ನಮ್ಮೊಳಗಿನ ಆರು ಪರಮವೈರಿಗಳು ಇವರು


Team Udayavani, Dec 22, 2018, 7:50 AM IST

3-aaa.jpg

ಅರಿ ಎಂದರೆ ಶತ್ರು ಎಂದರ್ಥ.ಈ ಆರು ವಿಧದ ಮನಸ್ಸಿನ ಭಾವಗಳು ನಮ್ಮ ಬದುಕಿಗೆ ಶತ್ರುವಾಗಿರುವುದರಿಂದ ಇವನ್ನು ಅರಿಷಡ್‌ ವರ್ಗ ಅಂದರೆ ಆರು ವೈರಿಗಳು ಎಂದು ಪರಿಗಣಿಸಲಾಗಿದೆ. ಈ ಆರುಭಾವಗಳೇ ನಮ್ಮ ಸ್ವಭಾವವನ್ನೂ ವ್ಯಕ್ತಿಣ್ತೀವನ್ನೂ ನಿರ್ಧರಿಸುತ್ತವೆ.

ಧರ್ಮಗಳು ಪ್ರತಿಯೊಬ್ಬರಿಗೂ ಜೀವನಪ್ರೀತಿಯನ್ನು ಕಲಿಸುವ ಪಾಠಶಾಲೆಗಳು. ಸಂಸ್ಕಾರವನ್ನು ಹೇಳುವ ಧರ್ಮವು ನೆಮ್ಮದಿಯ ಜೀವನ ಯಾವುದು? ಎಲ್ಲಿಂದ ನೆಮ್ಮದಿ ದೊರೆಯುತ್ತದೆ? ನೆಮ್ಮದಿಯನ್ನು ಕೆಡಿಸುವ ಸಂಗತಿಗಳಾವುವು? ಅವನ್ನು ಹೇಗೆ ನಿಯಂತ್ರಿಸಬೇಕು ಎಂಬುದನ್ನು ಹೇಳುತ್ತದೆ. ಸಂಸ್ಕಾರಕ್ಕೂ ಮನಶಾÏಂತಿಗೂ ಅವಿನಾಭಾವ ಸಂಬಂಧವಿದೆ. ಸಂಸ್ಕಾರವಿದ್ದಾಗ ಮನಶ್ಯಾಂತಿ ಇರುತ್ತದೆ; ಮನಶ್ಯಾಂತಿ ಇದ್ದಾಗ ಸಂಸ್ಕಾರ ಬೆಳೆಯುತ್ತದೆ. ಜೀವನದ ಹಾದಿಯನ್ನೇ ತಪ್ಪಿಸುವ ಪರಮವೈರಿಗಳು ನಮ್ಮೊಳಗೇ ಜೀವಂತವಾಗಿ ಇದ್ದಾವೆ. ಇವು ಜೀವಂತವಾಗಿರುವ ತನಕವೂ ಧರ್ಮದ ಉನ್ನತಿ ಸಾಧ್ಯವಿಲ್ಲ.

ನಮ್ಮೊಳಗಿನ ಪರಮವೈರಿಗಳಾರು?

ನಮ್ಮನ್ನಾಳುವ ವೈರಿಗಳು ದೇವಲೋಕದಿಂದಲೋ, ಪಾತಾಳದಿಂದಲೋ ಬಂದವುಗಳಲ್ಲ. ಅವು ನಮ್ಮೊಳಗೇ ಇದ್ದುಕೊಂಡು ನಮ್ಮನ್ನು ನಿಯಂತ್ರಿಸುವ ಭಾವಗಳಾಗಿವೆ. ಕಾಮ, ಕ್ರೋಧ, ಮದ, ಮೋಹ, ಲೋಭ ಮತ್ತು ಮಾತ್ಸರ್ಯ. ಈ ಆರು ವೈರಿಗಳೇ ನಮ್ಮ ಪರಮವೈರಿಗಳು. ಇವನ್ನು ಅರಿಷಡ್‌ ವರ್ಗಗಳು ಎಂದೇ ಗುರುತಿಸಲಾಗಿದೆ. ಮನಸ್ಸಿನ ಶಾಂತಿಯನ್ನು ಕೆಡಿಸುವ ಮನಸ್ಸಿನ ಭಾವನೆಗಳನ್ನೇ ಆರು ರೂಪಗಳಲ್ಲಿ ಗುರುತಿಸಿ ಅರಿಷಡ್‌ ವರ್ಗಗಳೆಂದು ಹೇಳಲಾಗಿದೆ.

