ಕುಂದಾಪುರದ ನಿಖಿಲ್‌ಗೆ ಅಮೆರಿಕ ತಂಡದಲ್ಲಿ ಆಡೊ ಕನಸು


Team Udayavani, Dec 28, 2018, 4:43 PM IST

2-aa.jpg

ಕುಂದಾಪುರ: ಪ್ರತಿಯೊಬ್ಬ ಕ್ರಿಕೆಟಿಗನು ತನ್ನ ಸಾಧನೆಯಿಂದ ಸುದ್ದಿಯಾಗುತ್ತಾನೆ. ಇಲ್ಲೊಬ್ಬ ರಾಜ್ಯದ ಹುಡುಗ ಅಮೆರಿಕ ತಂಡಕ್ಕೆ ಸೇರುವ ಕನಸಿನಲ್ಲಿದ್ದಾರೆ. 

ವಿಶ್ವ ಕ್ರಿಕೆಟ್‌ ಅಂಗಳದಲ್ಲಿ ಅಮೆರಿಕ ನಿಧಾನಕ್ಕೆ ಪ್ರವರ್ಧಮಾನಕ್ಕೆ ಬರುತ್ತಿದೆ. ಅಲ್ಲಿನ ರಾಷ್ಟ್ರೀಯ ತಂಡದಲ್ಲಿ ಆಡುವ ಕನಸು ಕುಂದಾಪುರ ತಾಲೂಕಿನ ಕೋಟ ಪಡುಕೆರೆಯ ನಿಖಿಲ್‌ ಕಾಂಚನ್‌ ಅವರದು!.

ನಿಖಿಲ್‌ ಕೋಟ ಪಡುಕರೆಯ ಕೃಷ್ಣ ಕಾಂಚನ್‌-ಶಾಂತಾ ಕಾಂಚನ್‌ ದಂಪತಿ ಪುತ್ರ. ವೃತ್ತಿಯಲ್ಲಿ ಅಮೆರಿಕದ ಪ್ರಸಿದ್ಧ ಫೋರ್ಡ್‌ ಕಂಪೆನಿಯಲ್ಲಿ ಮೆಕ್ಯಾನಿಕಲ್‌ ಇಂಜಿನಿಯರ್‌ ಆಗಿರುವ ಅವರು, ಪ್ರವೃತ್ತಿಯಲ್ಲಿ ಕ್ರಿಕೆಟಿಗನಾಗಿಯೂ ಹೆಸರು ಗಳಿಸಿದ್ದಾರೆ. ಚಿಕ್ಕಂದಿನಿಂದಲೇ ಕ್ರಿಕೆಟ್‌ ಪ್ರೀತಿ ಬೆಳೆಸಿಕೊಂಡ ನಿಖಿಲ್‌, ಹುಟ್ಟೂರಲ್ಲಿ “ವಾಹಿನಿ’ ಯುವಕ ಮಂಡಲದ ತಂಡದಲ್ಲಿದ್ದಾಗಲೇ ಮಾವಂದಿರಾದ ಪ್ರಭಾಕರ ಕುಂದರ್‌, ರಾಜೇಂದ್ರ ಸುವರ್ಣ, ಸತೀಶ್‌ ಕುಂದರ್‌ ಹಾಗೂ ರಮೇಶ್‌ ಕುಂದರ್‌ ಅವರಿಂದ ಪ್ರಭಾವಿತರಾಗಿದ್ದರು.

