ಲಕ್ಷ್ಮೀ ದೇವಿ ಎಲ್ಲಿ ನೆಲೆಸುತ್ತಾಳೆ?


Team Udayavani, Nov 17, 2018, 5:30 AM IST

98.jpg

ಈ ಸಂಪತ್ತಿನ ಪ್ರತಿರೂಪವೇ ಲಕ್ಷ್ಮೀದೇವಿ. ಹಾಗಾಗಿಯೇ, ಲಕ್ಷ್ಮೀಯ ಕೃಪಾಕಟಾಕ್ಷವೊಂದಿದ್ದರೆ ಸಾಕು ಎಂಬುದು ಎಲ್ಲರ ಅಭಿಲಾಷೆ; ಪ್ರಾರ್ಥನೆ ಕೂಡ. ಎಲ್ಲಿ ಲಕ್ಷ್ಮೀ ನೆಲೆಸಿ¨ªಾಳ್ಳೋ ಅಲ್ಲಿ ದಾರಿದ್ರ್ಯ ಉಂಟಾಗುವುದಿಲ್ಲ. ವಿದ್ಯೆ, ಧನ, ಧಾನ್ಯ, ಸಂಪತ್ತು, ಆರೋಗ್ಯ ಮತ್ತು ಐಶ್ವರ್ಯ ಪ್ರಾಪ್ತಿಗೆ ಲಕ್ಷ್ಮೀ ಕಾರಣಳು. 

ಎಲ್ಲಿ ಧರ್ಮವು ರಕ್ಷಿಸಲ್ಪಡುತ್ತದೋ ಅಲ್ಲಿ ದೇವರು ನೆಲೆಗೊಳ್ಳುತ್ತಾನೆ ಮತ್ತು ಅವನು ನಮ್ಮನ್ನು ರಕ್ಷಿಸುತ್ತಾನೆ. ದೇವರು ಎಂಬುದು ಸನ್ಮಾರ್ಗದ ನಂಬಿಕೆ, ನಡವಳಿಕೆ. ಧರ್ಮದ ಹಾದಿಯಲ್ಲಿ ದೇವರು ಎಂಬ ಶಕ್ತಿಯು ಸದಾ ಉಚ್ಚರಿಸಲ್ಪಡುತ್ತಲೇ ಇರುತ್ತದೆ. ಕಾರಣ, ನಾವು ಏನನ್ನು ನಂಬುವುದಕ್ಕೂ ನಮಗೆ ಕಾರಣಗಳು ಬೇಕು. ಹಾಗೆಂದು, ಸಕಾರಣವನ್ನು ಹುಡುಕುತ್ತಲೇ ಬದುಕಿನ ಸಮಯವನ್ನು ವ್ಯರ್ಥಮಾಡುವುದರಲ್ಲೂ ಅರ್ಥವಿಲ್ಲ. ಈ ಆಧ್ಯಾತ್ಮದ 
ಅಥವಾ ಧರ್ಮದ ವಿಶೇಷವೆಂದರೆ, ಕಾರಣವನ್ನು ಹುಡುಕದೇ ಧರ್ಮವನ್ನು ನಂಬುತ್ತ ಹೋದರೆ ಕಾರಣಗಳು 
ಕಣ್ಣೆದುರಿಗೇ ಬಂದು ನಿಲ್ಲುತ್ತವೆ! ಇದನ್ನು ಮೊದಲು ಅರಿಯಬೇಕು.

ಕಾಲ ಬದಲಾದಂತೆ, ಬದುಕಿನ ರೀತಿಗಳೂ ಬದಲಾಗಿವೆ. ಕಾಡಿನ ಗೆಡ್ಡೆ ಗೆಣಸುಗಳನ್ನು ತಿಂದು ಬದುಕುತ್ತಿದ್ದ ಮಾನವ ಆಮೇಲೆ ಪರಸ್ಪರ ವಸ್ತುಗಳನ್ನು ಬದಲಾಯಿಸಿಕೊಂಡು ಬದುಕುವ ತನಕ ಬೆಳವಣಿಗೆ ಹೊಂದಿ, ಈಗ ಪರಸ್ಪರ ಬದಲಾಯಿಸಲ್ಪಡುತ್ತಿದ್ದ ವಸ್ತುಗಳು, ಈಗ ಹಣದ ರೂಪಕ್ಕೆ ರೂಪಾಂತರ ಹೊಂದಿದೆ. ಈ ರೂಪಾಂತರದಿಂದ ಪರಾವಲಂಬಿತನವು ಗೋಚರದಿಂದ ಅಗೋಚರ ರೂಪಕ್ಕೆ ಪರಿವರ್ತಿತವಾಗಿದೆ.  ಸಂಪತ್ತು ಎಂದು ಕರೆಸಿಕೊಳ್ಳುತ್ತಿದ್ದ ವಸ್ತುಗಳೆಲ್ಲವೂ ಕಾಣದಾಗಿ ಈಗ ಕೇವಲ ಹಣ ಮಾತ್ರ ಸಂಪತ್ತೆನಿಸಿದೆ. ಹಣವಿದ್ದರೆ ಮಾತ್ರ ಬದುಕು; ಇಲ್ಲವೆಂದರೆ ಭೂಲೋಕವೂ ನರಕವೇ!