ಸಂಸ್ಕೃತದಲ್ಲಿ ಒಂದು ಮಾತಿದೆ. “ಕಾಮಾತುರಾಣಾಂ ನರುಚಿಂ ನ ವೇದಾ, ನ ಲಜ್ಜಾ’ ಅಂದರೆ ಕಾಮಾಸಕ್ತಿಯುಳ್ಳವನಿಗೆ ವೇದಗಳು ಅರ್ಥವಾಗುವುದಿಲ್ಲ. ಅಂದರೆ, ಹಿತನುಡಿಯೋ ನೈತಿಕತೆಯೋ ಅವನಿಗೆ ಅರಿವಾಗುವುದೇ ಇಲ್ಲ ಮತ್ತು ಯಾವುದೇ ಹೀನ ಕಾರ್ಯಕ್ಕೂ ಹೇಸದ, ಲಜ್ಜೆ, ಅಂದರೆ ಮರ್ಯಾದೆಯ ಛಾಯೆಯೂ ಇಲ್ಲದವನಾಗಿರುತ್ತಾನೆ. ಇದರಿಂದ ಅಧರ್ಮದ ಕಾರ್ಯಗಳು ಯಥೇತ್ಛವಾಗಿ ನಡೆಯುತ್ತವೆ. ಇನ್ನು ಕ್ರೋಧಭಾವದಿಂದಾಗುವ ಅನಾಹುತಗಳು ಅನಂತ. ಅವು ಲೆಕ್ಕಕ್ಕೆ ಸಿಗಲಾರದಷ್ಟಿವೆ. ಆದರೆ, ಇಡೀ ಪ್ರಪಂಚವನ್ನು ನಾಶ ಮಾಡುವ ಶಕ್ತಿ ಈ ಕೋಪ ಅಥವಾ ಕ್ರೋಧ ಬುದ್ಧಿಗಿದೆ. ಏಕೆಂದರೆ,  ಕ್ರೋಧಕ್ಕೊಳಗಾದವನು ಯಾವ ನೀತಿಯ ಮಾತಿಗೂ ಮಣಿಯಲಾರ. ಇನ್ನು ಮದಕ್ಕೆ ಬೇರೆ ಮದ್ದಿಲ್ಲ.

ಅಹಂಕಾರಕ್ಕೆ ಉದಾಸೀನವೇ ಮದ್ದು ಎಂಬ ಮಾತಿದೆ. ಮದವು ಸ್ವಾರ್ಥವನ್ನು ಹುಟ್ಟಿಸುವುದರ ಜೊತೆಗೆ ಸಮಾಜದ ಶಾಂತಿಯನ್ನೂ ಕೆಡಿಸುತ್ತದೆ. ಮೋಹವು ಮನುಷ್ಯನನ್ನು ಕುರುಡರನ್ನಾಗಿಸಿಬಿಡುತ್ತದೆ. ಮೋಹದಿಂದಾಗಿ ಸರಿತಪ್ಪುಗಳು ತಿಳಿಯುವುದೇ ಇಲ್ಲ. ಮೋಹಕ್ಕೆ ಒಳಗಾದವನು ಅದೇ ಗುಂಗಿನಲ್ಲಿರುತ್ತಾನೆ ಮತ್ತು ಹೊರಜಗತ್ತಿಗೆ ಬಾಧಕವಾಗುವ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಾನೆ. ಲೋಭವು ಗಳಿಸಿದ ಕೀರ್ತಿಯನ್ನೂ ಉಳಿಸುವುದಿಲ್ಲ; ಧರ್ಮವನ್ನೂ ಉಳಿಸುವುದಿಲ್ಲ. ಮತ್ಸರವು ನಮ್ಮೊಳಗೇ ಇದ್ದುಕೊಂಡು ನಮ್ಮನ್ನೇ ಸುಡುವ ಬೆಂಕಿಯಿದ್ದಂತೆ. ಮತ್ಸರವಿದ್ದವನು ಏನನ್ನೂ ಸಾಧಿಸಲಾರ. ಪ್ರತಿ ಮನುಷ್ಯನಲ್ಲಿಯೂ ಅವನದೇ ಆದ ಶಕ್ತಿಯುಕ್ತಿಗಳಿರುತ್ತವೆ. ಅವನ್ನರಿತುಕೊಂಡು ಅಲ್ಲಿ ನಮ್ಮನ್ನು ತೊಡಗಿಸಿಕೊಳ್ಳಬೇಕೇ ಹೊರತೂ ಬೇರೆಯವರನ್ನು ನೋಡಿ ಕರುಬುವುದರಿಂದ ಏನೂ ಪ್ರಯೋಜನವಿಲ್ಲ. ಅವನತಿಯೇ ಮತ್ಸರಕ್ಕೆ ಸಿಗುವ ಪ್ರತಿಫ‌ಲ.

