ಅಯೋಗ್ಯನ ಪ್ರೀತಿ ಪಂಚಾಯ್ತಿ


Team Udayavani, Aug 19, 2018, 11:25 AM IST

ayogya.jpg

ನಾನು ಗ್ರಾಮ ಪಂಚಾಯ್ತಿ ಸದಸ್ಯ ಆಗಬೇಕು. ಹಾಗಂತ ಬಾಲ್ಯದಲ್ಲೇ ತೀರ್ಮಾನಿಸಿಬಿಟ್ಟಿರುತ್ತಾನೆ ಸಿದ್ಧೇಗೌಡ. ಅದಕ್ಕೆ ಕಾರಣ ತನ್ನ ತಾಯಿಗೆ ಗ್ರಾಮ ಪಂಚಾಯ್ತಿ ಬಚ್ಚೇಗೌಡನೆಂಬ ದುಷ್ಟ ವ್ಯಾಘ್ರ ಅವಮಾನ ಮಾಡಿರುತ್ತಾನೆ. ಇದರಿಂದ ಸಿಟ್ಟಾಗುವ ಸಿದ್ಧೇಗೌಡ, ಆಗಲೇ ಗ್ರಾಮ ಪಂಚಾಯ್ತಿ ಸದಸ್ಯನಾಗುವುದಕ್ಕೆ ನಾಮಪತ್ರ ಸಲ್ಲಿಸುವುದಕ್ಕೆ ಹೊರಟಿರುತ್ತಾನೆ. ಬಚ್ಚೇಗೌಡರ ಕಡೆಯಿಂದ ಇನ್ನಷ್ಟು ಅವಮಾನಗಳಾದ ಮೇಲೆ, ಅವನ ನಿರ್ಧಾರ ಇನ್ನಷ್ಟು ಗಟ್ಟಿಯಾಗುತ್ತದೆ.

ಅಲ್ಲಿಂದ ಅವನ ಜೀವನದ ಏಕೈಕ ಉದ್ದೇಶ ಗ್ರಾಮ ಪಂಚಾಯ್ತಿ ಸದಸ್ಯನಾಗುವುದು. ಬಚ್ಚೇಗೌಡರೆಂಬ ಬಚ್ಚೇಗೌಡರ ವಿರುದ್ಧ ಸಿದ್ಧೇಗೌಡ ಗೆದ್ದು, ಹೇಗೆ ಗ್ರಾಮ ಪಂಚಾಯ್ತಿ ಸದಸ್ಯನಾಗುತ್ತಾನೆ? ಇದು “ಅಯೋಗ್ಯ’ ಚಿತ್ರದ ಒನ್‌ಲೈನರ್‌. ಈ ಕಥೆಗೂ, “ಅಯೋಗ್ಯ’ ಎಂಬ ಟೈಟಲ್‌ಗ‌ೂ ಏನು ಸಂಬಂಧ ಅಂತ ಕೇಳಬಹುದು. ಮಜ ಇರೋದೇ ಇಲ್ಲಿ. ಗ್ರಾಮ ಪಂಚಾಯ್ತಿ ಸದಸ್ಯನಾಗೋಕೆ ತೊಡೆ ತಟ್ಟಿನಿಂತಿರುವ ಸಿದ್ಧೇಗೌಡನೇ ಈ ಚಿತ್ರದ ಕಥಾನಾಯಕ.

ಬಾಲ್ಯದಿಂದಲೂ ಅಯೋಗ್ಯ ಎಂದು ಗುರುತಿಸಿಕೊಂಡಿರುವ ಆತನಿಗೆ ಗ್ರಾಮ ಪಂಚಾಯ್ತಿ ಸದಸ್ಯನೆನಿಸಿಕೊಳ್ಳುವುದರ ಜೊತೆಗೆ, ಯೋಗ್ಯ ಎಂದನಿಸಿಕೊಳ್ಳುವ ಜವಾಬ್ದಾರಿಯೂ ಇರುತ್ತದೆ. ಇವೆರೆಡನ್ನೂ ಆತ ಪರಾಕ್ರಮ, ಬಿಲ್ಡಪ್ಪು, ಬುದ್ಧಿಶಕ್ತಿಯಿಂದ ಹೇಗೆ ಸಾಧಿಸುತ್ತಾನೆ ಎಂಬುದನ್ನು ಮಜವಾಗಿ ಹೇಳುವ ಪ್ರಯತ್ನವನ್ನು ನಿರ್ದೇಶಕ ಮಹೇಶ್‌ ಕುಮಾರ್‌ ಮಾಡಿದ್ದಾರೆ. “ಅಯೋಗ್ಯ’ ಒಂದು ಅಪ್ಪಟ ಗ್ರಾಮೀಣ ಚಿತ್ರ.

