ಅನಿರೀಕ್ಷಿತದ ಹಿಂದೊಂದು ನಿರೀಕ್ಷಿತ


Team Udayavani, Jan 20, 2018, 11:23 AM IST

4-aa.jpg

“ಕ್ರೀಡಾಕೂಟ ಆರಂಭಕ್ಕೂ ಮೊದಲು ಪದಕ ಗೆಲ್ಲುವೆ ಅನ್ನುವ ಯಾವುದೇ ಭರವಸೆ ನನಗೇ ಇರಲಿಲ್ಲ. ಒಂದು ಕ್ರೀಡೆಯಲ್ಲಿ ದೇಶವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದೆ. ಸ್ಪರ್ಧೆಯನ್ನು ಪೂರ್ತಿಗೊಳಿಸಬೇಕು ಅನ್ನುವುದು ಮಾತ್ರ ನನ್ನ ಗುರಿಯಾಗಿತ್ತು. ಆದರೆ, ಪದಕ ಬಂದಿದೆ. ಈಗಲೂ ಪದಕ ಗೆದ್ದಿರುವುದನ್ನು ನಂಬಲಾಗುತ್ತಿಲ್ಲ’ 

ಇದು, ಟರ್ಕಿಯಲ್ಲಿ ನಡೆದ ಅಂತಾರಾಷ್ಟ್ರೀಯ ಸ್ಕೀಯಿಂಗ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂದ ಮನಾಲಿ ಸುಂದರಿ ಅಂಚಲ್‌ ಠಾಕೂರ್‌ ಮಾತು. ಹೌದು, ಅಂಚಲ್‌ ಕ್ರೀಡಾಕೂಟಕ್ಕೂ ಮುನ್ನ ಪದಕ ಗೆಲ್ಲುವ ಯಾವುದೇ ಭರವಸೆಯನ್ನು ಇಟ್ಟುಕೊಂಡವರಲ್ಲ. ಯಾಕೆಂದರೆ ಅಲ್ಲಿ ಆಸ್ಟ್ರೇಲಿಯಾ, ಸ್ವಿಜರ್ಲೆಂಡ್‌, ಕೆನಡಾ, ಫ್ರಾನ್ಸ್‌, ಇಟಲಿ ದೇಶದ ಕ್ರೀಡಾಪಟುಗಳದ್ದೇ ಅಬ್ಬರ. ಇಂತಹ ಕಠಿಣ ಎದುರಾಳಿಗಳ ಎದುರು ಸ್ಪರ್ಧಿಸಿ ಭಾರತಕ್ಕೆ ಕಂಚಿನ ಪದಕ ತಂದಿರುವುದು ಸಾಮಾನ್ಯ ಸಂಗತಿಯಲ್ಲ. 

ತಂದೆಯೇ ಮೊದಲ ಗುರು
ಅಂಚಲ್‌ಗೆ ಸ್ಕೀಯಿಂಗ್‌ ರಕ್ತಗತವಾಗಿ ಬಂದಿರುವ ಕ್ರೀಡೆ. ಈಕೆಯ ತಂದೆ ರೋಷನ್‌ ಲಾಲ್‌ ಠಾಕೂರ್‌, ಮಾಜಿ ರಾಷ್ಟ್ರೀಯ ಸ್ಕೀಯಿಂಗ್‌ ಆಟಗಾರ. ಈ ಹಿನ್ನೆಲೆ ಸಹಜವಾಗಿಯೇ ಅಂಚಲ್‌ ಅವರನ್ನು ಸ್ಕೀಯಿಂಗ್‌ ಆಟದತ್ತ ಸೆಳೆದಿದೆ. ನಿವೃತ್ತಿಯ ನಂತರ ರೋಷನ್‌ ಲಾಲ್‌ ಯುವ ಪ್ರತಿಭೆಗಳಿಗೆ ತರಬೇತಿ ನೀಡಲು ಆರಂಭಿಸಿದ್ದರು. ಈ ಸಂದರ್ಭದಲ್ಲಿ ಬಾಲಕಿ ಅಂಚಲ್‌ ಕೂಡ ತಂದೆಯ ಜತೆ ತೆರಳುತ್ತಿದ್ದಳು. ಹೀಗೆ ಬಾಲಕಿಯಾಗಿದ್ದಾಗಲೇ ಸ್ಕೀಯಿಂಗ್‌ ನೋಡುತ್ತ ಬೆಳೆದ ಈಕೆ ನಂತರ ತಾನೂ ಅಂಗಳಕ್ಕೆ ಇಳಿಯಲು ನಿರ್ಧರಿಸಿದಳು. ಆಗ, ಮೊದಲ ಮಾರ್ಗದರ್ಶನ ಸಿಕ್ಕದ್ದೇ ತಂದೆಯಿಂದ.

