ಅಯೋಗ್ಯನ ಪ್ರೀತಿ ಪಂಚಾಯ್ತಿ


Team Udayavani, Aug 19, 2018, 11:25 AM IST

ayogya.jpg

ನಾನು ಗ್ರಾಮ ಪಂಚಾಯ್ತಿ ಸದಸ್ಯ ಆಗಬೇಕು. ಹಾಗಂತ ಬಾಲ್ಯದಲ್ಲೇ ತೀರ್ಮಾನಿಸಿಬಿಟ್ಟಿರುತ್ತಾನೆ ಸಿದ್ಧೇಗೌಡ. ಅದಕ್ಕೆ ಕಾರಣ ತನ್ನ ತಾಯಿಗೆ ಗ್ರಾಮ ಪಂಚಾಯ್ತಿ ಬಚ್ಚೇಗೌಡನೆಂಬ ದುಷ್ಟ ವ್ಯಾಘ್ರ ಅವಮಾನ ಮಾಡಿರುತ್ತಾನೆ. ಇದರಿಂದ ಸಿಟ್ಟಾಗುವ ಸಿದ್ಧೇಗೌಡ, ಆಗಲೇ ಗ್ರಾಮ ಪಂಚಾಯ್ತಿ ಸದಸ್ಯನಾಗುವುದಕ್ಕೆ ನಾಮಪತ್ರ ಸಲ್ಲಿಸುವುದಕ್ಕೆ ಹೊರಟಿರುತ್ತಾನೆ. ಬಚ್ಚೇಗೌಡರ ಕಡೆಯಿಂದ ಇನ್ನಷ್ಟು ಅವಮಾನಗಳಾದ ಮೇಲೆ, ಅವನ ನಿರ್ಧಾರ ಇನ್ನಷ್ಟು ಗಟ್ಟಿಯಾಗುತ್ತದೆ.

ಅಲ್ಲಿಂದ ಅವನ ಜೀವನದ ಏಕೈಕ ಉದ್ದೇಶ ಗ್ರಾಮ ಪಂಚಾಯ್ತಿ ಸದಸ್ಯನಾಗುವುದು. ಬಚ್ಚೇಗೌಡರೆಂಬ ಬಚ್ಚೇಗೌಡರ ವಿರುದ್ಧ ಸಿದ್ಧೇಗೌಡ ಗೆದ್ದು, ಹೇಗೆ ಗ್ರಾಮ ಪಂಚಾಯ್ತಿ ಸದಸ್ಯನಾಗುತ್ತಾನೆ? ಇದು “ಅಯೋಗ್ಯ’ ಚಿತ್ರದ ಒನ್‌ಲೈನರ್‌. ಈ ಕಥೆಗೂ, “ಅಯೋಗ್ಯ’ ಎಂಬ ಟೈಟಲ್‌ಗ‌ೂ ಏನು ಸಂಬಂಧ ಅಂತ ಕೇಳಬಹುದು. ಮಜ ಇರೋದೇ ಇಲ್ಲಿ. ಗ್ರಾಮ ಪಂಚಾಯ್ತಿ ಸದಸ್ಯನಾಗೋಕೆ ತೊಡೆ ತಟ್ಟಿನಿಂತಿರುವ ಸಿದ್ಧೇಗೌಡನೇ ಈ ಚಿತ್ರದ ಕಥಾನಾಯಕ.

ಬಾಲ್ಯದಿಂದಲೂ ಅಯೋಗ್ಯ ಎಂದು ಗುರುತಿಸಿಕೊಂಡಿರುವ ಆತನಿಗೆ ಗ್ರಾಮ ಪಂಚಾಯ್ತಿ ಸದಸ್ಯನೆನಿಸಿಕೊಳ್ಳುವುದರ ಜೊತೆಗೆ, ಯೋಗ್ಯ ಎಂದನಿಸಿಕೊಳ್ಳುವ ಜವಾಬ್ದಾರಿಯೂ ಇರುತ್ತದೆ. ಇವೆರೆಡನ್ನೂ ಆತ ಪರಾಕ್ರಮ, ಬಿಲ್ಡಪ್ಪು, ಬುದ್ಧಿಶಕ್ತಿಯಿಂದ ಹೇಗೆ ಸಾಧಿಸುತ್ತಾನೆ ಎಂಬುದನ್ನು ಮಜವಾಗಿ ಹೇಳುವ ಪ್ರಯತ್ನವನ್ನು ನಿರ್ದೇಶಕ ಮಹೇಶ್‌ ಕುಮಾರ್‌ ಮಾಡಿದ್ದಾರೆ. “ಅಯೋಗ್ಯ’ ಒಂದು ಅಪ್ಪಟ ಗ್ರಾಮೀಣ ಚಿತ್ರ.

