ಅಮವಾಸೆಯಲ್ಲಿ ಭಯವಿಲ್ಲ, ಸಂದೇಶವೇ ಎಲ್ಲಾ


Team Udayavani, Aug 17, 2018, 6:17 PM IST

amavasye.jpg

“ಇಲ್ಲಿ ಏನಾಗ್ತಾ ಇದೆ ಅಂತಾನೇ ಗೊತ್ತಾಗುತ್ತಿಲ್ಲ…’ ಹೀಗೆ ಆ ನಾಲ್ವರು ಯುವಕರು ಭಯದಲ್ಲೇ ಹೇಳಿಕೊಳ್ಳುವ ಹೊತ್ತಿಗೆ, ಅಲ್ಲೊಂದು ಘಟನೆ ನಡೆದು ಹೋಗಿರುತ್ತೆ. ಹೆಣ್ಣು ಧ್ವನಿಯ ಚೀರಾಟ, ಹಾರಾಟ, ರಂಪಾಟವೆಲ್ಲವೂ ನಡೆದು ಹೋಗಿರುತ್ತೆ. ಇಡೀ ವಾತಾವರಣವೇ ಭಯಾನಕವಾಗಿರುತ್ತೆ! ಇಷ್ಟು ಹೇಳಿದ ಮೇಲೆ ಇದೊಂದು ಹಾರರ್‌ ಚಿತ್ರ ಅಂತ ಪ್ರತ್ಯೇಕವಾಗಿ ಹೇಳುವಂತಿಲ್ಲ. ಮತ್ತೂಂದು ಹಾರರ್‌ ಸಿದ್ಧಸೂತ್ರ ಅಂಟಿಸಿಕೊಂಡು ಬಂದ ಚಿತ್ರವಿದು.

ಇಲ್ಲಿ ಒಂದಷ್ಟು ಗೊಂದಲಗಳಿವೆ, ತಕ್ಕಷ್ಟು ಬೆಚ್ಚಿಬೀಳಿಸುವ ಅಂಶಗಳಿವೆ. ಹಾಗಂತ, ಭಯಾನಕವಾದದ್ದೇನಾದರೂ ಇದೆಯಾ ಎಂಬ ಕುತೂಹಲವಿದ್ದರೆ, ಹಾಗೊಮ್ಮೆ “ಅಮವಾಸೆ’ ಕಗ್ಗತ್ತಲಲ್ಲಿ ಸುತ್ತಾಡಿಬರಬಹುದು. ಆರಂಭದಲ್ಲಿ ತೆರೆಯ ಮೇಲೆ ಏನೆಲ್ಲಾ ನಡೆಯುತ್ತಿದೆ ಎಂಬ ಗೊಂದಲದಲ್ಲೇ ಚಿತ್ರ ಸಾಗುತ್ತದೆಯಾದರೂ, ಮೊದಲರ್ಧ ಗೊಂದಲದ ಪ್ರಶ್ನೆಗೆ ದ್ವಿತಿಯಾರ್ಧದ ಕೊನೆಯ ಇಪ್ಪತ್ತು ನಿಮಿಷಗಳಲ್ಲಿ ಉತ್ತರ ಸಿಗುತ್ತದೆ.

ಸಾಮಾನ್ಯವಾಗಿ ಹಾರರ್‌ ಚಿತ್ರಗಳೆಂದರೆ ತೆರೆ ಮೇಲೆ ಕಾಣುವ ದೆವ್ವ ಭಯಾನಕವಾಗಿರಬೇಕು ಅಥವಾ ಹಿನ್ನೆಲೆ ಸಂಗೀತವಾದರೂ ಭಯ ಹುಟ್ಟಿಸಬೇಕು. ಆದರೆ, ಇಲ್ಲಿ ಅದರ ಬದಲಿಗೆ ಒಂದು ಸಂದೇಶವೇ “ಭಯ’ ಹುಟ್ಟಿಸುವಂತಿದೆ. ಸಿನಿಮಾ ನೋಡಿದ ಮೇಲೆ, ಅದನ್ನು ಸ್ವಲ್ಪ ಮಟ್ಟಿಗಾದರೂ ಪಾಲಿಸಬೇಕೆಂಬ “ಭಯ’ ಕಾಡದೇ ಇರದು. ಅಷ್ಟಕ್ಕೂ ಆ ಸಂದೇಶ ಏನು, ಅದನ್ನು ಪಾಲಿಸದೇ ಇದ್ದರೆ ಭಯಪಡುವುದು ನಿಜಾನಾ? ಈ ಪ್ರಶ್ನೆಗೆ ಉತ್ತರ “ಅಮವಾಸೆ’ ಗೆಳೆಯರ ಆಟಾಟೋಪದ ವೀಕ್ಷಣೆ.

