೆಚ್ಚಳ ಪ್ರಸ್ತಾವ ಮುಂದೂಡಿಕೆ


Team Udayavani, Mar 17, 2019, 3:46 AM IST

q-28.jpg

ಮಂಗಳೂರು: ಈ ಬಾರಿ ರಾಜ್ಯದ ವಿದ್ಯುತ್‌ ಗ್ರಾಹಕರಿಗೆ ದರ ಏರಿಕೆಯ ಬಿಸಿ ಮೂರು ತಿಂಗಳು ತಡವಾಗಿ ತಟ್ಟಲಿದೆ. ಸಾಮಾನ್ಯವಾಗಿ ಪ್ರತಿ ಎಪ್ರಿಲ್‌ 1ರಿಂದ ಅನ್ವಯವಾಗುವಂತೆ ವಿದ್ಯುತ್‌ ದರ ಏರಿಸಲಾಗುತ್ತದೆ. ಈ ಸಂಬಂಧ ಒಂದು ತಿಂಗಳ ಹಿಂದೆಯಷ್ಟೇ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ದರ ಹೆಚ್ಚಳದ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಆದರೆ ಈಗ ಲೋಕಸಭಾ ಚುನಾವಣೆ ಎದುರಾಗಿರುವುದರಿಂದ ವಿದ್ಯುತ್‌ ದರ ಹೆಚ್ಚಳ ಪ್ರಕ್ರಿಯೆ ಕೂಡ ಮುಂದೂಡಿಕೆಯಾಗಿದೆ. 

ಚುನಾವಣ ನೀತಿ ಸಂಹಿತೆಯು ವಿದ್ಯುತ್‌ ದರ ಪರಿಷ್ಕರಣೆಗೂ ಅನ್ವಯವಾಗುವುದರಿಂದ ಎ.1ರಿಂದ ಜಾರಿಗೊಳ್ಳಬೇಕಾದ ದರ ಪರಿಷ್ಕರಣೆಯನ್ನು ಮುಂದೂಡುವುದು ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗಕ್ಕೆ ಅನಿವಾರ್ಯ ವಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಕೆಇಆರ್‌ಸಿ ಕಚೇರಿಯಲ್ಲಿ ಆಯೋಗದ ಅಧ್ಯಕ್ಷರು ಮತ್ತು ಹಿರಿಯ ಅಧಿಕಾರಿಗಳು ಸಭೆ ನಡೆಸಿ ಈ ಕುರಿತಂತೆ ಚುನಾವಣ ಆಯೋಗಕ್ಕೆ ಪತ್ರ ಬರೆದು ಸ್ಪಷ್ಟನೆ ಕೇಳಲು ತೀರ್ಮಾನಿಸಿದ್ದಾರೆ. ಕಳೆದ ವರ್ಷ ವಿಧಾನಸಭೆ ಚುನಾವಣೆ ನಡೆದಾಗಲೂ ಇದೇ ರೀತಿಯ ಪರಿಸ್ಥಿತಿ ಎದುರಾದ ಕಾರಣ ವಿದ್ಯುತ್‌ ದರ ಪರಿಷ್ಕರಣೆ  ನಿರ್ಧಾರವನ್ನು ಮುಂದಕ್ಕೆ ಹಾಕಿತ್ತು. ಚುನಾವಣ ಫಲಿತಾಂಶ ಪ್ರಕಟವಾದ ಬಳಿಕ ಪ್ರಕಟನೆ ಹೊರಡಿಸಿ ಜೂನ್‌ನಿಂದ ಅನ್ವಯವಾಗುವಂತೆ ಪರಿಷ್ಕೃತ ದರವನ್ನು ಅನ್ವಯಿಸಲಾಗಿತ್ತು. 

