ಸರಸ + ವಿರಸ = ಪಾದರಸ


Team Udayavani, Aug 12, 2018, 11:20 AM IST

padarasa.jpg

ಪರಮ ನೀಚ ಅವನು. ಯಾರಿಗೋ ಕೆಲಸ ಕೊಡಿಸುತ್ತೀನಿ ಅಂತ ಅವರಿಂದ ದುಡ್ಡು ಪಡೆದು ಕುಡಿದು ಮಜಾ ಮಾಡುತ್ತಾನೆ. ತನ್ನ ಬೆಸ್ಟ್‌ ಫ್ರೆಂಡ್‌ ಒಬ್ಬ ಒಂದು ಹುಡುಗಿಯನ್ನು ಇಷ್ಟಪಟ್ಟಿದ್ದಾನೆ ಎಂದು ಗೊತ್ತಿದ್ದರೂ, ಆ ಹುಡುಗಿಯನ್ನೇ ಪಟಾಯಿಸಿ ತನ್ನ ಸ್ನೇಹಿತನಿಗೇ ಮೋಸ ಮಾಡುತ್ತಾನೆ. ಒಂದು ಲಕ್ಷ ದುಡ್ಡು ಸಿಗುತ್ತದೆ ಎಂಬ ಕಾರಣಕ್ಕೆ ತನ್ನ ಸ್ನೇಹಿತನ ಮಗನನ್ನೇ ಮಾರಾಟ ಮಾಡಿಬಿಡುತ್ತಾನೆ. ಅವನ ಈ ನೀಚ ಬುದ್ಧಿಯ ಬಗ್ಗೆ ಗೊತ್ತಾಗಿ ಅವನನ್ನು ಇಷ್ಟಪಟ್ಟ ಹುಡುಗಿ ದೂರವಾಗುತ್ತಾಳೆ.

ಪೊಲೀಸ್‌ ಅಧಿಕಾರಿಯೊಬ್ಬ ಅವನನ್ನು ಹೊಡೆದು ಸಾಯಿಸಬೇಕು ಎಂದು ಸಿಟ್ಟಾಗುತ್ತಾನೆ. ಅಷ್ಟೇ ಅಲ್ಲ, ಮಗು ಕಳೆದುಕೊಂಡಿರುವ ಅವನ ಸ್ನೇಹಿತ ಪೊಲೀಸರಿಗೇ ದೂರು ಕೊಡುವುದಕ್ಕೆ ಮುಂದಾಗುತ್ತಾನೆ. ಇಷ್ಟೆಲ್ಲಾ ಅವನು ಮಾಡುವುದಾದರೂ ಯಾಕೆ? ಈ ಪ್ರಶ್ನೆಗಳಿಗೆ ಉತ್ತರ “ಪಾದರಸ’ದಲ್ಲಿದೆ. “ಪಾದರಸ” ಚಿತ್ರವು ಪಾದರಸದಂತಹ ವ್ಯಕ್ತಿತ್ವದ ಪಾದರಸ ಎಂಬ ಯುವಕನ ಸಿನಿಮಾ. ಕುಡಿತ ಬಿಟ್ಟರೆ, ಆತ ಒಂದು ನಿಮಿಷ ಕುಳಿತಲ್ಲ ಕೂರುವುದಿಲ್ಲ, ನಿಂತಲ್ಲಿ ನಿಲ್ಲುವುದಿಲ್ಲ.

ಅವನ ಮನಸ್ಸು, ಯೋಚನೆ ಇನ್ನೂ ಅತ್ತತ್ತ. ಇಂಥವನೊಬ್ಬ ಮಾಡಬಾರದ್ದನ್ನು ಮಾಡಿ, ಸಮಾಜದ ದೃಷ್ಟಿಯಲ್ಲಿ, ಪ್ರೇಕ್ಷಕನ ದೃಷ್ಟಿಯಲ್ಲಿ ಪರಮನೀಚನೆನೆಸಿಕೊಳ್ಳುತ್ತಾನೆ. ಆದರೆ, ಅವನು ನಿಜಕ್ಕೂ ಇರುವುದೇ ಹಾಗಾ? ಅಥವಾ ಯಾವುದಾದರೂ ಕಾರಣಕ್ಕೆ ಹಾಗೆಲ್ಲಾ ಆಡುತ್ತಿರುತ್ತಾನಾ? ಹಾಗೆಲ್ಲಾ ಮಾಡಿದರೂ ಕಾರಣವೇನು? ಈ ಪ್ರಶ್ನೆಗಳನ್ನು ಕೇಳುವುದೂ ಸರಿಯಲ್ಲ, ಉತ್ತರ ಹೇಳುವುದೂ ಸರಿಯಲ್ಲ.

