ನಾವು ಯಾರಿಗೇನು ಕಡಿಮೆ?


Team Udayavani, Jan 19, 2019, 12:55 AM IST

100-aa.jpg

ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗುವುದು, ಇಂಗ್ಲೀಷ್‌ ತರಬೇತಿ ನೀಡವುದು, ಕಂಪ್ಯೂಟರ್‌ ಶಿಕ್ಷಣ ನೀಡುವುದು ಈ ಶಾಲೆಯ ವಿಶೇಷ ಪ್ರಯತ್ನಗಳು ಎನ್ನಬಹುದು.  ವಿದ್ಯಾರ್ಥಿಗಳು ಶಾಲೆಗೆ ಹಾಜರಾಗದೇ ಇದ್ದರೆ ಶಿಕ್ಷಕರು ಮನೆ ಮನೆಗೆ ಹೋಗಿ ಮಕ್ಕಳು ಹೇಗೆ ಓದುತ್ತಾರೆ ಅನ್ನೋದನ್ನು ಪೋಷಕರಿಗೆ ಮನವರಿಕೆ ಮಾಡಿಕೊಟ್ಟು, ಮತ್ತೆ ಅವರನ್ನು ಶಾಲೆಗೆ ಕರೆ ತರುತ್ತಾರೆ. ಇದೇ ಬಿ. ಹೊಸೂರು ಶಾಲೆಯ ವಿಶೇಷ. 

ಶಿಕಾರಿಪುರ ತಾಲ್ಲೂಕಿನ ಬಿ.ಅಣ್ಣಾಪುರ, ಚಿಕ್ಕಾಪುರ ಗ್ರಾಮದ ಎರಡೂ ಸರ್ಕಾರಿ ಶಾಲೆಗಳು ಮುಚ್ಚಿ ಹೋದವು.  ಸರ್ಕಾರಿ ಶಾಲೆಗಳನ್ನು ಹೀಗೆ ಮಾಡಿದರೆ ಮುಂದೇನÅಪ್ಪಾ ಗತೀ ಅಂತ ಎಲ್ಲರ ಯೋಚನೆ ಶುರುವಾಯ್ತು. 

 ಈ ಆತಂಕ ಸಾಗರ ತಾಲೂಕಿಗೂ ಹರಡಿ, ಅಲ್ಲಿನ ಬಿ. ಹೊಸೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೂ ಹೊಕ್ಕು, ಇಲ್ಲಿ ಕಡಿಮೆ ಹಾಜರಾತಿ ಇದೆ. ಹಾಗಾಗಿ, ಈ ಶಾಲೇನೂ ಮುಚ್ಚೋಣ- ಅಂತ ಸರ್ಕಾರ ತೀರ್ಮಾನಿಸುವ ಹೊತ್ತಿಗೆ ಅಲ್ಲಿದ್ದ ಮುಖ್ಯ ಶಿಕ್ಷಕ ಕೆ.ಎಸ್‌. ಪ್ರಕಾಶ್‌ ಅಡ್ಡ ಬಂದರು.

 “ನನಗೆ ಸ್ವಲ್ಪ ಸಮಯ ಕೊಟ್ಟು ನೋಡಿ, ಈ ಶಾಲೇನ ಮಾದರಿ ಶಾಲೆ ಮಾಡ್ತೀವಿ ಅಂತ ಹೇಳಿದರು. ಈ ಮಾತನ್ನು ಮೇಲಿನ ಅಧಿಕಾರಿಗಳು ನಂಬಿದರು. ನಂತರ ಇದು ಮಾದರಿ ಪ್ರಾಥಮಿಕ ಶಾಲೆಯೂ ಆಯಿತು.  ಈ ಶಾಲೆಯ ವ್ಯಾಪ್ತಿಗೆ ಬರುವ ಹಳ್ಳಿಗಳಲ್ಲಿ  ಅಲೆಮಾರಿ ಜನಾಂಗದವರೇ ಹೆಚ್ಚು. ಇದರೊಳಗೆ ಅನಕ್ಷರಸ್ಥರೂ ಸೇರಿದ್ದಾರೆ. ಹಾಗಾಗಿ, ಇಲ್ಲಿನ ಮಕ್ಕಳಿಗೆ ಶಿಕ್ಷಣ ನೀಡಲೇಬೇಕಾದ ಹೆಚ್ಚಿನ ಜವಾಬ್ದಾರಿ ಇದೆ. ಕಡಿಮೆ ಸಂಖ್ಯೆಯಲ್ಲಿ ಇದ್ದ ವಿದ್ಯಾರ್ಥಿಗಳ ಹಾಜರಿ ಶಿಕ್ಷಕರ ಪ್ರಯತ್ನ ದಿಂದ ದಿನೇ ದಿನೇ ಸಂಖ್ಯೆ ವೃದ್ದಿಸುತ್ತ ಬಂದಿದೆ. ಎಷ್ಟೆಂದರೆ, ಖಾಸಗಿ ಶಾಲೆಯ ಮಕ್ಕಳು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಈ ಶಾಲೆಗೆ ಸೇರ್ಪಡೆ ಗೊಳ್ಳುತ್ತಿದ್ದಾರೆ.  ಶಾಲೆಯಲ್ಲಿ ಪರಿಸರ, ಆರೋಗ್ಯ, ಸಾಮಾಜಿಕ ಚಿಂತನೆಗಳನ್ನು ರೂಢಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಶಿಬಿರಗಳನ್ನು ಆಯೋಜಿಸಲಾಗಿದೆ. 

