ನನ್ನ ಸಿನಿ ಕೆರಿಯರ್‌ನಲ್ಲಿ ಅಯೋಗ್ಯ ಮೈಲಿಗಲ್ಲು


Team Udayavani, Jul 30, 2018, 11:40 AM IST

ayogya.jpg

ನೀನಾಸಂ ಸತೀಶ್‌ ಈಗ ಸಿಕ್ಕಾಪಟ್ಟೆ ಖುಷಿಯಲ್ಲಿದ್ದಾರೆ. ಅದಕ್ಕೆ ಕಾರಣ, “ಅಯೋಗ್ಯ’. ಹೌದು, ಟಿ.ಆರ್‌. ಚಂದ್ರಶೇಖರ್‌ ನಿರ್ಮಿಸಿ, ಎಸ್‌. ಮಹೇಶ್‌ ಕುಮಾರ್‌ ನಿರ್ದೇಶಿಸಿರುವ “ಅಯೋಗ್ಯ’, ಒಂದರ ಮೇಲೊಂದು ದಾಖಲೆ ಮಾಡಿದೆ. ಅದೇ ಸತೀಶ್‌ ಖುಷಿಗೆ ಕಾರಣ. ಅಷ್ಟಕ್ಕೂ ಆ ದಾಖಲೆ ಏನು, ಎತ್ತ, ಇತ್ಯಾದಿ ಕುರಿತು “ಚಿಟ್‌ಚಾಟ್‌’ನಲ್ಲಿ ಮಾತನಾಡಿದ್ದಾರೆ.

* “ಅಯೋಗ್ಯ’ನದು ಹೊಸ ದಾಖಲೆಯಂತೆ ಹೌದಾ?
ಹೌದು, ಅದಕ್ಕೆ ಹಲವು ಕಾರಣಗಳು. “ಏನಮ್ಮಿ, ಏನಮ್ಮಿ’ ಹಾಡು ಡಬ್‌ಸ್ಮ್ಯಾಷ್‌ನಲ್ಲಿ ದಾಖಲೆ ಬರೆದಿದೆ. ಇದುವರೆಗೆ ಹದಿನಾರುವರೆ ಸಾವಿರ ಡಬ್‌ಸ್ಮ್ಯಾಷ್‌ ಆಗಿದ್ದು ವಿಶೇಷ. ಆನಂದ್‌ ಆಡಿಯೋ ಸಂಸ್ಥೆ ಪ್ರಕಾರ, ಕನ್ನಡದಲ್ಲಿ ಈ ಹಾಡಿಗೆ ಆದಂತಹ ಡಬ್‌ಸ್ಮ್ಯಾಷ್‌ ಬೇರೆ ಯಾವ ಹಾಡಿಗೂ ಆಗಿಲ್ಲ. ಅದೂ ಕಡಿಮೆ ಅವಧಿಯಲ್ಲಿ. “ಹಿಂದೆ ಹಿಂದೆ ಹೋಗು’ ಹಾಡು ಸಹ ಒಂದೇ ದಿನದಲ್ಲಿ ಒನ್‌ ಮಿಲಿಯನ್‌ ಆಗಿದೆ.

ಅದು ಹೊಸ ದಾಖಲೆ. ನನ್ನ ಹಿಂದಿನ ಚಿತ್ರಗಳ ಹಾಡುಗಳೂ ಸದ್ದು ಮಾಡಿದ್ದವು. ಆದರೆ, ಈ ಲೆವೆಲ್‌ಗೆ ಆಗಿರಲಿಲ್ಲ. ಈ ಚಿತ್ರ ನನ್ನನ್ನು ಇನ್ನೊಂದು ಹಂತಕ್ಕೆ ಕರೆದೊಯ್ಯುತ್ತೆ. ಸಾಮಾನ್ಯವಾಗಿ ಚಿತ್ರದ ಒಂದು ಹಾಡು ಹಿಟ್‌ ಆಗುವುದುಂಟು. ಆದರೆ, ಇಲ್ಲಿ ಎರಡು ಹಾಡು ಹಿಟ್‌ ಆಗಿದೆ. ಅದೂ ದಾಖಲೆ. ಇಂಡಿಯಾದಲ್ಲೇ ಜಿಯೋ ಮ್ಯೂಸಿಕ್‌ನಲ್ಲಿ ಟಾಪ್‌ 4ನಲ್ಲಿದೆ. ರಾಜ್ಯದಲ್ಲಿ ಟಾಪ್‌ ಒಂದರಲ್ಲಿದೆ. ಇದು ಖುಷಿ ಹೆಚ್ಚಿಸಿದೆ.

