ಆಧುನಿಕ ಭಾರತ ಮರೆತ ಉದಾತ್ತ ಗುಣ: ಅತಿಥಿ ದೇವೋ ಭವ


Team Udayavani, Dec 7, 2017, 6:30 AM IST

atiti.jpg

“ಅತಿಥಿ ದೇವೋ ಭವ’ ಎಂಬುದು ಭಾರತೀಯ ಪರಂಪರೆಯ ಘೋಷವಾಕ್ಯವಷ್ಟೇ ಅಲ್ಲ, ಭಾರತ ಸರಕಾರದ ಪ್ರವಾಸೋದ್ಯಮ ಇಲಾಖೆಯ ಘೋಷವಾಕ್ಯ ಕೂಡ. ಮನೆಗೆ ಬರುವ ಅತಿಥಿಗಳನ್ನು ದೇವರಂತೆ ಕಾಣಬೇಕೆಂಬುದು ಇದರ ಆಶಯ.

ಆದರೆ, ನಾವು ಎಷ್ಟು ಜನ ನಿಜವಾಗಲೂ ಅತಿಥಿಗಳನ್ನು ದೇವರಂತೆ ಕಾಣುತ್ತೇವೆ? ದೇವರನ್ನೇ ದೇವರನ್ನಾಗಿ ಕಾಣದ ನಾವು, ಮನೆಗೆ ಬಂದ ಮನುಷ್ಯರನ್ನು ದೇವರೆಂದು ಆದರಿಸುತ್ತೇವೆಯೇ? ನಿಜಕ್ಕೂ ಅತಿಥಿ ದೇವೋಭವ ಎಂಬ ಭಾವನೆ ಇಟ್ಟುಕೊಂಡವರು ಬಹಳ ವಿರಳ. ಬಹಳ ಜನರು ಆಯ್ದ ಕೆಲವು ಮಂದಿ ಅತಿಥಿಗಳನ್ನು ಬಹಳ ಗೌರವದಿಂದ ಕಾಣುತ್ತಾರೆ.

ಇನ್ನು ಕೆಲವರನ್ನು ಬೇಕಾಬಿಟ್ಟಿ ನೋಡುತ್ತಾರೆ, ಮತ್ತೆ ಕೆಲವರನ್ನು ಕೇರ್‌ ಕೂಡ ಮಾಡುವುದಿಲ್ಲ. “ಅಯ್ಯೋ ಬಿಡು, ಅವರನ್ನೇನು ಮಾತನಾಡಿಸುವುದು, ಅವರಿಂದ ನಮಗೇನೂ ಆಗಬೇಕಾಗಿಲ್ಲ’ ಎಂಬುದಾಗಿ ಮನಸ್ಸಿನಲ್ಲೇ ಲೆಕ್ಕಹಾಕಿ ಕಡೆಗಣಿಸುತ್ತಾರೆ. ಆದರೆ, ತಾವು ಬೇರೆಯವರ ಮನೆಗೆ ಹೋದಾಗ ಮಾತ್ರ ಅಲ್ಲಿರುವ ಎಲ್ಲರೂ ಬಹಳ ಗೌರವಾದರದಿಂದ ನೋಡಿಕೊಳ್ಳಬೇಕು ಎಂದು ಬಯಸುತ್ತಾರೆ. 