ಬಹುಶಃ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌, ಇಂಥದ್ದೊಂದು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನುವುದು ಬಿಟ್ಟರೆ, ಚಿತ್ರದಲ್ಲಿ ವಿಶೇಷವೇನಿಲ್ಲ. ಇದುವರೆಗೂ ಮಾಡದಂತಹ ಒಂದು ವಿಭಿನ್ನ ಪಾತ್ರದಲ್ಲಿ ವಿಜಯ್‌ ಕಾಣಿಸಿಕೊಂಡಿದ್ದಾರೆ. ಅದು ಅವರಿಗೆ ಸ್ವಲ್ಪ ಹೆಚ್ಚಾದಂತೆ ಕಾಣುತ್ತದೆ. ಆದರೂ ವಿಜಯ್‌ ತಮ್ಮ ಶಕ್ತಿಮೀರಿ, ಪಾತ್ರಕ್ಕೆ ನ್ಯಾಯ ಸಲ್ಲಿಸುವುದಕ್ಕೆ ಒದ್ದಾಡಿದ್ದಾರೆ. ಇದೊಂದು ಅಂಶ ಬಿಟ್ಟರೆ, ಚಿತ್ರದಲ್ಲಿ ಹೊಸತನವಾಗಲೀ, ವಿಶೇಷತೆಗಳಾಗಲೀ ಕಡಿಮೆಯೇ.

ಅದರ ಜೊತೆಗೆ ವಿಪರೀತ ಫ್ಲಾಶ್‌ಬ್ಯಾಕ್‌ಗಳು, ಬೋರ್‌ ಹೊಡೆಸುವ ದೃಶ್ಯಗಳು, ಅತಿರೇಕ ಎನಿಸುವ ಮಾತುಗಳು ಇವೆಲ್ಲವೂ ಪ್ರೇಕ್ಷಕರನ್ನು ಸಾಕಷ್ಟು ಕಾಡುತ್ತದೆ. ಅದರಲ್ಲೂ ಚಿತ್ರದಲ್ಲಿ ಒಂದು ಕ್ಷಣ ಮೌನವೆನ್ನುವುದಿಲ್ಲ. ಇಡೀ ಚಿತ್ರದಲ್ಲಿ ಎಲ್ಲಾ ಪಾತ್ರಗಳಿಂದ ಮಾತಾಡಿಸಿಯೇ ಆಡಿಸುತ್ತಾರೆ ನಿರ್ದೇಶಕರು. ಇದರಿಂದ ಸುಸ್ತಾಗುವುದು ಪಾತ್ರಧಾರಿಗಳಲ್ಲ, ಪ್ರೇಕ್ಷಕರು. ಇನ್ನು ಚಿತ್ರದಲ್ಲಿರುವ ಒಳ್ಳೆಯ ಅಂಶಗಳ ಬಗ್ಗೆ ಹೇಳುವುದಾದರೆ, ಎ.ಟಿ. ರವೀಶ್‌ ಸಂಗೀತ ನಿರ್ದೇಶನದಲ್ಲಿ ಎರಡು ಹಾಡುಗಳು ಚೆನ್ನಾಗಿವೆ.

ಚಿತ್ರ: ಪಾದರಸ
ನಿರ್ದೇಶನ: ಹೃಷಿಕೇಶ್‌ ಜಂಬಗಿ
ನಿರ್ಮಾಣ: ಹಾರ್ಟ್‌ ಆ್ಯಂಡ್‌ ಸೋಲ್‌ ಮೀಡಿಯಾ ಸರ್ವೀಸಸ್‌
ತಾರಾಗಣ: ಸಂಚಾರಿ ವಿಜಯ್‌, ವೈಷ್ಣವಿ ಮೆನನ್‌, ನಿರಂಜನ್‌ ದೇಶಪಾಂಡೆ, ಗುರುದತ್‌, ಜೈಜಗದೀಶ್‌, ಶೋಭರಾಜ್‌ ಮುಂತಾದವರು

* ಚೇತನ್‌ ನಾಡಿಗೇರ್‌

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.