ನಿಮಗಿದು ಗೊತ್ತೆ? ಭಕ್ತಿಯಿಂದ ಬ್ಯೂಟಿ ಹೆಚ್ಚುತ್ತದೆ!


Team Udayavani, Jun 6, 2017, 10:09 AM IST

god.jpg

ಓಂಕಾರ ಪರಮಾತ್ಮ ನಾರಾಯಣ ಈ ಜಗತ್ತನ್ನು ಸೃಷ್ಟಿ ಮಾಡುವಾಗ ಅವನ ಬಾಯಿಯಿಂದ ಹೇಳಿದ ಮೊದಲ ಅಕ್‌Ò/ಮಂತ್ರ. ಯಾವ ಮಂತ್ರಗಳಿಗೂ ಯಾವುದೇ ಜಾತಿ ಭೇದವಿಲ್ಲ. ಮಂತ್ರಗಳು ನಮ್ಮೆಲ್ಲರ ಸ್ವತ್ತು. ಯಾರು ಬೇಕಾದರೂ ಅದರ ಶಕ್ತಿಯನ್ನು ಸದುಪಯೋಗಪಡಿಸಿಕೊಳ್ಳಬಹುದು. 

ನೀವು ಇದನ್ನು ನಂಬುತ್ತೀರಾ? ಕೆಲವರನ್ನು ನೋಡಿದಾಗ ಇದು ನಿಜ ಅಂತ ನಂಬಲೇಬೇಕಾಗುತ್ತದೆ. ಹಾಗೆಯೇ ಇದು ಖಂಡಿತವಾಗಿಯೂ ನಿಜ. ನಮ್ಮನ್ನು ಸುಂದರಗೊಳಿಸುವುದು ಬ್ಯೂಟಿ ಪಾರ್ಲರ್‌ಗಳಲ್ಲ. ನಮ್ಮ ಅಂತರಂಗದ ಶುದ್ಧಿ ನಮ್ಮನ್ನು ತುಂಬಾ ಸುಂದರವಾಗಿ ಕಾಣುವಂತೆ ಮಾಡುತ್ತದೆ. 

ಕೆಲವರು ನೋಡಲು ತುಂಬಾ ಚೆನ್ನಾಗಿರುತ್ತಾರೆ. ಬೆಳ್ಳಗೆ, ಕಣ್ಣು, ಮೂಗು, ಬಾಯಿ ಎಲ್ಲವೂ ಇರಬೇಕಾದ ಜಾಗದಲ್ಲೇ ಇರುತ್ತವೆ. ಮೈಕಟ್ಟೂ ಚೆನ್ನಾಗಿರುತ್ತದೆ. ಆದರೂ ಎದ್ದು ಕಾಣುವಂತಹ ಏನೋ ಒಂದು ಕೊರತೆ. ಆದರೆ ಅದು ಸೌಂದರ್ಯದ ಕೊರತೆ ಯಲ್ಲ. ಬೇರೇನೋ ಒಂದು. ಗಂಡಾಗಿರಲಿ, ಹೆಣ್ಣಾಗಿರಲಿ ನೋಡಲು ಮಾತ್ರ ಚೆನ್ನಾಗಿದ್ದರೆ ಸಾಲದು, ಅವರ ಕಣ್ಣಲ್ಲಿ ಒಂದು ಕಾಂತಿ ಇರಬೇಕು. ಒಮ್ಮೆ ನೋಡಿದರೆ ಮತ್ತೆ ಮತ್ತೆ ನೋಡ ಬೇಕು ಅಂತ ಅನ್ನಿಸಬೇಕು. ಮತ್ತೆ ಮತ್ತೆ ಭೇಟಿ ಮಾಡಬೇಕು, ಮಾತನಾಡಬೇಕು ಅಂತ ಅನ್ನಿಸಬೇಕು. ಹೀಗೆಲ್ಲ ಅನ್ನಿಸುವುದು ನಾವು ಒಬ್ಬರನ್ನು ಪ್ರೀತಿಸುವುದಕ್ಕೆ ಶುರುಮಾಡಿದಾಗ ಅಲ್ಲವೇ ಅಂತ ನಮಗೆಲ್ಲ ಅನ್ನಿಸಬಹುದು. ಆದರೆ ನಮ್ಮ ಜೀವನವನ್ನು ನಾವೇ ಗಮನಿಸಿಕೊಂಡು ನೋಡಿದರೆ, ನಮ್ಮ ಸಂಬಂಧಿಕರನ್ನು ಬಿಟ್ಟು ನಾವು ಬಹಳಷ್ಟು ಜನರನ್ನು ತುಂಬಾ ಇಷ್ಟಪಡುತ್ತೇವೆ. ನಮಗೇ ಗೊತ್ತಿಲ್ಲದಂತೆ ಅವರನ್ನು ಗೌರವಿಸುತ್ತೇವೆ. ಅವರನ್ನು ಮನೆಯವರಿಗಿಂತ ಹೆಚ್ಚಾಗಿ ನಂಬುತ್ತೇವೆ. ಇದು ದೈಹಿಕ ಆಕರ್ಷಣೆಯಲ್ಲ, ಅದರ ಎಲ್ಲ ಸ್ವೀಕೃತ ಚೌಕಟ್ಟುಗಳನ್ನು ಮೀರಿದ ಸಾತ್ವಿಕ ಆಕರ್ಷಣೆ. ಏಕೆಂದರೆ ಇದಕ್ಕೆ ವಯಸ್ಸಿನ ಮಿತಿ ಇಲ್ಲ. ಮನುಷ್ಯ ದೈವಿಕತ್ವವನ್ನು ಪಡೆಯುತ್ತಾ¤ ಹೋದಂತೆ ಅವನು ಹೇಗಿದ್ದರೂ ಎಲ್ಲರ ಕಣ್ಣಿಗೆ ಸುಂದರವಾಗಿ ಗೋಚರಿಸುತ್ತಾನೆ. 