“ಈಗ ಬಂದ್ರಾ, ಚೆನ್ನಾಗಿದ್ದೀರಾ, ಮನೆಯಲ್ಲೆಲ್ಲ ಚೆನ್ನಾಗಿದ್ದಾರಾ, ಕುಡಿಯುವುದಕ್ಕೆ ಏನು ಕೊಡಲಿ, ಬನ್ನೀ ಊಟ ಮಾಡುವಿರಂತೆ”… ಇದು ಮನೆಗೆ ಯಾರೇ ಬರಲಿ, ನಮ್ಮ ಹಿರಿಯರು ಆದರಿಸುತ್ತಿದ್ದ ರೀತಿ. ಈಗ ನಮಗೆ ಇದೆಲ್ಲ ಮರೆತೇ ಹೋಗಿದೆ. ಕೆಲವು ಬಾರಿ ಬೇರೆಯವರ ಮನೆಗೆ ಹೋದಾಗ ಹೊಟ್ಟೆ ತುಂಬಾ ಹಸಿದಿರುತ್ತದೆ. ಕನಿಷ್ಟ ಪಕ್ಷ ಒಂದು ಲೋಟ ಕಾಫಿಯನ್ನಾದರೂ ಕೊಡಲಿ ಎಂದು ಮನಸ್ಸು ಬಯಸುತ್ತಿರುತ್ತದೆ. ಆದರೆ ಆ ಮನೆಯವರು ಕಾಫಿ ಬಿಡಿ, ನೀರು ಬೇಕಾ ಅಂತಲೂ ಕೇಳುವುದಿಲ್ಲ. ನೀರನ್ನೇನೋ ನಾವೇ ಕೇಳಬಹುದು, ಆದರೆ ಕಾಫಿ ಕೊಡಿ, ತಿಂಡಿ ಕೊಡಿ 
ಎಂದು ಕೇಳಲು ಸಾಧ್ಯವೇ? ಇಂತಹ ಅನುಭವ ನಮಗೆಲ್ಲ ಒಮ್ಮೆಯಾದರೂ ಆಗಿಯೇ ಇರುತ್ತದೆ. ಆದರೆ ಇದರಿಂದ 
ಬುದ್ಧಿ ಕಲಿತು ನಾವೇನೂ ನಮ್ಮ ಮನೆಗೆ ಬರುವ ಅತಿಥಿಗಳನ್ನು ಬಹಳ ಚೆನ್ನಾಗಿ ನೋಡಿಕೊಳ್ಳುವುದಿಲ್ಲ. “ಕಾಫಿ ಕುಡಿಯುತ್ತೀರಾ’ ಎಂದು ಕಾಟಾಚಾರಕ್ಕೆ ಕೇಳಿ, ಅವರು ಶಿಷ್ಟಾಚಾರಕ್ಕೆ “ಬೇಡ’ ಅಂದರೆ ಮುಗಿಯಿತು; ನಾವು ಬಹುತೇಕ ಬಾರಿ ಸುಮ್ಮನಾಗಿಬಿಡುವುದೂ ಉಂಟು.

ಅಭ್ಯಾಗತ ದೇವೋಭವ
ಅದೊಂದು ಕಾಲ ಇತ್ತು. ಜನರು ಅಪಾಯಿಟ್‌ಮೆಂಟ್‌ ತೆಗೆದುಕೊಳ್ಳದೆ ತಮಗಿಷ್ಟ ಬಂದಾಗ ನೆಂಟರಿಷ್ಟರ ಮನೆಗೆ ಹೋಗುತ್ತಿದ್ದರು. ಅತಿಥಿ ಅಂದರೆ ತಿಥಿ (ದಿನ, ಸಮಯ ಇತ್ಯಾದಿ) ನೋಡದೆ ಬರುವವ ಎಂದರ್ಥ, ಅವರು ಆಮಂತ್ರಿತರೂ ಆಗಿರಬಹುದು ಅಥವಾ ಆಮಂತ್ರಣವಿಲ್ಲದೆ ಬಂದವರೂ ಆಗಿರಬಹುದು. ಅಭ್ಯಾಗತ ಅಂದರೆ ಹೊರಗಿನಿಂದ ಬಂದವ, ಈಗಷ್ಟೇ ಬಂದವ ಎಂದು ಅರ್ಥ. ಇಬ್ಬರೂ ಅನಿರೀಕ್ಷಿತವಾಗಿ ಬಂದವರಾಗಿರಬಹುದು ಅಥವಾ ಕರೆಸಿಕೊಂಡು ಬಂದವರೂ ಆಗಿರಬಹುದು. ಇವರಿಬ್ಬರಿಗೂ ಹಿಂದೆಲ್ಲ ಭರಪೂರ ಆತಿಥ್ಯ ಸಿಗುತ್ತಿತ್ತು. ಆದರೆ ಇಂದು ಯಾರೂ ತಮಗಿಷ್ಟ ಬಂದಾಗ ನೆಂಟರ ಮನೆಗೆ ಹೋಗುವಂತಿಲ್ಲ ಎಂಬ ಕಾಲ ಬಂದಿದೆ. ಸ್ವಂತ ನೆಂಟರಾದರೂ; ಅಕ್ಕ, ಅಣ್ಣ, ಗಂಡ, ಹೆಂಡತಿ ಯಾರೇ ಆಗಿದ್ದರೂ ಸಮಯವನ್ನು ಮೊದಲೇ ನಿಗದಿಪಡಿಸಿಕೊಂಡು ಹೋಗುವ ಪಾಶ್ಚಾತ್ಯ ಪದ್ಧತಿ ನಮ್ಮ ದೇಶಕ್ಕೂ  ಕಾಲಿಟ್ಟಿದೆ. “ಹೀಗೆ ಹೋಗುತ್ತಿದ್ದೆ, ನಿಮ್ಮ ಮನೆ ಇಲ್ಲೇ ಇರುವುದು ನೆನಪಾಯಿತು… ಯೋಗಕ್ಷೇಮ ವಿಚಾರಿಸಿಕೊಂಡು ಹೋಗೋಣ ಅಂತ ಬಂದೆ…’ ಎಂದು ನಮ್ಮ ತಂದೆ, ಅಜ್ಜನ ಕಾಲದಲ್ಲಿ ಹಿತೈಷಿಗಳು ಮನೆಗೆ ಬರುತ್ತಿದ್ದರು. ಹಾಗೆ ಬಂದವರು ಒಳ್ಳೆಯ ಆತಿಥ್ಯ ಪಡೆದು, ಊಟ ಮಾಡಿಕೊಂಡು ಹೋಗುತ್ತಿದ್ದರು. ಈಗ ಯಾರಾದರೂ ಹೇಳದೆ ಕೇಳದೆ ಬಂದರೆ, “ಅಯ್ಯೋ ಈಗ್ಯಾಕೆ ಬರೋಕೆ ಹೋದ್ರಿ? ಮೊದಲೇ ಒಂದು ಫೋನ್‌ ಮಾಡಬಾರದಾಗಿತ್ತಾ? 
ನಾನು ಹೊರಗೆ ಹೋಗುತ್ತಿದ್ದೇನೆ, ಸ್ವಲ್ಪ ಕೆಲಸ ಇದೆ, ಆಮೇಲೆ ಸಿಗೋಣ’ ಎಂದು ಹೊರಟು ಬಿಡುವವರೂ ಉಂಟು.