ಈ ಸಂಪತ್ತಿನ ಪ್ರತಿರೂಪವೇ ಲಕ್ಷ್ಮೀದೇವಿ. ಹಾಗಾಗಿಯೇ, ಲಕ್ಷಿ$¾ಯ ಕೃಪಾಕಟಾಕ್ಷವೊಂದಿದ್ದರೆ ಸಾಕು ಎಂಬುದು ಎಲ್ಲರ ಅಭಿಲಾಷೆ; ಪ್ರಾರ್ಥನೆ ಕೂಡ. ಎಲ್ಲಿ ಲಕ್ಷಿ$¾à ನೆಲೆಸಿ¨ªಾಳ್ಳೋ ಅಲ್ಲಿ ದಾರಿದ್ರ್ಯ ಉಂಟಾಗುವುದಿಲ್ಲ. ವಿದ್ಯೆ, ಧನ, ಧಾನ್ಯ, ಸಂಪತ್ತು, ಆರೋಗ್ಯ ಮತ್ತು ಐಶ್ವರ್ಯ ಪ್ರಾಪ್ತಿಗೆ ಲಕ್ಷಿ$¾ ಕಾರಣಳು. ಲಕ್ಷ್ಮೀಯು ಬ್ರಹ್ಮನ ಮಾನಸಪುತ್ರ ಭೃಗುಮಹರ್ಷಿ ಮತ್ತು ಖ್ಯಾತಿ ದಂಪತಿಗಳ ಸುಪುತ್ರಿ. ಮುಂದೆ ತನಗೆ ಯೋಗ್ಯವಾದ ವರನು ಯಾರು ಎಂದು ಹುಡುಕುತ್ತ, ವಿಷ್ಣುವೇ ಯೋಗ್ಯ ಎಂದು ತಿಳಿದು ಆತನ ಪತ್ನಿಯಾದಳು. ವಿಷ್ಣುವಿನ ವಕ್ಷಸ್ಥಲದಲ್ಲಿ ಕಮಲಾಸನಳಾಗಿ, ಪದ್ಮನೇತ್ರೆಯಾಗಿ, ಪದ್ಮಹಸ್ತೆಯಾಗಿ, ಕಮಲಮುಖೀಯಾಗಿ, ಸಂಪತ್ತು, ವಿದ್ಯೆ, ಯಜ್ಞ, ಮಂತ್ರ ಮತ್ತು ಶ್ರದ್ಧೆಗಳಿಗೆ ಸಾಕಾರರೂಪಳಾಗಿ ಇರುವವಳೇ ಈ ಲಕ್ಷ್ಮೀ.

ಈ ಲಕ್ಷ್ಮೀ ಎಲ್ಲಿ ನೆಲೆಸುತ್ತಾಳೆ? ಯಾರಿಗೆ ಸಂಪತ್ತನ್ನು ಕರುಣಿಸುತ್ತಾಳೆ?
ಧರ್ಮಃ ಸತ್ಯಂ ತಥಾ ವೃತ್ತಂ ಬಲಂ ಚೈವ ತಪಾಪ್ಯಹಮ… |
ಶೀಲಮೂಲಾ ಮಹಾಪ್ರಾಜ್ಞ ಸದಾ ನಾಸ್ತಯ ಸಂಶಯಃ ||

