ಹಾಲಿನಂತೆ ಕಾಣುತ್ತಿರುವ ಮೂಕನಮನೆ ಜಲಪಾತ


Team Udayavani, Aug 11, 2018, 2:45 PM IST

011.jpg

 ಮಳೆಗಾಲದಲ್ಲಿ ಧೋ..ಎಂದು ಭೋರ್ಗರೆಯುವ  ತಾಲೂಕಿನ ಮೂಕನಮನೆ ಜಲಪಾತ ನೋಡಿದರೆ ಬೆರಗಾದವರಿಲ್ಲ.   ತಾಲೂಕು ಕೇಂದ್ರ ಸಕಲೇಶಪುರದಿಂದ ಸುಮಾರು 39ಕಿ.ಮೀ, ಹೆತ್ತೂರು ಹೋಬಳಿ ಕೇಂದ್ರದಿಂದ 12 ಕಿ.ಮೀ ಹಾಗೂ ಅತ್ತಿಹಳ್ಳಿ ಗ್ರಾಮದಿಂದ 2 ಕಿ.ಮೀ ದೂರದಲ್ಲಿರುವ ಈ ಜಲಪಾತ ಮೂಕನಮನೆ ಜಲಪಾತ ಹಾಗೂ ಮೂಕನಮನೆ ಅಬ್ಬಿ ಜಲಪಾತ ಎಂದೇ ಹೆಸರುವಾಸಿಯಾಗಿದೆ. ಪ್ರಖ್ಯಾತ ಬಿಸಿಲೆ ಘಾಟ್‌ನಿಂದ ಕೇವಲ 11 ಕಿ.ಮೀ ದೂರದಲ್ಲಿರುವುದರಿಂದ ಬಿಸಿಲೆಗೆ ಬರುವ ಅನೇಕ ಪ್ರವಾಸಿಗರು ಈ ಜಲಪಾತಕ್ಕೆ ಬರುತ್ತಿದ್ದಾರೆ. 

ಹೊಂಗಡಹಳ್ಳ ನದಿ ಹಾಗೂ ಅಕ್ಕಪಕ್ಕದ ಗ್ರಾಮಗಳಾದ ಕಿರ್ಕಳ್ಳಿ, ಜೇಡಗದ್ದೆ, ಬಾಚನಹಳ್ಳಿ, ಮೂಕನಮನೆ ಮುಂತಾದ ಗ್ರಾಮಗಳಲ್ಲಿ ಹರಿಯುವ ಇದು ಮೂಕನ ಮನೆ ಸಮೀಪ ಒಂದಾಗಿ ಎತ್ತರದಿಂದ ಧುಮುಕುತ್ತದೆ. ನಂತರ ನದಿಯ ನೀರು ಒಂದೆಡೆ ಹೋಗಿ ಸುಬ್ರಹ್ಮಣ್ಯದ ಕುಮಾರಪರ್ವತದ ಮುಖಾಂತರ ಮಂಗಳೂರಿನ ಅರಬ್ಬಿ ಸಮುದ್ರದಲ್ಲಿ ವಿಲೀನವಾಗುತ್ತದೆ. 

  ಜಲಪಾತದಲ್ಲಿ  ಸಾಮಾನ್ಯವಾಗಿ ವರ್ಷವಿಡಿ ನೀರಿರುತ್ತದೆ ಆದರೆ ಬೇಸಿಗೆಯಲ್ಲಿ ಧುಮುಕುವ ನೀರಿನ ಪ್ರಮಾಣ ಸಂಪೂರ್ಣ ಕಡಿಮೆಯಾಗಿರುತ್ತದೆ. ಮಳೆಗಾಲದಲ್ಲಿ ಹಾಲಿನಂತೆ ಉಕ್ಕಿ ಹರಿಯುವುದರಿಂದ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.

ಮೂಲಭೂತ ಸೌಕರ್ಯಗಳ ಕೊರತೆ: ಮೂಕನಮನೆ ಜಲಪಾತವಿರುವ ಬಗ್ಗೆ ತಾಲೂಕಿನ ಬಹುತೇಕ ಜನರಿಗೆ ಅರಿವು ಇಲ್ಲ. ಈ ಜಲಪಾತದ ಸಮೀಪ ಯಾವುದೇ ರೀತಿಯ ಸೌಕರ್ಯವಿಲ್ಲ. ಪುಂಡಪೋಕರಿಗಳ ಹಾವಳಿ ವಿಪರೀತವಾಗಿದ್ದು ಕುಡಿದು ಎಲ್ಲೆಂದರಲ್ಲಿ ಬಿಸಾಡುವ ಮಧ್ಯದ ಬಾಟಲ್‌ಗ‌ಳಿಂದ ಅನೇಕ ಪ್ರವಾಸಿಗರ ಕಾಲಿಗೆ ಚುಚ್ಚಿ ಗಾಯವಾಗಿರುವ ಉದಾಹರಣೆಗಳು ಇದೆ.  ಈ ನಿಟ್ಟಿನಲ್ಲಿ ತಾಲೂಕು ಆಡಳಿತ ಇತ್ತ ಗಮನವರಿಸಿ ತಕ್ಷಣಕ್ಕೆ ಸರಿಯಾದ ನಾಮ ಫ‌ಲಕ ಹಾಕಿ ಭದ್ರತಾ ಸಿಬ್ಬಂದಿಯನ್ನು ನೇಮಿಸಬೇಕಾಗಿದೆ. 

ಮೂಕನಮನೆ ಜಲಪಾತದಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ದಿಗಾಗಿ ತಾಲೂಕು ಆಡಳಿತ ಕ್ರಮ ಕೈಗೊಳ್ಳಬೇಕು. ಇದರಿಂದ ಅತ್ತಿಹಳ್ಳಿ ಸುತ್ತುಮುತ್ತ ಪ್ರವಾಸೋದ್ಯಮ ಕೇಂದ್ರವಾಗಲು ಸಹಾಯವಾಗುತ್ತದೆ.

ರವಿ: ಹೆತ್ತೂರು ಗ್ರಾಮಸ್ಥ

ಸುಧೀರ್‌ ಸಕಲೇಶಪುರ

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.