ಅಜ್ಜ ಹೇಳಿದ ಹಳೆ ಕಥೆ


Team Udayavani, Dec 29, 2018, 5:53 AM IST

ajja.jpg

ಕನ್ನಡದಲ್ಲಿ ಹಾರರ್‌-ಥ್ರಿಲ್ಲರ್‌ ಚಿತ್ರಗಳಿಗೆ ಅದರದ್ದೇ ಆದ ಸಿದ್ಧಸೂತ್ರವಿದೆ, ಅದನ್ನು ಯಾರೂ ಮೀರುವಂತಿಲ್ಲ ಎಂದು ಬಹುತೇಕ ಹಾರರ್‌-ಥ್ರಿಲ್ಲರ್‌ ಚಿತ್ರಗಳ ನಿರ್ದೇಶಕರು ಭಾವಿಸಿದಂತಿದೆ. ಅದೇನೆಂದರೆ, ಯಾವುದೋ ಅಪರಿಚಿತ ಜಾಗಕ್ಕೆ ನಿಗೂಢ ರಹಸ್ಯವನ್ನು ಭೇದಿಸುವುದಕ್ಕೊ (ಬಲಿಯಾಗುವುದಕ್ಕೊ) ನಾಲ್ಕೈದು ಮಂದಿ ಹೋಗುವುದು. ಅಲ್ಲಿರುವ ಅಗೋಚರ ಶಕ್ತಿಗಳಿಗೆ ಎದುರಾಗುವುದು. ಆಮೇಲೆ ಅದರಿಂದ ಹೊರಬರಲು ತಿಣುಕಾಡುವುದು.

ತೆರೆಮೇಲೆ ಒಂದಷ್ಟು ಜನ ಉಸಿರು ಬಿಗಿ ಹಿಡಿದು ಹೋರಾಡುತ್ತಿದ್ದರೆ, ತೆರೆಮುಂದೆ ಒಂದಷ್ಟು ಜನ ಉಸಿರು ಬಿಗಿ ಹಿಡಿದು ನೋಡುವುದು. ಕೊನೆಗೆ ಕೆಣಕಿ ಕೆಡಬೇಡಿ ಎಂಬ ಮಹತ್ತರ ಸಂದೇಶ.  ಈ ವರ್ಷ ತೆರೆಗೆ ಬಂದ ಅರವತ್ತಕ್ಕೂ ಹೆಚ್ಚು ಹಾರರ್‌-ಥ್ರಿಲ್ಲರ್‌ ಚಿತ್ರಗಳಲ್ಲಿ ಒಂದೆರಡನ್ನು ಹೊರತುಪಡಿಸಿದರೆ, ಉಳಿದೆಲ್ಲ ಚಿತ್ರಗಳಲ್ಲಿ ಕಿಂಚಿತ್ತೂ ಬದಲಾಗದ ನಿರೂಪಣೆ ಶೈಲಿ ಇದು.  ಇನ್ನು ಈ ವಾರ ಕೂಡ ಇದೇ ಶೈಲಿಯ ಹಾರರ್‌-ಥ್ರಿಲ್ಲರ್‌ ಚಿತ್ರ ಅಜ್ಜ ತೆರೆಗೆ ಬಂದಿದೆ.

ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ತಂಡ ಗ್ರಾಮೀಣ ಸೇವೆಗಾಗಿ ಹಳ್ಳಿಯೊಂದಕ್ಕೆ ಹೋಗುತ್ತದೆ. ಅಲ್ಲಿನ ನಿಗೂಢ ಬಂಗಲೆಯೊಳಗೆ ಅಲ್ಲಿ ಅಜ್ಜ-ಮೊಮ್ಮಗಳು ಇಬ್ಬರೇ ಯಾರ ಕಣ್ಣಿಗೂ ಕಾಣದಂತೆ ವಾಸಿಸುತ್ತಿರುತ್ತಾರೆ. ಇಂಥ ಬಂಗಲೆಯೊಳಗೆ ಈ ವಿದ್ಯಾರ್ಥಿಗಳು ಪ್ರವೇಶಿಸುತ್ತಾರೆ. ಆ ನಂತರ ಚಿತ್ರದಲ್ಲಿ ವಿಚಿತ್ರ ಘಟನೆಗಳು ಶುರುವಾಗುತ್ತಾ ಹೋಗುತ್ತದೆ. ಅಂತಿಮವಾಗಿ ಈ ನಾಲ್ವರು ಹುಡುಗರು ಜೋಪಾನವಾಗಿ ಬಂಗಲೆಯಿಂದ ಹೊರಬಂದು ನಿಟ್ಟುಸಿರು ಬಿಡುತ್ತಾರಾ?

