ರಸ್ತೆ ನಕ್ಷತ್ರಗಳು


Team Udayavani, Sep 29, 2018, 11:54 AM IST

4.jpg

 ದಿಯಾ ಘರ್‌! ಅದು ಕಟ್ಟಡ ಕೂಲಿ ಕಾರ್ಮಿಕರ ಮಕ್ಕಳಿಗಾಗಿಯೇ ತೆರೆದುಕೊಂಡಿರುವ, ಮಾಂಟೆಸೊÕರಿ ಮಾದರಿಯ ಪುಟ್ಟ ಶಾಲೆ. ಅಲ್ಲಿಗೆ ಬಂದ ಮಕ್ಕಳಿಗೆ ಮೊದಲು ಜಳಕಾಭಿಷೇಕ. ಎಲ್ಲರಿಗೂ ಯೂನಿಫಾರಂ ಕೊಟ್ಟು, ತಲೆಬಾಚಿ, ಜಡೆ ಹಾಕಿ, ಅಲಂಕಾರ ಮಾಡಿ, ಕನ್ನಡಿಯೆದುರು ನಿಲ್ಲಿಸಿದಾಗ, ಅವರ ಅಂದವನ್ನು ಕಂಡು ಅಲ್ಲಿನ ಟೀಚರ್‌ಗಳಿಗೆ ದೃಷ್ಟಿ ತೆಗೆಯಬೇಕೆನಿಸುತ್ತೆ…

ಬೆಳಗ್ಗೆ ಸರಿಯಾಗಿ ಗಂಟೆ 8.30. ಎಲ್ಲ ಮಕ್ಕಳು ಕಾನ್ವೆಂಟಿಗೆ ಹೊರಡುವ ಟೈಮು. ಅದೇ ಹೊತ್ತಿನಲ್ಲಿ ಸಿಲ್ವರ್‌ ಕಲರಿನ ಓಮ್ನಿಯೊಂದು ಬೆಂಗಳೂರಿನ ಹೊರಮಾವಿನ ರಸ್ತೆಯ ಗಲ್ಲಿಗಳಲ್ಲಿ ನುಗ್ಗುತ್ತಿರುತ್ತದೆ. ಅದು ಕೂಡ ಸ್ಕೂಲ್‌ ವ್ಯಾನ್‌. ಆದರೆ, ಅದು ಬ್ರೇಕ್‌ ಒತ್ತಿ ನಿಲ್ಲುವುದು ಗೇಟಿನ ಮುಂದೆ ಟೈ ಕಟ್ಟಿ, ಶೂ ಬಿಗಿದು, ಟಿಪ್‌ಟಾಪ್‌ ಆಗಿ ಹೊರಟು ನಿಂತ, ಅಮ್ಮನಿಗೆ ಪಪ್ಪಿ ಕೊಟ್ಟು ಹೊರಡುವ ಸಿರಿವಂತರ ಮಕ್ಕಳ ಮನೆ ಮುಂದೆ ಅಲ್ಲ. ಅದರ ನಿಲ್ದಾಣಗಳೇ ಬೇರೆ. ಜಲ್ಲಿ, ಗಾರೆಗಳಿಂದ ಕಟ್ಟಲ್ಪಡುತ್ತಿರುವ ಕಟ್ಟಡಗಳು, ಎಲ್ಲೋ ಮೂಲೆಯಲ್ಲಿ ಕೊಳಚೆಯ ನಡುವೆ ಟೆಂಟ್‌ ಹಾಕಿ ಕುಳಿತ ಅಲೆಮಾರಿಗಳ ಗುಡಿಸಲಿನ ಮುಂದೆ ಹೋಗಿ ಆ ವ್ಯಾನ್‌ ಗಕ್ಕನೆ ಬ್ರೇಕ್‌ ಒತ್ತಿ, “ಕೀಂಕ್‌’ ಎನ್ನುತ್ತದೆ.  

ಆ ಸದ್ದು ಕಿವಿಗೆ ಬಿದ್ದ ಕೂಡಲೇ ಕಲ್ಲು, ಮರಳಿನಲ್ಲಿ ಅರೆಬರೆ ಬಟ್ಟೆ ಧರಿಸಿ ಆಡುತ್ತಿರುವ ಮಕ್ಕಳು ಕೇಕೆ ಹಾಕುತ್ತಾ ಓಡೋಡಿ ಬರುತ್ತವೆ. ಅವುಗಳಿಗೆ ಪಪ್ಪಿ ಕೊಟ್ಟು, ಬಾಯ್‌ ಹೇಳಲು ಅಲ್ಲಿ ಅಮ್ಮಂದಿರಾಗಲೀ, ಅಪ್ಪಂದಿರಾಗಲೀ ಇರುವುದಿಲ್ಲ. ಅವರೆಲ್ಲ ಅದಾಗಲೇ ಖಾಲಿ ಹೊಟ್ಟೆಯಲ್ಲಿ ಕೂಲಿ ಮಾಡಲು ಹೋಗಿರುತ್ತಾರೆ. ಒಂದೊಂದು ಅವತಾರದಲ್ಲಿರುವ ಆ ಮಕ್ಕಳು, ಓಮ್ನಿಯಲ್ಲಿ ಶಿಸ್ತಾಗಿ ಕುಳಿತ ಮೇಲೆ, ಅದು ಅವರನ್ನೆಲ್ಲ ಕರೆದೊಯ್ಯುವುದು “ದಿಯಾ ಘರ್‌’ಗೆ.