ಇಲ್ಲಿ ಗಟ್ಟಿತನದ ಕಥೆ ಇರದಿದ್ದರೂ, ತಕ್ಕಮಟ್ಟಿಗೆ ಗಮನಿಸಬೇಕಾದ ಅಂಶಗಳಿವೆ. ಹಾರರ್‌ ಚಿತ್ರಗಳಲ್ಲಿ ಚೀರಾಟ, ಕೂಗಾಟ ಸಾಮಾನ್ಯ. ಇಲ್ಲಿ ಅದು ಹೇರಳವಾಗಿ ಕಾಣಲ್ಲ. ಹಾಗಂತ, ಭಯವೇ ಇಲ್ಲವೆಂದಲ್ಲ. ಅಲ್ಲಲ್ಲಿ ಭಯ ಹುಟ್ಟಿಸೋ ದೃಶ್ಯಗಳು ಕಂಡರೂ ನೋಡುಗರ ಮೇಲೆ ಯಾವ ಪರಿಣಾಮವೂ ಬೀರಲ್ಲ. ಆದರೆ, ಸಿನಿಮಾ ನೋಡಿ ಹೊರಬರುವಾಗ, ಒಂದಂಶ ಮಾತ್ರ ಕಾಡುತ್ತಲೇ ಇರುತ್ತೆ. ಅದೊಂದೇ ಚಿತ್ರದ ಪ್ಲಸ್ಸು.

ಹಾರರ್‌ ಚಿತ್ರಗಳಲ್ಲಿ ಕತ್ತಲು ಬೆಳಕಿನಾಟ, ಹಿನ್ನೆಲೆ ಸಂಗೀತ ಮುಖ್ಯ. ಆದರೆ, ಇಲ್ಲಿ ಅದ್ಯಾವುದನ್ನೂ ನಿರೀಕ್ಷಿಸುವಂತಿಲ್ಲ. ಹಗಲಲ್ಲೇ ದೆವ್ವ ಭಯ ಹುಟ್ಟಿಸುತ್ತೆ. ಗೆಜ್ಜೆ ಸದ್ದು ಮಾಡುತ್ತೆ, ಜೋರಾಗಿ ಕೂಗಾಡಿ, ವಿನಾಕಾರಣ ಪ್ರಶ್ನೆಗಳಿಗೆ ಕಾರಣವಾಗುತ್ತೆ. ಒಂದಷ್ಟು ಪಾತ್ರಗಳು ಗೊಂದಲಕ್ಕೀಡಾಗುತ್ತವೆ. ಅದೆಲ್ಲವನ್ನೂ ಇನ್ನಷ್ಟು ಕ್ರಮವಾಗಿ ಜೋಡಿಸಿ, ತೋರಿಸಲು ಸಾಧ್ಯತೆ ಇತ್ತು. ವಿಪರೀತ “ಭಯ’ ಹುಟ್ಟಿಸಲು ಜಾಗವೂ ಇತ್ತು. ಆದರೆ, ಅಂತಹ ಪ್ರಯತ್ನ ನಡೆದಿಲ್ಲ.