ಜನರು ಎಷ್ಟೇ ನೋಡಲು ಚೆನ್ನಾಗಿದ್ದರೂ ಅವರಿಗೆ ಒಂದು ಲಕ್ಷಣ ಬರಬೇಕು. ಅಂದರೆ ಅವರು ಮೊದಲು ತಮ್ಮ ಮನಸ್ಸನ್ನು ಶುಚಿಗೊಳಿಸಿಕೊಳ್ಳಬೇಕು. ಅದಕ್ಕೆ ದಿನಕ್ಕೆ ಹತ್ತು ನಿಮಿಷವಾದರೂ ದೇವರ ಪೂಜೆ ಅಥವಾ ನಾಸ್ತಿಕರಾಗಿದ್ದರೆ ಅವರು ನಂಬುವ ಶಕ್ತಿ ಯನ್ನು ಧ್ಯಾನಿಸಬೇಕು. ದೇವರ ಪೂಜೆ ಅಂದರೆ ಆಡಂಬರವಾಗಿ ಮಾಡಬೇಕೆಂದೇನಿಲ್ಲ.

ಏಕಾಗ್ರತೆಯಿಂದ ಪ್ರತಿದಿನ ಹತ್ತು ನಿಮಿಷ ದೇವರ ಮನೆಯಲ್ಲಿ ಕುಳಿತು ಯಾವ ಮಂತ್ರ ಬರುತ್ತೋ ಅದನ್ನು ಜಪಿಸಿದರೆ ಸಾಕು. ಆದರೆ ಅದನ್ನು ಶ್ರದ್ಧೆಯಿಂದ ಪ್ರತಿದಿನ ಮಾಡಬೇಕಷ್ಟೇ. ಆಗ ನಿಮಗೇ ತಿಳಿಯದಂತೆ ನಿಮ್ಮ ಮುಖದಲ್ಲಿ ಒಂದು ಕಾಂತಿ ಹೊರಹೊಮ್ಮುತ್ತದೆ. ಅದು ನಿಮ್ಮ ಮುಖದ ಲಕ್ಷಣವನ್ನೇ ಬದಲಿಸುತ್ತದೆೆ. ನೀವು ಎಲ್ಲಿದ್ದರೂ ಎಲ್ಲರ ನಡುವೆ ನಿಂತಿದ್ದರೂ ವಿಶೇಷ ವ್ಯಕ್ತಿಯಂತೆ ಕಾಣಿಸುತ್ತೀರಿ. ಇದಕ್ಕೆ ಕಾರಣ ನಿಮ್ಮೊಳಗಿರುವ ಪಾಸಿಟಿವ್‌ ವೈಬ್ರೇಷನ್‌. 