ಪ್ರಕ್ರಿಯೆ ಪೂರ್ಣ
ವಿದ್ಯುತ್‌ ದರ ಏರಿಕೆ ಮಾಡುವಂತೆ 2018 ನ.30ರಂದು ಎಲ್ಲಾ ಐದು ಎಸ್ಕಾಂಗಳು ಕೆಇಆರ್‌ಸಿಗೆ ಮನವಿ ಸಲ್ಲಿಸಿದ್ದವು. ಅದರ ಪ್ರಕಾರ ಕೆಇಆರ್‌ಸಿ ಪ್ರಕಟನೆಯನ್ನು ಹೊರಡಿಸಿ 2019 ಫೆಬ್ರವರಿಯಲ್ಲಿ ದರ ಪರಿಷ್ಕರಣೆ ಕುರಿತು ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ (ಮೆಸ್ಕಾಂ) ಸೇರಿದಂತೆ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ಸಾರ್ವಜನಿಕ ವಿಚಾರಣೆ ನಡೆಸಿತ್ತು. ಬಳಿಕ ಎ.1ರಿಂದ ದರ ಹೆಚ್ಚಳ ಮಾಡುವ ಸಂಬಂಧ ಎಲ್ಲ ಕಂಪೆನಿಗಳು ತಮ್ಮ ವಲಯ ವ್ಯಾಪ್ತಿಯಲ್ಲಿ ಸೂಕ್ತ ದರ ಪರಿಷ್ಕರಣೆಯ ಪ್ರಸ್ತಾವನೆಯನ್ನು ಆಯೋಗಕ್ಕೆ ಸಲ್ಲಿಸಿದ್ದವು. 

ಎಲ್ಲ ಎಸ್ಕಾಂಗಳು ಪ್ರತಿ ಯೂನಿಟ್‌ ವಿದ್ಯುತ್‌ಗೆ 1 ರೂ. ನಿಂದ 1 ರೂ. 65 ಪೈಸೆ ತನಕ ದರ ಏರಿಸಬೇಕೆಂದು ಮನವಿ ಮಾಡಿವೆ. ಮೆಸ್ಕಾಂ ಪ್ರತಿ ಯೂನಿಟ್‌ಗೆ 1.38 ರೂ. ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದೆ. ದರ ಏರಿಕೆ ಕುರಿತಂತೆ ಕೆ.ಇ.ಆರ್‌.ಸಿ. ತನ್ನ ನಿರ್ಧಾರವನ್ನು ಇನ್ನಷ್ಟೇ ಪ್ರಕಟಿಸಬೇಕಿದೆ. ದರ ಪರಿಷ್ಕರಣೆ ವಿಳಂಬವಾದ ಉದಾಹರಣೆ ಇದೆ. ಇದರೊಂದಿಗೆ ಚುನಾವಣ ಆಯೋಗ ಆದೇಶ ಮಾಡಿದರೆ ವಿದ್ಯುತ್‌ ನಿಯಂತ್ರಣ ಆಯೋಗ ಅದನ್ನು ಪಾಲಿಸಲೇಬೇಕಾಗುತ್ತದೆ ಎನ್ನುತ್ತವೆ ಕೆ.ಇ.ಆರ್‌.ಸಿ. ಮೂಲಗಳು.

ಕಳೆದ ವರ್ಷ
2017-18ರಲ್ಲಿ ಎಲ್ಲ 5 ಎಸ್ಕಾಂಗಳು 82 ಪೈಸೆಯಿಂದ 1 ರೂ. 62 ಪೈಸೆ ತನಕ ಏರಿಸಬೇಕೆಂದು ಮನವಿ ಸಲ್ಲಿಸಿದ್ದವು. ಆದರೆ ಕೆ.ಇ.ಆರ್‌.ಸಿ. 20 ಪೈಸೆಯಿಂದ 60 ಪೈಸೆಯಷ್ಟು (ಶೇ. 6) ದರ ಹೆಚ್ಚಳ ಮಾಡಿ ಪ್ರಕಟನೆ ಹೊರಡಿಸಿತ್ತು. 

ಪರಿಷ್ಕೃತ ವಿದ್ಯುತ್‌ ದರ ಜಾರಿ ದಿನಾಂಕವನ್ನು ಮುಂದೂಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಕೆಇಆರ್‌ಸಿ ತೀರ್ಮಾನಿಸಲಿದೆ.
ಸ್ನೇಹಲ್‌ ಆರ್‌.

ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು

ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.