ಗೊಡಚಿ ಶ್ರೀ ವೀರಭದ್ರೇಶ್ವರ ಕ್ಷೇತ್ರ


Team Udayavani, Dec 15, 2018, 5:05 AM IST

100-hgg.jpg

 ಹಿಂದೆ ರಾಮದುರ್ಗವನ್ನು ಆಳುತ್ತಿದ್ದ ಶಿಂಧೆ ವಂಶಸ್ಥರ ಕುಲದೈವ ಗೊಡಚಿಯ ವೀರಭದ್ರೇಶ್ವರ. ಸಂಸ್ಥಾನಿಕರ ಕಾಲದಿಂದಲೂ ಇಲ್ಲಿ ವೈಭವದ ಜಾತ್ರಾ ಮಹೋತ್ಸವ ನಡೆಯುತ್ತಿತ್ತು. ಈ ಗಾಗಲೇ ಜಾತ್ರೆ ಆರಂಭವಾಗಿದ್ದು , 22ರಂದು ರಥೋತ್ಸವ ಜರುಗಲಿದೆ. 

ಉತ್ತರ ಕರ್ನಾಟಕದ ಧರ್ಮಸ್ಥಳವೆಂದೇ ಖ್ಯಾತಿ ಪಡೆದ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೊಡಚಿ ವೀರಭದ್ರೇಶ್ವರ ದೇವಸ್ಥಾನವು ನಾಡಿನ ತುಂಬೆಲ್ಲಾ ಭಕ್ತ ಸಮೂಹವನ್ನು ಹೊಂದಿದೆ.

ಈ ಹಿಂದೆ ರಾಮದುರ್ಗ ಸಂಸ್ಥಾನವನ್ನು ಶಿಂಧೆ ವಂಶಸ್ಥರು ಆಳುತ್ತಿದ್ದರು. ಗೊಡಚಿ ವೀರಭದ್ರೇಶ್ವರ, ಸಂಸ್ಥಾನದ ಕುಲದೈವವಾಗಿತ್ತು. ದಕ್ಷ ಬ್ರಹ್ಮನ ಸಂಹಾರ ಮಾಡಲೆಂದು ಪರಶಿವನ ಅನುಗ್ರಹದಿಂದ ಅವತರಿಸಿದ ವೀರಭದ್ರೇಶ್ವರ, ದಕ್ಷ ಬ್ರಹ್ಮ ಸಂಹಾರಕ್ಕಾಗಿ ರೌದ್ರಾವತಾರ ತಾಳಿ ಹೋರಾಡಿದ ವೀರ ಎಂಬುದನ್ನು ಇತಿಹಾಸ ತಿಳಿಸುತ್ತದೆ.

ದೇವಾಲಯದಲ್ಲಿ ವಿಜಯನಗರ ಹಾಗೂ ಚಾಲುಕ್ಯರ ವಾಸ್ತುಶಿಲ್ಪ ಮಾದರಿಯನ್ನು ಕಾಣಬಹುದು. ದೇವಸ್ಥಾನದ ಹೆಬ್ಟಾಗಿಲು ಚಾಲುಕ್ಯರ ವಾಸ್ತುಶಿಲ್ಪವನ್ನು ಹಾಗೂ ಗರ್ಭಗುಡಿಯು ವಿಜಯನಗರ ಕಲೆಯ ಶೈಲಿಯನ್ನು ನೆನಪಿಸುತ್ತದೆ. ದೇವಾಲಯವು ಹಲವು ವಿಸ್ಮಯಗಳಿಗೆ ಸಾಕ್ಷಿಯಾಗಿದ್ದು,  ಭಕ್ತರು ಎಲ್ಲಾ ದಿನದಲ್ಲೂ ಆಗಮಿಸುತ್ತಾರೆ. ಅದರಲ್ಲೂ ಅಮಾವಾಸ್ಯೆ ಮತ್ತು ಹುಣ್ಣಿಮೆಗಳೆಂದು ಇಲ್ಲಿಗೆ ಆಗಮಿಸುವ ಭಕ್ತರ ಸಂಖ್ಯೆ ಅತೀ ಎಂಬಷ್ಟು ಹೆಚ್ಚಿರುತ್ತದೆ.  