ಅಲ್ಲಿನ ಪರಿಸರ, ರಾಜಕೀಯ, ಸಮಸ್ಯೆಗಳನ್ನೆಲ್ಲಾ ಇಟ್ಟುಕೊಂಡು ಒಂದು ಮನರಂಜನಾತ್ಮಕ ಚಿತ್ರವನ್ನು ಕೊಟ್ಟಿದ್ದಾರೆ ಮಹೇಶ್‌. ಹಿನ್ನೆಲೆಯಲ್ಲಿ ಹಳ್ಳಿಯ ರಾಜಕೀಯ ಮತ್ತು ಸಮಸ್ಯೆಗಳಿದ್ದರೂ, ಮುನ್ನೆಲೆಯಲ್ಲೊಂದು ಲವ್‌ಸ್ಟೋರಿ. ಆ ಲವ್‌ಸ್ಟೋರಿಯಲ್ಲಿ ಸಾಕಷ್ಟು ಗೊಂದಲಗಳಿವೆ. ಆ ಗೊಂದಲಗಳೇ ಚಿತ್ರದ ಜೀವಾಳ ಎಂದರೆ ತಪ್ಪಿಲ್ಲ. ಗೊಂದಲಗಳು, ಪ್ರೀತಿ ಮತ್ತು ರಾಜಕೀಯದಲ್ಲಿ ಗೆಲ್ಲುವುದಕ್ಕೆ ಅಯೋಗ್ಯ ಮಾಡುವ ಕಳ್ಳಾಟಗಳು, ಅದಕ್ಕೆ ತುಂಡೈಕ್ಳು ಮಾಡುವ ಸಹಾಯ ಇವೆಲ್ಲವೂ ಪ್ರೇಕ್ಷಕನ್ನು ಹಿಡಿದಿಡುತ್ತದೆ.

ಇಲ್ಲೊಂದು ಮೆಚ್ಚಬೇಕಾದ ವಿಷಯವೆಂದರೆ, ಅದು ಚಿತ್ರಕಥೆ. ಚಿತ್ರದ ಮೊದಲಾರ್ಧ ಮುಗಿಯುವುದೇ ಗೊತ್ತಾಗುವುದಿಲ್ಲ. ಇನ್ನು ದ್ವಿತೀಯಾರ್ಧದಲ್ಲಿ ಒಂದಿಷ್ಟು ಏರಿಳಿತಗಳಿವೆಯಾದರೂ, ಒಟ್ಟಾರೆ ಪ್ರೇಕ್ಷಕರರನ್ನು ಕೂಡಿಸಿಕೊಂಡು ಚಿತ್ರ ನೋಡುವ ಹಾಗೆ ಮಾಡುವ ಅಂಶಗಳು ಚಿತ್ರದಲ್ಲಿ ಸಾಕಷ್ಟಿದೆ. ಯೋಗ್ಯ ಮತ್ತು ಅಯೋಗ್ಯನ ಬಿಲ್ಡಪ್ಪು, ಹಾಡುಗಳು, ಫೈಟುಗಳು, ಕಾಮಿಡಿ ಸನ್ನಿವೇಶಗಳು, ಮಜವಾದ ಸಂಭಾಷಣೆಗಳು, ಸಾಕಷ್ಟು ತಿರುವುಗಳು ಇವೆಲ್ಲವೂ ಚಿತ್ರಕ್ಕೆ ಪ್ಲಸ್‌ ಆಗಿದೆ.

ಹಾಗಾಗಿ “ಅಯೋಗ್ಯ’ ಒಂದು ಅದ್ಭುತ ಚಿತ್ರವಲ್ಲದಿದ್ದರೂ, ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರನ್ನು ಮನರಂಜಿಸಿ, ನಗಿಸಿ ಕಳಿಸುವಂತ ಚಿತ್ರವಂತೂ ಖಂಡಿತಾ ಹೌದು. ಲಾಜಿಕ್ಕು, ಗೀಜಿಕ್ಕು ಅಂತೆಲ್ಲಾ ನೋಡದೆ, ಸ್ವಲ್ಪ ಹೊತ್ತು ಮ್ಯಾಜಿಕ್ಕು ಬೇಕು ಎನ್ನುವವರು ಚಿತ್ರ ನೋಡಬಹುದು. ಚಿತ್ರ ಸುತ್ತುವುದು ಸತೀಶ್‌ ನೀನಾಸಂ ಮತ್ತು ರವಿಶಂಕರ್‌ ಅವರ ಸುತ್ತ. ಇಬ್ಬರೂ ಸಿಕ್ಕ ಪಾತ್ರಗಳನ್ನು ಚೆನ್ನಾಗಿ ಬಳಸಿಕೊಂಡಿದ್ದಾರೆ.