ಇಲ್ಲವಾ? ಎಂಬುದೇ ಅಜ್ಜ ಚಿತ್ರದ ಕಥಾಹಂದರ. ಕಾದಂಬರಿ ಆಧರಿತ ಚಿತ್ರ ಎಂದು ಚಿತ್ರತಂಡ ಹೇಳಿಕೊಂಡಿದ್ದರೂ, ಚಿತ್ರದ ಕಥೆಯಲ್ಲಾಗಲಿ, ನಿರೂಪಣೆಯಲ್ಲಾಗಲಿ ಹೊಸತನವಿಲ್ಲ. ಹೊಸ ಬಗೆಯ ನಿರೂಪಣಾ ಶೈಲಿ ಇದ್ದರೆ “ಅಜ್ಜ’ ಕೊಂಚ ಮಟ್ಟಿಗೆ ಪ್ರೇಕ್ಷಕರಿಗೆ ಇಷ್ಟವಾಗುತ್ತಿದ್ದ. ಆದರೆ, ನಿರ್ದೇಶಕರು ಮಾತ್ರ ಹಾರರ್‌ ಸಿನಿಮಾದ ಸಿದ್ಧಸೂತ್ರವನ್ನು ಬಿಟ್ಟು ಹೊರಬರುವ ಮನಸ್ಸು ಮಾಡಿಲ್ಲ. ಹಾಗಾಗಿ, ಹಾರರ್‌ ಸಿನಿಮಾಗಳನ್ನು ನೋಡಿ ಪಂಟರ್‌ ಆಗಿರುವ ಕನ್ನಡ ಪ್ರೇಕ್ಷಕನಿಗೆ ಅಜ್ಜನಲ್ಲಿ ಹೊಸತನ ಕಾಣುವುದಿಲ್ಲ.

ನೋಡುಗರನ್ನು ಸೀಟಿನ ತುದಿಯಲ್ಲಿ ಕೂರಿಸುತ್ತೇವೆ ಎಂದು ಹೋಗಿ ಕೊನೆಗೆ ತಾವೇ ಮುಗ್ಗರಿಸುವ ಸರದಿ ಈ ಚಿತ್ರದಲ್ಲೂ ಮುಂದುವರೆದಿದೆ.  ಚಿತ್ರದಲ್ಲಿ ಅಜ್ಜನಾಗಿ ಹಿರಿಯ ನಟ ದತ್ತಣ್ಣ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಇನ್ನುಳಿದಂತೆ ಬಹುತೇಕ ಹೊಸ ಪ್ರತಿಭೆಗಳು ತಮ್ಮ ಪಾತ್ರವನ್ನು ನಿರ್ವಹಿಸಲು ಸಾಕಷ್ಟು ಪರದಾಡಿರುವುದು ಚಿತ್ರದ ಪ್ರತಿ ದೃಶ್ಯದಲ್ಲೂ ಕಾಣುತ್ತದೆ. ಉಳಿದಂತೆ ಚಿತ್ರದ ಛಾಯಾಗ್ರಹಣ, ಸಂಕಲನ, ಇನ್ನಿತರ ತಾಂತ್ರಿಕ ಕೆಲಸಗಳೂ ಅಷ್ಟಾಗಿ ಗಮನ ಸೆಳೆಯುವುದಿಲ್ಲ.  

ಚಿತ್ರ: ಅಜ್ಜ 
ನಿರ್ದೇಶನ: ವೇಮಗಲ್‌ ಜಗನ್ನಾಥ್‌ ರಾವ್‌ 
ನಿರ್ಮಾಣ: ಕೆ.ಪಿ ಚಿದಾನಂದ್‌ 
ತಾರಾಗಣ: ದತ್ತಣ್ಣ, ಪೃಥ್ವಿಶ್ರೀ, ರಾಜ್‌ ಪ್ರವೀಣ್‌, ಅಶ್ವಿ‌ನಿ, ಮಾಧುರಿ, ದೀಪಕ್‌ ರಾಜ್‌, ನಾಗೇಶ್‌ ಮಯ್ಯ ಮತ್ತಿತರರು. 

* ಜಿ.ಎಸ್‌ ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lineman movie review

Lineman movie review; ಜಾಲಿರೈಡ್‌ ನ‌ಲ್ಲಿ ‘ಲೈನ್‌ಮ್ಯಾನ್‌’

Dilkush Movie Review

Dilkush Movie Review; ತ್ರಿಕೋನ ಪ್ರೇಮದಲ್ಲಿ ಹೊಸಬರ ಆಟ

Mehabooba-Movie-Review

Mehabooba Movie Review; ತಿರುವುಗಳ ಹಾದಿಯಲ್ಲಿ ಪ್ರೇಮಪಯಣ

chow chow bath movie review

Chow Chow Bath Review; ಹರೆಯದ ಮನಸುಗಳ ಖಾಸ್‌ಬಾತ್‌

jog 101 kannada movie review

JOG 101 movie review; ಸುಂದರ ಜೋಗದಲ್ಲಿ ನಿಗೂಢ ಹೆಜ್ಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.