ಪ್ರೀತಿ, ಕನಸು ಮತ್ತು ವಾತ್ಸಲ್ಯದ ಸೆಲ್ಫಿ


Team Udayavani, Aug 25, 2018, 11:33 AM IST

life-jothe.jpg

ಮೂವರಿಗೆ ಮೂರು ಬೇಸರ. ಆದರೆ, ಒಂದಕ್ಕೊಂದು ಸಂಬಂಧವಿಲ್ಲ. ಬೇಸರ ಮರೆಯಲು ಗೋವಾಕ್ಕೆ ಪಯಣ. ಅಲ್ಲಿ ಪರಿಚಯ. ಸ್ನೇಹ, ಜೊತೆಗೆ ಫ್ಲ್ಯಾಶ್‌ಬ್ಯಾಕ್‌, ತೆರೆದುಕೊಳ್ಳುವ ಬದುಕಿನ ಬಣ್ಣಗಳು … “ಲೈಫ್ ಜೊತೆ ಒಂದ್‌ ಸೆಲ್ಫಿ’ ಚಿತ್ರ ಆರಂಭವಾಗುವ ರೀತಿ ಇದು. ವಿವಿಧ ಮನಸ್ಥಿತಿಯ ಪಾತ್ರಗಳನ್ನು ಒಟ್ಟು ಸೇರಿಸಿ ದಿನಕರ್‌ ಒಂದು ಯೂತ್‌ಫ‌ುಲ್‌ ಸಿನಿಮಾ ಮಾಡಿದ್ದಾರೆ. ಇಡೀ ಸಿನಿಮಾವನ್ನು ಮುನ್ನಡೆಸಿಕೊಂಡು ಹೋಗೋದು ಇಬ್ಬರ ಬದುಕಿನ ಫ್ಲ್ಯಾಶ್‌ಬ್ಯಾಕ್‌. ಫ್ಲ್ಯಾಶ್‌ಬ್ಯಾಕ್‌ ತೆರೆದುಕೊಳ್ಳುವ ಮೂಲಕ ಸಿನಿಮಾ ಫ್ಯಾಮಿಲಿ ಡ್ರಾಮಾ ಆಗಿ ಬದಲಾಗಿ ಬಿಡುತ್ತದೆ.

ಕುಟುಂಬ, ಅಲ್ಲಿನ ಹಿರಿಯರ ಕಟ್ಟುಪಾಡು, ಯುವ ಮನಸುಗಳ ಕಸಿವಿಸಿ … ಇಂತಹ ಅಂಶಗಳ ಮೂಲಕ ಫ್ಯಾಮಿಲಿ ಆಡಿಯನ್ಸ್‌ ಅನ್ನು ಟಾಗೇìಟ್‌ ಮಾಡಿದ್ದಾರೆ. ಸಿನಿಮಾದ ಆರಂಭ ನೋಡಿದರೆ ಇದು ಮೂವರು ಯುವ ಮನಸುಗಳ ಜಾಲಿ ರೈಡ್‌ ಎಂಬ ಭಾವನೆ ಬರದು. ಆದರೆ, ಚಿತ್ರದಲ್ಲಿ ಸಾಕಷ್ಟು ಸೆಂಟಿಮೆಂಟ್‌ ದೃಶ್ಯಗಳಿವೆ. ಮುಖ್ಯವಾಗಿ ಈ ಸಿನಿಮಾ ಮೂರು ಅಂಶಗಳೊಂದಿಗೆ ಸಾಗುತ್ತದೆ. ಪ್ರೀತಿ, ಕನಸು ಮತ್ತು ವಾತ್ಸಲ್ಯ. ಈ ಮೂರು ಟ್ರ್ಯಾಕ್‌ಗಳ ಮೂಲಕ ಸಾಗುವ ಸಿನಿಮಾದಲ್ಲಿ ನಿಮಗೆ ಹೆಚ್ಚು ಆಪ್ತವಾಗುವುದು ವಾತ್ಸಲ್ಯ.

ಮಗನೊಬ್ಬ ತನ್ನ ತಾಯಿಗೆ ಹೊರ ಜಗತ್ತನ್ನು ಹೇಗೆ ತೋರಿಸುತ್ತಾನೆ, ಆಕೆಯಲ್ಲಿ ಶಕ್ತಿ, ಹೊಸ ಚೈತನ್ಯ ತುಂಬಲು ಮಗ ಅನುಸರಿಸುವ ವಿಧಾನಗಳನ್ನು ಕಟ್ಟಿಕೊಡುತ್ತಾ ಸಾಗುವ ಸಿನಿಮಾದಲ್ಲಿ ತಾಯಿ-ಮಗನ ಸೆಂಟಿಮೆಂಟ್‌ಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಕಥೆಯ ವಿಷಯಕ್ಕೆ ಬರುವುದಾದರೆ ಕೆಲಸ ಬೇಸರವಾಗಿ ಅಥವಾ ಇನ್ಯಾವುದೋ ವಿಚಾರದಲ್ಲಿ ಮನಸು ನೋಯಿಸಿಕೊಂಡ ಯೂತ್ಸ್ ಲಾಂಗ್‌ ಡ್ರೈವ್‌ ಹೋಗೋದು ಅಥವಾ ಟ್ರಿಪ್‌ ಹೋಗೋದು ಇವತ್ತಿನ ಟ್ರೆಂಡ್‌ ಆಗಿಬಿಟ್ಟಿದೆ. ಅದೇ ಕಾರಣದಿಂದ ಆ ಅಂಶಗಳನ್ನಿಟ್ಟುಕೊಂಡು ಒಂದಷ್ಟು ಸಿನಿಮಾಗಳು ಬಂದಿವೆ.

