ಮಲೆನಾಡಿನ ಮಡಿಲಲ್ಲಿ ನಿಸರ್ಗದ ಸೊಬಗಲ್ಲಿ: ಕಲ್ಲತ್ತಗಿರಿ ಜಲಪಾತ 


Team Udayavani, Sep 8, 2018, 4:06 PM IST

81.jpg

ರಾತ್ರಿ ಇಡೀ ಮಳೆ. ಕೆಮ್ಮಣ್ಣು ಗುಂಡಿಯ ಹಾದಿಯಲ್ಲಿ ಉದ್ದಕ್ಕೂ ಗುಂಡಿಗಳೇ ಸಿಕ್ಕವು.  ಕಲ್ಲತ್ತಗಿರಿ ಜಲಪಾತ ನೋಡುವ ಉತ್ಸಾಹ ನೂರ್ಮುಡಿಯಾಗಿದ್ದು ಈ ಮಳೆಯಿಂದಲೇ.

ಜಲಪಾತ ನೋಡಲು ಅಣಿಯಾದೆವು. ಅಲ್ಲಿಯೇ ಹತ್ತಿರದ ಹೋಟೆಲ್‌ವೊಂದರಲ್ಲಿ ಉಪಹಾರ ಮುಗಿಸಿ ಬಳುಕಿನ ಹಾದಿಯಲ್ಲಿ ಮಲೆನಾಡ ಸೊಬಗನ್ನು ಸವಿಯುತ್ತಾ ಹೊರಟೆವು. ಎಲ್ಲೆಲ್ಲೂ ಹಚ್ಚ ಹಸಿರು, ನಡುನಡುವೆ ಸುರಿವ ತುಂತುರು.  ಜೊತೆ ಜೊತೆಗೆ ಜೋರು ಮಳೆ. ಹಸಿರು ಗಿರಿಶ್ರೇಣಿಗಳ ಮೇಲೆ ಹಾರಾಡುತ್ತಾ ಹಸಿರು ಗುಡ್ಡಗಳಿಗೆ ಮುತ್ತಿಕ್ಕುವ ಮುದವಾದ ನೋಟ ನಮ್ಮ ಕಣ್ಣುಗಳನ್ನು ತಂಪಾಗಿಸಿತು.  ದಾರಿಯ ನಡುವೆ ಸಿಗುವ ಸಣ್ಣ ಸಣ್ಣ ಜಲಪಾತಗಳು ಇನ್ನಷ್ಟು ಹುಚ್ಚೆಬ್ಬಿಸಿದ್ದವು. ಎಲ್ಲರೂ ಫೋಟೋ ಶೂಟ್‌ ನಡೆಸಿದ್ದೇ ನಡೆಸಿದ್ದು. 

ಜಲಪಾತದ ಸೊಬಗು

ಅರಣ್ಯ ಇಲಾಖೆಯ ತಪಾಸಣೆ ಮುಗಿಸಿಕೊಂಡು ಜಲಪಾತದ ಹತ್ತಿರಕ್ಕೆ ಬಂದಾಗಲೂ  ಮಳೆ  ಸುರಿಯುತ್ತಲೇ ಇತ್ತು.  ಮಳೆಹನಿಗಳ ಜೊತೆ ಹರಿಯುವ ನೀರಿನಲ್ಲಿ ಮಿಂದು ಅಲ್ಲಿಯೇ ಇದ್ದ ಹೋಟೆಲ್‌ವೊಂದರಲ್ಲಿ ಕುಡಿದ ಮಲೆನಾಡಿನ ಬಿಸಿ ಬಿಸಿ ಕಾಫಿ, ಹೃದಯವನ್ನು ಬೆಚ್ಚಗೆ ಮಾಡಿತು. ಅಲ್ಲಿಂದ ಹೊರಟ ತಲುಪಿದ್ದು ಝೆಡ್‌ಪಾಯಿಂಟ್‌ಗೆ.  