ಇಲ್ಲೂ ದ್ವೇಷ ಸಾಧಿಸುವ ದೆವ್ವ ಇದೆ. “ನಾಗವಲ್ಲಿ’ ರೀತಿ “ಭರತನಾಟ್ಯ’ದ ಕಾಸ್ಟೂಮ್‌ ಧರಿಸಿ ಹಾಡಿ, ಕುಣಿದು ಕಿರುಚಾಡುವ ಸಣ್ಣ ತಾಕತ್ತೂ ಅದಕ್ಕಿದೆ. ಅದೆಲ್ಲದ್ದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿರುವ ಈ ಚಿತ್ರದ ದೆವ್ವ, ಆ ನಾಲ್ವರು ಹುಡುಗರ ಮೊಬೈಲ್‌ಗೆ “ರಕ್ತ ಬೇಕು’ ಎಂಬ ಮೆಸೇಜ್‌ ಮಾಡುತ್ತೆ!! ಅಲ್ಲಿಗೆ ದೆವ್ವ ಕೂಡ ಟೆಕ್ನಾಲಜಿಯಲ್ಲಿ ಮುಂದುವರೆದಿದೆ ಅನ್ನುವುದನ್ನು ತೋರಿಸಿರುವ ನಿರ್ದೇಶಕರ ಜಾಣ್ಮೆ ಮೆಚ್ಚಲೇಬೇಕು.

ಎಲ್ಲೋ ಒಂದು ಕಡೆ ಲಿಂಕ್‌ಗಳನ್ನು ಸರಿಯಾಗಿ ಕೊಟ್ಟಿದ್ದರೆ, ದೃಶ್ಯಗಳಿಗೊಂದಷ್ಟು ಅರ್ಥ ಕಲ್ಪಿಸಿದ್ದರೆ, ಕಂಟಿನ್ಯುಟಿಯತ್ತ ಗಮನಹರಿಸಿದ್ದರೆ, “ಅಮವಾಸೆ’ ಒಂದು ಭಯಾನಕವಾಗಿ ಬೆಚ್ಚಿಬೀಳಿಸುವ ಚಿತ್ರವಾಗುತ್ತಿತ್ತು. ಆದರೂ, ಒಂದೇ ಒಂದು ಸಣ್ಣ ಸಂದೇಶವನ್ನಿಟ್ಟುಕೊಂಡು ಎರಡು ಗಂಟೆ ಕಾಲ ಹೆದರಿಸುವ ಪ್ರಯತ್ನದ ಶ್ರಮ ಎದ್ದು ಕಾಣುತ್ತೆ. ಅಮರ್‌, ಮಹೇಶ್‌, ವಾಸು, ಸೆಂದಿ ಈ ನಾಲ್ವರು ಗೆಳೆಯರಿಗೆ ಕರ್ಣ ಎಂಬ ಪ್ರಾಣಸ್ನೇಹಿತನಿರುತ್ತಾನೆ.

ಬಾಲ್ಯದಲ್ಲಿ ತನ್ನ ಪ್ರಾಣ ಉಳಿಸಿದ ನಾಲ್ವರು ಗೆಳೆಯರಿಗೆ ಕರ್ಣ ತನ್ನ ಪ್ರಾಣ ಕೊಡಲು ಕೂಡ ರೆಡಿ. ಅಂತಹ ಕರ್ಣ ಕನಕ ಎಂಬ ಹುಡುಗಿಯನ್ನು ಪ್ರೀತಿಸುತ್ತಾನೆ. ಆಕೆಗೆ ಕರ್ಣನ ಗೆಳೆಯರೆಂದರೆ ಆಗಲ್ಲ. ಕಾರಣ, ಸದಾ ಗೆಳೆಯರ ಬಗ್ಗೆ ಚಿಂತಿಸುವ ಕರ್ಣ, ಮುಂದೆ ತನ್ನ ಮೇಲಿನ ಪ್ರೀತಿಯನ್ನೆಲ್ಲಿ ಕಡಿಮೆ ಮಾಡುತ್ತಾನೋ ಎಂಬ ಆತಂಕ. ಒಮ್ಮೆ ಗೆಳೆಯರನ್ನು ನೋಡಲು ಮಡಿಕೇರಿಯಿಂದ ಮೈಸೂರಿಗೆ ತೆರಳುವ ಕರ್ಣ, ಅಲ್ಲೇ ಕಾಲಕಳೆಯುತ್ತಿರುತ್ತಾನೆ.