ಭಕ್ತರು ಒಂದು ದಿನದಲ್ಲಿ ಹಿಂತಿರುಗುವದಿಲ್ಲ. ಐದು ದಿನಗಳ ಕಾಲ ಗೊಡಚಿಯಲ್ಲಿಯೇ ಬಿಡಾರ ಹೂಡುತ್ತಾರೆ. ಹೀಗಾಗಿ ಗಾಡಿ, ಟ್ರಾಕ್ಟರ್‌ ಸಾಲು ಸಾಲು, ನೋಡುವದೇ ಒಂದು ಹಬ್ಬ. ವರ್ಷಕ್ಕೊಮ್ಮೆ ಜರುಗುವ ಈ ಜಾತ್ರೆಯಲ್ಲಿ ಬಳುವಳಿಕಾಯಿ ಹಾಗೂ ಬಾರೆಹಣ್ಣಿನ ಮಾರಾಟ ಜೋರಾಗಿ ನಡೆಯುತ್ತದೆ. ಆದ್ದರಿಂದ ಈ ಜಾತ್ರೆಯನ್ನು ಬಳುವಳಿಕಾಯಿ ಜಾತ್ರೆ ಎಂದೂ ಕರೆಯುತ್ತಾರೆ. ಬೆಳವಲ ಹಣ್ಣಿನೊಳಗೆ ಬೆಲ್ಲ ಸೇರಿಸಿ ಮತ್ತೇ ಸೊಗಟಿಗೆ ತುಂಬಿ ಒಂದು ದಿನ ಹಾಗೆಯೇ ಇಡಬೇಕು. ಒಂದು ದಿನ ಪೂರ್ತಿ ಕಳೆದನಂತರ ಸೇವಿಸಿದರೆ ಉತ್ತರ ಕರ್ನಾಟಕದ ಹುಗ್ಗಿಯ ರುಚಿ ದೊರೆಯುತ್ತದೆ.

ಜಾತ್ರೆಗೆ ಬಂದ ಭಕ್ತರಿಗೆ ಮನರಂಜನೆ ನೀಡಲು ಹಲವಾರು ಪ್ರಸಿದ್ಧ ನಾಟಕ ಕಂಪನಿಗಳು ಇಲ್ಲಿಯೇ ನೆಲೆಯೂರಿ ನಾಟಕ ಪ್ರದರ್ಶನ ನೀಡುತ್ತಾರೆ.

ತಲುಪುವ ಮಾರ್ಗ
 ಬೆಳಗಾವಿಯಿಂದ 87 ಕಿ.ಮೀ. ಹಾಗೂ ಾಮದುರ್ಗದಿಂದ 12 ಕಿ.ಮೀ. ಅಂತರದಲ್ಲಿ ಗೊಡಚಿ ಶ್ರೀ ಕ್ಷೇತ್ರ ಇದೆ. ಎಲ್ಲ ಕೇಂದ್ರ ಸ್ಥಳಗಳಿಂದ ಗೊಡಚಿಗೆ ಬಸ್‌ ಸೌಲಭ್ಯವಿವೆ. ಬದಾಮಿಯ ರೈಲ್ವೆ ನಿಲ್ದಾಣವು ಅತೀ ಸನಿಹದಲ್ಲಿ ಇರುತ್ತದೆ.
    