ಇಟಲಿ, ಆಸ್ಟ್ರೇಲಿಯಾದಲ್ಲಿ ತರಬೇತಿ
15ರ ಬಾಲಕಿಯಾಗಿದ್ದಾಗ 2012ರಲ್ಲಿ ನಡೆದ ಚಳಿಗಾಲದ ಯೂತ್‌ ಒಲಿಂಪಿಕ್ಸ್‌ನಲ್ಲಿ ಅಂಚಲ್‌ ಪಾಲ್ಗೊಂಡಿದ್ದರು. ಪದಕ ಗೆಲ್ಲಲು ಸಾಧ್ಯವಾಗದಿದ್ದರೂ ಗಮನಾರ್ಹ ಪ್ರದರ್ಶನ ನೀಡಿದ್ದರು. ಇದನ್ನು ಗಮನಿಸಿದ ತಂದೆ ರೋಷನ್‌ ಠಾಕೂರ್‌ ಕಷ್ಟದ ಸ್ಥಿತಿಯಲ್ಲಿಯೂ ಅಂಚಲ್‌ ಅವರನ್ನು ಆಸ್ಟ್ರೇಲಿಯಾ ಮತ್ತು ಇಟಲಿಗೆ ಕಳುಹಿಸಿ ತರಬೇತಿ ಕೊಡಿಸಿದರು. ಇದುವೇ ಅಂಚಲ್‌ ಜೀವನಕ್ಕೆ ಸಿಕ್ಕ ಟರ್ನಿಂಗ್‌ ಪಾಯಿಂಟ್‌. 

ದುಬಾರಿ ಕ್ರೀಡೆ
ಇದು ಚಳಿಗಾಲದಲ್ಲಿ ಮಾತ್ರ ನಡೆಯುವ ಕ್ರೀಡೆ. ಪಾದಗಳಿಗೆ ಸ್ಕೀಗಳನ್ನು ಕಟ್ಟಿಕೊಂಡು ಹಿಮದಲ್ಲಿ ಜಾರುತ್ತಾ ಹೋಗಬೇಕು. ಎರಡೂ ಕೈಯಲ್ಲಿ ಕೋಲುಗಳನ್ನು ಹಿಡಿದು ಅದನ್ನೇ ಹಿಡಿತದ ಸಾಧನವಾಗಿ ಬಳಸಿಕೊಳ್ಳಬೇಕು. ನೋಡಲು ಈ ಕ್ರೀಡೆ ಸುಲಭ ಅನ್ನಿಸುತ್ತದೆ. ಆದರೆ, ಇದು ತುಂಬಾ ಕಠಿಣ ಮತ್ತು ದುಬಾರಿ ಕ್ರೀಡೆಯೂ ಹೌದು. ಒಂದು ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಅಂದರೆ, ಒಬ್ಬ ಸ್ಪರ್ಧಿಗೆ ಕನಿಷ್ಠ ಅಂದರೂ 5 ರಿಂದ 10 ಲಕ್ಷ ರೂ. ಖರ್ಚು ಬೀಳುತ್ತದೆ. ಹೀಗಾಗಿ ಕ್ರೀಡಾಪಟುಗಳು ಸರ್ಕಾರದ ನೆರವನ್ನು ಬಯಸುತ್ತಿರುತ್ತಾರೆ.

ಸ್ಕೀಯಿಂಗ್‌ ಸ್ಪರ್ಧಿಗಳಿಗೆ ಸ್ಫೂರ್ತಿ
ಇದು ಹಿಮದಲ್ಲಿ ಮಾತ್ರ ನಡೆಯುವ ಕ್ರೀಡೆ. ಹೀಗಾಗಿ ಸಹಜವಾಗಿ ಭಾರತದಲ್ಲಿ ಯಾವ ಯಾವ ರಾಜ್ಯಗಳಲ್ಲಿ ಹಿಮ ಇದೆಯೋ ಅಲ್ಲಿ ಮಾತ್ರ ಸ್ಪರ್ಧಿಗಳು ಕಂಡುಬರುತ್ತಾರೆ. ಹೆಚ್ಚಿನದಾಗಿ ಜಮ್ಮು ಕಾಶ್ಮೀರ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಸ್ಕೀಯಿಂಗ್‌ ಸ್ಪರ್ಧಿಗಳು ಇದ್ದಾರೆ. ಈ ಕ್ರೀಡೆಯಲ್ಲಿ ಇಲ್ಲಿಯವರೆಗೂ ಒಂದೂ ಅಂತಾರಾಷ್ಟ್ರೀಯ ಪದಕ ಗೆಲ್ಲದ ಭಾರತಕ್ಕೆ ಅಂಚಲ್‌ ಮೊದಲ ಪದಕ ತಂದಿದ್ದಾರೆ. ಇದು ಇತರೇ ಸ್ಪರ್ಧಿಗಳಿಗೆ ಸ್ಫೂರ್ತಿಯಾಗಿದೆ. ಯುವ ಕ್ರೀಡಾಪಟುಗಳನ್ನು ಸ್ಕೀಯಿಂಗ್‌ ಅತ್ತ ಸೆಳೆಯುತ್ತಿದೆ. 

2022ರ ಚಳಿಗಾರದ ಒಲಿಂಪಿಕ್ಸ್‌ ಮೇಲೆ ಕಣ್ಣು
ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿರುವ ಅಂಚಲ್‌ರ ಮುಂದಿನ ಗುರಿ 2022ರಲ್ಲಿ ನಡೆಯಲಿರುವ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವುದು. ಹೀಗಾಗಿ ತಾನು ಇನ್ನಷ್ಟು ಕಠಿಣ ಅಭ್ಯಾಸ ನಡೆಸುವುದಾಗಿ ತಿಳಿಸಿದ್ದಾರೆ.
 

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.