“ಲೈಫ್ ಜೊತೆ ಒಂದ್‌ ಸೆಲ್ಫಿ’ ಚಿತ್ರ ಅದೇ ಜಾನರ್‌ಗೆ ಸೇರುವ ಸಿನಿಮಾವಾದರೂ, ಇಲ್ಲಿ ನಿಮಗೆ ಭಿನ್ನವಾಗಿ ಕಾಣುವುದು ಚಿತ್ರ ಪಡೆದುಕೊಳ್ಳುವ ಕೆಲವು ಅನಿರೀಕ್ಷಿತ ತಿರುವುಗಳಿಂದ. ಅದು ಫ್ಯಾಮಿಲಿಯಾಗಿರಬಹುದು ಅಥವಾ ಫ್ರೆಂಡ್ಸ್‌ ಆಗಿರಬಹುದು … ಇಂತಹ ಅಂಶಗಳ ಮೂಲಕ ಸಿನಿಮಾ ಖುಷಿಕೊಡುತ್ತದೆ. ಸಿದ್ಧಸೂತ್ರಗಳಿಂದ ಹೊರತಾದ ಸಿನಿಮಾ ಇದಾದರೂ, ದಿನಕರ್‌, ಸಾಧುಕೋಕಿಲ ಕಾಮಿಡಿ, ಒಂದು ಫೈಟ್‌, ಕ್ಲಬ್‌ ಸಾಂಗ್‌ … ಹೀಗೆ ಮಾಸ್‌ ಪ್ರಿಯರಿಗೂ ಮೋಸ ಮಾಡಿಲ್ಲ. ಚಿತ್ರದ ಟ್ರಕ್ಕಿಂಗ್‌, ಸಾಧು ಕಾಮಿಡಿ ಸೇರಿದಂತೆ ಕೆಲವು ದೃಶ್ಯಗಳನ್ನು ಟ್ರಿಮ್‌ ಮಾಡುವ ಅವಕಾಶ ನಿರ್ದೇಶಕರಿಗಿತ್ತು.

ಜೀವನದಲ್ಲಿ ಸಮಸ್ಯೆಗಳಿಗೆ ಜೀವನವೇ ಪರಿಹಾರ ಕೊಡುತ್ತದೆ ತಾತ್ಪಾರ್ಯದೊಂದಿಗೆ ಸಾಗುತ್ತದೆ. ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿರುವ ಪ್ರಜ್ವಲ್‌, ಪ್ರೇಮ್‌ ಹಾಗೂ ಹರಿಪ್ರಿಯಾ ಮೂವರು ತಮ್ಮ ಪಾತ್ರಕ್ಕೆ ಹೊಂದಿಕೊಂಡಿದ್ದಾರೆ. ಅದರಲ್ಲೂ ಹರಿಪ್ರಿಯಾ ಸಖತ್‌ ಬೋಲ್ಡ್‌ ಆಗಿ ಕಾಣಿಸಿಕೊಂಡಿದ್ದು, ಇಷ್ಟವಾಗುತ್ತಾರೆ. ಚಿತ್ರವನ್ನು ಮುನ್ನಡೆಸುವಲ್ಲಿ ಸುಧಾರಾಣಿ ಪಾತ್ರ ಪ್ರಮುಖವಾಗಿದೆ. ಒಂದು ಹಂತದ ನಂತರ ಸುಧಾರಾಣಿ ಇಡೀ ಸಿನಿಮಾವನ್ನು ಆವರಿಸಿಕೊಳ್ಳುತ್ತಾರೆ ಮತ್ತು ಕಥೆಯನ್ನು ಮುಂದುವರೆಸಿಕೊಂಡು ಹೋಗಿದ್ದಾರೆ. ಧನಂಜಯ್‌ ಕೂಡಾ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಉಳಿದಂತೆ ದೀಪಕ್‌ ಶೆಟ್ಟಿ, ಸಂಗೀತಾ, ಚಿತ್ರಾ ಶೆಣೈ ನಟಿಸಿದ್ದಾರೆ. ಹರಿಕೃಷ್ಣ ಸಂಗೀತ, ನಿರಂಜನ್‌ ಬಾಬು ಛಾಯಾಗ್ರಹಣ ಚಿತ್ರಕ್ಕೆ ಪೂರಕ.

ಚಿತ್ರ: ಲೈಫ್ ಜೊತೆ ಒಂದ್‌ ಸೆಲ್ಫಿ
ನಿರ್ಮಾಣ: ಸಮೃದ್ಧಿ ಮಂಜುನಾಥ್‌
ನಿರ್ದೇಶನ: ದಿನಕರ್‌ ತೂಗುದೀಪ
ತಾರಾಗಣ: ಪ್ರಜ್ವಲ್‌, ಪ್ರೇಮ್‌ ಹಾಗೂ ಹರಿಪ್ರಿಯಾ, ಸುಧಾರಾಣಿ, ದೀಪಕ್‌ ಶೆಟ್ಟಿ, ಸಂಗೀತಾ, ಚಿತ್ರಾ ಶೆಣೈ ಮುಂತಾದವರು

* ರವಿ ರೈ

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.