ದೈವಿಕ ಸೌಂದರ್ಯ ನಿಮ್ಮಲ್ಲಿದೆಯೇ?: ಬ್ಯೂಟಿಪಾರ್ಲರ್‌ಗೆ ಹೋಗಿ ಅನೇಕ ಮಹಿಳೆಯರೂ ಪುರುಷರೂ ತಮ್ಮನ್ನು ತಾವು ಸುಂದರವಾಗಿ ಕಾಣಿಸಿಕೊಳ್ಳುವಂತೆ ಅನೇಕ ಪ್ರಯೋಗಗಳನ್ನು ಮಾಡುತ್ತಾರೆ. ಆದರೆ, ಅದೆಲ್ಲ ತಾತ್ಕಾಲಿಕವಾಗಿ ಆಕರ್ಷಣೆ ನೀಡು ವಂಥದ್ದು. ಆಧ್ಯಾತ್ಮದ ಅರಿವು ಮಾತ್ರ ನಮ್ಮನ್ನು ನಿರಂತರವಾಗಿ ಬ್ಯೂಟಿಫ‌ುಲ್‌ ಮಾಡುತ್ತದೆ.

ಪ್ರಪಂಚದಲ್ಲಿ ಎಷ್ಟೇ ಆರ್ಥಿಕ ಹಿನ್ನಡೆ ಆದರೂ ಬ್ಯೂಟಿ ಪಾರ್ಲರ್‌ ಬಿಸಿನೆಸ್‌ಗೆ ಮಾತ್ರ ಯಾವುದೇ ಕುಸಿತವಿಲ್ಲ. ನಾನು ಅನೇಕ ಕಾರಾಗೃಹಗಳಲ್ಲಿ ಕೈದಿಗಳಿಗೆ ಸಾಂಸ್ಕೃತಿಕ ಚಟುವಟಿಕೆ ಗಳನ್ನು ನಡೆಸುತ್ತಿದ್ದೆ. ಕೈದಿಗಳು ಅಲ್ಲಿಯೂ ಬ್ಯೂಟಿಷಿಯನ್‌ ಗಳನ್ನು ಕರೆಸಿ ತಮ್ಮ ಬಾಹ್ಯ ಸೌಂದರ್ಯಕ್ಕೆ ಪ್ರಾಮುಖ್ಯ ಕೊಡುವುದನ್ನು ಕಂಡು ಆಶ್ಚರ್ಯವಾಗಿತ್ತು.

ಕೆಲವರಿಗೆ ಬ್ಯೂಟಿಪಾರ್ಲರ್‌ ಹುಚ್ಚು ಎಷ್ಟು ಹಿಡಿದಿದೆ ಅಂದರೆ ಮನೆಯಲ್ಲಿ ಹಿರಿಯರ ತಿಥಿ/ ವೈಕುಂಠ ಸಮಾರಾಧನೆ ಇದ್ದರೂ ಪಾರ್ಲರ್‌ಗೆ ಹೋಗಿ ಐಬ್ರೋಸ್‌ ಮಾಡಿಸಿಕೊಂಡು ಬರುತ್ತಾರೆ. ಸಂಬಂಧ, ಸಂಕಟ, ನೋವು, ಬಾಂಧವ್ಯಕ್ಕಿಂತ ಮನುಷ್ಯ ಬಾಹ್ಯ ಸೌಂದರ್ಯಕ್ಕೆ ಒತ್ತು ನೀಡುತ್ತಿದ್ದಾನೆ.  ಏಕೆಂದರೆ ಅವನು ಆಂತರಿಕ ಸೌಂದರ್ಯದ ರುಚಿಯನ್ನು ಕಂಡುಕೊಂಡಿಲ್ಲ. 