ಅತಿಥೇಯರ ಅಲ್ಪ ಬುದ್ಧಿ
ನಾವು ಚಿಕ್ಕವರಿದ್ದಾಗ ರಜೆ ಬಂತೆಂದರೆ ಸಾಕು, ಸಂಬಂಧಿಕರ ಮನೆಗೆ ಹೋಗುತ್ತಿದ್ದೆವು. ಅವರು ಇವಳಾÂಕೆ ಬಂದಳು ಎಂದುಕೊಳ್ಳದೆ, ಪ್ರೀತಿಯಿಂದ ನೋಡಿಕೊಂಡು, ಎಷ್ಟು ದಿನ ಇದ್ದರೂ ಉಪಚರಿಸಿ ಕಳಿಸುತ್ತಿದ್ದರು. ಈಗ ಯಾರೇ ಅತಿಥಿ ಮನೆಗೆ ಬಂದರೂ ಮನೆಯ ದೊಡ್ಡವರೇ ಲೆಕ್ಕಚಾರ ಹಾಕುತ್ತಾರೆ. ಅಡುಗೆ ಮನೆಯಲ್ಲಿ ಗುಟ್ಟಾಗಿ ಮಾತನಾಡಿಕೊಳ್ಳುತ್ತಾರೆ. “ಇವನು ಎಷ್ಟು ದಿನ ಇರ್ತಾನೆ… ಈಗಲೇ ಬರಬೇಕಿತ್ತಾ… ಸುಮ್ನೆ ಖರ್ಚು, ಹೇಳ್ಳೋ ಹಾಗೂ ಇಲ್ಲ, ಬಿಡೋ ಹಾಗೂ ಇಲ್ಲ’ ಎಂದೆಲ್ಲ ಗುಸುಗುಸು ಮಾಡುತ್ತಾರೆ. 

ದೊಡ್ಡವರು ಹೀಗೆ ಮಾಡುವುದನ್ನು ನೋಡಿ ಚಿಕ್ಕವರೂ ಅದನ್ನೇ ಕಲಿತಿದ್ದಾರೆ. ಅತಿಥಿಗಳನ್ನು ಸತ್ಕರಿಸುವುದು ಬಿಡಿ, ಅವರನ್ನು ನೋಡಿ ಮುಗುಳುನಗುವುದೂ ಇಲ್ಲ. ಕೆಲವು ಸಲ ನಮ್ಮ ಸಂಬಂಧಿಕರೇ ಬಂದಿದ್ದರೂ ಅವರು ಹೇಗೆ ನಮಗೆ ಸಂಬಂಧ ಎಂಬುದು ಕೂಡ ನಮಗೆ ಗೊತ್ತಿರುವುದಿಲ್ಲ. ಅದನ್ನು ತಿಳಿದುಕೊಳ್ಳಲು ಪ್ರಯತ್ನ ಪಡುವುದೂ ಇಲ್ಲ.