ನಿಖಿಲ್‌ ಸಾಧನೆಗಳು
2014ರಲ್ಲಿ ನ್ಯೂಜಿಲೆಂಡ್‌ನ‌ಲ್ಲಿ ನಡೆದ ಒಳಾಂಗಣ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹೆಗ್ಗಳಿಕೆ ನಿಖಿಲ್‌ ಅವರದು. ಈ ವರ್ಷ ಅಮೆರಿಕದಲ್ಲಿ ನಡೆದ ಐಪಿಎಲ್‌ ಮಾದರಿಯ ಪಂದ್ಯವೊಂದರಲ್ಲಿ ಆಂಡ್ರೆ ರಸೆಲ್‌ ನಾಯಕತ್ವದ ತಂಡದ ವಿರುದ್ಧ ಉತ್ತಮ ಬ್ಯಾಟಿಂಗ್‌ ಮೂಲಕ ಗಮನ ಸೆಳೆದಿದ್ದರು. ಸತತ 3 ವರ್ಷ ಯೂನಿವರ್ಸಿಟಿ ಆಫ್‌ ಮಿಚಿಗನ್‌ ಚಾಂಪಿಯನ್‌ಶಿಪ್‌ ಗೆಲ್ಲುವಲ್ಲಿ ನಾಯಕ ನಿಖಿಲ್‌ ಪಾತ್ರ ಮಹತ್ವದ್ದಾಗಿದೆ.

 2 ಗಂಟೆ ನೆಟ್‌ ಪ್ರಾಕ್ಟೀಸ್‌
ಬಲಗೈ ಬ್ಯಾಟ್ಸ್‌ಮನ್‌ ನಿಖಿಲ್‌ ಅಮೆರಿಕದ ಹಲವು ರಾಷ್ಟ್ರ ಮಟ್ಟದ ಟೂರ್ನಿಗಳಲ್ಲಿ ಈಗಾಗಲೇ ಬ್ಯಾಟಿಂಗ್‌ ಮೂಲಕ ಮಿಂಚು ಹರಿಸಿದ್ದಾರೆ. ಮುಂದಿನ ವರ್ಷದಿಂದ ರಾಷ್ಟ್ರೀಯ ತಂಡದಲ್ಲಿ ಆಡುವ ಅರ್ಹತೆ ಸಿಗಲಿದೆ. ಕೆಲಸದ ಮಧ್ಯೆಯೂ ದಿನಕ್ಕೆರಡು ಗಂಟೆ ನೆಟ್‌ ಪ್ರ್ಯಾಕ್ಟೀಸ್‌ ಮಾಡುತ್ತಿದ್ದೇನೆ ಎಂದು ನಿಖಿಲ್‌ ಅಮೆರಿಕದಿಂದ “ಉದಯವಾಣಿ’ಗೆ ತಿಳಿಸಿದರು.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಬ್ರಹ್ಮಾವರದ ಲಿಟ್ಲರಾಕ್‌ ಇಂಡಿಯನ್‌ ಸ್ಕೂಲ್‌, ಪಿಯು ಕೋಟದ ವಿವೇಕ ಕಾಲೇಜು, ಇಂಜಿನಿಯರಿಂಗ್‌ ಬೆಂಗಳೂರು ಇನ್ಸ್‌ಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಮುಗಿಸಿ, ಸ್ನಾತಕೋತ್ತರ ಪದವಿಯನ್ನು ಅಮೆರಿಕದ ಮಿಚಿಗನ್‌ ವಿವಿಯಲ್ಲಿ ಪೂರೈಸಿದ್ದಾರೆ.

ಕೊಹ್ಲಿ ನೆಚ್ಚಿನ ಆಟಗಾರ
ಅಮೆರಿಕ ತಂಡದಲ್ಲಿ ಆಡುವ ಕನಸು ಕಾಣುತ್ತಿರುವ ನಿಖಿಲ್‌ಗೆ ಭಾರತೀಯ ತಂಡದ ಕಪ್ತಾನ ವಿರಾಟ್‌ ಕೊಹ್ಲಿಯೆಂದರೆ ಅಚ್ಚು ಮೆಚ್ಚು. ಕೆಲ ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಆರ್‌ಸಿಬಿ ತಂಡದ ಅಭ್ಯಾಸದ ವೇಳೆ ಕೊಹ್ಲಿ ಸಹಿತ ಎಲ್ಲ ಆಟಗಾರರಿಗೆ ಬೌಲಿಂಗ್‌ ಮಾಡಿದ್ದಾಗಿ ನೆನಪಿಸಿಕೊಳ್ಳುತ್ತಾರೆ ನಿಖಿಲ್‌.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.