ಕ್ಷೀರಾಭಿಷೇಕದ ಮೂಲವೇನಿರಬಹುದು?


Team Udayavani, Sep 1, 2018, 11:49 AM IST

99.jpg

ಕ್ಷೀರಾಭಿಷೇಕವೆಂಬುದು ದೇವರಿಗೆ ಮಾಡುವ ಹಾಲಿನ ಸ್ನಾನ. ದೀಪ, ಅರ್ಚನೆ, ಆರತಿ ಮೊದಲಾದವುಗಳಂತೆ ಕ್ಷೀರಾಭಿಷೇಕವೂ ಒಂದು ಸೇವೆ ಅಥವಾ ಪೂಜಾವಿಧಾನ. ದೇವರನ್ನು ನೀರಿನಿಂದ ಸ್ನಾನ ಮಾಡಿಸಿದ ನಂತರ ಆಕಳಿನ ಹಸಿ(ಕಾಯಿಸದ) ಹಾಲನ್ನು ಮಂತ್ರ ಉಚ್ಚಾರದೊಂದಿಗೆ ದೇವರ ಮೂರ್ತಿಯ ಮುಡಿಯಿಂದ ಅಡಿಯವರೆಗೂ ಸುರಿದು ಭಕ್ತಿಯಿಂದ ಮಾಡಿಸುವ ಸ್ನಾನವೇ ಈ ಕ್ಷೀರಾಭಿಷೇಕ. ಇದರಿಂದ ದೇವರು ಸಂಪ್ರೀತನಾಗುತ್ತಾನೆ. ಇಷ್ಟಾರ್ಥಗಳು ಈಡೇರುವಂತೆ ಹರಸುತ್ತಾನೆ. ಸದಾ ನಮ್ಮನ್ನು ಸಂಕಷ್ಟದಿಂದ ದೂರ ಮಾಡಿ ರಕ್ಷಿಸುತ್ತಾನೆ ಮೊದಲಾದ ನಂಬಿಕೆಗಳಿವೆ.

ಈಗೀಗ ಹಲವರು ಯೋಚಿಸುವ ಹೊಸ ಬಗೆಯೆಂದರೆ ದೇವರಿಗೆ ಹಾಲು ಸುರಿದು ಹಾಳು ಮಾಡುವುದರಿಂದ ಏನೂ ಪ್ರಯೋಜನವಿಲ್ಲ. ಅದರ ಬದಲು ಬಡವರಿಗೋ ಅಗತ್ಯವಿದ್ದವರಿಗೋ ಕೊಟ್ಟರೆ ಹೆಚ್ಚು ಪುಣ್ಯ ಬರುತ್ತದೆ ಎಂಬುದು ಅವರ ವಾದ. ಇದು ಕೂಡ ಒಂದರ್ಥದಲ್ಲಿ ಸರಿಯೇ. ಆದರೆ ಇದು ಕೇವಲ ಪ್ರಶ್ನೆಗೆ ಪ್ರಶ್ನೆಯನ್ನೇ ಹುಟ್ಟು ಹಾಕುತ್ತದೆಯೋ ಹೊರತು ಮನಸ್ಸಿಗೆ ನೆಮ್ಮದಿಯನ್ನು ಕೊಡದು. ಯಾಕೆಂದರೆ, ಈ ಹಾಲು ಸುರಿಯುವುದು ಸರಿಯೇ? ಎಂದು ಕೇಳುವವರು ಅಗತ್ಯವಿದ್ದವರಿಗೆ ಹಾಲನ್ನು ಕೊಡಿಸಿದ್ದಾರೆಯೇ? ಎಂದು ಕೇಳಿದರೆ ಉತ್ತರ ಶೂನ್ಯ. ಹಾಗೆಯೇ,  ದುಬಾರಿ ಬೆಲೆಯ ಬಟ್ಟೆಯನ್ನೋ, ಕಾರನ್ನೋ ಕೊಂಡುಕೊಳ್ಳುವ ಬದಲು ಕಡಮೆ ಬೆಲೆಯದ್ದನ್ನೇ ಖರೀದಿಸಿ ಆ ಉಳಿದ ಹಣವನ್ನು ಬಡವರಿಗೆ ಕೊಟ್ಟು ನಮ್ಮ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬಹುದು. ಆದರೆ ಅವರವರ ನಂಬಿಕೆ, ಆಚರಣೆಗಳಿಗೆ ಅವರು ಸ್ವತಂತ್ರರು. ಇಷ್ಟಕ್ಕೂ ಈ ಕ್ಷೀರಾಭಿಷೇಕದ ಮೂಲವೇನಿರಬಹುದು?