ಪಾರ್ಲರ್‌ಗೆ ಬರುವ ದೆವ್ವ!: ಒಂದು ಬ್ಯೂಟಿಪಾರ್ಲರ್‌ನಲ್ಲಿ ತಮಾಷೆ ನಡೆಯಿತು. ಒಬ್ಬ ಹೆಂಗಸಿನ ಮೈಮೇಲೆ ಯಾವಾಗಲೂ ದೆವ್ವ ಬರುತ್ತಿತ್ತಂತೆ. ಆ ಪ್ರೇತಾತ್ಮಕ್ಕೆ ಶಾಂತಿ ಸಿಕ್ಕಿರಲಿಲ್ಲವಂತೆ, ಯಾಕೆ ಅಂದರೆ ಆ ಹೆಣ್ಣುಮಗಳು ಬದುಕಿದ್ದಾಗ ಅವಳ ಮನೆಯವರು ಅವಳನ್ನು ಬ್ಯೂಟಿಪಾರ್ಲರ್‌ಗೆ ಕಳಿಸುತ್ತಿರಲಿಲ್ಲವಂತೆ. ಆಕೆ ಸತ್ತ ಬಳಿಕ ಆಕೆಯ ಆತ್ಮ ದೆವ್ವವಾಗಿ ತನ್ನ ಆಸೆ ನೆರವೇರಿಸಿಕೊಳ್ಳಲು ಬೇರೆಯವರ ಮೈಮೇಲೆ ಬಂದು ಗಲಾಟೆ ಮಾಡಿ ಐಬ್ರೋಸ್‌, ಫೇಷಿಯಲ್‌, ವ್ಯಾಕ್ಸ್‌ ಎಲ್ಲ ಮಾಡಿಸಿಕೊಳ್ಳುತ್ತಿತ್ತಂತೆ. ದೆವ್ವ ಪಾರ್ಲರ್‌ಗೆ ಬರುವ ದಿನ ಬೇರೆಯವರಿಗೆ ಪಾರ್ಲರ್‌ ಮುಚ್ಚಿರು ತ್ತಿತ್ತು. ನಾವು ಯಾಕೆ ಅಂತ ಕೇಳಿದರೆ ಇವತ್ತು ದೆವ್ವ ಬರುತ್ತೆ ಅಂದರು! ನಾನು ಚಿಂತೆಗೆ ಬಿದ್ದೆ. ದೆವ್ವಕ್ಕೆ ಕೈಕಾಲು ಇರುತ್ತಾ? ಅದು ಹೇಗೆ ವ್ಯಾಕ್ಸ್‌ ಮಾಡಿಸಿಕೊಳ್ಳುತ್ತದೆ? ಮಾಡಿಸಿಕೊಂಡರೂ ಯಾರಿಗೆ ತೋರಿಸುತ್ತದೆ. ಸತ್ತು ದೆವ್ವ ಆದಮೇಲೂ ನಾವು ಹೇಗೆ ಹೊರಗಡೆಯಿಂದ ಬ್ಯೂಟಿಫ‌ುಲ್ಲಾಗಿ ಕಾಣಲಿಕ್ಕೆ ಸಾಧ್ಯ? 

ಈ ವಿಚಾರದಲ್ಲಿ ಹುಡುಗರೇನೂ ಕಡಿಮೆ ಇಲ್ಲ. ಚೆನ್ನಾಗಿ ಕಾಣಿಸಬೇಕು ಅಂತ ಹುಡುಗರೂ ಏನೇನೋ ಸಾಹಸ ಮಾಡು ತ್ತಾರೆ. ಇವತ್ತಿನ ದಿನ ಎಲ್ಲ ಲೋಪಗಳಿಗೂ ಪರಿಹಾರ ಇದೆ. ಚಿಕ್ಕವಯಸ್ಸಿಗೆ ಕೂದಲು ಕಳೆದುಕೊಂಡರೆ ಹೊಸ ಕೂದಲು ಹಾಕಿಸಿಕೊಳ್ಳುತ್ತಾರೆ. ಮೂಗು ಚಿಕ್ಕದಾಗಿದ್ದರೆ ಉದ್ದ ಮಾಡಿಸಿ ಕೊಳ್ಳುತ್ತಾರೆ. ತುಟಿ ಸರಿಪಡಿಸಿಕೊಳ್ಳುತ್ತಾರೆ. ಮೈಕಟ್ಟು ಸಣ್ಣ ಮಾಡಿ ಸಿಕೊಳ್ಳುತ್ತಾರೆ. ತಮ್ಮನ್ನು ತಾವೇ ಗುರುತಿಸಿಕೊಳ್ಳಲಾಗದಷ್ಟು ಮುಖವನ್ನು ಬದಲಾಯಿಸಿಕೊಳ್ಳುತ್ತಾರೆ.