* ನಿಮ್ಮ ಕೆರಿಯರ್‌ನಲ್ಲಿ “ಅಯೊಗ್ಯ’ ಎಷ್ಟು ಪ್ರಮುಖ ಪಾತ್ರ ವಹಿಸುತ್ತೆ?
ನನ್ನ ಕೆರಿಯರ್‌ನಲ್ಲಿ “ಅಯೋಗ್ಯ’ ದೊಡ್ಡ ಮೈಲಿಗಲ್ಲು. ನನಗಷ್ಟೇ ಅಲ್ಲ, ಅದು ನನ್ನ ತಂಡ ಮತ್ತು ವಿತರಕರಿಗೂ ಕೂಡ. ಮೊದಲಿಗೆ ಇದು ಅಪ್ಪಟ ದೇಸಿ ಚಿತ್ರ. ಎಲ್ಲೂ ಕಾಣದ, ಕೇಳದ ಕಥೆ ಇಲ್ಲಿದೆ. ಎಲ್ಲೂ ಕದಿಯದ, ಸ್ಫೂರ್ತಿ ಪಡೆಯದ ಚಿತ್ರಣ ಇಲ್ಲಿದೆ. ಚಿತ್ರ ನೋಡಿದಾಗ, ಪ್ರತಿಯೊಬ್ಬರೂ ತನ್ನ ಲೈಫ್ಸ್ಟೋರಿನೇ ಅಂದುಕೊಳ್ಳುವಂತಿದೆ. ಈ ಚಿತ್ರವನ್ನು ನಾನು ಸುಮಾರು ಹದಿನೈದು ಸಲ ನೋಡಿದ್ದೇನೆ. ಎಲ್ಲೂ ಬೋರ್‌ ಎನಿಸಿಲ್ಲ. ಕಂಟೆಂಟ್‌ ಫ್ರೆಶ್‌ ಆಗಿರುವುದೇ ಜೀವಾಳ. ಹಾಡುಗಳು ಈ ಪರಿ ಹಿಟ್‌ ಆಗಿರುವುದರಿಂದ ಚಿತ್ರವೂ ಹೊಸ ದಾಖಲೆ ಬರೆಯುತ್ತೆ ಎಂಬ ವಿಶ್ವಾಸ ನನ್ನದು.
 
* “ಅಯೋಗ್ಯ’ನ ಮೇಲೆ ನಿರೀಕ್ಷೆ ಎಷ್ಟಿದೆ?
ಹಿನ್ನೆಲೆ ಸಂಗೀತ ಮಾಡಿರುವ ಅರ್ಜುನ್‌ ಜನ್ಯ ಹೇಳಿದ್ದಿಷ್ಟು. “ಸತೀಶ್‌, ನೀವು ಅರಾಮವಾಗಿರಿ. ಟೆನÒನ್‌ ಮಾಡ್ಕೊàಬೇಡಿ, ಹಾಯಾಗಿ ನಿದ್ದೆ ಮಾಡಿ’ ಅಂತ. ಹಾಡುಗಳಿಗೆ ಜನರು ಕೊಟ್ಟ ತೀರ್ಪು ನೋಡಿ ನಿರೀಕ್ಷೆ ಹೆಚ್ಚಿದೆ. ನಾನು ಯಾವ ಚಿತ್ರದ ಮೇಲೂ ಇಷ್ಟೊಂದು ನಿರೀಕ್ಷೆ ಇಟ್ಟುಕೊಂಡಿಲ್ಲ. ಇದು ಹೊಸ ಪವಾಡ ಸೃಷ್ಟಿಸುತ್ತೆ ಎಂಬ ನಂಬಿಕೆಯಂತೂ ಇದೆ.

