ನೊಗ್‌ರಾಜನ ತಂತ್ರ-ಕುತಂತ್ರ


Team Udayavani, Jan 12, 2018, 3:57 PM IST

huble-nograj.jpg

ಮುಂಜಾನೆ ಆತನಿಗೊಂದು ಕನಸು ಬೀಳುತ್ತದೆ. ದಾನ ಶೂರ ಕರ್ಣನಂತೆ ಕಷ್ಟವೆಂದು ಬಂದವರಿಗೆ ಕೈ ಎತ್ತಿ ಹಣ ಕೊಡುವ, ಮಗಳ ಮದುವೆಗೆ ಸಹಾಯ ಮಾಡಿ ಎಂದವರಿಗೆ ತನ್ನ ಹೆಂಡತಿಯ ತಾಳಿಯನ್ನೇ ಕೊಟ್ಟು ಕಳುಹಿಸುವಂತಹ “ಉದಾತ್ತ’ ಕನಸು. ನೊಗ್‌ರಾಜ್‌ ತಟ್ಟನೆ ಎದ್ದು ಕೂರುತ್ತಾನೆ. ಪಕ್ಕದಲ್ಲಿ ನಿಂತಿದ್ದ ಹೆಂಡತಿಯ ಕತ್ತು ನೋಡಿ, ತಾಳಿ ಇರೋದು ಕಾತರಿಪಡಿಸಿಕೊಳ್ಳುತ್ತಾನೆ. ಏಕೆಂದರೆ, ನೊಗ್‌ರಾಜ್‌ನ ಕನಸಿಗೂ, ಆತನ ವ್ಯಕ್ತಿತ್ವಕ್ಕೂ ಸಂಪೂರ್ಣ ವ್ಯತ್ಯಾಸವಿದೆ.

ಆತ ಮತ್ತೂಬ್ಬರಿಗೆ ಸಹಾಯ ಮಾಡುವ ರಾಜಕಾರಣಿಯಲ್ಲ, ಭ್ರಷ್ಟ ರಾಜಕಾರಣಿ. ತನ್ನ ಇಮೇಜ್‌ ಹೆಚ್ಚಿಸಿಕೊಳ್ಳಲು ಆತ ಏನು ಬೇಕಾದರೂ ಮಾಡುತ್ತಾನೆ. ನೊಗ್‌ರಾಜನ ಆ ಅವಾಂತರಗಳನ್ನು ನೋಡಬೇಕಾದರೆ ನೀವು ಸಿನಿಮಾಕ್ಕೆ ಹೋಗಿ. “ಹಂಬಲ್‌ ಪೊಲಿಟಿಷಿಯನ್‌ ನೊಗ್‌ರಾಜ್‌’ ಚಿತ್ರ ಹೆಸರಿಗೆ ತಕ್ಕಂತೆ ರಾಜಕೀಯ ಹಿನ್ನೆಲೆಯಲ್ಲಿ ಸಾಗುವ ಕಥೆಯನ್ನು ಹೊಂದಿದೆ. ರಾಜಕೀಯ, ರಾಜಕಾರಣಿಗಳನ್ನು ವಿಡಂಬಣೆ ಮಾಡುತ್ತಾ ಸಾಗುವ ಈ ಸಿನಿಮಾದಲ್ಲಿ ನಿಮಗೆ ಮನರಂಜನೆಗೇನೂ ಕೊರತೆಯಿಲ್ಲ.

ಇಡೀ ಸಿನಿಮಾವನ್ನು ಕಾಮಿಡಿ ಹಿನ್ನೆಲೆಯಲ್ಲಿ ಕಟ್ಟಿಕೊಡುವ ಮೂಲಕ ಸಿಕ್ಕಾಪಟ್ಟೆ ಸೀರಿಯಸ್‌ ಸಿನಿಮಾ ಎಂಬ ಮಾತಿನಿಂದ ನೊಗ್‌ರಾಜ್‌ನನ್ನು ಮುಕ್ತವಾಗಿಸಿದ್ದಾರೆ. ಈಗಾಗಲೇ ರಾಜಕೀಯ, ಭ್ರಷ್ಟ ರಾಜಕಾರಣಿಗಳನ್ನು ವಿಡಂಬಣೆ ಮಾಡುವ ಚಿತ್ರಗಳು ಕನ್ನಡದಲ್ಲಿ ಬಂದಿವೆ. ಆದರೆ, “ನೊಗ್‌ರಾಜ್‌’ನ ಕಥೆಯಲ್ಲಿ ರಾಜಕೀಯ ವಿಡಂಬಣೆ ಇದ್ದರೂ ನಿರ್ದೇಶಕರು ಅದನ್ನು ತಮ್ಮದೇ ಶೈಲಿಯಲ್ಲಿ ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ಆ ಮಟ್ಟಿಗೆ ಇದು ಹೊಸ ಪ್ರಯತ್ನ ಎನ್ನಬಹುದು. 