ಕೆಲ ಹುಡುಗರು ನಮ್ಮ ದೇಶದಲ್ಲಿ ಸರಿಯಾಗಿ ಮಾಡುವುದಿಲ್ಲ ಅಂತ ಬೇರೆ ದೇಶ ಗಳಿಗೆ ಬ್ಯೂಟಿ ಟ್ರೀಟ್‌ಮೆಂಟ್‌ಗಾಗಿಯೇ ಹೋಗುತ್ತಾರೆ. 

ಇದೆಲ್ಲ ತಪ್ಪು ಎಂದಲ್ಲ. ತಾನು ಚೆನ್ನಾಗಿ ಕಾಣಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಆದರೆ, ಹೊರಗಿನ ಸೌಂದರ್ಯವನ್ನು ಸರಿಪಡಿಸಿಕೊಳ್ಳಲು ಎಷ್ಟೆಲ್ಲ ಖರ್ಚು ಮಾಡುವ ಜನರು ಒಳಗಿನ ಸೌಂದರ್ಯ ಹೆಚ್ಚಿಸಿಕೊಳ್ಳಲು ಏನು ಮಾಡುತ್ತಾರೆ? ಒಳಗಿನಿಂದ ನಮ್ಮ ನಿಜವಾದ ಕಾಂತಿ ಹೊರಹೊಮ್ಮದೆ ಹೊರಗಿನಿಂದ ಎಷ್ಟೇ ಮಾಡಿಸಿಕೊಂಡರೂ ಅದು ಕೃತಕವಾಗಿ ಕಾಣಿಸುತ್ತದೆ. ನಾವು ಮನಸ್ಸಿನಲ್ಲಿ ಕೆಟ್ಟದ್ದನ್ನೇ ಗುಣಿಸುತ್ತಿದ್ದರೆ ನಮ್ಮ ಮುಖ ಆಕರ್ಷಕವಾಗಿ ಕಾಣಿಸಿಕೊಳ್ಳಲು ಸಾಧ್ಯವೇ ಇಲ್ಲ. ನಾವು ಒಳಗೆ ಹೇಗೆ ಇರುತ್ತೇವೋ ಅದರ ಛಾಯೆ ನಮ್ಮ ಮುಖದಲ್ಲಿ ಎದ್ದು ತೋರುತ್ತದೆ. 

ಠಕ್ಕ ಸನ್ಯಾಸಿಗಳನ್ನು ಪತ್ತೆ ಹಚ್ಚಿ: ಕೆಲವು ಕಳ್ಳ ಸ್ವಾಮಿಗಳನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಿದ ತತ್‌ಕ್ಷಣವೇ ಹೇಳಬಹುದು. ಅವರು ಸಾತ್ವಿಕರಲ್ಲ ಎಂದು, ಸದ್ಯದಲ್ಲೇ ಅವರದ್ದೊಂದು ರಾಸಲೀಲೆ ಸೀಡಿ ಹೊರಬರಬಹುದು ಎಂಬುದು ಆ ಕೂಡಲೇ ಗೊತ್ತಾಗುತ್ತದೆ! ಅವರ ಕಣ್ಣಲ್ಲೇ ಚಾಂಚಲ್ಯ ಎದ್ದು ಕುಣಿಯುತ್ತಿರುತ್ತದೆ. ಆತ ನಿಜವಾದ ದೈವಿಕ ಶಕ್ತಿಯನ್ನು ಹೊಂದಿಲ್ಲ ಎಂಬುದು ಒಂದೇ ನೋಟದಿಂದ ಸಾಬೀತಾಗುತ್ತದೆ. ಸಾತ್ವಿಕತೆಯ ಮುಖಲಕ್ಷಣವೇ ಬೇರೆ, ವೇಷಭೂಷಣ ಧರಿಸಿದ ನಾಟಕೀಯ ಸಿಂಗಾರವೇ ಬೇರೆ. ಏಕೆಂದರೆ ಅವರು ಯಾವತ್ತೂ ಕುಳಿತು ಶ್ರದ್ಧೆಯಿಂದ ಧ್ಯಾನ ಮಾಡಿರುವುದೇ ಇಲ್ಲ. 