ಜಾತ್ರೆ
ಪ್ರತಿವರ್ಷ ಡಿಸೆಂಬರ್‌ ತಿಂಗಳಿನಲ್ಲಿ ಹೊಸ್ತಿಲು ಹುಣ್ಣಿಮೆಯಂದು ಜಾತ್ರೆ ನಡೆಯುತ್ತದೆ. ಹಿಂದಿನಿಂದಲೂ ಸಂಸ್ಥಾನಿಕರು ಜಾತ್ರೆಯನ್ನು ಅತೀ ವೈಭವದಿಂದ ಆಚರಿಸುತ್ತ ಬಂದಿದ್ದಾರೆ. ಈಗಲೂ ಈ ಜಾತ್ರೆ ಸಂಸ್ಥಾನಿಕರ ವಂಶಸ್ಥರಾದ ಶಿಂಧೆ ಮನೆತನದ ಮುಂದಾಳತ್ವದಲ್ಲಿ ನಡೆಯುತ್ತದೆ. ಡಿಸೆಂಬರ್‌ 12ರಂದು ಗೊಡಚಿ ಶ್ರೀವೀರಭದ್ರೇಶ್ವರ ದೇವಸ್ಥಾನದ ವೀರಗಾಸೆ ವೀರಪುರವಂತರ ಸಮೇತವಾಗಿ ಪಲ್ಲಕ್ಕಿ ಉತ್ಸವವು ತೊರಗಲ್‌ ಭೂತನಾಥ ದೇವಸ್ಥಾನಕ್ಕೆ ಹೋಗುತ್ತದೆ. ನಂತರ ಜಾತ್ರೆಯ ಕಾರ್ಯಕ್ರಮಗಳು ಪ್ರಾರಂಭಗೊಳ್ಳುತ್ತವೆ.

ಡಿಸೆಂಬರ್‌ 19 ರಿಂದ 21ರ ವರೆಗೆ ಸಾಯಕಾಲ ಗೊಡಚಿಯಲ್ಲಿ ಸಣ್ಣತೇರು ಉತ್ಸವ ಜರುಗುವದು. ಡಿಸೆಂಬರ್‌ 22ರಂದು ಮಧ್ಯರಾತ್ರಿ 12ಗಂಟೆಗೆ ಹನ್ನೊಂದು ಜನ ಶಾಸಿŒಗಳಿಂದ ಶ್ರೀವೀರಭದ್ರಸ್ವಾಮಿಯ ಹಾಗೂ ಶ್ರೀಭದ್ರಕಾಳಿ ಮಾತೆಗೆ ಮಹಾರುದ್ರಾಭಿಕ್ಷೇಕ, ಸಹಸ್ರ ಬಿಲ್ವಾರ್ಚನೆ, ಅಮ್ಮನವರಿಗೆ ಕುಂಕುಮಾರ್ಚನೆ, ಮಹಾಮಂಗಳಾರತಿ ಜರುಗುವದು. ಸಂಜೆ 5ಗಂಟೆಗೆ ಮಹಾರಥೋತ್ಸವ ಅತೀ ವಿಜೃಂಭಣೆಯಿಂದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಲಿದೆ.

ಜಾತ್ರೆಯ ಐದನೆಯ ದಿನ ಅಂದರೆ ಡಿಸೆಂಬರ್‌ 26ರಂದು ಸಂಜೆ ರಥಧ ಕಳಸ ಇಳಿಸಿದ ನಂತರ, 6ಗಂಟೆಗೆ ಲಕ್ಷದೀಪೋತ್ಸವ ಜರುಗಲಿದೆ. ಲಕ್ಷದೀಪೋತ್ಸವದಂದು ಸಾವಿರಾರು ಭಕ್ತರು ಆಗಮಿಸಿ ಹರಕೆಯ ದೀಪ ಹಚ್ಚುವದು ಇಲ್ಲಿನ ವಿಶೇಷವಾಗಿದೆ. ವೀರಗಾಸೆ ಪುರವಂತರ ವೀರಾವೇಶ ಕುಣಿತಕ್ಕೆ ಗೊಡಚಿ ಶ್ರೀ ಕ್ಷೇತ್ರ ಪ್ರಖ್ಯಾತಿ ಪಡೆದುಕೊಂಡಿದೆ. 

ಸುರೇಶ ಗುದಗನ‌ವರ

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.