* ಮೊದಲ ಸಲ ರಚಿತಾರಾಮ್‌ ಜೊತೆಗಿನ ಹೇಗಿತ್ತು?
ರಚಿತಾರಾಮ್‌ ಒಳ್ಳೇ ನಟಿ. ಅವರು ಇದೇ ಮೊದಲ ಸಲ ಸಂಪೂರ್ಣ ಮಂಡ್ಯ ಭಾಷೆ ಮಾತಾಡಿದ್ದಾರೆ. ಅದರಲ್ಲೂ, ಬೆಂಗಳೂರು ಹುಡುಗಿಯರಿಗೆ ಮಂಡ್ಯ ಭಾಷೆ ಹಿಡಿಯೋದು ಕಷ್ಟ. ಅವರು ಹಠ ಮಾಡಿ, ನಾನೇ ಮಂಡ್ಯ ಭಾಷೆಯಲ್ಲೇ ಡಬ್‌ ಮಾಡ್ತೀನಿ ಅಂತ ಹಠ ಮಾಡಿ ಡಬ್ಬಿಂಗ್‌ ಮಾಡಿದ್ದಾರೆ. ಒಬ್ಬ ಹಳ್ಳಿ ಹುಡುಗಿಯಾಗಿ, ಥೇಟ್‌ ಪಕ್ಕದ್ಮನೆ ಹುಡುಗಿಯಂತೆ ಕಾಣುತ್ತಾರೆ. ಇಬ್ಬರ ಕೆಮಿಸ್ಟ್ರಿ ಚೆನ್ನಾಗಿತ್ತು. ಎಷ್ಟೋ ಸಲ ಡೈಲಾಗ್‌ ಕುರಿತು ಚರ್ಚಿಸಿ, ನಟಿಸಿದ್ದೇವೆ.

* ಪೋಸ್ಟರ್‌ನಲ್ಲಿ ಕಲರ್‌ಫ‌ುಲ್‌ ಗೆಟಪ್‌ ಇದೆ, ಚಿತ್ರವೂ ಹಾಗೇನಾ?
ಇಡೀ ಚಿತ್ರವೇ ಕಲರ್‌ಫ‌ುಲ್‌ ಆಗಿರಲಿದೆ. ಹೀರೋ, ಸದಾ ಕಲರ್‌ಫ‌ುಲ್‌ ಮನುಷ್ಯ. ಪಾಸಿಟಿವ್‌ ಎನರ್ಜಿ ಇರುವಂಥವನು. ನಗುವಲ್ಲೇ ಎಲ್ಲವನ್ನು ಗೆಲಲ್ಲು ಪ್ರಯತ್ನ ಪಡುವಂಥವನು. ಹಾಗಾಗಿ ಚಿತ್ರದುದ್ದಕ್ಕೂ ಕಲರ್‌ಫ‌ುಲ್‌ ಆಗಿಯೇ, ಚಿತ್ರವನ್ನೂ ರಂಗಾಗಿಸುತ್ತ ಹೋಗುತ್ತಾನೆ. ಹಾಗಾಗಿ, ಚಿತ್ರ ಅಪ್ಪಟ ರಂಗಿನ ಮನರಂಜನಾತ್ಮಕ ಚಿತ್ರ.

* ಅಯೋಗ್ಯನ ಉದ್ದೇಶ ಏನು?
ಎಲ್ಲರೂ ತಿಳಿದುಕೊಂಡಂತೆ, ಈ ಅಯೋಗ್ಯ ಕೆಟ್ಟವನಲ್ಲ. ಈ ಮೂಲಕ ಸಮಾಜಕ್ಕೆ ದೊಡ್ಡ ಸಂದೇಶ ಹೇಳಲು ಹೊರಟಿದ್ದಾನೆ. ನಮ್ಮ ಜವಾಬ್ದಾರಿ ಎಷ್ಟಿದೆ ಎಂಬುದನ್ನು ತಿಳಿ ಹೇಳುವ ಪ್ರಯತ್ನ ಅವನದು. ಹಳ್ಳಿಯ ಪ್ರತಿಯೊಬ್ಬ ವ್ಯಕ್ತಿ, ಇಷ್ಟೆಲ್ಲಾ ಸಮಸ್ಯೆ ಇದೆಯಾ? ಆ ಸಮಸ್ಯೆಗೆ ಹೀಗೆಲ್ಲಾ ಪರಿಹಾರವಿದೆಯಾ ಎಂಬುದನ್ನು ತಿಳಿದುಕೊಳ್ಳುವಷ್ಟು ಮಟ್ಟಿಗೆ ಅಯೋಗ್ಯನ ಪಾತ್ರವಿದೆ.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.