ಅಲ್ಲಿನ ಪರಿಸರ, ರಾಜಕೀಯ, ಸಮಸ್ಯೆಗಳನ್ನೆಲ್ಲಾ ಇಟ್ಟುಕೊಂಡು ಒಂದು ಮನರಂಜನಾತ್ಮಕ ಚಿತ್ರವನ್ನು ಕೊಟ್ಟಿದ್ದಾರೆ ಮಹೇಶ್‌. ಹಿನ್ನೆಲೆಯಲ್ಲಿ ಹಳ್ಳಿಯ ರಾಜಕೀಯ ಮತ್ತು ಸಮಸ್ಯೆಗಳಿದ್ದರೂ, ಮುನ್ನೆಲೆಯಲ್ಲೊಂದು ಲವ್‌ಸ್ಟೋರಿ. ಆ ಲವ್‌ಸ್ಟೋರಿಯಲ್ಲಿ ಸಾಕಷ್ಟು ಗೊಂದಲಗಳಿವೆ. ಆ ಗೊಂದಲಗಳೇ ಚಿತ್ರದ ಜೀವಾಳ ಎಂದರೆ ತಪ್ಪಿಲ್ಲ. ಗೊಂದಲಗಳು, ಪ್ರೀತಿ ಮತ್ತು ರಾಜಕೀಯದಲ್ಲಿ ಗೆಲ್ಲುವುದಕ್ಕೆ ಅಯೋಗ್ಯ ಮಾಡುವ ಕಳ್ಳಾಟಗಳು, ಅದಕ್ಕೆ ತುಂಡೈಕ್ಳು ಮಾಡುವ ಸಹಾಯ ಇವೆಲ್ಲವೂ ಪ್ರೇಕ್ಷಕನ್ನು ಹಿಡಿದಿಡುತ್ತದೆ.

ಇಲ್ಲೊಂದು ಮೆಚ್ಚಬೇಕಾದ ವಿಷಯವೆಂದರೆ, ಅದು ಚಿತ್ರಕಥೆ. ಚಿತ್ರದ ಮೊದಲಾರ್ಧ ಮುಗಿಯುವುದೇ ಗೊತ್ತಾಗುವುದಿಲ್ಲ. ಇನ್ನು ದ್ವಿತೀಯಾರ್ಧದಲ್ಲಿ ಒಂದಿಷ್ಟು ಏರಿಳಿತಗಳಿವೆಯಾದರೂ, ಒಟ್ಟಾರೆ ಪ್ರೇಕ್ಷಕರರನ್ನು ಕೂಡಿಸಿಕೊಂಡು ಚಿತ್ರ ನೋಡುವ ಹಾಗೆ ಮಾಡುವ ಅಂಶಗಳು ಚಿತ್ರದಲ್ಲಿ ಸಾಕಷ್ಟಿದೆ. ಯೋಗ್ಯ ಮತ್ತು ಅಯೋಗ್ಯನ ಬಿಲ್ಡಪ್ಪು, ಹಾಡುಗಳು, ಫೈಟುಗಳು, ಕಾಮಿಡಿ ಸನ್ನಿವೇಶಗಳು, ಮಜವಾದ ಸಂಭಾಷಣೆಗಳು, ಸಾಕಷ್ಟು ತಿರುವುಗಳು ಇವೆಲ್ಲವೂ ಚಿತ್ರಕ್ಕೆ ಪ್ಲಸ್‌ ಆಗಿದೆ.