  ದಿಯಾ ಘರ್‌! ಅದು ಕಟ್ಟಡ ಕೂಲಿ ಕಾರ್ಮಿಕರ ಮಕ್ಕಳಿಗಾಗಿಯೇ ತೆರೆದುಕೊಂಡಿರುವ, ಮಾಂಟೆಸೊÕರಿ ಮಾದರಿಯ ಪುಟ್ಟ ಶಾಲೆ. ಅಲ್ಲಿಗೆ ಬಂದ ಮಕ್ಕಳಿಗೆ ಮೊದಲು ಜಳಕಾಭಿಷೇಕ. ಎಲ್ಲರಿಗೂ ಯೂನಿಫಾರಂ ಕೊಟ್ಟು, ತಲೆಬಾಚಿ, ಜಡೆ ಹಾಕಿ, ಅಲಂಕಾರ ಮಾಡಿ, ಕನ್ನಡಿಯೆದುರು ನಿಲ್ಲಿಸಿದಾಗ, ಅವರ ಅಂದವನ್ನು ಕಂಡು ಅಲ್ಲಿನ ಟೀಚರ್‌ಗಳಿಗೆ ದೃಷ್ಟಿ ತೆಗೆಯಬೇಕೆನಿಸುತ್ತೆ. ಹಸಿದ ಕಂದಮ್ಮಗಳಿಗೆ ಉಪಾಹಾರ ಕೊಟ್ಟು, ಅಆಇಈ, ಎಬಿಸಿಡಿ ಕಲಿಯುವ ಪ್ರಕ್ರಿಯೆಗಳು ಶುರುವಾಗುತ್ತವೆ. 

  ಬೆಂಗಳೂರು ನೋಡಲು ಬಲು ಚೆಂದ. ಇಲ್ಲಿ ಗಗನಚುಂಬಿ ಕಟ್ಟಡಗಳ ಗತ್ತಿದೆ. ಲಕ್ಷುರಿ ಅಪಾರ್ಟ್‌ಮೆಂಟುಗಳು, ಚಿತ್ತಾಕರ್ಷಕ ಮನೆಗಳ ಚರಿಷ್ಮಾವಿದೆ. ಆದರೆ, ಬೆಂಗಳೂರಿನ ರೂಪಸಿರಿಯನ್ನು ಹೀಗೆಲ್ಲ ಬದಲಿಸಿದ, ಕಟ್ಟಡ ಕಾರ್ಮಿಕರ ಅಲೆಮಾರಿ ಬದುಕಿಗೆ ಚೆಂದದ ರೂಪವೇ ಸಿಕ್ಕಿಲ್ಲ. ಹಾಗೆ ವಲಸೆ ಬರುವವರಲ್ಲಿ ಅನೇಕರು ಉತ್ತರ ಕರ್ನಾಟಕದ ಕೂಲಿ ಕಾರ್ಮಿಕರೇ ಹೆಚ್ಚು. ಇಲ್ಲಿ ಅವರಿಗೊಂದು ವಿಳಾಸವಿಲ್ಲ. ಗುಡಿಸಲೋ, ಕಟ್ಟಲ್ಪಡುತ್ತಿರುವ ಕಟ್ಟಡಗಳಲ್ಲೋ ತಾತ್ಕಾಲಿಕ ನೆಲೆಯಷ್ಟೇ. ಬೆಳಗ್ಗೆ ಆರಾದರೆ, ಮೇಸ್ತ್ರಿ ಬಂದು ಎಬ್ಬಿಸುತ್ತಾನೆ. ಮಕ್ಕಳನ್ನು ಉಪವಾಸ ಉಳಿಸಿಯೋ, ಜತೆಗೇ ಕಟ್ಟಿಕೊಂಡೋ ಹೊರಟರೆ, ಮತ್ತೆ ಗುಡಿಸಲಿಗೆ ಬರುವುದು ಕೆಂಪುದೀಪಗಳು ಉರಿಯುವ ಹೊತ್ತಿಗೆ. ಮುಂದೆ ಅಕ್ಷರ ಕಲಿಯದ ಆ ಮಕ್ಕಳೂ ತಮ್ಮ ಕುಲಕಸುಬಿಗೇ ಜೋತು ಬೀಳುತ್ತವೆ. ಈ ಅಪಾಯವನ್ನು ತಪ್ಪಿಸಲೆಂದೇ, ಅವರನ್ನು ಅಕ್ಷರಸ್ಥರನ್ನಾಗಿಸಲೆಂದೇ “ದಿಯಾ ಘರ್‌’ ಶಾಲೆ ಹುಟ್ಟಿಕೊಂಡಿದೆ. ಇದು ಸರಸ್ವತಿ ಪದ್ಮನಾಭನ್‌ ಮತ್ತು ಅವರ ಪತಿ ಶ್ಯಾಮಲ್‌ ಕುಮಾರ್‌ ಅವರ ಸೃಷ್ಟಿ.

