ನೊಗ್‌ರಾಜನ ತಂತ್ರ-ಕುತಂತ್ರ


Team Udayavani, Jan 12, 2018, 3:57 PM IST

huble-nograj.jpg

ಮುಂಜಾನೆ ಆತನಿಗೊಂದು ಕನಸು ಬೀಳುತ್ತದೆ. ದಾನ ಶೂರ ಕರ್ಣನಂತೆ ಕಷ್ಟವೆಂದು ಬಂದವರಿಗೆ ಕೈ ಎತ್ತಿ ಹಣ ಕೊಡುವ, ಮಗಳ ಮದುವೆಗೆ ಸಹಾಯ ಮಾಡಿ ಎಂದವರಿಗೆ ತನ್ನ ಹೆಂಡತಿಯ ತಾಳಿಯನ್ನೇ ಕೊಟ್ಟು ಕಳುಹಿಸುವಂತಹ “ಉದಾತ್ತ’ ಕನಸು. ನೊಗ್‌ರಾಜ್‌ ತಟ್ಟನೆ ಎದ್ದು ಕೂರುತ್ತಾನೆ. ಪಕ್ಕದಲ್ಲಿ ನಿಂತಿದ್ದ ಹೆಂಡತಿಯ ಕತ್ತು ನೋಡಿ, ತಾಳಿ ಇರೋದು ಕಾತರಿಪಡಿಸಿಕೊಳ್ಳುತ್ತಾನೆ. ಏಕೆಂದರೆ, ನೊಗ್‌ರಾಜ್‌ನ ಕನಸಿಗೂ, ಆತನ ವ್ಯಕ್ತಿತ್ವಕ್ಕೂ ಸಂಪೂರ್ಣ ವ್ಯತ್ಯಾಸವಿದೆ.

ಆತ ಮತ್ತೂಬ್ಬರಿಗೆ ಸಹಾಯ ಮಾಡುವ ರಾಜಕಾರಣಿಯಲ್ಲ, ಭ್ರಷ್ಟ ರಾಜಕಾರಣಿ. ತನ್ನ ಇಮೇಜ್‌ ಹೆಚ್ಚಿಸಿಕೊಳ್ಳಲು ಆತ ಏನು ಬೇಕಾದರೂ ಮಾಡುತ್ತಾನೆ. ನೊಗ್‌ರಾಜನ ಆ ಅವಾಂತರಗಳನ್ನು ನೋಡಬೇಕಾದರೆ ನೀವು ಸಿನಿಮಾಕ್ಕೆ ಹೋಗಿ. “ಹಂಬಲ್‌ ಪೊಲಿಟಿಷಿಯನ್‌ ನೊಗ್‌ರಾಜ್‌’ ಚಿತ್ರ ಹೆಸರಿಗೆ ತಕ್ಕಂತೆ ರಾಜಕೀಯ ಹಿನ್ನೆಲೆಯಲ್ಲಿ ಸಾಗುವ ಕಥೆಯನ್ನು ಹೊಂದಿದೆ. ರಾಜಕೀಯ, ರಾಜಕಾರಣಿಗಳನ್ನು ವಿಡಂಬಣೆ ಮಾಡುತ್ತಾ ಸಾಗುವ ಈ ಸಿನಿಮಾದಲ್ಲಿ ನಿಮಗೆ ಮನರಂಜನೆಗೇನೂ ಕೊರತೆಯಿಲ್ಲ.

ಇಡೀ ಸಿನಿಮಾವನ್ನು ಕಾಮಿಡಿ ಹಿನ್ನೆಲೆಯಲ್ಲಿ ಕಟ್ಟಿಕೊಡುವ ಮೂಲಕ ಸಿಕ್ಕಾಪಟ್ಟೆ ಸೀರಿಯಸ್‌ ಸಿನಿಮಾ ಎಂಬ ಮಾತಿನಿಂದ ನೊಗ್‌ರಾಜ್‌ನನ್ನು ಮುಕ್ತವಾಗಿಸಿದ್ದಾರೆ. ಈಗಾಗಲೇ ರಾಜಕೀಯ, ಭ್ರಷ್ಟ ರಾಜಕಾರಣಿಗಳನ್ನು ವಿಡಂಬಣೆ ಮಾಡುವ ಚಿತ್ರಗಳು ಕನ್ನಡದಲ್ಲಿ ಬಂದಿವೆ. ಆದರೆ, “ನೊಗ್‌ರಾಜ್‌’ನ ಕಥೆಯಲ್ಲಿ ರಾಜಕೀಯ ವಿಡಂಬಣೆ ಇದ್ದರೂ ನಿರ್ದೇಶಕರು ಅದನ್ನು ತಮ್ಮದೇ ಶೈಲಿಯಲ್ಲಿ ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ಆ ಮಟ್ಟಿಗೆ ಇದು ಹೊಸ ಪ್ರಯತ್ನ ಎನ್ನಬಹುದು. 

