ಚಾಣಾಕ್ಷನ ನ್ಯಾಯ ನೀತಿ ಧರ್ಮ


Team Udayavani, Mar 23, 2019, 6:03 AM IST

chankasha.jpg

“ಒಳ್ಳೆಯವರಿಗೆ ಉಳಿಗಾಲ. ಕೆಟ್ಟೋರಿಗೆ ಕೇಡುಗಾಲ…’ ಈ ಡೈಲಾಗ್‌ ಬರುವ ಹೊತ್ತಿಗೆ, ನಾಯಕ ಸೂರ್ಯ ತಾನೆಷ್ಟು ಸ್ಮಾರ್ಟ್‌ ಅನ್ನುವುದನ್ನು ತೋರಿಸಿರುತ್ತಾನೆ. ಅಷ್ಟೇ ಅಲ್ಲ, ಒಂದು ಬಿಗ್‌ ಡೀಲ್‌ ಮಾಡಿ ಎಲ್ಲರನ್ನೂ ಯಾಮಾರಿಸಿ ಸಿಟಿ ಬಿಟ್ಟು ಹಳ್ಳಿಯೊಂದಕ್ಕೆ ಎಂಟ್ರಿಕೊಟ್ಟಿರುತ್ತಾನೆ. ಅವನನ್ನು ಹುಡುಕಿ ಅಲ್ಲಿಗೂ ಬರುವ ರೌಡಿ ಪಡೆಗಳ ದಂಡಿಗೆ ಆ ಸೂರ್ಯ ಹೇಗೆಲ್ಲಾ “ದಂಢಂ ದಶಗುಣಂ’ ಅಂತಾನೆ ಅನ್ನುವುದೇ ಒನ್‌ಲೈನ್‌ ಸ್ಟೋರಿ.

“ಚಾಣಾಕ್ಷ’ ಎನ್ನುವ ಹೆಸರಲ್ಲೇ ಒಂದು ಫೋರ್ಸ್‌ ಇದೆ. ಆ ಫೋರ್ಸ್‌ ನಾಯಕನಲ್ಲೂ ಇದೆ. ಇಲ್ಲಿ ನಾಯಕ ಕಳ್ಳನಾ, ರೌಡಿನಾ ಅಥವಾ, ಕೊಲೆಗಾರನಾ? ಈ ಅಂಶಗಳೊಂದಿಗೆ ಸಾಗುವ ಚಿತ್ರದಲ್ಲಿ ಸಾಕಷ್ಟು ತಿರುವುಗಳಿವೆ. ಅಂತೆಯೇ ಜೋರಾದ ಹೊಡೆದಾಟ, ಬಡಿದಾಟವೂ ಇದೆ. ಅವೆಲ್ಲಾ ಯಾಕೆ ಎಂಬ ಪ್ರಶ್ನೆ ಎದುರಾದರೆ, ಒಮ್ಮೆ “ಚಾಣಾಕ್ಷ’ನ ಚಾತುರ್ಯವನ್ನು ನೋಡಲು ಅಡ್ಡಿಯಿಲ್ಲ. ಕಥೆ ತುಂಬಾ ಸರಳ. ಆದರೆ, ಅದನ್ನು ನಿರೂಪಿಸಿರುವ ರೀತಿ ಕೊಂಚ ಭಿನ್ನ ಎನ್ನಬಹುದಷ್ಟೇ.

ಚಿತ್ರಕಥೆ ಇನ್ನಷ್ಟು ಚುರುಕಾಗಬೇಕಿತ್ತು. ಆದರೂ ಸಣ್ಣ ವಿಷಯ ಇಟ್ಟುಕೊಂಡು ಎಲ್ಲೆಲ್ಲೋ ಸಾಗುವ ಕಥೆಯಲ್ಲೊಂದು ಸಂದೇಶವಿದೆ. ಅದೇ ಚಿತ್ರದೊಳಗಿರುವ ಸಣ್ಣ ತಾಕತ್ತು. ಮೊದಲೇ ಹೇಳಿದಂತೆ ಕಥೆ ಹೊಸದಲ್ಲ. ಆದರೆ, ಸಣ್ಣ ಸಣ್ಣ ವಿಷಯಗಳನ್ನು ಪೋಣಿಸಿರುವ ರೀತಿ ಹೊಸತನದಿಂದ ಕೂಡಿದೆ. ಹಾಗಾಗಿ, “ಚಾಣಾಕ್ಷ’ ಕೊಂಚ ಭಿನ್ನ ಎನಿಸಿದರೂ, ಇದು ಕ್ಲಾಸ್‌ಗಿಂತ ಮಾಸ್‌ ಪ್ರಿಯರಿಗೆ ಹೆಚ್ಚು ಆಪ್ತವೆನಿಸುತ್ತದೆ ಎಂಬುದು ಸ್ಪಷ್ಟ.