ಆ ಮೂವರು ಪುಟಾಣಿಗಳೇ ಪ್ರೇರಣೆ
ಅದು ರಾಮಮೂರ್ತಿ ನಗರದಲ್ಲಿ ಕಂಡಂಥ ರಾಯಚೂರಿನಿಂದ ವಲಸೆ ಬಂದಂಥ ಅಲೆಮಾರಿ ಮಕ್ಕಳ ದೃಶ್ಯ. ಅಲ್ಲಿ ಅಪ್ಪ- ಅಮ್ಮ ಇದ್ದಿರಲಿಲ್ಲ. ಶ್ವೇತಾ, ವೀರೇಶ್‌ ಮತ್ತು ಗಾಯತ್ರಿ ಮೂವರು ಪುಟಾಣಿಗಳು ಮರಳಿನ ರಾಶಿ ಮೇಲೆ ಉರುಳಾಡುತ್ತಿದ್ದರು. ಅಲ್ಲಿ ತಮ್ಮ ಮತ್ತು ತಂಗಿಯನ್ನು ಜತನದಿಂದ ಕಾಯುತ್ತಿದ್ದವಳು ಶ್ವೇತಾ ಎಂಬ ನಾಲ್ಕೂವರೆ ವರುಷದ ಬಾಲೆ. ವೀರೇಶನಿಗೆ 3 ವರುಷ, ಗಾಯತ್ರಿಗೆ ಇನ್ನೂ ಒಂದೇ ವರುಷ. ಮುದ್ದುಮುದ್ದಾಗಿ, ನೋಡಲೂ ಆರೋಗ್ಯವಾಗಿಯೇ ಕಾಣಿಸುತ್ತಿದ್ದ ಈ ಮೂವರು ಪುಟಾಣಿಗಳೆದುರು, ಕಾನ್ವೆಂಟಿಗೆ ಹೊರಟಿದ್ದಂಥ ಸಿರಿವಂತರ ಮಕ್ಕಳು ವ್ಯಾನ್‌ಗಾಗಿ ಕಾಯುತ್ತಿದ್ದರು… ಈ ದೃಶ್ಯವನ್ನು ಕಂಡ ಸರಸ್ವತಿ ದಂಪತಿಯ ಮನ ಕರಗಿತಂತೆ. ತಡಮಾಡಲಿಲ್ಲ. ಆ ಮೂವರು ಮಕ್ಕಳನ್ನು ಇಟ್ಟುಕೊಂಡೇ “ದಿಯಾ ಘರ್‌’ ಶಾಲೆ ಆರಂಭಿಸಿದರು, ಸರಸ್ವತಿ. 3 ವರ್ಷದಿಂದ ನಡೆಯುತ್ತಿರುವ ಈ ಶಾಲೆಯಲ್ಲಿ ಕಲಿಯುತ್ತಿರುವುದು 60 ಮಕ್ಕಳು. ಅವೆಲ್ಲವೂ 6 ವರುಷದೊಳಗಿನ ಪುಟಾಣಿಗಳು.