ಎಲ್ಲಿ ಧರ್ಮ, ಸತ್ಯ, ಸದಾಚಾರವಿರುತ್ತದೆಯೋ ಅಲ್ಲಿ ಲಕ್ಷ್ಮೀ ನೆಲೆನಿಲ್ಲುತ್ತಾಳೆ. ಇದಕ್ಕೆ ಪೂರಕವಾದ ಪುರಾಣ ಕಥೆಯೊಂದಿದೆ. ಪ್ರಹ್ಲಾದನು ಸ್ವರ್ಗದ ಒಡೆತನವನ್ನು ಪಡೆದಾಗ, ಇಂದ್ರನು ಈತನಿಂದ ಸ್ವರ್ಗವನ್ನು ಹಿಂಪಡೆಯಲು ಬ್ರಾಹ್ಮಣ ರೂಪದಿಂದ ಪ್ರಹ್ಲಾದನ ಶಕ್ತಿಗೆ, ಶ್ರೇಯಸ್ಸಿಗೆ, ಸತ್ಯಕ್ಕೆ ಕಾರಣವಾದ ಧರ್ಮಮೂಲವನ್ನು ಪ್ರಹ್ಲಾದನಲ್ಲಿ ಬೇಡಿದ. ಪ್ರಹ್ಲಾದ ಇದನ್ನು ಆತನಿಗೆ ನೀಡಿದ ತಕ್ಷಣವೇ ಲಕ್ಷ್ಮೀ ಆತನನ್ನು ಬಿಟ್ಟು ಇಂದ್ರನನ್ನು ಸೇರಿಕೊಂಡಳು. 
ಏಕೆಂದರೆ, ಧರ್ಮದ ಮೂಲ ಇಂದ್ರನ ಬಳಿ ಬಂದಿತ್ತು. ಇದರಿಂದ ಸತ್ಯ, ಶಕ್ತಿ, ಸದಾಚಾರ, ಧರ್ಮಗಳೆಲ್ಲವೂ ಇಂದ್ರನ ಬಳಿಗೇ ಬಂದುದರಿಂದ ಲಕ್ಷ್ಮೀಯು ಇಂದ್ರನಲ್ಲಿ ನೆಲೆಯಾದಳು.

ದೇವರು ಎಂಬ ಭಾವ ಹುಲುಮಾನವನ ಜೀವನವನ್ನು ಪಾವನವಾಗಿಸುವ ಮಾರ್ಗಗಳನ್ನೇ ಹೇಳಿವೆ ಎಂಬುದಕ್ಕೆ ಇದು ಸೂಕ್ತ ಉದಾಹರಣೆ. ಮನುಷ್ಯನು ಶೀಲ ಕಳಕೊಂಡ ಮೇಲೆ ಶಿಲೆಗಿಂತಲೂ ಕಡೆ ಎಂಬ ಗಾದೆ ಮಾತಿದೆ. ಶೀಲ ಎಂಬುದು ಶುದ್ಧತೆಯ ಸಂಕೇತ. ಮನಸ್ಸು ಮೊದಲು ಶುದ್ಧವಾಗಬೇಕು. ಮನಸ್ಸು ಶುದ್ಧವಾಗಿದ್ದರೆ ಮಾತ್ರ ಧರ್ಮದ ಸದಾಚರಣೆ ಸಾಧ್ಯ, ಧರ್ಮದ ಸದಾಚರಣೆಯಿಂದ ದೇಹವು ಸದ್ವಿವಿನಿಯೋಗವಾಗುತ್ತದೆ. ಆಗ ನಾವು ಗಳಿಸುವ ಸಂಪತ್ತುಗಳೂ ಸನ್ಮಾರ್ಗದಿಂದಲೇ ಬರುತ್ತವೆ. ಹಾಗಾದಾಗ ಮಾತ್ರ, ಲಕ್ಷ್ಮೀದೇವಿಯ ಕೃಪೆ ನಮ್ಮ ಮೇಲೆ ಉಂಟಾಗಿದ್ದು ಉಳಿಯುತ್ತದೆ; ಉಳಿಸಿದ್ದು ದುಪ್ಪಟ್ಟಾಗುತ್ತದೆ.

ದೇವಪೂಜೆಗೆ, ಯಜ್ಞಯಾಗಾದಿಗಳಿಗೆ ಗೋವಿನ ಹಾಲು, ತುಪ್ಪ, ಮೊಸರು ಬಳಕೆಯಾಗುತ್ತದೆ. ಗೋವಿನ ತುಪ್ಪದಿಂದಲೇ ಅಗ್ನಿ ದೇವನನ್ನು ಆಹ್ವಾನಿಸಿ ಆ ಮೂಲಕ ಹವಿಸ್ಸನ್ನು ದೇವರಿಗೆ ಅರ್ಪಿಸಲಾಗುತ್ತದೆ. ಗೋವಿಗೂ ನಮ್ಮ ದೇವರರೂಪಗಳಿಗೂ ಅವಿನಾಭಾವ ಸಂಬಂಧಗಳಿವೆ.

