ಕಂಪ್ಲೆಂಟು ನಾಸ್ತಿ, ಕಾಂಪ್ಲಿಮೆಂಟ್ಸ್‌ ಜಾಸ್ತಿ !


Team Udayavani, Sep 2, 2017, 1:32 PM IST

5.jpg

 ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯೋರೇ ಹೆಚ್ಚು. ಅಯ್ಯೊ, ಮಳೆ ಬಂದರೆ ಸೋರುವ ಛಾವಣಿ, ಮುರಿದು ಬಿದ್ದ ಗೇಟ್‌,  ಕಿಟಕಿ ಇಲ್ಲದ ರೂಮುಗಳು, ಟೀಚರ್‌ ಇಲ್ಲದ ಶಾಲೆ… ದೂರುಗಳ ಪಟ್ಟಿ ಹೀಗೆ ಬೆಳೆಯುತ್ತಾ ಹೋಗುತ್ತದೆ. ಆದರೆ ಇಲ್ಲೊಂದು ಶಾಲೆ ಇದೆ. ಅಲ್ಲಿಗೆ ಹೋದರೆ ಕಂಪ್ಲೇಟಿಗಿಂತ ಕಾಂಪ್ಲಿಮೆಂಟ್‌ ಜಾಸ್ತಿ ಕೊಡ್ತೀರಿ. 

 ಹೌದು, ಶಿವಮೊಗ್ಗ ನಗರ ಸಮೀಪದ ಗಾಜನೂರಿನ ಅಗ್ರಹಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬಂದು ನೋಡಿ. ಉಳಿದೆಲ್ಲ ಶಾಲೆಯಂತಲ್ಲ ಇದು.  ಈ ಊರಿನವರು ಅನುಷ್ಠಾನಕ್ಕೆ ತಂದಿರುವ ಅನೇಕ ಯೋಜನೆಗಳು ಮಾದರಿಯಾಗಿವೆ. 

500 ರೂ.ಗಳ ಪ್ರೋತ್ಸಾಹದ ಬಾಂಡ್‌, ಬ್ಯಾಗ್‌, ನೋಟ್‌ ಪುಸ್ತಕ,ಪೆನ್ನು, ಪೆನ್ಸಿಲ್‌ ಒಳಗೊಂಡ ಪಾಠೊಪಕರಣಗಳ ಕಿಟ್‌ ನೋಟ್‌ ಪುಸ್ತಕ, ನ್ಪೋಕನ್‌ ಇಂಗ್ಲೀಷ್‌ ಕಲಿಕೆ, ಟಾಯ್‌, ಬೆಲ್ಟ್ ಸೇರಿದಂತೆ ಹತ್ತಾರು ಯೋಜನೆಗಳಿವೆ. ಅಂದಹಾಗೇ, ಇವೆಲ್ಲವನ್ನೂ ಸರ್ಕಾರದ ನೆರವಿನಿಂದ ಮಾಡಿದ್ದಲ್ಲ. ಊರಿನ ಜನ ಸೇರಿ ಶಾಲೆಯನ್ನು ಈ ಮಟ್ಟಕ್ಕೆ ತಂದಿದ್ದಾರೆ. 

ಎಲ್ಲಾ ಶಾಲೆಯಂತೆ ಇಲ್ಲೂ ಕೂಡ ಹಾಜರಾತಿ ಸಮಸ್ಯೆ ಇತ್ತು. ಅದಕ್ಕಾಗಿ ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿ ಗೊಳಿಸುತ್ತಲೇ ಅವುಗಳ ಅನುಷ್ಠಾನಕ್ಕೆ ಸಮುದಾಯವನ್ನು ಭಾಗಿಯಾಗುವಂತೆ ಮಾಡಿದ್ದು. ಕೇವಲ 250 ಕುಟುಂಬವಿರುವ ಪುಟ್ಟ ಹಳ್ಳಿ ಗಾಜನೂರು.

ಮೊದಮೊದಲು ಶಾಲೆಯ ಅಭಿವೃದ್ದಿಗಾಗಿ ಶಿಕ್ಷಕರು ಪರಿಸರ ಕಾರ್ಯಕ್ರಮಗಳ ಆಯೋಜನೆ, ಜಾಗೃತಿ ಹಾಗೂ ಸ್ವತ್ಛತೆಯ ಪರಿಕಲ್ಪನೆಯನ್ನು ಗ್ರಾಮಸ್ಥರಲ್ಲಿ, ವಿದ್ಯಾರ್ಥಿಗಳಲ್ಲಿ ಮೂಡಿಸಿದಾಗ ಸರಕಾರಿ ಶಾಲೆಯ ಮೇಲೆ ಹೆಚ್ಚಿನ ವಿಶ್ವಾಸವಿಟ್ಟು ಗುಣಮಟ್ಟದ ಶಾಲೆಯನ್ನಾಗಿ ರೂಪಿಸುವಲ್ಲಿ ಗ್ರಾಮಸ್ಥರು ಮುಂದಾದರು. 

