ನಳಿನ್ ಎದುರು ಮಿಥುನ್ ಸ್ಪರ್ಧೆ : ದ.ಕ.ದಲ್ಲಿ ಯುವ ನಾಯಕರ ಫೈಟ್?
Team Udayavani, Mar 22, 2019, 9:34 AM IST
ಮಂಗಳೂರು: ಪ್ರತಿಷ್ಠಿತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಸಿಲಿನ ಬೇಗೆಯ ಜೊತೆಗೆ ಚುನಾವಣೆಯ ಕಾವೂ ಏರಲಾರಂಭಿಸಿದೆ. ಮೂರನೇ ಬಾರಿಗೆ ಸಂಸತ್ ಗೆ ಆಯ್ಕೆ ಬಯಸಿ ಭಾರತೀಯ ಜನತಾ ಪಕ್ಷದಿಂದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕಣದಲ್ಲಿದ್ದಾರೆ. ಇತ್ತ ನಳಿನ್ ಅವರಿಗೆ ಸೂಕ್ತ ಪ್ರತಿಸ್ಪರ್ಧಿಯನ್ನು ಹುಡುಕುವಲ್ಲಿ ಕಾಂಗ್ರೆಸ್ ಪಕ್ಷ ತಲೆಕೆಡಿಸಿಕೊಳ್ಳುತ್ತಿದೆ. ಮೈತ್ರಿ ಒಪ್ಪಂದಂತೆ ದ.ಕ. ಲೋಕಸಭಾ ಕ್ಷೇತ್ರವು ಕಾಂಗ್ರೆಸ್ ಪಾಲಾಗಿದೆ ಹಾಗಾಗಿ ಇಲ್ಲಿ ನಳಿನ್ ಕುಮಾರ್ ಕಟೀಲ್ ಎದುರು ಸೂಕ್ತ ಅಭ್ಯರ್ಥಿಯನ್ನು ಹಾಕುವ ಹೊಣೆ ಈಗ ‘ಕೈ’ ಪಾಲಿಗಿದೆ.
ಮಾಜೀ ಸಚಿವ ಮತ್ತು ಜಿಲ್ಲೆಯ ಪ್ರಭಾವಿ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ರಮಾನಾಥ ರೈ ಅವರು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಉಳಿದಂತೆ ಬಿ.ಕೆ. ಹರಿಪ್ರಸಾದ್, ರಾಜೇಂದ್ರ ಕುಮಾರ್ ಮುಂತಾದವರ ಹೆಸರುಗಳೂ ಸಹ ಕೇಳಿಬರುತ್ತಿವೆ. ಆದರೆ ಕಾಂಗ್ರೆಸ್ ಮೂಲಗಳ ಪ್ರಕಾರ ಈ ಬಾರಿ ನಳಿನ್ ಎದುರಾಳಿಯಾಗಿ ಯುವ ಕಾಂಗ್ರೆಸ್ ನಾಯಕ ಮಿಥುನ್ ಕುಮಾರ್ ರೈ ಅವರ ಹೆಸರು ‘ಫೈನಲ್’ ಆಗಿದೆ ಎನ್ನಲಾಗುತ್ತಿದೆ.
ಕಳೆದ ಬಾರಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಿಥುನ್ ರೈ ಅವರಿಗೆ ಕೊನೇ ಕ್ಷಣದಲ್ಲಿ ಟಿಕೆಟ್ ತಪ್ಪಿತ್ತು. ಆದರೆ ಈ ಬಾರಿ ಪ್ರಭಾವಿ ಸಂಸದ ನಳಿನ್ ಅವರನ್ನು ಎದುರಿಸಲು ಹೊಸ ಮುಖವೇ ಸೂಕ್ತ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಬಂದಿದೆ ಎನ್ನಲಾಗುತ್ತಿದ್ದು ಮಿಥನ್ ಅವರಿಗೆ ಸ್ಪರ್ಧಿಸಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗುತ್ತಿದೆ. ಈ ಕುರಿತಾದ ಪ್ರಕಟನೆಯಷ್ಟೇ ಬಾಕಿಯಿದೆ ಎಂಬ ಮಾಹಿತಿಯೂ ಸ್ಥಳೀಯ ಕಾಂಗ್ರೆಸ್ ಮೂಲಗಳಿಂದ ಲಭ್ಯವಾಗಿದೆ. ಒಂದುವೇಳೆ ನಳಿನ್ ಕುಮಾರ್ ಎದುರಾಗಿ ಮಿಥುನ್ ರೈ ಸ್ಪರ್ಧಿಸುವುದೇ ಆದಲ್ಲಿ ದಕ್ಷಿಣ ಕನ್ನಡ ಚುನಾವಣಾ ಕಣ ಇನ್ನಷ್ಟು ರಂಗು ಪಡೆದುಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