ಕಾಲೇಜು ದಿನಗಳಿಂದಲೇ ಪಕ್ಕಾ ಲೆಕ್ಕಾಚಾರದೊಂದಿಗೆ ತನ್ನ ಆಸೆ ಈಡೇರಿಸಿಕೊಳ್ಳುತ್ತಾ ಬಂದು ಕಾರ್ಪೋರೇಟರ್‌ ಆದ ನೊಗ್‌ರಾಜ್‌ ಮುಂದೆ ಶಾಸಕನಾಗಲು ಏನೆಲ್ಲಾ ಕಸರತ್ತು ಮಾಡುತ್ತಾನೆ ಮತ್ತು ಆತ ಏನೇನು ತಂತ್ರಗಳನ್ನು ಅನುಸರಿಸುತ್ತಾನೆ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ. ಮುಖ್ಯವಾಗಿ ಈ ಸಿನಿಮಾದಲ್ಲಿ ರಾಜಕಾರಣಿಯೊಬ್ಬ ತನ್ನ ಹಣಬಲದಿಂದ ಇಡೀ ವ್ಯವಸ್ಥೆಯನ್ನು ತನಗೆ ಬೇಕಾದಂತೆ ಹೇಗೆ ಬದಲಿಸಬಲ್ಲ ಎಂಬುದನ್ನು ವಿಧವಿಧವಾಗಿ ಇಲ್ಲಿ ತೋರಿಸಲಾಗಿದೆ. 

ಚಿತ್ರದ ಮೊದಲರ್ಧ ನಿಮಗೆ ಭ್ರಷ್ಟ ಕಾರ್ಪೋರೇಟರ್‌ ಒಬ್ಬನ ಪಯಣದಲ್ಲಿ ಮುಗಿದು ಹೋಗುತ್ತದೆ. ಇಲ್ಲಿ ಆತನ “ತಂತ್ರ’ಗಳನ್ನು ಡಿಸೈನ್‌ ಡಿಸೈನ್‌ ಆಗಿ ಹೇಳಲಾಗಿದೆ. ಚಿತ್ರದ ನಿಜವಾದ ಕಥೆ ಹಾಗೂ ಕುತೂಹಲ ತೆರೆದುಕೊಳ್ಳುವುದು ದ್ವಿತೀಯಾರ್ಧದಲ್ಲಿ. ನೊಗ್‌ರಾಜ್‌ಗೊಬ್ಬ ಪ್ರತಿಸ್ಪರ್ಧಿ ಹುಟ್ಟಿಕೊಳ್ಳುವ ಮೂಲಕ ಸಿನಿಮಾದ ಟ್ವಿಸ್ಟ್‌ ತೆರೆದುಕೊಳ್ಳುತ್ತದೆ. ಇಲ್ಲಿ ಸಿನಿಮಾ ಕೂಡಾ ಒಂದಷ್ಟು ಗಂಭೀರವಾಗುತ್ತಾ ಸಾಗುತ್ತದೆ.

ಆದರೆ, ನೊಗ್‌ರಾಜ್‌ನ ಎಂಟ್ರಿಯಾದಾಗ ಸಿನಿಮಾಗೆ ಕಾಮಿಡಿ ಸ್ಪರ್ಶ ಸಿಗುತ್ತದೆ. ಈ ಸಿನಿಮಾ ಹೇಗೆ ಕಾಮಿಡಿಯಾಗಿ ಸಾಗುತ್ತದೋ ಅದರ ಜೊತೆಗೆ ಒಂದಷ್ಟು ಸೂಕ್ಷ್ಮಸಂದೇಶಗಳನ್ನು ಕೂಡಾ ನೀಡಿದೆ. ರಾಜಕೀಯದ ನೈಜ ಸ್ಥಿತಿ, ಒಳಗೊಳಗೆ ನಡೆಯುವ ಮಾಫಿಯಾಗಳು, ಪ್ರಾಮಾಣಿಕ ವ್ಯಕ್ತಿಗಳ ಅನುಭವಿಸಬೇಕಾದ ಅವಮಾನ ಸೇರಿದಂತೆ ಹಲವು ಅಂಶಗಳನ್ನು ಹೇಳುವ ಮೂಲಕ ರಾಜಕೀಯ ವಿಡಂಬಣೆ ಮಾಡಲಾಗಿದೆ.