 ಶಾಲೆ ಸೇರಿದ ವಿದ್ಯಾರ್ಥಿಗಳಿಗೆ ಬಾಂಡ್‌ ಕೊಡುವ ಐಡಿಯಾ ಶುರುಮಾಡಿದ್ದು ಸೋಮಲಿಂಗಪ್ಪ ಎನ್ನುವ ಶಿಕ್ಷಕರು. ಇದು ಸರಕಾರದ ಅನುದಾನದಿಂದ ಶುರುವಾದ ಯೋಜನೆಯಲ್ಲ. ಬದಲಾಗಿ ದಾನಿಗಳ ನೆರವಿನಿಂದ ಶುರುವಾದದ್ದು. 

 ಈ ಶಾಲೆಯಲ್ಲಿ 1 ರಿಂದ 7 ನೇ ತರಗತಿಯವರೆಗೆ ಕಲಿಸಲು ಅವಕಾಶವಿದೆ. ಇದುವರೆಗೂ ಶೇ.70 ರಷ್ಟು ವಿದ್ಯಾರ್ಥಿಗಳು ದಾಖಲಾಗುತ್ತಿದ್ದರು. ಖಾಸಗಿ ಶಾಲೆಗಳ ಆಕರ್ಷಣೆಗೆ ಬಿದ್ದ ಪೋಷಕರು ಆ ಕಡೆ ಮುಖ ಮಾಡಿದ್ದರಿಂದ ದಾಖಲಾತಿ ಕಡೆಮೆಯಾಗುವ ಸ್ಥಿತಿ ತಲುಪಿತ್ತು. ಇದನ್ನು ಮನಗಂಡ ಶಿಕ್ಷಕರು ಇಂತಹದೊಂದು ಯೋಜನೆ ರೂಪಿಸಿದರು.  ಪ್ರಸ್ತುತ ಈ ಶಾಲೆಯಲ್ಲಿ 84 ಮಕ್ಕಳು ಹಾಗೂ ಐವರು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. 

ಈ ಯೋಜನೆಯನ್ವಯ ಶಾಲೆಯ ಯಾವುದೇ ತರಗತಿಗೆ ಹೊಸದಾಗಿ ದಾಖಲಾಗುವ ಮಗುವಿಗೆ 500 ರೂ ಮೊತ್ತದ ಬಾಂಡ್‌ ನೀಡಲಾಗುತ್ತಿದೆ. ಈ ಮೊತ್ತವನ್ನು ಎರಡು ವರ್ಷದ ಅವಧಿಗೆ  ಶಾಲೆಗೆ ಸಮೀಪದ ವ್ಯವಸಾಯೋತ್ಪನ್ನ ಸಹಕಾರ ಸಂಘದಲ್ಲಿ ಮಗುವಿನ ಹೆಸರಿನಲ್ಲಿಯೇ ಠೇವಣಿ  ಇಡುತ್ತಾರೆ. ನಂತರ ಆ ಮೊತ್ತವನ್ನು ಬಡ್ಡಿ ಸಮೇತ ಮಗು ಪಡೆದುಕೊಳ್ಳಲಿದೆ. 

ಹೊಸ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಶಾಲೆಯ ಮುಖ್ಯಸ್ಥೆé ಗಿರಿಜಮ್ಮ, ಇತರ ಮೂವರು ಶಿಕ್ಷಕರು ಹಾಗೂ ಶಾಲಾಭಿವೃದ್ದಿ ಸಮಿತಿ ಜೊತೆ ಶಿಕ್ಷಕ ಸೋಮಲಿಂಗಪ್ಪ ಚರ್ಚಿಸಿದ್ದರು. ಇದಕ್ಕೆ ಎಸ್‌.ಡಿ.ಎಂ. ಸಿ ಪೂರಕವಾಗಿ ಸ್ಪಂದಿಸಿತು. ನಂತರ ದಾನಿಗಳ ನೆರವು ಪಡೆಯಲು ಗ್ರಾಮದಲ್ಲಿ ಕರಪತ್ರದ ಮೂಲಕ ಪ್ರಚಾರ ಮಾಡಿದಾಗ  ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು ಎನ್ನುತ್ತಾರೆ ಶಿಕ್ಷಕ ಸೋಮಲಿಂಗಪ್ಪ. ವಿಷಯ ತಿಳಿದು ಸುಮಾರು 15 ಲಕ್ಷ ಕ್ಕೂ ಅಧಿಕ ಮೊತ್ತ ನೀಡಲು ದಾನಿಗಳು ಮುಂದೆ ಬಂದಿದ್ದಾರೆ. ಇದರಲ್ಲಿ ಸ್ಥಳೀಯ ಗ್ರಾಪಂ ಸದಸ್ಯರಾಗಿರುವ ಬಿ.ಎಸ್‌ ನಾಗರಾಜ ಎಂಬುವವರೇ ಶಾಲೆಯ ವಿವಿಧ ಚಟುವಟಿಕೆಗಳಿಗೆ 1 ಲಕ್ಷ ರೂಗಳಷ್ಟು ಸಹಾಯ ನೀಡಿದ್ದಾರಂತೆ. ಗ್ರಾಮದಲ್ಲಿ ಬಹುತೇಕ ಕೂಲಿ ಕಾರ್ಮಿಕರು ಹಾಗೂ ಗಾರೆ ಕೆಲಸಗಾರರು ಇದ್ದಾರೆ. ಜೊತೆಗೆ ಎಲ್ಲರೂ ಶಿಕ್ಷಣ ವಂಚಿತರೇ. ಹೀಗಿದ್ದರೂ ಈಗ ಮಕ್ಕಳ ಶಿಕ್ಷಣಕ್ಕಾಗಿ ಸಹಾಯ ಮಾಡಲು ಅವರೆಲ್ಲಾ ದಾನಿಗಳಾಗಲು ನಿರ್ಧರಿಸಿದ್ದಾರೆ.  

