ಕಥೆ ಕಾಮನ್‌ ಮನರಂಜನೆಯ ವಿಲನ್‌


Team Udayavani, Oct 20, 2018, 11:45 AM IST

villain.jpg

“ರಾಮನ ಆದರ್ಶದ ಜೊತೆಗೆ ರಾವಣನ ಆಲೋಚನೆಯೂ ಮುಖ್ಯ’ ಪುಟ್ಟ ಬಾಲಕನಿಗೆ ತಂದೆ ಈ ರೀತಿ ಹೇಳುತ್ತಾನೆ. ಅತ್ತ ಕಡೆ ತಾಯಿ ರಾಮನ ಆದರ್ಶವೇ ಮುಖ್ಯ ಎಂದು ಭೋದಿಸಿರುತ್ತಾಳೆ.  ಕಟ್‌ ಮಾಡಿದರೆ ರಾವಣ ಅಬ್ಬರಿಸುತ್ತಿರುತ್ತಾನೆ. ಇತ್ತ ಕಡೆ ರಾಮ, ರಾವಣನ ಸರಿದಾರಿಗೆ ತರಲು ಹೊಸ ಹೊಸ ಉಪಾಯಗಳನ್ನು ಮಾಡುತ್ತಿರುತ್ತಾನೆ. ನಿರ್ದೇಶಕ ಪ್ರೇಮ್‌ “ದಿ ವಿಲನ್‌’ನಲ್ಲಿ ರಾಮ-ರಾವಣನ ಪಾತ್ರಗಳನ್ನಿಟ್ಟುಕೊಂಡು ಒಂದು ಕಮರ್ಷಿಯಲ್‌ ಸಿನಿಮಾ ಮಾಡಿದ್ದಾರೆ.

ಇಡೀ ಸಿನಿಮಾದ ಮೂಲ ಸದ್ಗುಣ ಮತ್ತು ದುರ್ಗುಣ. ಇದನ್ನು ಪ್ರೇಮ್‌ ತಮ್ಮದೇ ಶೈಲಿಯಲ್ಲಿ ತೋರಿಸುತ್ತಾ ಹೋಗಿದ್ದಾರೆ. ಈ ಹಾದಿಯಲ್ಲಿ ಪ್ರೇಕ್ಷಕರಿಗೆ ಖುಷಿ, ಸಂತೋಷ, ನೋವು, ನಲಿವು, ಕಾತರ ಎಲ್ಲವೂ ಸಿಗುತ್ತದೆ. ಪ್ರೇಮ್‌ ಮಾಡಿಕೊಂಡಿರೋದು ಒಂದು ಹುಡುಕಾಟದ ಕಥೆಯನ್ನು. ಚಿಕ್ಕ ಹಳ್ಳಿಯಿಂದ ಆರಂಭವಾಗುವ ಈ ಹುಡುಕಾಟ ದೇಶ-ವಿದೇಶಗಳನ್ನು ಸುತ್ತಿಕೊಂಡು ಮತ್ತೆ ಹಳ್ಳಿಗೆ ಬಂದು ನಿಲ್ಲುತ್ತದೆ. ಇಷ್ಟು ಹೇಳಿದ ಮೇಲೆ ಸಿನಿಮಾದ ಅದ್ಧೂರಿತನದ ಬಗ್ಗೆ ಹೇಳಬೇಕಿಲ್ಲ.