ಲಕ್ಷ್ಮೀ ಒಲಿಯಬೇಕೆಂದರೆ …

ಶ್ರಮ ಪಡದೇ, ಬೆವರು ಹರಿಸದೇ ಏಕಾಏಕಿ ಸಂಪತ್ತು ಗಳಿಸಲು ಸಾಧ್ಯವಿಲ್ಲ. ಕಷ್ಟಪಡದೇ ಲಕ್ಷ್ಮೀಯನ್ನು ಒಲಿಸಿಕೊಳ್ಳಲು ಸಾಧ್ಯವೇ ಇಲ್ಲ. ಲಕ್ಷ್ಮೀಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾದರೆ ಅನಾರೋಗ್ಯದ ಸಂದರ್ಭ, ಅಥವಾ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಬೆಳಿಗ್ಗೆ ವಿಳಂಬವಾಗಿ ಏಳುವುದು, ಸಂಜೆ ವೇಳೆ ಮಲಗುವುದು ಸೇರಿದಂತೆ ಸೋಮಾರಿತನ ಬಿಡಬೇಕು ಎನ್ನುತ್ತವೆ ಹಿಂದಿನಿಂದಲೂ ನಡೆದುಬಂದಿರುವ ನಂಬಿಕೆಗಳು. ವಿಶ್ವಾಸವಿಡುವುದು:  ಸಂಪತ್ತು, ಸಂವೃದ್ಧಿಯನ್ನು ಗಳಿಸಲು ನಮ್ಮ ಮೇಲೆ ನಮಗೆ ನಂಬಿಕೆ, ವಿಶ್ವಾಸ ಇರಬೇಕು ಹಾಗಾದಲ್ಲಿ ಮಾತ್ರ ಲಕ್ಷ್ಮೀ ದೇವಿಯೂ ನಮಗೆ ಒಲಿಯುತ್ತಾಳೆ.

ಅತಿ ಆಸೆ: ಅತಿಯಾದರೆ ಅಮೃತವೂ ವಿಷ ಎಂಬ ಗಾದೆ ಮಾತಿದೆ. ಅದರಂತೆ,  ಶ್ರೀಮಂತಿಕೆಯ ಆಸೆ ಗಳಿಸಿದಷ್ಟೂ ಮತ್ತಷ್ಟು ಗಳಿಸಬೇಕೆಂಬ ಅತಿ ಆಸೆಯೂ ಲಕ್ಷ್ಮೀಯ ಸಾನ್ನಿಧ್ಯ ಇಲ್ಲದಂತೆ ಮಾಡುತ್ತದೆ. ಆದ್ದರಿಂದ ಅತಿ ಆಸೆ, ಸ್ವಾರ್ಥ, ಕೋಪ ಇವುಗಳನ್ನು ತ್ಯಜಿಸುವ ಮೂಲಕ ಲಕ್ಷ್ಮೀಯ ಆಶೀರ್ವಾದಕ್ಕೆ ಪಾತ್ರರಾಗಬಹುದಂತೆ.

ಪೂಜೆ ಹೀಗಿರಲಿ…
ಲಕ್ಷ್ಮೀ ದೇವಿಯ ಪೂಜೆಯನ್ನು ಮಾಡುವ ಹಿಂದಿನ ದಿನವೇ ಪೂಜೆಗೆ ಬೇಕಾದ ಎÇÉಾ ಸಾಮಗ್ರಿಗಳನ್ನು ತಯಾರು ಮಾಡಿಟ್ಟುಕೊಳ್ಳಬೇಕು. ಉದಾಹರಣೆಗೆ: ಸೀರೆ, ಹಣ್ಣು, ಅಲಂಕಾರಿಕ ವಸ್ತು, ಶುದ್ಧ ನೀರು ಇತ್ಯಾದಿ… ಲಕ್ಷ್ಮೀಯನ್ನು ಉತ್ತರಾಭಿಮುಖವಾಗಿ ಪ್ರತಿಷ್ಠಾಪಿಸುವುದಾದರೆ ಹಸಿರು ಬಣ್ಣದ ಸೀರೆಯನ್ನು ತೊಡಿಸಬೇಕು. ಕೆಂಪು ಮತ್ತು ಹಳದಿ ಹೂವುಗಳನ್ನು ಬಳಸಬೇಕು. ದೀಪವನ್ನು ತುಪ್ಪದಿಂದ ಹಚ್ಚಬೇಕು. ಪೂಜಾ ಸ್ಥಳವನ್ನು ತುಂಬಿದ ಕೊಡದ ನೀರಿನಿಂದ ಶುದ್ಧ ಮಾಡಿ. ಸ್ಥಳದಲ್ಲಿ ಅಷ್ಟದಳದ ರಂಗೋಲಿ ಹಾಕಿ, ಬಾಳೆಕಂಬ, ಮಾವಿನ ಎಲೆಗಳಿಂದ ಸಿಂಗರಿಸಬೇಕು.
ಕಲಶಕ್ಕೆ ತುಂಬಿದ ಕೊಡದ ಶುದ್ಧ ನೀರು ಹಾಕಿ/ಶುದ್ಧ ಅಕ್ಕಿ ಹಾಕಬೇಕು. ಇದರ ಜೊತೆಗೆ ಅರಿಶಿಣದ ಕೊಂಬು, ಅಡಿಕೆ, ಯಾವುದೇ ನಾಣ್ಯ, ದ್ರಾಕ್ಷಿ$, ಗೋಡಂಬಿ, ಕರ್ಜೂರ, ಬಾದಾಮಿ, ಕಲ್ಲುಸಕ್ಕರೆ ಹಾಕಬೇಕು.

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.