ಮೀರಾರೋಡ್ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯಲ್ಲಿ ದೀಪಾವಳಿ
Team Udayavani, Nov 10, 2018, 5:09 PM IST
ಮುಂಬಯಿ: ಕತ್ತಲೆ ಎಂಬ ಋಣಾತ್ಮಕ ಚಿಂತನೆಗಳನ್ನು ದೂರಗೊಳಿಸಿ ಬೆಳಕೆಂಬ ಧನಾತ್ಮಕ ಚಿಂತನೆಯನ್ನು ಅನುಷ್ಠಾನಗೊ ಳಿಸುವುದು ದೀಪಾವಳಿ ಹಬ್ಬದ ವೈಶಿಷ್ಟÂವಾಗಿದೆ. ಅಧ್ಯಾತ್ಮಿಕ ತಳಹದಿ ಹೊಂದಿರುವ ಪ್ರತಿಯೊಂದು ಹಬ್ಬಗಳು ಚದುರಿದ ಕುಟುಂಬ ಸದಸ್ಯರನ್ನು ಒಗ್ಗೂಡಿಸುವ ಮಾಧ್ಯ ಮವಾಗಿದೆ ಎಂದು ಪಲಿಮಾರು ಮಠದ ಪ್ರಬಂಧಕ ಟ್ರಸ್ಟಿ, ವಿದ್ವಾನ್ ರಾಧಾಕೃಷ್ಣ ಭಟ್ ಅವರು ನುಡಿದರು.
ನ. 7 ರಂದು ಸಂಜೆ ಮೀರಾರೋಡ್ ಪೂರ್ವದ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯಲ್ಲಿ ನಡೆದ ಬಲೀಂದ್ರ ಪೂಜೆ, ಲಕ್ಷಿ¾à ಪೂಜೆ, ದೀಪಾವಳಿ ಆಚಾರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸುಜ್ಞಾನದ ಜ್ಯೋತಿಯಂತಿರುವ ದೀಪಾವಳಿ ಹಬ್ಬ ಹೃದಯ ಮತ್ತು ಮನಸ್ಸುಗಳನ್ನು ಒಗ್ಗೂಡಿಸುವಂತಾಗಬೇಕು. ಕೃಷಿ ಪ್ರಧಾನ ತುಳುನಾಡಿನಲ್ಲಿ ಬಲೀಂದ್ರನ ಪೂಜೆ, ಗೋಪೂಜೆ, ಧನಲಕ್ಷ್ಮೀ ಪೂಜೆ, ತುಳಸಿ ಪೂಜೆಗಳು ವಿಶಿಷ್ಟ ಪರಂಪರೆಯೊಂದಿಗೆ ಈಗಲೂ ಮುಂದುವರಿದಿದೆ ಎಂದರು.
ಉಡುಪಿ ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಇಚ್ಛೆ, ಸಲಹೆ, ಸೂಚನೆ ಹಾಗೂ ಆಶೀರ್ವಾ ದಗಳೊಂದಿಗೆ ತುಳಸಿ ಪೂಜೆಯವರೆಗೆ ಶ್ರೀ ಬಾ ಲಾಜಿ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋ ಜಿಸಲಾಗಿದೆ. ಭಕ್ತಾಭಿಮಾನಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ಅವರು ವಿನಂತಿಸಿದರು.
ಇದೇ ಸಂದರ್ಭದಲ್ಲಿ ಮಠದ ಆವರಣದಲ್ಲಿರುವ ತುಳಸಿ ಕಟ್ಟೆಗೆ ಪೂಜೆ ಸಲ್ಲಿಸಿ ಬಲೀಂದ್ರನ ಸ್ಮರಣೆಗೈದರು. ಆನಂತರ ಶ್ರೀನಿವಾಸ ದೇವರಿಗೆ, ಪರಿವಾರ ದೇವರಾದ ಶ್ರೀ ಆಂಜನೇಯ, ಶ್ರೀ ಪದ್ಮಾಂಬಿಕೆ, ಶ್ರೀ ಪರಮೇಶ್ವರ, ಶ್ರೀ ನಾಗದೇವರು ಹಾಗೂ ನವಗ್ರಹಗಳಿಗೆ, ಶ್ರೀ ಶನಿದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಟ್ರಸ್ಟಿ ಸಚ್ಚಿದಾನಂದ ರಾವ್. ಗಣೇಶ್ ಭಟ್ ಸಹಕರಿಸಿದರು. ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು. ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾದರು.
ಚಿತ್ರ-ವರದಿ : ರಮೇಶ್ ಅಮೀನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