“ಸಸ್ಯ’ ಗಣಪತಿ! : ಬೆಳೆಯುವ ಸಿರಿ ಗಣೇಶನಲ್ಲಿ…


Team Udayavani, Sep 15, 2018, 12:58 PM IST

90.jpg

 ಗಣಪತಿ ಹೊಸ ಅವತಾರ ಎತ್ತಿದ್ದಾನೆ. ಅವನ ಹೆಸರು “ಸಸ್ಯ ಗಣಪತಿ’. ಇವನನ್ನು ವಿಸರ್ಜಿಸಿದರೆ ಗಿಡವಾಗುತ್ತಾನೆ. “ಸಸ್ಯ ಗಣಪತಿ’ಯ ರೂವಾರಿಗಳಾದ ಪುನೀತ್‌ ಮತ್ತು ವಿವೇಕ್‌ ಇಬ್ಬರಿಗೂ ಈ ಬಾರಿಯ ಗಣೇಶ ಚತುರ್ಥಿ ವಿಶೇಷವಾಗಿತ್ತು. ಏಕೆಂದರೆ…

ಗಣೇಶ ಚತುರ್ಥಿ ಮನೆ ಮಂದಿ, ಊರು ಕೇರಿಯವರನ್ನೆಲ್ಲಾ ಒಂದುಗೂಡಿಸುವ ಹಬ್ಬ. ಹಾಗೆಯೇ ಇದೀಗ ಅದು ಪರಿಸರಪ್ರೇಮಿಗಳನ್ನು ಒಂದುಗೂಡಿಸುವ ಹಬ್ಬವೂ ಹೌದು. ಗಣೇಶ ಹಬ್ಬವನ್ನು ಪರಿಸರಸ್ನೇಹಿಯನ್ನಾಗಿಸಲು ಶ್ರಮಿಸುವವರಲ್ಲಿಬ್ಬರು ಗೆಳೆಯರಾದ ಪುನೀತ್‌ ಮತ್ತು ವಿವೇಕ್‌. ಸಾಮಾನ್ಯವಾಗಿ ಬಾಲ ಗಣಪತಿ, ಸಿದ್ಧಿ ಗಣಪತಿ, ಉಚ್ಚಿಷ್ಟ ಗಣಪತಿ, ಲಕ್ಷ್ಮಿ ಗಣಪತಿ ಹೀಗೆ…ನಾನಾ ರೂಪ, ನಾನಾ ಹೆಸರುಗಳುಳ್ಳ ಗಣಪನನ್ನು ನೋಡಿರುತ್ತೀರಾ, ಇಲ್ಲವೇ ಕೇಳಿರುತ್ತೀರಾ. ಅದೇ ರೀತಿ ನಾಲ್ವರು ಗೆಳೆಯರು ಸೇರಿ ಪರಿಸರಸ್ನೇಹಿ ಗಣಪನನ್ನು ಜನರಿಗೆ ಒದಗಿಸುತ್ತಾ ಬಂದಿದ್ದಾರೆ. ಈ ಗಣಪನ ಹೆಸರು “ಸಸ್ಯ ಗಣಪತಿ’.