ಭಾರತ, ಕೃಷಿ ಪ್ರಧಾನವಾದ ದೇಶ. ನಾವು ಪ್ರತಿಯೊಂದು ಚರಾಚರ ವಸ್ತುಗಳನ್ನೂ ದೇವರೆಂದೇ ನಂಬಿಕೊಂಡು ಬಂದವರು. ಕೆಲವು ಸಾಕು ಪ್ರಾಣಿಗಳನ್ನು ನಾವು ಕೃಷಿ ಮಾಡುವಲ್ಲಿ ಬಳಸಿಕೊಳ್ಳುತ್ತಲೇ ಬಂದಿದ್ದೇವೆ. ಅಂತಹ ಪ್ರಾಣಿಗಳಲ್ಲಿ ಆಕಳೂ ಒಂದು. ಈ ಆಕಳಿನ ಹಾಲನ್ನು ದೇವರಸ್ನಾನಕ್ಕೆ ಅರ್ಪಿಸುವುದೇ ಕ್ಷೀರಾಭಿಷೇಕ. ಈ ಕಾರ್ಯದಲ್ಲಿ ಮನುಷ್ಯನ ಸಹನಾಶಕ್ತಿ ಹೆಚ್ಚಿಸುವ ಮತ್ತು ಮನಸ್ಸನ್ನು ಕೇಂದ್ರೀಕರಿಸುವ ಅಂಶ ಅಡಗಿದೆ. ಕ್ಷೀರಾಭಿಷೇಕ ಮಾಡಿಸಲು ಈ ಹಾಲನ್ನು ಸಂಗ್ರಹಿಸುವ ಕಾರ್ಯ ಮೊದಲಾಗಬೇಕು. ಬೆಳಿಗ್ಗೆ ಬೇಗನೆ ಎದ್ದು ಆಕಳನ್ನು ಶುಚಿಗೊಳಿಸಿ, ಅದರ ಕರುವಿಗೆ ಹಾಲುಣಿಸಿ ಆನಂತರದಲ್ಲಿ ಹಾಲನ್ನು ತೆಗೆದು, ದೇವರ ಅಭಿಷೇಕಕ್ಕೆ ತಂದುಕೊಡಬೇಕು. ಅಲ್ಲಿಗೆ ಈ ಎಲ್ಲ ಕೆಲಸಗಳನ್ನು ನಾವು ತಾಳ್ಮೆಯಿಂದಲೇ ಮಾಡಬೇಕು. ಆ ಆಕಳನ್ನು ಸಾಕುವ ಹೊಣೆಯೂ ಇರುತ್ತದೆ. ಅದಕ್ಕೆ ಬೇಕಾದ ಮೇವನ್ನೂ ತಂದು ಒದಗಿಸಬೇಕು. ಅಲ್ಲಿಗೆ ಕ್ಷೀರಾಭಿಷೇಕದ ಕಾರ್ಯವೆಂಬುದು ಕೇವಲ ದೇವರ ಮೂರ್ತಿಗೆ ಹಾಲೆರೆಯುವುದಷ್ಟೇ ಅಲ್ಲ. ಆದ್ದರಿಂದಲೇ ಇಷ್ಟೆಲ್ಲ ಕಾರ್ಯಗಳ ಫ‌ಲವಾಗಿ ದೊರೆತ ಹಾಲನ್ನು ದೇವರಿಗೆ ಅರ್ಪಿಸುವಾಗ ಮನಸ್ಸಿಗೆ ಉಂಟಾಗುವ ಆನಂದ ಹಾಗೂ ಹಾಲಿನ ಅಭಿಷೇಕದ ಸಂದರ್ಭದಲ್ಲಿ ಅಂದರೆ ಸಾಧಾರಣವಾಗಿ ಮುಂಜಾನೆಯ ಹೊತ್ತಿನಲ್ಲಿ ಮನಸ್ಸನ್ನು ಮೂರ್ತಿಯನ್ನೇ ನೋಡುತ್ತ ಕೇಂದ್ರೀಕರಿಸಲು ಸಾಧ್ಯ. ಈ ಮೂಲಕ ಒಳ್ಳೆಯ ಯೋಚನೆಗಳಷ್ಟೇ ಮನಸ್ಸನ್ನು ತುಂಬಿಕೊಂಡು ಬಂದು ಸನ್ಮಾರ್ಗದಲ್ಲಿ ನಡೆಯುವಂತೆ ಮಾಡುತ್ತವೆ. ಪೂಜಾ ವಿಧಾನಗಳೆಲ್ಲವೂ ಮನಸ್ಸಿನ ನಿಯಂತ್ರಕಗಳೇ. ಹಾಲಿನ ಅಭಿಷೇಕವನ್ನು ನೋಡುತ್ತ ನಮ್ಮ ಮನಸ್ಸನ್ನು ಮೂರ್ತಿಯಲ್ಲಿ ಕೇಂದ್ರೀಕರಿಸುವದನ್ನು ಅರಿತುಕೊಂಡಾಗ ಇದರ ಮೂಲ ನಮಗೆ ತಿಳಿಯುತ್ತದೆ.

ಹಾಲು ಒಂದು ಪ್ರರಿಶುದ್ಧವಾದ ದ್ರವ. ಬಿಳಿ ಎಂಬುದು ಶಾಂತಿಯ ಸಂಕೇತ. ವ್ಯಕ್ತಿಯೊಬ್ಬ ಪರಿಶುದ್ಧವಾದ ಮನಸ್ಸನ್ನು ಹೊಂದಲು ಈ ಹಾಲಿನ ಅಭಿಷೇಕ ಸಹಕಾರಿ.

ವಿಷ್ಣು ಭಟ್ಟ ಹೊಸ್ಮನೆ

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುದೆಸೆ ಯಾವಾಗ ಆರಂಭವಾಗಲಿದೆ…

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುಬಲ ಯಾವಾಗ ಆರಂಭವಾಗಲಿದೆ…

jjhgfd

ಮಾರಕಾಧಿಪತಿ, ಭಾದಕಾಧಿಪತಿ: ಅಕಾಲಿಕ ಮರಣದ ಬಗ್ಗೆ “ಅಷ್ಠಮ ಸ್ಥಾನ” ಮುನ್ಸೂಚನೆ ಕೊಡುತ್ತದೆಯೇ?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.