ಬೀದಿಯಲ್ಲಿದ್ದಾರೆ, 4 ಲಕ್ಷ ಮಕ್ಕಳು!
“ಬೇರೆ ಊರಿನಿಂದ ಬಂದು, ಇಲ್ಲಿ ಕಟ್ಟಡ ಕಟ್ಟುವ ಕೆಲಸದಲ್ಲಿ ನಿರತರಾದವರ ಮಕ್ಕಳ ಸಂಖ್ಯೆಯೇ ಬರೋಬ್ಬರಿ 4 ಲಕ್ಷ ಇದೆ. ಇದರಲ್ಲಿ ರಾಯಚೂರು, ಗುಲ್ಬರ್ಗ, ಬೀದರ್‌ನಿಂದ ವಲಸೆ ಬಂದಂಥ ಕಂದಮ್ಮಗಳೇ ಬಹುಪಾಲು. ಇವರೆಲ್ಲರ ಭವಿಷ್ಯ ಚಿಂತಾಜನಕವಾಗಿದೆ’ ಎನ್ನುವುದು ಸರಸ್ವತಿ ಅವರ ಕಳವಳ. ಈ ಮಕ್ಕಳು ಆಡುವುದನ್ನು ಹಾದಿಬೀದಿಯಲ್ಲಿ ಹೋಗುವ ರಾಜಕಾರಣಿಗಳು, ಧನಿಕರು ನೋಡುತ್ತಿರುತ್ತಾರೆ. ಎಷ್ಟೋ ಸಲ ಆ ಕಟ್ಟಡಗಳ ಗೃಹಪ್ರವೇಶವಿದ್ದಾಗಲೂ, ಅದಕ್ಕಾಗಿ ದುಡಿದ ಕಾರ್ಮಿಕರಿಗೆ, ಅವರ ಮಕ್ಕಳಿಗೆ ಕರೆದು ಊಟ ಹಾಕುವ ಮಾನವೀಯತೆಯನ್ನು ಶ್ರೀಮಂತರು ತೋರುವುದಿಲ್ಲ ಎನ್ನುವ ಬೇಸರವೂ ಇವರದ್ದು.

 ಈ ಶಾಲೆಯಲ್ಲಿ ಅಕ್ಷರಾಭ್ಯಾಸ ನಡೆಯುತ್ತೆ. ಮಾಂಟೆಸೊÕರಿ ಕಲಿಸುವಂಥ ಆಟಗಳು, ಚಟುವಟಿಕೆಗಳನ್ನೂ ಇಲ್ಲೂ ಹೇಳಿಕೊಡುತ್ತಾರೆ. ಚೆಂದದ ಕತೆಗಳು ಮಕ್ಕಳ ಮನಸ್ಸನ್ನು ಅರಳಿಸುತ್ತವೆ. ಹೊತ್ತು ಹೊತ್ತಿಗೆ ಹಣ್ಣು- ಹಂಪಲು ಕೊಡುತ್ತಾರೆ. ಮಧ್ಯಾಹ್ನದ ವೇಳೆಗೆ ಯುವಲೋಕ ಫೌಂಡೇಶನ್‌ ಎಂಬ ಎನ್‌ಜಿಒದಿಂದ ಈ ಮಕ್ಕಳಿಗೆ ಬಿಸಿಯೂಟ ಹಾಕುತ್ತಾರೆ. ಸಂಜೆ ಇವರೆಲ್ಲರೂ ಹೊರಡುವಾಗ, ಹಾಲು- ಬಿಸ್ಕತ್ತನ್ನು ಕೊಡುತ್ತಾರೆ.
  ಅಪ್ಪ- ಅಮ್ಮ ಕಲ್ಲು- ಮಣ್ಣು ಹೊತ್ತು ಸುಸ್ತಾಗಿ, ಬರುವ ಹೊತ್ತಿಗೆ ಈ ಮಕ್ಕಳು ನಗುತ್ತಾ, “ಅಮ್ಮಾ ಟಿಂಕಲ್‌ ಟಿಂಕಲ್‌ ಹೇಳ್ಲಾ ?’ ಅಂತ ಕೇಳುತ್ತಾರೆ. ಹಾಗೆಂದರೇನೆಂದು ಅಪ್ಪ- ಅಮ್ಮನಿಗೆ ಅರ್ಥವಾಗುವುದಿಲ್ಲ. ಆಗ ಆ ಮಕ್ಕಳು, ಮೇಲಿನ ಆಗಸದಲ್ಲಿ ಹೊಳೆಯುವ ನಕ್ಷತ್ರಗಳತ್ತ ಬೆರಳು ತೋರುತ್ತವೆ..! ಆ ಬೆಳಕೇ “ದಿಯಾ ಘರ್‌’ನ ಸಾರ್ಥಕತೆ.

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ನೀಡಲೆಂದೇ ದಿಯಾ ಘರ್‌ ಹುಟ್ಟಿಕೊಂಡಿತು. ಇಲ್ಲಿ ನಾಲ್ವರು ಶಿಕ್ಷಕರು, ಪಾಠ ಹೇಳುತ್ತಾರೆ.


– ಸರಸ್ವತಿ ಪದ್ಮನಾಭನ್‌, “ದಿಯಾ ಘರ್‌’ ಸ್ಥಾಪಕಿ

http://www.diyaghar.org

– ಕೀರ್ತಿ

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.