ಯಾವುದೇ ಮಂತ್ರ ಹೇಳಿ, ಎಲ್ಲ ಮಂತ್ರಗಳಿಗೂ ಒಂದು ಶಕ್ತಿ ಇದೆ. ಮಂತ್ರಗಳು ಗೊತ್ತಿಲ್ಲದಿದ್ದರೆ ಏಕಾಕ್ಷರ ಓಂ ಹೇಳಿಕೊಂಡರೂ ಸಾಕು. ಓಂಕಾರ ಪರಮಾತ್ಮ ನಾರಾಯಣ ಈ ಜಗತ್ತನ್ನು ಸೃಷ್ಟಿ ಮಾಡುವಾಗ ಅವನ ಬಾಯಿಯಿಂದ ಹೇಳಿದ ಮೊದಲ ಅಕ್‌Ò/ಮಂತ್ರ. ಯಾವ ಮಂತ್ರಗಳಿಗೂ ಯಾವುದೇ ಜಾತಿ ಭೇದವಿಲ್ಲ. ಮಂತ್ರಗಳು ನಮ್ಮೆಲ್ಲರ ಸ್ವತ್ತು. ಯಾರು ಬೇಕಾದರೂ ಅದರ ಶಕ್ತಿಯನ್ನು ಸದುಪಯೋಗಪಡಿಸಿಕೊಳ್ಳಬಹುದು. 

ಬ್ಯೂಟಿಪಾರ್ಲರ್‌ ಬಗ್ಗೆ ಅತಿಯಾಗಿ ತಲೆಕೆಡಿಸಿಕೊಳ್ಳುವವರು ಅದರಲ್ಲರ್ಧ ಸಮಯವನ್ನು ಆಂತರಿಕ ಸೌಂದರ್ಯದ ಬಗ್ಗೆ ಚಿಂತಿಸಲು ಮೀಸಲಿಟ್ಟರೂ ಸಾಕು, ನಾವೆಲ್ಲ ಸರ್ವಾಂಗ ಸುಂದರರಾಗುತ್ತೇವೆ!

– ರೂಪಾ ಅಯ್ಯರ್‌

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಡರ್ನ್ ಆಧ್ಯಾತ್ಮ: ನಮ್ಮ ಕೆಲಸವೇ “ನಮ್ಮ ವ್ಯಕ್ತಿತ್ವ’ವೆಂಬ ದುರಂತ!

ಮಾಡರ್ನ್ ಆಧ್ಯಾತ್ಮ: ನಮ್ಮ ಕೆಲಸವೇ “ನಮ್ಮ ವ್ಯಕ್ತಿತ್ವ’ವೆಂಬ ದುರಂತ!

ಅಂಥ ಸುಂದರ ವ್ಯಕ್ತಿಯನ್ನು ನನ್ನ ಜೀವನದಲ್ಲೇ ನೋಡಿರಲಿಲ್ಲ!

ಅಂಥ ಸುಂದರ ವ್ಯಕ್ತಿಯನ್ನು ನನ್ನ ಜೀವನದಲ್ಲೇ ನೋಡಿರಲಿಲ್ಲ!

ಮನೆಯಲ್ಲೇ ಕುಳಿತು ಪ್ರವಾಸ ಮಾಡುವಿರಾ?

ಮನೆಯಲ್ಲೇ ಕುಳಿತು ಪ್ರವಾಸ ಮಾಡುವಿರಾ?

modern-adyatma

ಎಲ್ಲರೂ ಹುಡುಕುತ್ತಿರುವುದು 3ನೇ ಕುರಿಯನ್ನೇ!

ram-46

ವೈದ್ಯ, ರೋಗಿ ಮತ್ತು ಭಕ್ತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.