 ಹೀರೋ ಧರ್ಮಕೀರ್ತಿರಾಜ್‌ ಅವರಿಗೆ ಇದು ಹೊಸ ಕಥೆ, ಪಾತ್ರವೆಂದರೆ ತಪ್ಪಿಲ್ಲ. ಈವರೆಗೆ ಲವ್ವರ್‌ಬಾಯ್‌ನಂತೆ ಕಾಣುತ್ತಿದ್ದ ಅವರಿಗೆ ಪಕ್ಕಾ ಮಾಸ್‌ ಫೀಲ್‌ ಬರುವಂತಹ ಪಾತ್ರ ಕಟ್ಟಿಕೊಡಲಾಗಿದೆ. ನಿರ್ದೇಶಕರ ಕಲ್ಪನೆಯ ಪಾತ್ರಕ್ಕೆ ಒಂದಷ್ಟೂ ಧಕ್ಕೆಯಾಗದಂತೆ ಪರಿಪೂರ್ಣವಾಗಿ ನಿಭಾಯಿಸಿದ್ದಾರೆ ಧರ್ಮ. ಮೊದಲೇ ಹೇಳಿದಂತೆ ಇಲ್ಲಿ ಮಾಸ್‌ ಅಂಶಗಳೇ ಹೆಚ್ಚು. ಅದರಲ್ಲೂ ಭರ್ಜರಿ ಆ್ಯಕ್ಷನ್‌ಗೆ ಹೆಚ್ಚು ಜಾಗ ಕಲ್ಪಿಸಲಾಗಿದೆ. ಚಿತ್ರಕಥೆಯಲ್ಲಿ ಚೇಸಿಂಗ್‌ಗಾಗಿಯೇ ಹೆಚ್ಚು ತಲೆಕೆಡಿಸಿಕೊಂಡಂತಿದೆ.

ಹಾಗಾಗಿ, ತೆರೆಯ ಮೇಲೆ ಬರುವ ಚೇಸಿಂಗ್‌ ದೃಶ್ಯ ಬಿಗ್‌ಬಜೆಟ್‌ ಚಿತ್ರಗಳಿಗೆ ಕಮ್ಮಿ ಇಲ್ಲ ಎಂಬಂತಿದೆ. ಬಿಗ್‌ಸ್ಟಾರ್‌ಗಳಿಗೆ ಮಾಡಿಸುವಂತೆ ಮಾಡಿಸಿರುವ ಸಾಹಸ ನಿರ್ದೇಶಕರ ಕೆಲಸವನ್ನು ಮೆಚ್ಚಲೇಬೇಕು. ಸುಮಾರು ಹತ್ತು ನಿಮಿಷದಷ್ಟು ಚೇಸಿಂಗ್‌ ದೃಶ್ಯಗಳು ಇಲ್ಲಿದ್ದು, ನಾಯಕ ಎದುರಾಳಿಗಳನ್ನು ತನ್ನ ಚಾಣಾಕ್ಷತನದಿಂದ ಬಗ್ಗುಬಡಿದು, ಎಸ್ಕೇಪ್‌ ಆಗುವ ದೃಶ್ಯಗಳು ಒಂದಷ್ಟು ಮಜ ಕೊಡುತ್ತವೆ. ಇಲ್ಲಿ ಫೈಟ್ಸ್‌ಗೆ ಹೆಚ್ಚು ಮೀಸಲು. ಹಾಗಾಗಿ, ಇದೊಂದು ಪಕ್ಕಾ ಆ್ಯಕ್ಷನ್‌ ಸಿನಿಮಾ ಎನ್ನಲು ಅನುಮಾನವಿಲ್ಲ.