ಕೆಲವೊಮ್ಮೆ ಕಥೆಯನ್ನು ಬದಿಗೆ ಸರಿಸಿ ಅದ್ಧೂರಿತನವೇ ಮೆರೆಯುತ್ತದೆ. ಪ್ರೇಮ್‌ ಎಂದ ಮೇಲೆ ಹಳ್ಳಿ, ತಾಯಿ ಸೆಂಟಿಮೆಂಟ್‌ ಇರಲೇಬೇಕು. ಅದನ್ನು ಬಿಟ್ಟರೆ ಅದು ಪ್ರೇಮ್‌ ಸಿನಿಮಾವಾಗುವುದಿಲ್ಲ ಎಂದು ಅಭಿಮಾನಿಗಳ ಜೊತೆಗೆ ಸ್ವತಃ ಪ್ರೇಮ್‌ ಕೂಡಾ ನಂಬಿದ್ದಾರೆ. ಅದಿಲ್ಲಿ ಯಥೇತ್ಛವಾಗಿದೆ. ಶಿವಣ್ಣ ಎಂಟ್ರಿಯೊಂದಿಗೆ ತೆರೆದುಕೊಳ್ಳುವ ಕಥೆ, ಆರಂಭದಲ್ಲಿ ತುಂಬಾ ವೇಗವಾಗಿ ಸಾಗಿದರೆ, ದ್ವಿತೀಯಾರ್ಧ ಕೊಂಚ ನಿಧಾನಗತಿಯ ಪಯಣ. ಏನೋ ಬೇಕಿತ್ತಲ್ಲ ಎಂದು ಪ್ರೇಕ್ಷಕ ಲೆಕ್ಕಾಚಾರ ಹಾಕುವಷ್ಟರಲ್ಲಿ ಹಾಡೊಂದು ಬಂದು ರಿಲ್ಯಾಕ್ಸ್‌ ಮಾಡುತ್ತದೆ.

ಒಂದು ಕಮರ್ಷಿಯಲ್‌ ಸಿನಿಮಾದಲ್ಲಿ ಲಾಜಿಕ್‌ ಹುಡುಕಬಾರದು ಎಂಬ ನಿಯಮಕ್ಕೆ ಬದ್ಧರಾಗಿಯೇ ಪ್ರೇಮ್‌ “ದಿ ವಿಲನ್‌’ ಮಾಡಿದ್ದಾರೆ. ಹಾಗಾಗಿ, ಇಲ್ಲಿ ಎಲ್ಲವೂ ಸುಲಭ ಸಾಧ್ಯವಾಗಿದೆ. ಹಳ್ಳಿಯಲ್ಲಿದ್ದವ ಲಂಡನ್‌ ಸಿಟಿ ಸುತ್ತಿದ್ದರೆ, ಇನ್ನೊಂದು ಪಾತ್ರ ಭಾರತದಿಂದ ಹೋಗಿ ವಿದೇಶದಲ್ಲಿ ಡಾನ್‌ ಆಗಿ ಮೆರೆಯುತ್ತದೆ. ಎಲ್ಲವೂ ನೀವು ಕಣ್ಣುಮುಚ್ಚಿ ಬಿಡುವುದರೊಳಗೆ ನಡೆದು ಹೋಯಿತೇನೋ ಎಂದು ಭಾಸವಾಗುತ್ತದೆ. ಹಾಗಾಗಿ, ಇಲ್ಲಿ ನೀವು ಲಾಜಿಕ್‌ ಹುಡುಕದೇ ಸುಮ್ಮನೆ ದೃಶ್ಯಗಳನ್ನು ಎಂಜಾಯ್‌ ಮಾಡಬೇಕು.

ಸಿನಿಮಾ ನೋಡುತ್ತಿದ್ದರೆ ಚಿತ್ರಕಥೆ ಇನ್ನಷ್ಟು ಬಿಗಿಯಾಗಿರಬೇಕಿತ್ತು ಹಾಗೂ ಒಂದಷ್ಟು ಗಂಭೀರತೆ ಇರಬೇಕಿತ್ತು ಎನಿಸುತ್ತದೆ. ಜೊತೆಗೆ ಕಥೆಯನ್ನು ತುಂಬಾನೇ ಸುತ್ತಾಡಿಸಿದ್ದಾರೇನೋ ಎಂಬ ಭಾವನೆ ಕಾಡುತ್ತದೆ. ಅದು ಬಿಟ್ಟರೆ ಒಂದು ಮಾಸ್‌ ಎಂಟರ್‌ಟೈನರ್‌ ಆಗಿ ವಿಲನ್‌ ನಿಮ್ಮನ್ನು ರಂಜಿಸುತ್ತದೆ. ಕಥೆಯ ಬಗ್ಗೆ ಇಲ್ಲಿ ಒಂದೇ ಮಾತಲ್ಲಿ ಹೇಳುವುದು ಕಷ್ಟ. ಏಕೆಂದರೆ ನಾನಾ ತಿರುವುಗಳೊಂದಿಗೆ ಪ್ರೇಮ್‌ ಈ ಕಥೆಯನ್ನು ಕಟ್ಟಿಕೊಟ್ಟಿದ್ದಾರೆ. ಮುಖ್ಯವಾಗಿ ಹೇಳಬೇಕಾದರೆ ತಾಯಿ-ಮಗನೊಬ್ಬನ ಕಥೆ ಎನ್ನಬಹುದು.