ಪುರಾಣಗಳಲ್ಲಿ ಋಷಿ ಮುನಿಗಳು ಅತಿಥಿಗಳಿಗೆ ಬಹಳ ಪ್ರಾಮುಖ್ಯ ಕೊಡುತ್ತಿದ್ದರು. ಅತಿಥಿ ಬಂದರೆ ದೇವರೇ ಬಂದಂತೆ ಸೇವೆ ಮಾಡುತ್ತಿದ್ದರು. ಕಾಲು ತೊಳೆದು ನೀರು ಕೊಟ್ಟು ಊಟ ಬಡಿಸಿ, ವಿಶ್ರಾಂತಿ ಒದಗಿಸಿ ಸತ್ಕರಿಸುತ್ತಿದ್ದರು. ಅವರಿಗೆ ಯಾವುದಕ್ಕೂ ಕೊರತೆ ಮಾಡದೆ ಒಳ್ಳೆಯ ಆಹಾರವನ್ನು ಅವರಿಗೆ ಬಡಿಸಿ, ಉಳಿದಿದ್ದನ್ನು ತಾವು ಸೇವಿಸುತ್ತಿದ್ದರು. ಭಕ್ತ ಸಿರಿಯಾಳನ ಮನೆಗೆ ಶಿವನೇ ವೇಷಧಾರಿಯಾಗಿ ಬಂದು “ನಿನ್ನ ಮಗನನ್ನು ಕತ್ತರಿಸಿ ಅಡುಗೆ ಮಾಡಿ ಹಾಕಬೇಕು’ ಎಂದು ಹೇಳಿದ ಕತೆ ನಿಮಗೆ ಗೊತ್ತು. ಅದನ್ನು ದುಃಖದಿಂದ ಮಾಡಬಾರದು, ಸಂತೋಷದಿಂದ ಅಡುಗೆ ಮಾಡಿ ಬಡಿಸಬೇಕು ಎಂದು ಶಿವ ಪರೀಕ್ಷೆ ಒಡ್ಡಿದ್ದ. ಇದು ಅತಿಥಿ ದೇವೋಭವದ ಪರಾಕಾಷ್ಠೆ ಅನ್ನಿಸಿದರೂ ಅದರ ಹಿಂದಿನ ಆಶಯವನ್ನು ನಾವು ಅರ್ಥಮಾಡಿಕೊಳ್ಳಬೇಕು. 

ವಿದೇಶಿ ಅತಿಥಿಗಳ ದುರ್ಬಳಕೆ
ಮನೆಗೆ ಬರುವ ಅತಿಥಿಗಳನ್ನು ಕಡೆಗಣಿಸುವುದು ಒಂದೆಡೆಯಾದರೆ, ನಮ್ಮ ದೇಶಕ್ಕೆ ಬರುವ ಅತಿಥಿಗಳನ್ನು ದುರ್ಬಳಕೆ ಮಾಡಿಕೊಳ್ಳುವವರೂ ಸಾಕಷ್ಟಿದ್ದಾರೆ. ಪ್ರವಾಸಿ ತಾಣಗಳಲ್ಲಿ ಇದನ್ನು ರಾಜಾರೋಷವಾಗಿ ಮಾಡುತ್ತಾರೆ. ಅತಿಥಿ ಸತ್ಕಾರ ಬಿಡಿ, ಕೆಲವರಿಗೆ ತಿಥಿ ಮಾಡಿ ಕಳಿಸಿದ್ದಾರೆ! ಅನೇಕ ವಿದೇಶಿ ಮಹಿಳೆಯರನ್ನು ಬಲಾತ್ಕಾರ ಮಾಡಿ ಕೊಲೆ ಮಾಡಿದ್ದಾರೆ. ಸಹಾಯ ಮಾಡುತ್ತೇವೆ ಎಂದು ಹೇಳಿ ವಿದೇಶಿಗರ ಹಣ ಕದ್ದಿದ್ದಾರೆ. ಅವರ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆ. ಅತಿಥಿಗಳ ನಂಬಿಕೆಗೆ ದ್ರೋಹ ಮಾಡಿದ್ದಾರೆ. ಈ ಕೆಟ್ಟಬುದ್ಧಿ ನಮಗೆ ಎಲ್ಲಿಂದ ಬಂತು? ಯಾರಿಂದ ಬಂತು? ನಮ್ಮ ಹಿರಿಯರಿಂದ ಬಂತಾ ಅಥವಾ ನಾವು ತೀರಾ ಎಲ್ಲದರಲ್ಲೂ ಲೆಕ್ಕಾಚಾರಕ್ಕೆ ಇಳಿದು ಸ್ವಾರ್ಥಬುದ್ಧಿಯಿಂದ ಈಗ ಕಲಿತುಕೊಂಡಿದ್ದೇವಾ? 