ಕೆಲವು ಕಡೆ ಚಿತ್ರಕಥೆಯಲ್ಲಿ ಹಿಡಿತ ತಪ್ಪಿಹೋಗಿದ್ದರೂ, ಅಲ್ಲಲ್ಲಿ ಕಾಣುವ ಚಿಟಿಕೆಯಷ್ಟು ಹಾಸ್ಯ ದೃಶ್ಯಗಳು ಮತ್ತು ಡೈಲಾಗ್‌ಗಳು ಆ ತಪ್ಪನ್ನು ಮರೆ ಮಾಚಿಸುತ್ತವೆ. ಇನ್ನೂ ಕೆಲವೆಡೆ ಸಣ್ಣ ಪುಟ್ಟ ಗೊಂದಲಗಳು ಹಲವು ಪ್ರಶ್ನೆಗಳಿಗೆ ಕಾರಣವಾಗುತ್ತವೆ. ಆದರೂ, ಜಬರ್‌ದಸ್ತ್ ಆಗಿರುವ ಆ್ಯಕ್ಷನ್‌ ದೃಶ್ಯಗಳು ಅವೆಲ್ಲವನ್ನು ಪಕ್ಕಕ್ಕೆ ಸರಿಸುತ್ತವೆ. ರಿಸ್ಕೀ ಸ್ಟಂಟ್ಸ್‌ ಹೇರಳವಾಗಿದ್ದರೂ, ಫ್ಯಾಮಿಲಿ ಸೆಂಟಿಮೆಂಟ್‌ಗೂ ಜಾಗವಿದೆ, ಎಮೋಷನಲ್‌ ಜೊತೆಗೆ ಬೊಗಸೆಯಷ್ಟು ಪ್ರೀತಿಯ ಅಂಶಕ್ಕೂ ಒತ್ತು ಕೊಡಲಾಗಿದೆ.

ಮುಖ್ಯವಾಗಿ ಇಲ್ಲೊಂದು ಸಂದೇಶವಿದೆ. ಅದನ್ನು ತಿಳಿದುಕೊಳ್ಳುವ ಸಣ್ಣ ಕುತೂಹಲವಿದ್ದರೆ, “ಚಾಣಾಕ್ಷ’ನ ಚಾಕಚಕ್ಯತೆ ಹೇಗೆಲ್ಲಾ ಇದೆ ಎಂಬುದನ್ನು ತಿಳಿಯಬಹುದು. ಸೂರ್ಯ ಒಬ್ಬ ಅನಾಥ. ಚಿಕ್ಕಂದಿನಲ್ಲೇ ಒಬ್ಬ ಡಾನ್‌ ಪ್ರಾಣ ಉಳಿಸಿರುತ್ತಾನೆ. ಆಗಿನಿಂದ ಡಾನ್‌ ಮನೆಯ ಹಿರಿ ಮಗನಾಗಿ ಬೆಳೆಯುತ್ತಾನೆ. ಸಣ್ಣ ವಯಸ್ಸಲ್ಲೇ ಯಾವುದಕ್ಕೂ ಹೆದರದ ಸೂರ್ಯ, ದೊಡ್ಡವನಾದ ಮೇಲೂ ಹಾಗೇ ಬದುಕುತ್ತಿರುತ್ತಾನೆ.

ಒಂದು ದಿನ ರಾಜಕಾರಣಿಯೊಬ್ಬನ 50 ಕೋಟಿ ರುಪಾಯಿ ಎಗರಿಸುವ ಸಂಚು ರೂಪಿಸಿ, ಅದರಲ್ಲಿ ಯಶಸ್ಸು ಪಡೆಯುತ್ತಾನೆ. ಆಮೇಲೆ ನಡೆಯೋದೆಲ್ಲಾ ರೋಚಕ ಸನ್ನಿವೇಶಗಳು. ಆ ಹಣ ಎಗರಿಸಿಕೊಂಡು ಸಿಟಿಯಿಂದ ಹಳ್ಳಿಯೊಂದಕ್ಕೆ ಕಾಲಿಡುವ ನಾಯಕ, ಅಲ್ಲೊಂದು ತುಂಬು ಕುಟುಂಬದ ಮನೆಗೆ ಕಾಲಿಡುತ್ತಾನೆ. ಅಲ್ಲೊಂದು ವಿಶೇಷವೂ ಇದೆ.

