ದಾರಿಯಲ್ಲಿ ಕಂಡ ಪ್ರಾಣಿಗಳಿಗೆ ಹಣ್ಣು ಕೊಡೋರು…


Team Udayavani, Feb 2, 2019, 12:55 AM IST

97.jpg

ಶ್ರೀ ಶಿವಕುಮಾರ ಸ್ವಾಮೀಜಿಯವರು ಮಠದ ಅಧ್ಯಕ್ಷರಾಗಿದ್ದ ಆರಂಭದ ದಿನಗಳಲ್ಲಿ, ಮಠ ಆರ್ಥಿಕವಾಗಿ ಸಂಕಷ್ಟದಲ್ಲಿತ್ತು. ಹೀಗಾಗಿ, ಹಳ್ಳಿ ಹಳ್ಳಿಗೆ ಹೋಗಿ ಭಿಕ್ಷಾಟನೆ ಮಾಡಿ, ಮಠದಲ್ಲಿ ಮಕ್ಕಳಿಗೆ ಅನ್ನ ದಾಸೋಹ ಏರ್ಪಡಿಸುತ್ತಿದ್ದರು.   ಆ ಕಾಲದಲ್ಲಿ ಯಾವುದೇ ಸಂಪರ್ಕ ಸಾರಿಗೆ ಇಷ್ಟೊಂದು ಅಭಿವೃದ್ಧಿಯಾಗಿರಲಿಲ್ಲ. ಕುದುರೆಯ ಮೇಲೆ, ಎತ್ತಿನಗಾಡಿಯಲ್ಲಿ ಹೋಗಬೇಕಿತ್ತು.  ಕೆಲವು ವರ್ಷಗಳ ನಂತರ ಭಕ್ತರು ಒಂದು ಡಾರ್ಜ್‌ ಕಾರನ್ನು ನೀಡಿದ್ದರು. ಅದರಲ್ಲಿ ಶ್ರೀಗಳು ಸಂಚರಿಸುತ್ತಿದ್ದರು.  ಅದಾದನಂತರ ಅಂಬಾಸಿಡರ್‌, ನಿಷಾನ್‌, ಕ್ಯಾಪ್ಟಿನೊ ಕಾರುಗಳಲ್ಲಿ ಓಡಾಡಿದ್ದಾರೆ. ಶ್ರೀಗಳು ಕಾರಿನಲ್ಲಿ ಓಡಾಡಲು ಆರಂಭಿಸಿದ ಮೇಲೆ ಮೂರು ಜನ ಚಾಲಕರು ಕೆಲಸ ಮಾಡುತ್ತಿದ್ದರು.  ಮೊದಲನೆ ಚಾಲಕ ಶಿವಣ್ಣ, ಎರಡನೇ ಚಾಲಕ ರಾಜ ಶೇಖರಯ್ಯ, ಮೂರನೇ ಚಾಲಕ ಮಹಾದೇವ ಸ್ವಾಮಿ.

ಮೂರನೇ ಚಾಲಕ ಮಹಾದೇವ ಸ್ವಾಮಿಯು, ಮೂಲತಃ ಟಿ. ನರಸೀಪುರ ತಾಲೂಕಿನ ಮೂಡರಹಳ್ಳಿ ಇಂದ ವಿದ್ಯಾಭ್ಯಾಸಕ್ಕೆ ಅಂತ ಬಂದು ಶ್ರೀಗಳ ಕಾರು ಚಾಲಕರಾಗಿ ಇಲ್ಲೇ ನಲೆಸಿದ್ದಾರೆ. 15 ವರ್ಷಗಳ ಕಾಲ ನಡೆದಾಡುವ ದೇವರು ಎಲ್ಲಿಗೆ ಹೋದರೂ ಆಗೆಲ್ಲ ಮಾದೇವ ಸ್ವಾಮಿಯವರೇ ಕಾರು ಚಾಲಕ. ಸ್ವಾಮೀಜಿಗಳ ಒಡನಾಟದ ಬಗ್ಗೆ ಅವರು ಹೀಗೆನ್ನುತ್ತಾರೆ: ಶ್ರೀಗಳು ಎಷ್ಟೇ ದೂರ ಪ್ರಯಾಣಿಸಿದರೂ ಮಠಕ್ಕೆ ವಾಪಸ್ಸು ಬಂದು,  ಮಕ್ಕಳೊಂದಿಗೆ ಇರಬೇಕು ಎನ್ನುವುದೇ ಅವರ ಆಸೆಯಾಗಿತ್ತು. ಕೆಲ ಭಕ್ತರು ಕೋಟ್ಯಂತರ ರೂ. ಬೆಲೆಬಾಳುವ ಕಾರುಗಳಲ್ಲಿ  ಶ್ರೀಗಳನ್ನು ಕರೆದು ಕೊಂಡು ಹೋಗುತ್ತಿದ್ದರು. ಆಗ ಶ್ರೀಗಳು ಇದರ ಬೆಲೆ ಎಷ್ಟು ಎಂದು ಕೇಳುತ್ತಿದ್ದರು.  ಒಂದು ಕೋಟಿ ಬುದ್ದಿ ಎಂದರೆ, ಅಷ್ಟೊಂದು ಬೆಲೆಯೇ? ಎಂದು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದರು. “ಇಂಧನವನ್ನು ಮಿತವಾಗಿ ಬಳಸಿ. ಅನಗತ್ಯವಾಗಿ ಕಾರು ಓಡಿಸಬೇಡಿ. ಅವಶ್ಯಕತೆ ಇದ್ದರೆ ಮಾತ್ರ ಕಾರು ಬಳಸಿ’ ಎಂದೆಲ್ಲಾ ಸಲಹೆ ನೀಡುತ್ತಿದ್ದರು.

ಶ್ರೀಗಳ ಕಾರಿನಲ್ಲಿ ಬಿಸ್ಕತ್ತು ಮತ್ತು ಬಾಳೆಹಣ್ಣು ಇರುತ್ತಿತ್ತು. ಏಕೆಂದರೆ,  ದಾರಿಯಲ್ಲಿ ನಾಯಿ ಕಂಡರೆ ಶ್ರೀಗಳು ಬಿಸ್ಕತ್ತು ಹಾಕುತ್ತಿದ್ದರು. ಅದೇ ರೀತಿಯಲ್ಲಿ ಜಾನುವಾರುಗಳು ಕಂಡರೆ ಅವುಗಳಿಗೆ ಬಾಳೆಹಣ್ಣು ತಿನ್ನಿಸುತ್ತಿದ್ದರು.

ಶ್ರೀಗಳು ಮಠದ ಶಕ್ತಿಪೀಠ ಮಂಚದ ಮೇಲೆ ಕುಳಿತರೆ ಸಾಕು ನೂರಾರು ಪಾರಿವಾಳಗಳು ಮಠದ ಆವರಣಕ್ಕೆ ಬರುತ್ತಿದ್ದವು. ಅವಕ್ಕೆ ಕಾಳುಗಳನ್ನು ಹಾಕಿಸುತ್ತಿದ್ದರು. ಪ್ರಾಣಿ, ಪಕ್ಷಿ$ಗಳೆಂದರೆ ಶ್ರೀಗಳಿಗೆ ಎಲ್ಲಿಲ್ಲದ ಪ್ರೀತಿ’ ಇಷ್ಟು ಹೇಳಿದ ಮಹದೇವ ಸ್ವಾಮಿಯ ಕಣ್ಣು ತೇವವಾಯಿತು.

ಚಿ. ನಿ. ಪುರುಷೋತ್ತಮ್‌

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.