ಕಟಪಾಡಿ: ಅಪಾಯಕಾರಿ ಅಚ್ಚಡ ಜಂಕ್ಷನ್‌ ತುರ್ತಾಗಿ ಬ್ಯಾರಿಕೇಡ್‌ ಅಳವಡಿಕೆ


Team Udayavani, Mar 19, 2019, 1:00 AM IST

katapady.jpg

ಕಟಪಾಡಿ: ಕಟಪಾಡಿ- ಶಿರ್ವ ಮೂಲಕ ಹಾದು ಹೋಗುವ ರಾಜ್ಯ ಹೆದ್ದಾರಿಯ ಕಟಪಾಡಿಯ ಅಚ್ಚಡ ಕ್ರಾಸ್‌ ಎಂಬಲ್ಲಿನ ಜಂಕ್ಷನ್‌ ಅತ್ಯಂತ ಅಪಾಯಕಾರಿಯಾಗಿ ಪರಿಣಮಿಸುತ್ತಿರುವುದನ್ನು ಮನಗಂಡ ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆ ದಾನಿಗಳ ಸಹಕಾರದಿಂದ ಆಯಕಟ್ಟಿನ ಸ್ಥಳದಲ್ಲಿ ನಾಲ್ಕು ಬ್ಯಾರಿಕೇಡ್‌ಗಳನ್ನು ಸೋಮವಾರ ಮಧ್ಯಾಹ್ನವೇ ಅಳವಡಿಸಿದ್ದು, ಸಾರ್ವಜನಿಕವಾಗಿ ಶ್ಲಾಘನೆಗೆ ಪಾತ್ರವಾಗಿದೆ.

ಈ ಜಂಕ್ಷನ್‌ ಭಾಗವು ಅಪಘಾತದ ತಾಣವಾಗಿ ಪರಿವರ್ತಿತವಾಗಿದ್ದು, ಸಮರ್ಪಕ ಸೂಚನೆ ಇಲ್ಲದೆ ಅಚ್ಚಡಕ್ಕೆ ವಾಹನ ತಿರುಗಿಸುವ ಭರಾಟೆ ಮತ್ತು ಅಚ್ಚಡದಿಂದ ರಸ್ತೆಯಿಂದ ಬರುವ ವಾಹನಗಳು ನೇರವಾಗಿ ರಾಜ್ಯ ಹೆದ್ದಾರಿಗೆ  ಎಂಟ್ರಿ ಕೊಡುವುದರಿಂದ ಚಾಲಕರ ಕನ್‌ಫ್ಯೂಶನ್‌ ಮೂಲಕ ಅಪಘಾತ ತಾಣವಾಗಿ ಮಾರ್ಪಾಟಾಗಿತ್ತು.
ಇದೀಗ ದಾನಿ ಜ್ಯೇಷ್ಠಾ ಡೆವಲಪರ್ಸ್‌ನ ಯೋಗೀಶ್‌ ಕುಮಾರ್‌ ಮೂಲಕವಾಗಿ 4 ಬ್ಯಾರಿಕೇಡನ್ನು ರಾಜ್ಯ ಹೆದ್ದಾರಿಯಲ್ಲಿ ಅಳವಡಿಸಿ ವಾಹನಗಳ ವೇಗವನ್ನು ನಿಯಂತ್ರಿಸುವ ಮೂಲಕ ಅಪಘಾತಕ್ಕೆ ಕಡಿವಾಣ ಹಾಕಲು ಮುಂದಾಗಲಾಗಿದೆ.

ಮುಂದಕ್ಕೆ ಮೂಡಬೆಟ್ಟು -ಅಚ್ಚಡ-ಸರಕಾರಿ ಗುಡ್ಡೆ ರಸ್ತೆಯು ಸಂಧಿಸುವ ಸ್ಥಳದಲ್ಲಿ ಅಚ್ಚಡ ಕ್ರಾಸ್‌ ರಸ್ತೆಗೆ ಸೂಕ್ತವಾದ ಹಂಪ್ಸ್‌(ವೇಗತಡೆ) ನಿರ್ಮಿಸುವ ಮೂಲಕ ಸಂಭಾವ್ಯ ಅಪಘಾತವನ್ನು ಮತ್ತಷ್ಟು ಹತೋಟಿಗೆ ತರಬಹುದು ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.