ಅರಿ ಎಂದರೆ ಶತ್ರು ಎಂದರ್ಥ. ಈ ಆರು ವಿಧದ ಮನಸ್ಸಿನ ಭಾವಗಳು ನಮ್ಮ ಬದುಕಿಗೆ ಶತ್ರುವಾಗಿರುವುದರಿಂದ ಇವನ್ನು ಅರಿಷಡ್‌ ವರ್ಗ ಅಂದರೆ ಆರು ವೈರಿಗಳು ಎಂದು ಪರಿಗಣಿಸಲಾಗಿದೆ. ಈ ಆರುಭಾವಗಳೇ ನಮ್ಮ ಸ್ವಭಾವವನ್ನೂ ವ್ಯಕ್ತಿಣ್ತೀವನ್ನೂ ನಿರ್ಧರಿಸುತ್ತವೆ. ಹಾಗಾಗಿ, ಅವನು ಕೋಪಿಷ್ಟ, ಇವನು ಅಹಂಕಾರಿ, ಆತ ಜಿಪುಣ, ಈತ ಹೊಟ್ಟೆಕಿಚ್ಚಿನ(ಮತ್ಸರದ) ಮನುಷ್ಯ ಎಂದೆಲ್ಲಾ  ಗುರುತಿಸುತ್ತೇವೆ. ಈ ಆರು ಶತ್ರುಗಳೂ ನಮ್ಮೊಳಗಿನವುಗಳೇ ಆದರೂ ಅವುಗಳಿಂದಾಗುವ ಪರಿಣಾಮ ಮಾತ್ರ ವಿಶ್ವಕುಟುಂಬದ ಶಾಂತಿಯನ್ನು ಕೆಡಿಸುವಂಥದ್ದು. ಹಾಗಾಗಿ, ಇವನ್ನು ನಮ್ಮಿಂದ ದೂರವಿಡಲು ಮೊದಲು ಮನಸ್ಸನ್ನು ನಿಯಂತ್ರಿಸಬೇಕು. ಅದಕ್ಕೆ ಮನಸ್ಸಿನ ಏಕಾಗ್ರತೆ ಅತ್ಯವಶ್ಯಕ. ಈ ಏಕಾಗ್ರತೆಗಾಗಿಯೇ ಧ್ಯಾನ, ಭಜನೆ, ಕೀರ್ತನಾದಿಗಳಿವೆ ಮತ್ತು ದೇವಾಲಯದಂಥ ಧನಾತ್ಮಕ ತರಂಗಗಳುಳ್ಳ ಸ್ಥಳಗಳು ಹುಟ್ಟಿಕೊಂಡಿವೆ. ಈ ಮೂಲಕ ಚಿತ್ತಶಾಂತಿಯನ್ನು ಪಡೆದರೆ ಈ ಆರುಭಾವಗಳು ಪ್ರಕಟವಾಗದಂಥ ಸಂಯಮ ನಮ್ಮಲ್ಲಿ ವೃದ್ಧಿಯಾಗುತ್ತದೆ.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುದೆಸೆ ಯಾವಾಗ ಆರಂಭವಾಗಲಿದೆ…

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುಬಲ ಯಾವಾಗ ಆರಂಭವಾಗಲಿದೆ…

jjhgfd

ಮಾರಕಾಧಿಪತಿ, ಭಾದಕಾಧಿಪತಿ: ಅಕಾಲಿಕ ಮರಣದ ಬಗ್ಗೆ “ಅಷ್ಠಮ ಸ್ಥಾನ” ಮುನ್ಸೂಚನೆ ಕೊಡುತ್ತದೆಯೇ?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.