ಹಾಗಾದರೆ ಮಗ ಯಾರು? ಶಿವರಾಜಕುಮಾರ್‌ ಅಥವಾ ಸುದೀಪ್‌? ಎಂದು ನೀವು ಕೇಳಬಹುದು. ಅದನ್ನು ನೀವು ಥಿಯೇಟರ್‌ನಲ್ಲೇ ನೋಡಬೇಕು. ಸಾಮಾನ್ಯವಾಗಿ ಪ್ರೇಮ್‌ ಸಿನಿಮಾ ಎಂದರೆ ಅಲ್ಲಿ ಮಾಸ್‌, ಪಂಚಿಂಗ್‌ ಸಂಭಾಷಣೆಗಳಿರುತ್ತವೆ. ಈ ಬಾರಿ ಪ್ರೇಮ್‌ ಮಾತು ಕಮ್ಮಿ ಮಾಡಿದ್ದಾರೆ. ಮಾತಿಗಿಂತ ದೃಶ್ಯಗಳ ಮೂಲಕವೇ ಎಲ್ಲವನ್ನು ಹೇಳಲು ಪ್ರಯತ್ನಿಸಿದ್ದಾರೆ. ಹಾಗಂತ ಪಂಚಿಂಗ್‌ ಡೈಲಾಗ್‌ ಇಲ್ಲವೆಂದಲ್ಲ. ಅಲ್ಲಲ್ಲಿ ಬಂದು ಹೋಗುತ್ತವೆ. ಇಬ್ಬರು ಸ್ಟಾರ್‌ ನಟರನ್ನಿಟ್ಟುಕೊಂಡು ಸಿನಿಮಾ ಮಾಡುವಾಗ ಯಾರು ಹೆಚ್ಚು, ಯಾರು ಕಮ್ಮಿ ಎಂಬ ಪ್ರಶ್ನೆ ಬರುತ್ತದೆ.

ಇಲ್ಲಿ ಇಬ್ಬರ ಅಭಿಮಾನಿಗಳನ್ನು ತೃಪ್ತಪಡಿಸಲು ಪ್ರೇಮ್‌ ಪ್ರಯತ್ನಿಸಿದ್ದಾರೆ. ಇನ್ನು, ಚಿತ್ರದಲ್ಲಿ ಹಲವು ಪಾತ್ರಗಳು ಬಂದು ಹೋದರೂ ಅವ್ಯಾವು ನಿಮ್ಮ ನೆನಪಲ್ಲಿ ಉಳಿಯುವುದಿಲ್ಲ. ಮಿಥುನ್‌ ಚಕ್ರವರ್ತಿ, ಶ್ರೀಕಾಂತ್‌, ಕುರಿ ಪ್ರತಾಪ್‌, ಆ್ಯಮಿ ಜಾಕ್ಸನ್‌ ಹೀಗೆ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ. ಆದರೆ, ಸಿನಿಮಾ ನೋಡಿ ಹೊರಬಂದಾಗ ನಿಮಗೆ ಕೇವಲ ಎರಡೇ ಎರಡು ಮಾತ್ರ ನೆನಪಲ್ಲಿ ಉಳಿಯುತ್ತದೆ – ಸುದೀಪ್‌-ಶಿವರಾಜಕುಮಾರ್‌.