ಈಗಾಗಲೇ ಹಲವಾರು ಅಪಘಾತಗಳು ಸಂಭವಿಸಿದ್ದು, ಮಾನವೀಯತೆ ನೆಲೆಯಲ್ಲಿ ಪೊಲೀಸರು ಸ್ವಲ್ಪ ಹೆಚ್ಚಿನ ನಿಗಾ ವಹಿಸಿ  ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದ್ದು, ಪೊಲೀಸರ ಈ ಜನಪರ ಕಾಳಜಿಗೆ ಜನ ಮೆಚ್ಚುಗೆ ಸೂಚಿಸಿರುತ್ತಾರೆ.

ಈ ಸಂದರ್ಭ ಕಟಪಾಡಿ ಪೊಲೀಸ್‌ ಹೊರಠಾಣೆಯ  ಸಿಬಂದಿಗಳಾದ ರುಕ್ಮಯ, ಮೋಹನ್‌ಚಂದ್ರ, ಜ್ಯೇಷ್ಠಾ ಡೆವಲಪರ್ಸ್‌ನ ಯೋಗೀಶ್‌ ಕುಮಾರ್‌, ಸ್ಥಳೀಯರಾದ  ಶ್ರೀಕರ್‌ ಅಂಚನ್‌, ಮಹೇಶ್‌ ಅಂಚನ್‌, ನಾಗರಾಜ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಅಪಘಾತ ನಿಯಂತ್ರಣಕ್ಕೆ ತುರ್ತು ಕ್ರಮ
ಅಪಘಾತದ ನಿಯಂತ್ರಣಕ್ಕಾಗಿ  ಸದ್ಯದ ತುರ್ತು ಕ್ರಮವಾಗಿ ಬ್ಯಾರಿಕೇಡ್‌ ಅಳವಡಿಸಲಾಗಿದೆ. ಹಂಪ್ಸ್‌ ರಚಿಸುವ ಬಗ್ಗೆ  ಮುಂದಕ್ಕೆ ಆಗುವಂತೆ ಗಮನ ಹರಿಸಲಾಗುತ್ತದೆ.
 -ನವೀನ್‌ ಎಸ್‌ ನಾಯಕ್‌, ಪಿಎಸ್‌ಐ, ಕಾಪು

ಫೈಬರ್‌  ಹಂಪ್ಸ್‌ ಅಳವಡಿಕೆ
ಅಚ್ಚಡ ಜಂಕ್ಷನ್‌ನಲ್ಲಿ ನಿರಂತರ ಅಪಘಾತ ಘಟಿಸುತ್ತಿತ್ತು. ಈ ಬಗ್ಗೆ ಜನರ ಸುರಕ್ಷತೆಗಾಗಿ ಸುಮಾರು 40 ಸಾವಿರ ರೂ. ಮೌಲ್ಯದಲ್ಲಿ 4 ಬ್ಯಾರಿಕೇಡ್‌ಗಳನ್ನು ಇಲಾಖೆಯ ಮೂಲಕ ಅಳವಡಿಸಲು ಸಹಕಾರ ನೀಡಿದ್ದು, ಅಚ್ಚಡ ರಸ್ತೆಯ ಭಾಗದಲ್ಲಿ ಫೈಬರ್‌ ಹಂಪ್ಸ್‌ ಅಳವಡಿಕೆಗೆ ಪ್ರಯತ್ನಿಸಲಾಗುತ್ತದೆ.
-ಯೋಗೀಶ್‌ ಕುಮಾರ,  ಜ್ಯೇಷ್ಠಾ ಡೆವಲಪರ್ಸ್‌, ಕಟಪಾಡಿ

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.