ಕೃಷಿಗೆ ಆದ್ಯತೆ 
ಬೇರೆಶಾಲೆಗಳಿಗೆ ಹೋಲಿಸಿದರೆ ಬಿ.ಹೊಸೂರು ಶಾಲೆಯಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಗಳಿಗೆ ಹೆಚ್ಚು ಗಮನ ನೀಡುತ್ತಿದೆ.  ಮುಖ್ಯವಾಗಿ, ಕೃಷಿಯ ಬಗ್ಗೆ ಮಕ್ಕಳಿಗೆ ಪ್ರಾಕ್ಟಿಕಲ್‌ ಪಾಠ ಮಾಡಲಾಗುತ್ತಿದೆ. 

ಶಿಕ್ಷಕ ಕೆ.ಎಸ್‌ ಪ್ರಕಾಶ್‌ ಮಕ್ಕಳನ್ನು ಕೈ ತೋಟಕ್ಕೆ ಕರೆದು ಕೊಂಡು ಬಂದು ಪಾಠ ಮಾಡುತ್ತಾರೆ.  ಇಲ್ಲಿನ ಪರಿಸರಕ್ಕೆ ಪೂರಕವಾದ ತರಕಾರಿ ಹಣ್ಣುಗಳನ್ನು ಬೆಳೆಯುತ್ತಾರೆ. ಹಣ್ಣು, ತರಕಾರಿ ತಿಂದರೆ ಆರೋಗ್ಯ ಹೇಗೆ ವೃದ್ಧಿಸುತ್ತದೆ, ಅದರಲ್ಲಿ  ಎಂಥ ಪೋಷಕಾಂಶಗಳಿರುತ್ತದೆ ಎಂಬುದರ ಬಗ್ಗೆ ಪಾಠ ಮಾಡುತ್ತಾರೆ. ಇದರಿಂದ ಮಕ್ಕಳಿಗೆ ಪರಿಸರ ಪ್ರಜ್ಞೆ, ಕೃಷಿ ಜ್ಞಾನ ಎರಡೂ ವಿಸ್ತರಿಸುತ್ತದೆ. 

ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗುವುದು, ಇಂಗ್ಲೀಷ್‌ ತರಬೇತಿ ನೀಡವುದು, ಕಂಪ್ಯೂಟರ್‌ ಶಿಕ್ಷಣ ನೀಡುವುದು ಈ ಶಾಲೆಯ ವಿಶೇಷ ಪ್ರಯತ್ನಗಳು ಎನ್ನಬಹುದು.  ವಿದ್ಯಾರ್ಥಿಗಳು ಶಾಲೆಗೆ ಹಾಜರಾಗದೇ ಇದ್ದರೆ ಶಿಕ್ಷಕರು ಮನೆ ಮನೆಗೆ ಹೋಗಿ ಮಕ್ಕಳು ಹೇಗೆ ಓದುತ್ತಾರೆ ಅನ್ನೋದನ್ನು ಪೋಷಕರಿಗೆ ಮನವರಿಕೆ ಮಾಡಿಕೊಟ್ಟು, ಮತ್ತೆ ಅವರನ್ನು ಶಾಲೆಗೆ ಕರೆ ತರುತ್ತಾರೆ. ಈ ಶಾಲೆ ಯಾವ ಖಾಸಗಿ ಶಾಲೆಗಿಂತಲೂ ಕಡಿಮೆ ಇಲ್ಲ. ಶಾಲೆ ಪ್ರಾರಂಭವಾಗುವ ಮೊದಲು, ನಂತರ ಹೆಚ್ಚುವರಿ ವಿಶೇಷ ತರಗತಿಗಳನ್ನೂ ನಡೆಯುತ್ತವೆ, ವರ್ಷದಲ್ಲಿ ಒಂದು ಸಲ ವಿದ್ಯಾರ್ಥಿಗಳಿಗೆ ಸೂಕ್ತ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಇವೆಲ್ಲದರ ಜೊತೆಗೆ ಸಂಗೀತ, ಕರಕುಶಲ ತರಬೇತಿಗಳನ್ನು ಹಮ್ಮಿ ಕೊಳ್ಳುತ್ತಿದ್ದಾರೆ. ಇವೆಲ್ಲಕ್ಕೂ ದಾನಿಗಳ ಸಹಕಾರವಿದೆಯಂತೆ. ರೈತ ಕುಟುಂಬದಿಂದ ಬಂದ ಮುಖ್ಯ ಶಿಕ್ಷಕ ಕೆ.ಎಸ್‌. ಪ್ರಕಾಶ್‌ ಅವರ ಶ್ರಮದಿಂದ ಮಕ್ಕಳು ವಿದ್ಯಾವಂತರಾಗಿದ್ದಾರೆ.   ಅವರ ಸೇವೆ ನಮ್ಮ ಮಕ್ಕಳಿಗೆ ದಾರಿ ದೀಪವಾಗಿದೆ ಎನ್ನುತ್ತಾರೆ ಗ್ರಾಮಸ್ಥ ರಾಮಜ್ಜ. ಶಿಕ್ಷಕ ಪ್ರಕಾಶ್‌ ಅವರಿಗೆ 2018-19 ನೇ ಸಾಲಿನ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಅರಸಿ ಬಂದಿದೆ. 

ಪ್ರದೀಪ

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.