ಉಳಿದ ಪಾತ್ರಗಳನ್ನು ಪ್ರೇಮ್‌ ಸರಿಯಾಗಿ ಬಳಸಿಕೊಳ್ಳಲಿಲ್ಲವೇನೋ ಎಂಬ ಅನುಮಾನ ಕಾಡುತ್ತದೆ. ಚಿತ್ರವನ್ನು ಮಕ್ಕಳೂ ಇಷ್ಟಪಡಬೇಕೆಂಬ ಕಾರಣಕ್ಕೆ ಪ್ರೇಮ್‌ ಸಾಕಷ್ಟು ದೃಶ್ಯಗಳಲ್ಲಿ ಗ್ರಾಫಿಕ್‌ ಮೊರೆ ಹೋಗಿದ್ದಾರೆ. ಇಲ್ಲಿ ನೀವು ಜಿಂಕೆ, ಡೈನೋಸಾರ್‌, ನವಿಲು ಎಲ್ಲದರ ಆಟವನ್ನು ಕಾಣಬಹುದು. ಸಿನಿಮಾದ ಸರಿತಪ್ಪುಗಳು ಏನೇ ಇರಬಹುದು, ಥಿಯೇಟರ್‌ನಿಂದ ಹೊರಬರುವಾಗ ಪ್ರೇಕ್ಷಕನ ಕಣ್ಣಂಚಲ್ಲಿ ಒಂದನಿ ಜಿನುಗಿರುತ್ತದೆ.

ಚಿತ್ರದಲ್ಲಿ ಇಬ್ಬರು ಸ್ಟಾರ್‌ ನಟರು ನಟಿಸಿದ್ದಾರೆ- ಶಿವರಾಜ್‌ಕುಮಾರ್‌ ಹಾಗೂ ಸುದೀಪ್‌. ಸುದೀಪ್‌ ಸಖತ್‌ ಸ್ಟೈಲಿಶ್‌ ಪಾತ್ರದಲ್ಲಿ ಮಿಂಚಿದರೆ, ಶಿವರಾಜಕುಮಾರ್‌ ಹಳ್ಳಿ ಹಿನ್ನೆಲೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರು ತಮ್ಮ ತಮ್ಮ ಪಾತ್ರಗಳಲ್ಲಿ ಮಿಂಚಿದ್ದಾರೆ. ಚಿತ್ರದ ನಾಯಕಿ ಆ್ಯಮಿ ಜಾಕ್ಸನ್‌ ಪಾತ್ರಕ್ಕೆ ಹೊಂದಿಕೊಂಡಿಲ್ಲ. ಭಾಷೆಯ ಸಮಸ್ಯೆಯಿಂದಲೋ ಏನೋ, ಸಂಭಾಷಣೆಗೂ ಅವರ ಮುಖಭಾವಕ್ಕೂ ಹೊಂದಿಕೆಯಾಗಿಲ್ಲ. ಅರ್ಜುನ್‌ ಜನ್ಯಾ ಸಂಗೀತದ ಹಾಡುಗಳು ಇಷ್ಟವಾಗುತ್ತದೆ. ಚಿತ್ರಕ್ಕೆ ಗಿರಿ ಛಾಯಾಗ್ರಹಣವಿದೆ.

ಚಿತ್ರ: ದಿ ವಿಲನ್‌ 
ನಿರ್ಮಾಣ: ಸಿ.ಆರ್‌.ಮನೋಹರ್‌
ನಿರ್ದೇಶನ: ಪ್ರೇಮ್‌
ತಾರಾಗಣ: ಶಿವರಾಜಕುಮಾರ್‌, ಸುದೀಪ್‌, ಆ್ಯಮಿ ಜಾಕ್ಸನ್‌, ಶ್ರೀಕಾಂತ್‌, ಮಿಥುನ್‌ ಚಕ್ರವರ್ತಿ ಮತ್ತಿತರರು. 

* ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lineman movie review

Lineman movie review; ಜಾಲಿರೈಡ್‌ ನ‌ಲ್ಲಿ ‘ಲೈನ್‌ಮ್ಯಾನ್‌’

Dilkush Movie Review

Dilkush Movie Review; ತ್ರಿಕೋನ ಪ್ರೇಮದಲ್ಲಿ ಹೊಸಬರ ಆಟ

Mehabooba-Movie-Review

Mehabooba Movie Review; ತಿರುವುಗಳ ಹಾದಿಯಲ್ಲಿ ಪ್ರೇಮಪಯಣ

chow chow bath movie review

Chow Chow Bath Review; ಹರೆಯದ ಮನಸುಗಳ ಖಾಸ್‌ಬಾತ್‌

jog 101 kannada movie review

JOG 101 movie review; ಸುಂದರ ಜೋಗದಲ್ಲಿ ನಿಗೂಢ ಹೆಜ್ಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.