ಬೀರಪ್ಪ ಸಾಧನೆ ನೋಡ್ರಪ್ಪ


Team Udayavani, May 13, 2017, 2:18 PM IST

7.jpg

ಶಿಕ್ಷಕರು ಮನಸ್ಸು ಮಾಡಿದ್ರೆ ಕಲ್ಲಿನಂತಿರುವ ಮಕ್ಕಳ ಮನಸನ್ನು ಬೆಣ್ಣೆಯಂತೆ ಕರಗಿಸಿ ಉತ್ತಮ ಶಾಲೆಯನ್ನಾಗಿ ನಿರ್ಮಾಣ ಮಾಡಿ ಸಮಾಜಕ್ಕೆ ಪರಿಚಯಿಸುತ್ತಾರೆ ಎನ್ನುವುದಕ್ಕೆ ಬೀದರ್‌ ಜಿಲ್ಲೆ ಔರಾದದ ಎಕಲಾರ ಗ್ರಾಮದಲ್ಲಿನ ಸರ್ಕಾರಿ ಪ್ರೌಢಶಾಲೆಯ ಆಂಗ್ಲ ಶಿಕ್ಷಕ ಬೀರಪ್ಪ ಕಡ್ಲೀಮಟಿ 
ಅವರ ಕಾರ್ಯವೇ ಮಾದರಿ. 

ಸರ್ಕಾರಿ ಶಾಲೆಗಳಲ್ಲಿ ತಮ್ಮ ಮಕ್ಕಳು ಕಲಿತರೆ ಫಲಿತಾಂಶ ಕುಸಿತವಾಗುತ್ತದೆ. ಅಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವುದಿಲ್ಲ ಎನ್ನುವುದನ್ನು ಇವರು ಸುಳ್ಳಾಗಿಸಿ ಖಾಸಗಿ ಶಾಲೆಯಲ್ಲಿನ ಮಕ್ಕಳು ಸರ್ಕಾರಿ ಶಾಲೆಗಳಿಗೆ ಸೇರುವಂತೆ ಮಾಡಿದ್ದಾರೆ.

2008ರ ಮುಂಚೆ ಔರಾದದ ಎಕಲಾರ ಗ್ರಾಮದಲ್ಲಿನ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕೇವಲ 37 ಇತ್ತು.  ಎಸ್ಸೆಸ್ಸೆಲ್ಸಿ ಫಲಿತಾಂಶವೂ ನಾಮಕಾವಾಸ್ತೆ ಎಂಬಂತೆ ಶೇ. 47 ಎಂದು ಶಿಕ್ಷಣ ಇಲಾಖೆ ಫಲಕದಲ್ಲಿ ರಾರಾಜಿಸುತ್ತಿತ್ತು. ನೂತನವಾಗಿ ಶಾಲೆಗೆ ಬಂದ ಶಿಕ್ಷಕ ಬೀರಪ್ಪ ಮಾಸ್ತರ್‌ ಅಲ್ಲಿನ ಅವ್ಯವಸ್ಥೆ ಸರಿಪಡಿಸಿ, ಮಕ್ಕಳಿಗೆ ವಿನೂತನ ಶೈಲಿಯಲ್ಲಿ ಬೋಧಿಸುವ ಮೂಲಕ ವರ್ಷದಿಂದ ವರ್ಷಕ್ಕೆ ಶಾಲೆಯ ಫಲಿತಾಂಶ ಸುಧಾರಿಸುವಂತೆ ಮಾಡಿದರು.  ಆನಂತರದ ಫ‌ಲಿತಾಂಶ ಪಟ್ಟಿ ನೋಡಿ.  2008ರಲ್ಲಿ ಶೇ. 47, 2009ರಲ್ಲಿ ಶೇ. 67, 2010ರಲ್ಲಿ ಶೇ. 85, 2011ರಿಂದ 2016ರ ವರೆಗೆ ಶೇ.100 ಫಲಿತಾಂಶ.  “ಈ ವರ್ಷ ಕೂಡ ಇಷ್ಟೇ ಫ‌ಲಿತಾಂಶ ನೋಡ್ರೀ’ ಅಂತಾರೆ ಬೀರಪ್ಪ. 