ಹಾಗಾಗಿ “ಅಯೋಗ್ಯ’ ಒಂದು ಅದ್ಭುತ ಚಿತ್ರವಲ್ಲದಿದ್ದರೂ, ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರನ್ನು ಮನರಂಜಿಸಿ, ನಗಿಸಿ ಕಳಿಸುವಂತ ಚಿತ್ರವಂತೂ ಖಂಡಿತಾ ಹೌದು. ಲಾಜಿಕ್ಕು, ಗೀಜಿಕ್ಕು ಅಂತೆಲ್ಲಾ ನೋಡದೆ, ಸ್ವಲ್ಪ ಹೊತ್ತು ಮ್ಯಾಜಿಕ್ಕು ಬೇಕು ಎನ್ನುವವರು ಚಿತ್ರ ನೋಡಬಹುದು. ಚಿತ್ರ ಸುತ್ತುವುದು ಸತೀಶ್‌ ನೀನಾಸಂ ಮತ್ತು ರವಿಶಂಕರ್‌ ಅವರ ಸುತ್ತ. ಇಬ್ಬರೂ ಸಿಕ್ಕ ಪಾತ್ರಗಳನ್ನು ಚೆನ್ನಾಗಿ ಬಳಸಿಕೊಂಡಿದ್ದಾರೆ.

ಇಲ್ಲಿ ಸತೀಶ್‌ ಮತ್ತು ರವಿಶಂಕರ್‌ ಪ್ರಮುಖವಾದರೂ, ಅವರಿಬ್ಬರ ಜೊತೆಗೆ ಇನ್ನೂ ಹಲವರು ಗಮನಸೆಳೆಯುತ್ತಾರೆ. ಪ್ರಮುಖವಾಗಿ ಸುಂದರ್‌ ರಾಜ್‌ ಅವರಿಗೆ ಬಹಳ ದಿನಗಳ ನಂತರ ಒಂದು ಮಜಬೂತಾದ ಪಾತ್ರ ಸಿಕ್ಕಿದೆ ಮತ್ತು ಅವರು ಅದನ್ನು ಬಹಳ ಚೆನ್ನಾಗಿ ಬಳಸಿಕೊಂಡಿದ್ದಾರೆ. ಇನ್ನು ಕೆ.ಆರ್‌. ಪೇಟೆ ಶಿವರಾಜ್‌, ಗಿರಿ, ತಬಲಾ ನಾಣಿ, ಅರುಣ ಬಾಲರಾಜ್‌, ಲಕ್ಷ್ಮೀದೇವಮ್ಮ ಎಲ್ಲರೂ ತಮ್ತಮ್ಮ ಅಭಿನಯದಿಂದ ಇಷ್ಟವಾಗುತ್ತಾರೆ.

ಚಿತ್ರದ ಕೊನೆಗೆ ಬರುವ ಕುರಿ ಪ್ರತಾಪ್‌ ಮತ್ತು ಸಾಧು ಕೋಕಿಲ ಸಹ ಒಂದಿಷ್ಟು ನಗಿಸಿಯೇ ಹೋಗುತ್ತಾರೆ. ಎಲ್ಲರಿಗೆ ಹೋಲಿಸಿದರೆ, ರಚಿತಾ ಪಾತ್ರ ಚಿಕ್ಕದೇ. ಚಿಕ್ಕ ಪಾತ್ರವಾದರೂ ರಚಿತಾ ಗಮನ ಸೆಳೆಯುತ್ತಾರೆ. ಇನ್ನು ಅರ್ಜುನ್‌ ಜನ್ಯ ಸಂಗೀತದಲ್ಲಿ ಒಂದೆರೆಡು ಹಾಡುಗಳು, ಪ್ರವೀಣ್‌ ತೆಗ್ಗಿನಮನೆ ಕ್ಯಾಮೆರಾ ಕಣ್ಣಲ್ಲಿ ಮಂಡ್ಯದ ಸುಂದರ ಪರಿಸರ ಖುಷಿಕೊಡುತ್ತದೆ.

ಚಿತ್ರ: ಅಯೋಗ್ಯ
ನಿರ್ದೇಶನ: ಮಹೇಶ್‌ ಕುಮಾರ್‌
ನಿರ್ಮಾಣ: ಟಿ.ಆರ್‌. ಚಂದ್ರಶೇಖರ್‌
ತಾರಾಗಣ: ಸತೀಶ್‌ ನೀನಾಸಂ, ರಚಿತಾ ರಾಮ್‌, ರವಿಶಂಕರ್‌, ಗಿರಿ, ಕೆ.ಆರ್‌. ಪೇಟೆ ಶಿವರಾಜ್‌, ಸುಂದರ್‌ ರಾಜ್‌, ಅರುಣ ಬಾಲರಾಜ್‌ ಮುಂತಾದವರು

* ಚೇತನ್‌ ನಾಡಿಗೇರ್‌

ಟಾಪ್ ನ್ಯೂಸ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.