ಕಾಲೇಜು ದಿನಗಳಿಂದಲೇ ಪಕ್ಕಾ ಲೆಕ್ಕಾಚಾರದೊಂದಿಗೆ ತನ್ನ ಆಸೆ ಈಡೇರಿಸಿಕೊಳ್ಳುತ್ತಾ ಬಂದು ಕಾರ್ಪೋರೇಟರ್‌ ಆದ ನೊಗ್‌ರಾಜ್‌ ಮುಂದೆ ಶಾಸಕನಾಗಲು ಏನೆಲ್ಲಾ ಕಸರತ್ತು ಮಾಡುತ್ತಾನೆ ಮತ್ತು ಆತ ಏನೇನು ತಂತ್ರಗಳನ್ನು ಅನುಸರಿಸುತ್ತಾನೆ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ. ಮುಖ್ಯವಾಗಿ ಈ ಸಿನಿಮಾದಲ್ಲಿ ರಾಜಕಾರಣಿಯೊಬ್ಬ ತನ್ನ ಹಣಬಲದಿಂದ ಇಡೀ ವ್ಯವಸ್ಥೆಯನ್ನು ತನಗೆ ಬೇಕಾದಂತೆ ಹೇಗೆ ಬದಲಿಸಬಲ್ಲ ಎಂಬುದನ್ನು ವಿಧವಿಧವಾಗಿ ಇಲ್ಲಿ ತೋರಿಸಲಾಗಿದೆ. 

ಚಿತ್ರದ ಮೊದಲರ್ಧ ನಿಮಗೆ ಭ್ರಷ್ಟ ಕಾರ್ಪೋರೇಟರ್‌ ಒಬ್ಬನ ಪಯಣದಲ್ಲಿ ಮುಗಿದು ಹೋಗುತ್ತದೆ. ಇಲ್ಲಿ ಆತನ “ತಂತ್ರ’ಗಳನ್ನು ಡಿಸೈನ್‌ ಡಿಸೈನ್‌ ಆಗಿ ಹೇಳಲಾಗಿದೆ. ಚಿತ್ರದ ನಿಜವಾದ ಕಥೆ ಹಾಗೂ ಕುತೂಹಲ ತೆರೆದುಕೊಳ್ಳುವುದು ದ್ವಿತೀಯಾರ್ಧದಲ್ಲಿ. ನೊಗ್‌ರಾಜ್‌ಗೊಬ್ಬ ಪ್ರತಿಸ್ಪರ್ಧಿ ಹುಟ್ಟಿಕೊಳ್ಳುವ ಮೂಲಕ ಸಿನಿಮಾದ ಟ್ವಿಸ್ಟ್‌ ತೆರೆದುಕೊಳ್ಳುತ್ತದೆ. ಇಲ್ಲಿ ಸಿನಿಮಾ ಕೂಡಾ ಒಂದಷ್ಟು ಗಂಭೀರವಾಗುತ್ತಾ ಸಾಗುತ್ತದೆ.