ಇಲ್ಲಿ ಸತೀಶ್‌ ಮತ್ತು ರವಿಶಂಕರ್‌ ಪ್ರಮುಖವಾದರೂ, ಅವರಿಬ್ಬರ ಜೊತೆಗೆ ಇನ್ನೂ ಹಲವರು ಗಮನಸೆಳೆಯುತ್ತಾರೆ. ಪ್ರಮುಖವಾಗಿ ಸುಂದರ್‌ ರಾಜ್‌ ಅವರಿಗೆ ಬಹಳ ದಿನಗಳ ನಂತರ ಒಂದು ಮಜಬೂತಾದ ಪಾತ್ರ ಸಿಕ್ಕಿದೆ ಮತ್ತು ಅವರು ಅದನ್ನು ಬಹಳ ಚೆನ್ನಾಗಿ ಬಳಸಿಕೊಂಡಿದ್ದಾರೆ. ಇನ್ನು ಕೆ.ಆರ್‌. ಪೇಟೆ ಶಿವರಾಜ್‌, ಗಿರಿ, ತಬಲಾ ನಾಣಿ, ಅರುಣ ಬಾಲರಾಜ್‌, ಲಕ್ಷ್ಮೀದೇವಮ್ಮ ಎಲ್ಲರೂ ತಮ್ತಮ್ಮ ಅಭಿನಯದಿಂದ ಇಷ್ಟವಾಗುತ್ತಾರೆ.

ಚಿತ್ರದ ಕೊನೆಗೆ ಬರುವ ಕುರಿ ಪ್ರತಾಪ್‌ ಮತ್ತು ಸಾಧು ಕೋಕಿಲ ಸಹ ಒಂದಿಷ್ಟು ನಗಿಸಿಯೇ ಹೋಗುತ್ತಾರೆ. ಎಲ್ಲರಿಗೆ ಹೋಲಿಸಿದರೆ, ರಚಿತಾ ಪಾತ್ರ ಚಿಕ್ಕದೇ. ಚಿಕ್ಕ ಪಾತ್ರವಾದರೂ ರಚಿತಾ ಗಮನ ಸೆಳೆಯುತ್ತಾರೆ. ಇನ್ನು ಅರ್ಜುನ್‌ ಜನ್ಯ ಸಂಗೀತದಲ್ಲಿ ಒಂದೆರೆಡು ಹಾಡುಗಳು, ಪ್ರವೀಣ್‌ ತೆಗ್ಗಿನಮನೆ ಕ್ಯಾಮೆರಾ ಕಣ್ಣಲ್ಲಿ ಮಂಡ್ಯದ ಸುಂದರ ಪರಿಸರ ಖುಷಿಕೊಡುತ್ತದೆ.

ಚಿತ್ರ: ಅಯೋಗ್ಯ
ನಿರ್ದೇಶನ: ಮಹೇಶ್‌ ಕುಮಾರ್‌
ನಿರ್ಮಾಣ: ಟಿ.ಆರ್‌. ಚಂದ್ರಶೇಖರ್‌
ತಾರಾಗಣ: ಸತೀಶ್‌ ನೀನಾಸಂ, ರಚಿತಾ ರಾಮ್‌, ರವಿಶಂಕರ್‌, ಗಿರಿ, ಕೆ.ಆರ್‌. ಪೇಟೆ ಶಿವರಾಜ್‌, ಸುಂದರ್‌ ರಾಜ್‌, ಅರುಣ ಬಾಲರಾಜ್‌ ಮುಂತಾದವರು

* ಚೇತನ್‌ ನಾಡಿಗೇರ್‌

ಟಾಪ್ ನ್ಯೂಸ್

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mehabooba-Movie-Review

Mehabooba Movie Review; ತಿರುವುಗಳ ಹಾದಿಯಲ್ಲಿ ಪ್ರೇಮಪಯಣ

chow chow bath movie review

Chow Chow Bath Review; ಹರೆಯದ ಮನಸುಗಳ ಖಾಸ್‌ಬಾತ್‌

jog 101 kannada movie review

JOG 101 movie review; ಸುಂದರ ಜೋಗದಲ್ಲಿ ನಿಗೂಢ ಹೆಜ್ಜೆ

blink kannada movie review

Blink movie review; ಸಮಯದ ಹಿಂದೆ ಸವಾರಿ…

ranganayaka movie review

Ranganayaka Movie Review; ಗುರುವಿನ ಆದಿ ಪುರಾಣ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.