 500 ರೂ. ಬಾಂಡ್‌ ಜೊತೆಗೆ ಎಲ್ಲ ವಿದ್ಯಾರ್ಥಿಗಳಿಗೆ ಒಂದು ವರ್ಷದ ಉಚಿತ ನೊಟ್‌ ಪುಸ್ತಕ, ಪೆನ್‌, ಎರೇಸರ್‌ಗಳನ್ನು ನೀಡಲಾಗುತ್ತಿದೆ. ಇದನ್ನು ಒದಗಿಸಲು ಸ್ಥಳೀಯ ತುಂಗಾ ಪರಿಸರ ಅಭಿವೃದ್ದಿ ಸಮಿತಿ ಮುಂದೆ ಬಂದಿದೆ. 

ನ್ಪೋಕನ್‌ ಇಂಗ್ಲೀಷ್‌
ಸರ್ಕಾರಿ ಶಾಲೆಯ ಮಕ್ಕಳಿಗೂ ಇಂಗ್ಲೀಷ್‌ ಕಲಿಸುವ ನಿಟ್ಟಿನಲ್ಲಿ ಗಾಡಿಕೊಪ್ಪದಲ್ಲಿರುವ ಸೇಂಟ್‌ ಜೋಸೆಫ್ ಅಕ್ಷರ ಧಾಮಶಾಲೆಯ ಸಹಕಾರದೊಂದಿಗೆ ಗ್ರಾಮರ್‌ ಹಾಗೂ ನ್ಪೋಕನ್‌ ಇಂಗ್ಲೀಷ್‌ ತರಗತಿಗಳು ನಡೆಯುತ್ತಿವೆ.  ಪ್ರತಿ ಶನಿವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಈ ಶಾಲೆಯ ಮಕ್ಕಳಿಗೆ ತರಗತಿಗಳನ್ನು ತೆಗೆದುಕೊಳ್ಳುತ್ತಾರೆ. 

ಉತ್ತಮ ಶಿಕ್ಷಣ ನೀಡುವುದರೊಂದಿಗೆ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಚಿಣ್ಣರ ಚಿತ್ತಾರ ಎಂಬ ಮಾಸಪತ್ರಿಕೆಯು ಶಿಕ್ಷಕ ಸೋಮಲಿಂಗಪ್ಪನವರ ಸಂಪಾದಕತ್ವದಲ್ಲಿ ಹೊರಬರುತ್ತಿದೆ.  ಇಲ್ಲಿ ಮಕ್ಕಳು ಕಥೆ, ಕವನ, ಚಿತ್ರಕಲೆಗಳನ್ನು ಅನಾವರಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ತಿಂಗಳು 500 ಪತ್ರಿಕೆಗಳನ್ನು ಮುದ್ರಿಸಿ ಗ್ರಾಮದ ಮನೆಮನೆಗಳಿಗೆ ತಲುಪಿಸಲಾಗುತ್ತಿದೆ. ಈ ಪತ್ರಿಕೆಯ ಮುದ್ರಣದ ಖರ್ಚನ್ನು ಗ್ರಾಮದ ಡಾ. ಕಿರಣ ಭರಿಸುತ್ತಿದ್ದಾರೆ. 

ಹೀಗೆ ಸರ್ಕಾರಿ ಶಾಲೆ ಗ್ರಾಮಸ್ಥರಿಂದಲೇ ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆಯುತ್ತಿದೆ. 

ಗುರುರಾಜ.ಬ.ಕನ್ನೂರ

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.