ನಮ್ಮನ್ನು ಬೇರೆಯವರು ಕೀಳಾಗಿ ಕಂಡಾಗಲೇ ನಮಗೆ ನೋವಿನ ಅರಿವಾಗುವುದು. ನಾವು ಬೇರೆಯವರ ಮನೆಗೆ ಹೋದಾಗ ಅವರು ನಮ್ಮನ್ನು ಸರಿಯಾಗಿ ಟ್ರೀಟ್‌ ಮಾಡಲಿಲ್ಲ ಅಂತಾದರೆ ನಮಗೆ ಬೇಸರವಾಗುವುದಿಲ್ಲವೇ? ಅದನ್ನು ಮನಸ್ಸಿನಲ್ಲಿಟ್ಟುಕೊಂಡಾದರೂ ಅತಿಥಿಗಳಿಗೆ ಸತ್ಕಾರ ಮಾಡಬೇಕು. ಯಾರೂ ತಮಗೆ ಊಟಕ್ಕೆ ಗತಿಯಿಲ್ಲದಾಗಿ ನಿಮ್ಮ ಮನೆಗೆ ಬರುವುದಿಲ್ಲ. ಇವರು ನಮ್ಮವರು ಎಂಬ ಭಾವನೆಯಿಂದ ಬಂದಿರುತ್ತಾರೆ. ನಿಜವಾದ ಅತಿಥಿಗಳು ಹದಿನೈದಿಪ್ಪತ್ತು ದಿನ ಉಳಿದುಕೊಳ್ಳುವುದೂ ಇಲ್ಲ, ಒಂದೋ ಎರಡೋ ದಿನ ಇದ್ದು ಹೋಗುತ್ತಾರೆ. ಅವರನ್ನು ಕಡೆಗಣಿಸಿ ನಮ್ಮ ಪರಂಪರೆಯನ್ನು ಧಿಕ್ಕರಿಸಬೇಕೆ?

ನಮ್ಮನ್ನು ಬೇರೆಯವರು ಕೀಳಾಗಿ ಕಂಡಾಗಲೇ ನಮಗೆ ನೋವಿನ ಅರಿವಾಗುವುದು. ನಾವು ಬೇರೆಯವರ ಮನೆಗೆ ಹೋದಾಗ ಅವರು ನಮ್ಮನ್ನು ಸರಿಯಾಗಿ ಟ್ರೀಟ್‌ ಮಾಡಲಿಲ್ಲ ಅಂತಾದರೆ ನಮಗೆ ಬೇಸರವಾಗುವುದಿಲ್ಲವೇ? 
ಅದನ್ನು ಮನಸ್ಸಿನಲ್ಲಿಟ್ಟುಕೊಂಡಾದರೂ ಅತಿಥಿಗಳಿಗೆ ಸತ್ಕಾರ ಮಾಡಬೇಕು. ಯಾರೂ ತಮಗೆ ಊಟಕ್ಕೆ ಗತಿಯಿಲ್ಲದಾಗಿ ನಿಮ್ಮ ಮನೆಗೆ ಬರುವುದಿಲ್ಲ.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಡರ್ನ್ ಆಧ್ಯಾತ್ಮ: ನಮ್ಮ ಕೆಲಸವೇ “ನಮ್ಮ ವ್ಯಕ್ತಿತ್ವ’ವೆಂಬ ದುರಂತ!

ಮಾಡರ್ನ್ ಆಧ್ಯಾತ್ಮ: ನಮ್ಮ ಕೆಲಸವೇ “ನಮ್ಮ ವ್ಯಕ್ತಿತ್ವ’ವೆಂಬ ದುರಂತ!

ಅಂಥ ಸುಂದರ ವ್ಯಕ್ತಿಯನ್ನು ನನ್ನ ಜೀವನದಲ್ಲೇ ನೋಡಿರಲಿಲ್ಲ!

ಅಂಥ ಸುಂದರ ವ್ಯಕ್ತಿಯನ್ನು ನನ್ನ ಜೀವನದಲ್ಲೇ ನೋಡಿರಲಿಲ್ಲ!

ಮನೆಯಲ್ಲೇ ಕುಳಿತು ಪ್ರವಾಸ ಮಾಡುವಿರಾ?

ಮನೆಯಲ್ಲೇ ಕುಳಿತು ಪ್ರವಾಸ ಮಾಡುವಿರಾ?

modern-adyatma

ಎಲ್ಲರೂ ಹುಡುಕುತ್ತಿರುವುದು 3ನೇ ಕುರಿಯನ್ನೇ!

ram-46

ವೈದ್ಯ, ರೋಗಿ ಮತ್ತು ಭಕ್ತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

KARADI (2)

Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.