ಅಲ್ಲೂ ಜಿಟಿಜಿಟಿ ಮಳೆ, ಮೈ ಕೊರೆಯುವ ಚಳಿ. ಸುಂದರ ಪರಿಸರ, ಮಳೆಯಿಂದಾಗಿ ಎಲ್ಲೆಲ್ಲೂ ಹಚ್ಚ ಹಸುರಿನಿಂದ ಕಂಗೊಳಿಸುತ್ತಿರುವ ಪರ್ವತ ಸಾಲುಗಳ ರುದ್ರರಮಣೀಯ ಪರಿಸರ. 

ನೋಡುತ್ತಾ ಅಲ್ಲಿಯೇ ಇದ್ದು ಇಡಬೇಕೆನಿಸುವಷ್ಟು ಆನಂದ. ಸ್ವಲ್ಪ ಮುಂದೆ ಸಾಗುತ್ತಿರುವಾಗಲೇ ಧುಮುಕುತ್ತಿರುವ ನೀರಿನ ಜಲಧಾರೆಯ ದರ್ಶನವಾಯ್ತು.  ಅದೇ ಶಾಂತಿ ಜಲಪಾತ. ಜಲಧಾರೆಯ ಸೌಂದರ್ಯವನ್ನು ಕಣ್ತುಂಬಿಕೊಂಡು ಪ್ರಯಾಣ ಮುಂದುವರೆಸಿದೆವು. 

ಮುಂದೆ ಸಿಕ್ಕಿದ್ದು, ಎಲ್ಲೆಲ್ಲೂ ಹಸಿರು ಸೀರೆಯನ್ನು ಉಟ್ಟ ಪರ್ವತ ಸಾಲುಗಳೇ. ಪ್ರಕೃತಿಯ ಹಸಿರ ಸೌಂದರ್ಯವನ್ನು ಆಸ್ವಾದಿಸುತ್ತಾ ಗುಡ್ಡದ ತುತ್ತತುದಿಯನ್ನು ತಲುಪಿದಾಗ ಸ್ವರ್ಗಕ್ಕೆ ಮೂರೇ ಗೇಣು. ಮೈಮನಗಳಲ್ಲಿ ನಿಜಾರ್ಥದಲ್ಲಿ ರೋಮಾಂಚನ ಉಂಟುಮಾಡುವಂಥ ಜಾಗ. ಸ್ವಲ್ಪ ಸಮಯ ಅಲ್ಲೇ ಕಾಲ ಕಳೆದು ವಾಪಸ್‌ ಹೊರಟೆವು. 

ಕೆಮ್ಮಣ್ಣುಗುಂಡಿಯಲ್ಲಿ ಪ್ರವಾಸಿಗರು ಉಳಿದುಕೊಳ್ಳಲು ಲಾಡ್ಜ್, ಹೋಮ್‌ಸ್ಟೇ, ಕಾಟೇಜ್‌ಗಳ ಸೌಕರ್ಯವಿದೆ. ಊಟ ಉಪಹಾರಕ್ಕೆ ಅಷ್ಟೇನೂ ಹೇಳಿಕೊಳ್ಳುವಂತಹ ಹೋಟೆಲ್‌ಗ‌ಳಿಲ್ಲದಿದ್ದರೂ ಹಸಿವು ಮರೆಸುವುದರಲ್ಲಿ ಸಂಶಯವಿಲ್ಲ. 

ಹೋಗುವುದು ಹೇಗೆ
ಬೆಂಗಳೂರಿನಿಂದ ಹೋಗುವುದಾದರೆ 275 ಕಿ.ುà., ಮೈಸೂರಿನಿಂದ 216 ಕಿ.ಮೀ. ಕೆಮ್ಮಣ್ಣುಗುಂಡಿುಂದ 04 ಕಿ.ಮೀ  ಸಾಗಿದರೆ ಸಿಗುತ್ತದೆ ಕಲ್ಲತ್ತಗಿರಿ ಜಲಪಾತಕ್ಕೆ ಖಾಸಗಿ ವಾಹನಗಳನ್ನು ಮಾಡಿಕೊಂಡು ಹೋದರೆ ಅನುಕೂಲ. 

ಲಕ್ಷ್ಮಿಕಾಂತ್‌ ಎಲ್‌.ವಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.