 ಇವರ ಫ‌ಲಿತಾಂಶದಿಂದಾಗಿ ಎಕಲಾರ ಶಾಲೆಯ ಸಾಧನೆ ಔರಾದ ಜಿಲ್ಲೆಯಲ್ಲಿರುವ ಪ್ರೌಢಶಾಲೆಗಳಿಗೆ ಮಾದರಿಯಾಗಿದೆ.  ಬೀರಪ್ಪ ಶಾಲೆಗೆ ಕಾಲಿಟ್ಟಾಗ ಅಂದರೆ 2008ರಲ್ಲಿ ವಿದ್ಯಾರ್ಥಿಗಳ ಸಂಖ್ಯೆ 37ಇದ್ದದ್ದು ಇದೀಗ 137 ಏರಿದೆ.  ಇಲ್ಲಿನ ಶಿಕ್ಷಕರ ಬೋಧನಾ ಪದ್ಧತಿ, ಮಕ್ಕಳ ಮೇಲಿನ ಕಾಳಜಿ ಕಂಡು ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಿಂದ ಕರೆತಂದು ಈ ಶಾಲೆಗೆ ದಾಖಲಾತಿ ಮಾಡಿಸುತ್ತಿದ್ದಾರೆ. 

ಬೀರಪ್ಪ ಏನು ಮಾಡಿದರು?
ಬೀರಪ್ಪ ಬಾಗಲಕೋಟೆ ಜಿಲ್ಲೆಯ ಸಂಗಾವಿಯವರು. ರೈತ ಕುಟುಂಬದ ಕುಡಿ.  ಎಂ.ಎ ಇಂಗ್ಲೀಷ್‌ ಪೂರೈಸಿ ಶಿಕ್ಷಕ ವೃತ್ತಿಗೆ ಬಂದರು.  ಎಕಲಾರ ಶಾಲೆ ಪರಿಸ್ಥಿತಿ ಹಾಗೂ ಮಕ್ಕಳ ಕಲಿಕೆ ಸ್ಥಿತಿ ನೋಡಿದಾಗ ಸ್ವಲ್ಪ ಆತಂಕವೇ ಆಯಿತಂತೆ.  ಅದಕ್ಕೆ  ನಿತ್ಯ ಬೆಳಗ್ಗೆ 8:00 ಗಂಟೆಯಿಂದ 9:30, ಸಂಜೆ 4:30ಗಂಟೆಯಿಂದ 6:00ಗಂಟೆ ವರೆಗೆ ಹೆಚ್ಚುವರಿ ತರಗತಿ ತೆಗೆದುಕೊಂಡು ಮಕ್ಕಳಿಗೆ ಬೋಧನೆ ಮಾಡಿದರು.  ಈ ಪರಿಶ್ರಮದ ಫಲವೇ ಶಾಲೆಯ ಫಲಿತಾಂಶ ಸುಧಾರಣೆಗೆ ಕಾರಣವಾಯ್ತು.   

ಇಷ್ಟೇ ಅಲ್ಲ, ಮಕ್ಕಳಿಗೆ ಕೇವಲ ಪಠ್ಯ ಬೋಧನೆ ಮಾತ್ರ ಸಿಮೀತಗೊಳಿಸದೆ ಕಥೆ, ಕಾದಂಬರಿ, ಸ್ವಂತ ನಾಟಕಗಳನ್ನು ಬರೆದು ಅವರನ್ನು ಪಾತ್ರದಲ್ಲಿ ತೊಡಗಿಸುವಂತೆ ಮಾಡಿದ್ದಾರೆ. ತಾಲೂಕು, ಜಿಲ್ಲಾ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ನಾಟಕಗಳನ್ನು ಪ್ರದರ್ಶಿಸಿ ಹಲವಾರು ಸನ್ಮಾನಗಳನ್ನು ಪಡೆದುಕೊಂಡಿದ್ದಾರೆ. ಮಕ್ಕಳಿಗೆ ಸಾಮಾಜಿಕ, ಧಾರ್ಮಿಕ ಹಾಗೂ ದೇಶದ ಇತಿಹಾಸ, ಪರಂಪರೆ ಪರಿಚಯಿಸುವ ನಿಟ್ಟಿನಲ್ಲಿ ಆರು ನಾಟಕಗಳನ್ನು ರಚಿಸಿದ್ದಾರೆ.  ಮಾದರಿ ಶಿಕ್ಷಕ ಎಂದರೆ ಇವರೇ ಅಲ್ಲವೇ?

ರವೀಂದ್ರ ಮುಕ್ತೇದಾರ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.