ಚಿತ್ರದಲ್ಲಿ ಒಂದಷ್ಟು ದೃಶ್ಯಗಳಿಗೆ ಕತ್ತರಿ, ಹಾಕಿ ಟ್ರಿಮ್‌ ಮಾಡುವ ಅವಕಾಶ ನಿರ್ದೇಶಕರಿಗಿತ್ತು. ಚಿತ್ರದ ಸಂಭಾಷಣೆ ಚುರುಕಾಗಿದೆ. ನೊಗ್‌ರಾಜ್‌ ಮ್ಯಾನರಿಸಂಗೆ ಆ ಸಂಭಾಷಣೆ ಹೊಂದಿಕೊಂಡಿದೆ. ಇಡೀ ಸಿನಿಮಾವನ್ನು ಹೆಗಲ ಮೇಲೆ ಹೊತ್ತು ಸಾಗಿರೋದು ನಟ ದಾನಿಶ್‌ ಸೇಠ್. ಅವರಿಗಿದು ನಾಯಕರಾಗಿ ಮೊದಲ ಸಿನಿಮಾ. ಮೊದಲ ಸಿನಿಮಾದಲ್ಲೇ ಮೋಡಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ನೊಗ್‌ರಾಜ್‌ ಪಾತ್ರವನ್ನು ಅವರು ಅಕ್ಷರಶಃ ಜೀವಿಸಿದ್ದಾರೆ. ಅವರ ಮಾತಿನ ಶೈಲಿ, ಮ್ಯಾನರಿಸಂ ಎಲ್ಲವೂ ಪಾತ್ರಕ್ಕೆ ಹೊಂದಿಕೊಂಡಿದೆ. ಉಳಿದಂತೆ ಚಿತ್ರದಲ್ಲಿ ರೋಜರ್‌ ನಾರಾಯಣ್‌, ಸುಮುಖೀ ಸುರೇಶ್‌,ಶೃತಿ ಹರಿಹರನ್‌, ವಿಜಯ್‌ ಚೆಂಡೂರು ಸೇರಿದಂತೆ ಅನೇಕರು ನಟಿಸಿದ್ದು, ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಆದರೆ, ಫ್ರೇಮ್‌ ಟು ಫ್ರೇಮ್‌ ದಾನಿಶ್‌ ಆವರಿಸಿಕೊಂಡಿದ್ದರಿಂದ ಅವರ್ಯಾರು ಹೆಚ್ಚು ಗಮನ ಸೆಳೆಯೋದಿಲ್ಲ. ಚಿತ್ರದ “ಪ್ರಾಬ್ಲಿಂ’ ಹಾಡು ಇಷ್ಟವಾಗುತ್ತದೆ.

ಚಿತ್ರ: ಹಂಬಲ್‌ ಪೊಲಿಟಿಷಿಯನ್‌ ನೊಗ್‌ರಾಜ್‌
ನಿರ್ಮಾಣ: ಪುಷ್ಕರ್‌, ರಕ್ಷಿತ್‌ ಶೆಟ್ಟಿ, ಹೇಮಂತ್‌ ರಾವ್‌
ನಿರ್ದೇಶನ: ಸಾದ್‌ ಖಾನ್‌
ತಾರಾಬಳಗ: ದಾನಿಶ್‌ ಸೇಠ್, ರೋಜರ್‌ ನಾರಾಯಣ್‌, ಸುಮುಖೀ ಸುರೇಶ್‌,ಶೃತಿ ಹರಿಹರನ್‌, ವಿಜಯ್‌ ಚೆಂಡೂರು ಮುಂತಾದವರು

* ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lineman movie review

Lineman movie review; ಜಾಲಿರೈಡ್‌ ನ‌ಲ್ಲಿ ‘ಲೈನ್‌ಮ್ಯಾನ್‌’

Dilkush Movie Review

Dilkush Movie Review; ತ್ರಿಕೋನ ಪ್ರೇಮದಲ್ಲಿ ಹೊಸಬರ ಆಟ

Mehabooba-Movie-Review

Mehabooba Movie Review; ತಿರುವುಗಳ ಹಾದಿಯಲ್ಲಿ ಪ್ರೇಮಪಯಣ

chow chow bath movie review

Chow Chow Bath Review; ಹರೆಯದ ಮನಸುಗಳ ಖಾಸ್‌ಬಾತ್‌

jog 101 kannada movie review

JOG 101 movie review; ಸುಂದರ ಜೋಗದಲ್ಲಿ ನಿಗೂಢ ಹೆಜ್ಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.