ಆದರೆ, ನೊಗ್‌ರಾಜ್‌ನ ಎಂಟ್ರಿಯಾದಾಗ ಸಿನಿಮಾಗೆ ಕಾಮಿಡಿ ಸ್ಪರ್ಶ ಸಿಗುತ್ತದೆ. ಈ ಸಿನಿಮಾ ಹೇಗೆ ಕಾಮಿಡಿಯಾಗಿ ಸಾಗುತ್ತದೋ ಅದರ ಜೊತೆಗೆ ಒಂದಷ್ಟು ಸೂಕ್ಷ್ಮಸಂದೇಶಗಳನ್ನು ಕೂಡಾ ನೀಡಿದೆ. ರಾಜಕೀಯದ ನೈಜ ಸ್ಥಿತಿ, ಒಳಗೊಳಗೆ ನಡೆಯುವ ಮಾಫಿಯಾಗಳು, ಪ್ರಾಮಾಣಿಕ ವ್ಯಕ್ತಿಗಳ ಅನುಭವಿಸಬೇಕಾದ ಅವಮಾನ ಸೇರಿದಂತೆ ಹಲವು ಅಂಶಗಳನ್ನು ಹೇಳುವ ಮೂಲಕ ರಾಜಕೀಯ ವಿಡಂಬಣೆ ಮಾಡಲಾಗಿದೆ.

ಚಿತ್ರದಲ್ಲಿ ಒಂದಷ್ಟು ದೃಶ್ಯಗಳಿಗೆ ಕತ್ತರಿ, ಹಾಕಿ ಟ್ರಿಮ್‌ ಮಾಡುವ ಅವಕಾಶ ನಿರ್ದೇಶಕರಿಗಿತ್ತು. ಚಿತ್ರದ ಸಂಭಾಷಣೆ ಚುರುಕಾಗಿದೆ. ನೊಗ್‌ರಾಜ್‌ ಮ್ಯಾನರಿಸಂಗೆ ಆ ಸಂಭಾಷಣೆ ಹೊಂದಿಕೊಂಡಿದೆ. ಇಡೀ ಸಿನಿಮಾವನ್ನು ಹೆಗಲ ಮೇಲೆ ಹೊತ್ತು ಸಾಗಿರೋದು ನಟ ದಾನಿಶ್‌ ಸೇಠ್. ಅವರಿಗಿದು ನಾಯಕರಾಗಿ ಮೊದಲ ಸಿನಿಮಾ. ಮೊದಲ ಸಿನಿಮಾದಲ್ಲೇ ಮೋಡಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ನೊಗ್‌ರಾಜ್‌ ಪಾತ್ರವನ್ನು ಅವರು ಅಕ್ಷರಶಃ ಜೀವಿಸಿದ್ದಾರೆ. ಅವರ ಮಾತಿನ ಶೈಲಿ, ಮ್ಯಾನರಿಸಂ ಎಲ್ಲವೂ ಪಾತ್ರಕ್ಕೆ ಹೊಂದಿಕೊಂಡಿದೆ. ಉಳಿದಂತೆ ಚಿತ್ರದಲ್ಲಿ ರೋಜರ್‌ ನಾರಾಯಣ್‌, ಸುಮುಖೀ ಸುರೇಶ್‌,ಶೃತಿ ಹರಿಹರನ್‌, ವಿಜಯ್‌ ಚೆಂಡೂರು ಸೇರಿದಂತೆ ಅನೇಕರು ನಟಿಸಿದ್ದು, ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಆದರೆ, ಫ್ರೇಮ್‌ ಟು ಫ್ರೇಮ್‌ ದಾನಿಶ್‌ ಆವರಿಸಿಕೊಂಡಿದ್ದರಿಂದ ಅವರ್ಯಾರು ಹೆಚ್ಚು ಗಮನ ಸೆಳೆಯೋದಿಲ್ಲ. ಚಿತ್ರದ “ಪ್ರಾಬ್ಲಿಂ’ ಹಾಡು ಇಷ್ಟವಾಗುತ್ತದೆ.

ಚಿತ್ರ: ಹಂಬಲ್‌ ಪೊಲಿಟಿಷಿಯನ್‌ ನೊಗ್‌ರಾಜ್‌
ನಿರ್ಮಾಣ: ಪುಷ್ಕರ್‌, ರಕ್ಷಿತ್‌ ಶೆಟ್ಟಿ, ಹೇಮಂತ್‌ ರಾವ್‌
ನಿರ್ದೇಶನ: ಸಾದ್‌ ಖಾನ್‌
ತಾರಾಬಳಗ: ದಾನಿಶ್‌ ಸೇಠ್, ರೋಜರ್‌ ನಾರಾಯಣ್‌, ಸುಮುಖೀ ಸುರೇಶ್‌,ಶೃತಿ ಹರಿಹರನ್‌, ವಿಜಯ್‌ ಚೆಂಡೂರು ಮುಂತಾದವರು

* ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.