ಅತ್ತ ಕನಕ ಕರ್ಣನನ್ನು ನೋಡಲು ಮಡಿಕೇರಿಯಿಂದ ಕಾರು ಚಲಾಯಿಸಿಕೊಂಡು ಬರುವಾಗ, ದಾರಿ ಮಧ್ಯೆ ಅಪಘಾತವಾಗುತ್ತೆ. ಆ ಸಮಯದಲ್ಲಿ ಕರ್ಣನ ಗೆಳೆಯರಿದ್ದರೂ, ಅವಳನ್ನು ಕಾಪಾಡೋಕೆ ಮುಂದಾಗಲ್ಲ. ಆಕೆ ಅಲ್ಲೇ ಪ್ರಾಣ ಬಿಡುತ್ತಾಳೆ. ಅತ್ತ, ಕರ್ಣ ತನ್ನ ಪ್ರೇಯಸಿ ಸತ್ತಳೆಂದು ಆತ್ಮಹತ್ಯೆಗೆ ಶರಣಾಗುತ್ತಾನೆ. ಆಮೇಲೆ ಆ ನಾಲ್ವರಿಗೂ ಒಂದು ಭೀತಿ ಶುರುವಾಗುತ್ತೆ. ತಮ್ಮಿಬ್ಬರ ಅಗಲಿಕೆಗೆ ಆ ನಾಲ್ವರು ಕಾರಣ ಅಂತ ಕನಕಳ ಆತ್ಮ ಅವರನ್ನು ಸಾಯಿಸಲು ಹಠ ಸಾಧಿಸುತ್ತೆ. ಮುಂದೇನಾಗುತ್ತೆ ಅನ್ನೋದೇ ಕಥೆ.

ರಾಜೀವ್‌ ಸಿಕ್ಕ ಪಾತ್ರವನ್ನು ಇನ್ನೂ ಚೆನ್ನಾಗಿ ನಿಭಾಯಿಸಬಹುದಿತ್ತು. ಅವರ ಡೈಲಾಗ್‌ಗೂ ಬಾಡಿಲಾಂಗ್ವೇಜ್‌ಗೂ ಸಾಕಷ್ಟು ವ್ಯತ್ಯಾಸವಿದೆ. ಧರಣಿ ಹೆದರಿಸುವ ಪ್ರಯತ್ನ ಮಾಡಿದ್ದಾರೆ. ಮಿಕ್ಕಂತೆ ತಕ್ಕಮಟ್ಟಿಗೆ ಗಮನಸೆಳೆಯುತ್ತಾರೆ. ಉಳಿದಂತೆ ರಾಘವ, ಲೋಕೇಶ್‌, ವಿನಯ್‌, ಅಭಯ್‌ ನಿರ್ದೇಶಕರ ಕಲ್ಪನೆಗೆ ಮೋಸ ಮಾಡಿಲ್ಲ. ಅನಂತವೇಲು ಬಾಬಾ ಭಕ್ತರಾಗಿ ದೆವ್ವಕ್ಕೊಂದು ಮುಕ್ತಿ ಕೊಡುವ ಪಾತ್ರ ನಿರ್ವಹಿಸಿದ್ದಾರೆ. ಹರಿಬಾಬು ಸಂಗೀತಕ್ಕಿನ್ನೂ ಹೆದರಿಸುವ ಗುಣ ಬೇಕಿತ್ತು. ಆನಂದ ಇಳಯರಾಜ್‌ ಛಾಯಾಗ್ರಹಣದಲ್ಲಿ “ಅಮವಾಸೆ’ ಆವರಿಸಿಕೊಂಡಿದೆ.

ಚಿತ್ರ: ಅಮವಾಸೆ
ನಿರ್ದೇಶನ: ಪ್ರಶಾಂತ್‌
ನಿರ್ಮಾಣ: ಡಾ.ಚಂದ್ರಶೇಖರ್‌, ಜಗದೀಶ್‌
ತಾರಾಗಣ: ರಾಜೀವ್‌, ಧರಣಿ, ರಾಘವ, ಲೋಕೇಶ್‌, ವಿನಯ್‌, ಅಭಯ್‌, ಅನಂತವೇಲು ಇತರರು.

* ವಿಜಯ್‌ ಭರಮಸಾಗರ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.