ಕೊನೆಗೆ ಅವರ ಮನೆಯಲ್ಲೊಬ್ಬ ಸದಸ್ಯನಾಗಿ ಅಲ್ಲಿನ ರೈತರ ಸಮಸ್ಯೆಗೆ ನೆರವಾಗುತ್ತಾನೆ, ಊರ ರೌಡಿ ಕಪಿಮುಷ್ಠಿಯಲ್ಲಿರುವ ಜನರನ್ನೂ ರಕ್ಷಿಸುತ್ತಾನೆ.  50 ಕೋಟಿ ಎಗರಿಸಿಕೊಂಡು ಬಂದ ಸೂರ್ಯನನ್ನು ಹುಡುಕಿಕೊಂಡು ಪೊಲೀಸರು ಆ ಹಳ್ಳಿಗೆ ಬರುತ್ತಾರೆ. ಸೂರ್ಯ ಕೆಟ್ಟವನು ಅನ್ನೋದು ಎಲ್ಲರಿಗೂ ಗೊತ್ತಾಗುತ್ತೆ. ಆಮೇಲೆ ಏನಾಗುತ್ತೆ ಅನ್ನುವುದೇ ಸಸ್ಪೆನ್ಸ್‌. ಧರ್ಮ ಕೀರ್ತಿರಾಜ್‌ ಇಲ್ಲಿ ಎಂದಿಗಿಂತ ಹೆಚ್ಚು ಇಷ್ಟವಾಗುವುದೇ ಅವರ ಆ್ಯಕ್ಷನ್‌ನಿಂದ.

ಕ್ಯಾಡ್‌ಬರೀಸ್‌ ಫೀಲ್‌ನಿಂದ ಆಚೆ ಬಂದಿದ್ದಾರೆ ಎಂಬುದಕ್ಕೆ ಅವರ ಫೈಟ್ಸ್‌, ಮಾಸ್‌ ಡೈಲಾಗ್‌ ಸಾಕ್ಷಿಯಾಗಿದೆ. ಕ್ಲಾಸ್‌ ಜೊತೆಗೆ ಮಾಸ್‌ಗೂ ಜೈ ಎನ್ನುವಂತೆ ಚೇಸಿಂಗ್‌, ಆ್ಯಕ್ಷನ್‌ನಲ್ಲಿ ರಿಸ್ಕ್ ತಗೊಂಡಿದ್ದಾರೆ. ಇನ್ನು, ನಾಯಕಿ ಸುಶ್ಮಿತಾ ನಿರ್ದೇಶಕರು ಹೇಳಿದ್ದನ್ನಷ್ಟೇ ಮಾಡಿದ್ದಾರೆ. ವಿನೋದ್‌ ಆಳ್ವ, ಶೋಭರಾಜ್‌, ಸುನೀಲ್‌, ಪಾತ್ರಕ್ಕೆ ಬೇಕಾದ್ದೆಲ್ಲ ಕೊಟ್ಟಿದ್ದಾರೆ. ಅಭಿಮಾನ್‌ ರಾಯ್‌ ಸಂಗೀತದಲ್ಲಿ ಒಂದು ಹಾಡು ಪರವಾಗಿಲ್ಲ. ಹಿನ್ನೆಲೆ ಸಂಗೀತಕ್ಕೆ ಇನ್ನಷ್ಟು ಧಮ್‌ ಇರಬೇಕಿತ್ತು. ಸಿ.ಎಚ್‌.ರಮೇಶ್‌ ಕ್ಯಾಮೆರಾ ಕೈಚಳಕದಲ್ಲಿ “ಚಾಣಾಕ್ಷ’ ಕಲರ್‌ಫ‌ುಲ್‌ ಆಗಿದ್ದಾನೆ.

ಚಿತ್ರ: ಚಾಣಾಕ್ಷ
ನಿರ್ಮಾಣ: ನಳಿನ ಜೆ.ವೆಂಕಟೇಶ್‌ಮೂರ್ತಿ
ನಿರ್ದೇಶನ: ಮಹೇಶ್‌ ಚಿನ್ಮಯ್‌
ತಾರಾಗಣ: ಧರ್ಮಕೀರ್ತಿರಾಜ್‌, ವಿನೋದ್‌ ಆಳ್ವ, ಸುಶ್ಮಿತಾಗೌಡ, ಅರ್ಚನಗೌಡ, ಶೋಭರಾಜ್‌, ಚಿತ್ರಾಶೆಣೈ, “ಕುರಿ’ ಸುನೀಲ್‌ ಇತರರು.

* ವಿಭ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.