ಬದಲಾವಣೆಯ ಗಾಳಿ ಬೀಸಿದೆ
ಹಿಂದೆಲ್ಲಾ ರಾಸಾಯನಿಕಯುಕ್ತ ಗಣೇಶ ವಿಗ್ರಹಗಳ ಬಗ್ಗೆ ಹೆಚ್ಚಿನ ಒಲವನ್ನು ಗ್ರಾಹಕರು ಹೊಂದಿದ್ದರು. ಅಲಂಕಾರ ಮತ್ತು ಬಣ್ಣಗಳಿಂದಾಗಿ ಚೆನ್ನಾಗಿ ಕಾಣುತ್ತದೆ ಎನ್ನುವುದು ಹೆಚ್ಚಿನವರ ಅನಿಸಿಕೆಯಾಗಿತ್ತು. ಹಾಗಾಗಿ ಮಣ್ಣಿನ ಗಣಪತಿಯನ್ನು ಕೊಳ್ಳುವವರ ಸಂಖ್ಯೆ ಕಡಿಮೆಯಿತ್ತು. ಆದರೆ ಬದಲಾವಣೆಯ ಗಾಳಿ ಬೀಸುತ್ತಿದೆ. ಸಸ್ಯ ಗಣಪತಿಯನ್ನು ಕಳೆದೆರಡು ವರ್ಷಗಳಿಂದ ಜನರಿಗೆ ಒದಗಿಸುತ್ತಿರುವ ಪುನೀತ್‌ರನ್ನು ಕೇಳಿದರೆ ಇದು ಸ್ಪಷ್ಟವಾಗುತ್ತದೆ. ಕಳೆದ ವರ್ಷ 700 ಮಂದಿ ಸಸ್ಯ ಗಣಪತಿಯನ್ನು ಕೊಂಡಿದ್ದರು. ಅದೇ ಈ ವರ್ಷ 1000 ಮಂದಿ ಬೆಂಗಳೂರಿಗರು ಸಸ್ಯ ಗಣಪತಿಯನ್ನು ತಮ್ಮ ಮನೆಗಳಿಗೆ ಕೊಂಡೊಯ್ದಿದ್ದಾರೆ. ಸಸ್ಯ ಗಣಪತಿಯ ಖ್ಯಾತಿ ಹೊರರಾಜ್ಯಗಳಿಗೂ ತಲುಪಿದೆ. ದೆಹಲಿ, ಹರಿಯಾಣ ಮುಂತಾದೆಡೆಗಳಿಂದ ಕರೆಗಳು ಬಂದಿರುವುದು ಅದಕ್ಕೆ ಸಾಕ್ಷಿ. ಹೀಗಾಗಿ ಮುಂದಿನ ವರ್ಷ ಮಿಕ್ಕ ರಾಜ್ಯಗಳ ಗ್ರಾಹಕರಿಗೂ ಸಸ್ಯ ಗಣಪತಿಯನ್ನು ತಲುಪಿಸುವ ಯೋಜನೆಯನ್ನು ಇಬ್ಬರೂ ಗೆಳೆಯರು ಹೊಂದಿದ್ದಾರೆ. 

15 ದಿನಗಳ ಪ್ರಾಜೆಕ್ಟ್
ಎಲೆಕ್ಟ್ರಾನಿಕ್ಸ್‌ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಪುನೀತ್‌ ಮತ್ತು ವಿವೇಕ್‌ ಗಣೇಶ ಚತುರ್ಥಿಯ ಸಮಯದಲ್ಲಿ 15 ದಿವಸ ಕೆಲಸದಿಂದ ಬಿಡುವು ತೆಗೆದುಕೊಳ್ಳುತ್ತಾರೆ. ಸಸ್ಯ ಗಣಪತಿಯ ಪ್ರಾಜೆಕ್ಟ್‌ನಲ್ಲಿ ಬಿಜಿಯಾಗುತ್ತಾರೆ. ಆರ್ಡರ್‌ ತೆಗೆದುಕೊಳ್ಳುವುದು, ಗಣಪತಿಯನ್ನು ಸುರಕ್ಷಿತವಾಗಿ ಪ್ಯಾಕ್‌ ಮಾಡುವುದು. ಹೀಗೆ ಎಲ್ಲಾ ಕೆಲಸಗಳನ್ನೂ ಹಂಚಿಕೊಳ್ಳುತ್ತಾರೆ. ಗ್ರಾಹಕರ ಒತ್ತಾಯದ ಮೇರೆಗೆ ಈ ಬಾರಿ ಸಸ್ಯ ಗಣಪನ ಎತ್ತರವನ್ನು 12 ರಿಂದ 15 ಇಂಚುಗಳವರೆಗೆ ಹೆಚ್ಚಿಸಿದ್ದರು. “ಎನ್‌.ಜಿ.ಒ ಅಥವಾ ಯಾವುದೇ ಸಂಸ್ಥೆ ತಮ್ಮ ಜೊತೆ ಕೈಜೋಡಿಸಲು ಮುಂದೆ ಬಂದರೆ, ಸಹಕರಿಸಲು ಸಿದ್ಧ’ ಎನ್ನುತ್ತಾರೆ ವಿವೇಕ್‌. 

ಏನಿದು ಸಸ್ಯ ಗಣಪತಿ?
ಕಿಟ್‌ನಲ್ಲಿ ದೊರೆಯುವ ಸಸ್ಯಗಣಪತಿಯ ಜೊತೆಗೆ, ಗೊಬ್ಬರದ ಇಟ್ಟಿಗೆ, ಗಣಪತಿಯನ್ನು ವಿಸರ್ಜಿಸಲು ಕುಂಡ ಮತ್ತು ಬೆಂಡೆ, ಟೊಮೇಟೊ, ತುಳಸಿ ಬೀಜಗಳ ಪ್ಯಾಕೆಟ್‌ ಇರುತ್ತವೆ. ಗಣಪನ ವಿಗ್ರಹವನ್ನು ವಿಶೇಷವಾಗಿ ತಯಾರಿಸಲಾಗಿದೆ. ಕುಂಡದಲ್ಲಿ ವಿಸರ್ಜಿಸಿದ 2- 3 ಗಂಟೆಗಳಲ್ಲೇ ಮಣ್ಣು ಕರಗಿ ತಳ ಸೇರುತ್ತದೆ. ನಂತರ ಇಟ್ಟಿಗೆ ಗೊಬ್ಬರವನ್ನು ಮೇಲಕ್ಕೆ ಇಡಬೇಕು. ಈ ಎರಡು ಲೇಯರ್‌ಗಳ ಮೇಲೆ ಬೀಜವನ್ನು ಹಾಕಬೇಕು. ಕೆಲವೇ ದಿನಗಳಲ್ಲಿ ಬೀಜ ಮೊಳಕೆಯೊಡೆದು ಗಣೇಶ ಸಸಿಯ ರೂಪದಲ್ಲಿ ಮನೆಯಲ್ಲೇ ನೆಲೆಸುತ್ತಾನೆ.

ಕಳೆದ ವರ್ಷಕ್ಕಿಂತ ಈ ಬಾರಿ ಜನರಿಂದ ಒಳ್ಳೆಯ ರೆಸ್ಪಾನ್ಸ್‌ ಸಿಕ್ಕಿದೆ. ಅನೇಕರು ಕರೆ ಮಾಡಿ ತುಂಬಾ ಒಳ್ಳೆ ಕೆಲಸ ಮಾಡುತ್ತಿದ್ದೀರಾ ಅಂತ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಅದನ್ನೆಲ್ಲಾ ನೋಡಿದಾಗ ಖುಷಿಯಾಗುತ್ತೆ. ನಾವು ಲಾಭಕ್ಕಾಗಿ ಈ ಕೆಲಸವನ್ನು ಮಾಡುತ್ತಿಲ್ಲ. ಬಂದ ಅಷ್ಟಿಷ್ಟು ಲಾಭವನ್ನೂ ಈ ಪ್ರಾಜೆಕ್ಟ್ಗೇ ಹಾಕುತ್ತಿದ್ದೇವೆ. ಜನರಲ್ಲಿ ಪರಿಸರ ಕಾಳಜಿ ಬೆಳೆಯುವಂತೆ ಮಾಡಬೇಕು ಎಂಬುದೇ ನಮ್ಮ ಉದ್ದೇಶ.
– ಪುನೀತ್‌, ಸಸ್ಯ ಗಣಪತಿ ತಂಡದ ಸದಸ್ಯ 

– ಹವನ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.