ಶರಣು ಶರಣು ಎನ್ನಿ ಅಪ್ಪಾವ್ರ ಗದ್ದುಗೆಗೆ 


Team Udayavani, Mar 23, 2019, 12:30 AM IST

95.jpg

ಕಲುಬುರ್ಗಿನಗರದ ಮಾರ್ಕೆಟ್‌ ರಸ್ತೆಯಲ್ಲಿ ಶರಣಬಸವೇಶ್ವರ ಗದ್ದುಗೆ ಇದೆ. ಲೋಕ ಪ್ರಸಿದ್ಧ ಈ ಗದ್ದುಗೆಯಲ್ಲಿ ಸದಾ ಭಕ್ತರ ದಂಡು ನೆರೆದಿರುತ್ತದೆ. ಅಪ್ಪಾ ಅವರ ದರ್ಶನ ಮಾಡಿದರೆ ಸಕಲ ಸಮಸ್ಯೆ ನಿವಾರಣೆಯಾಗುತ್ತದೆ ಎಂದೇ ನಾಡಿನ ನಾನಾ ಭಾಗದಿಂದ ಭಕ್ತಾದಿಗಳು ಪಾದ ಯಾತ್ರೆ ಬರುವುದು ಉಂಟು. ಅದರಲ್ಲೂ ಜಾತ್ರೆಯ ಸಂದರ್ಭದಲ್ಲಿ  ರಾಯಚೂರು, ಬಿಜಾಪುರ, ಬಾಗಲಕೋಟೆ ಅಷ್ಟೇ ಏಕೆ, ಮಹಾರಾಷ್ಟ್ರದ ಸೊಲ್ಲಾಪುರದಿಂದಲೂ ನಡಿಗೆಯಲ್ಲೇ ಗದ್ದುಗೆ ತಲುಪುವವರಿದ್ದಾರೆ. 

 ಯಾರು ಈ ಶರಣಬಸವೇಶ್ವರರು ಅನ್ನೋದಕ್ಕೆ ರೋಚಕ ಇತಿಹಾಸವೇ ಇದೆ. 
   ಶ್ರೀ ಶರಣಬಸವೇಶ್ವರರು ಕ್ರಿ.ಶ 1746ರಲ್ಲಿ ಕಲಬುರಗಿಯ ಜೇವರ್ಗಿ ತಾಲೂಕಿನ ಅರಳಗುಂಡಗಿ  ಗ್ರಾಮದಲ್ಲಿ ಜನಿಸಿದರು.  ಶರಣಬಸವೇಶ್ವರರು ಕಲಿಕೆಯ ದಿನಗಳಲ್ಲಿ ಅಧ್ಯಾತ್ಮದ ಕಡೆಗೆ ಹೆಚ್ಚಿನ ಒಲವು ತೋರಿದರು. ಇವರು ಚಿಕ್ಕವಯಸ್ಸಿನಲ್ಲಿಯೇ ವಿಭೂತಿ, ರುದ್ರಾಕ್ಷಿ$, ಲಿಂಗ, ಗುರು, ಜಂಗಮ, ದಾಸೋಹ ಹಾಗೂ ಕಾಯಕ… ಈ ಎಲ್ಲದರಹಿರಿಮೆಯನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಕಾಯಕ ದಾಸೋಹ , ಲಿಂಗಾಯತ ತತ್ವಗಳ ಬೋಧನೆ ಮಾಡುತ್ತಾ ಜಿಲ್ಲೆಯಾದ್ಯಂತ ಸಂಚರಿಸಿದರು.

ಶರಣಬಸವೇಶ್ವರರು ಮಹಾದೇವಿಯವರನ್ನು ಮದುವೆಯಾದರು. ನಂತರವೂ ದಾಸೋಹ, ಕಾಯಕ, ಲಿಂಗಪೂಜೆ, ಬಡವರಿಗೆ, ರೋಗಿಗಳಿಗೆ ಸೇವೆ ಮಾಡುವುದನ್ನು ಬಿಡಲಿಲ್ಲ.   ಮನೆಯಲ್ಲಿ ಅಣ್ಣತಮ್ಮಂದಿರಿಗೆ ಇವರ ಸೇವೆ ಇಷ್ಟವಾಗಲಿಲ್ಲ. ಹೀಗಾಗಿ,  ಕುಟುಂಬದ ಆಸ್ತಿಯಲ್ಲಿ ತಮ್ಮ ಪಾಲು ಪಡೆದು, ಅದರಿಂದ ಬಂದ ಹಣವನ್ನೆಲ್ಲಾ ದಾಸೋಹಕ್ಕೇ ಬಳಸಿದರು. ಇವರ ದಾಸೋಹ ಕಾಯಕ ಮನುಷ್ಯರಿಗೆ ಮಾತ್ರವಲ್ಲದೆ ಪ್ರಾಣಿ-ಪಕ್ಷಿಗಳಿಗೂ ನಡೆಯುತ್ತಿತ್ತು.

 ಶರಣಬಸವೇಶ್ವರರ ಒಳ್ಳೆಯ ಆಚಾರಗಳಿಂದ ಹಾಗೂ ಬೋಧನೆಯಿಂದ ಪ್ರಭಾವಿತರಾದವರು ಕಳ್ಳತನ, ಮೋಸ ಮತ್ತು ವಂಚನೆ ಮಾಡುವುದನ್ನು ಬಿಟ್ಟು ಕಾಯಕದಲ್ಲಿ ತೊಡಗಿದವರು. ಎಷ್ಟೋ ಮಂದಿ ಲಿಂಗ ದೀಕ್ಷೆ  ಪಡೆದು ಶರಣರಾಗಿ ಬದಲಾದರು.

  ಹೀಗಿರುವಾಗ ಶರಣಬಸವೇಶ್ವರರ ಹೆಂಡತಿ ಮತ್ತು ಮಗು ಅಕಾಲಿಕ ಮರಣಹೊಂದಿದರು. ಬಳಿಕ ಅರಳಗುಂಡಗಿಯ ಗ್ರಾಮದ ಋಣವು ತೀರಿತೆಂದು ಹಣೆಯ ಮೇಲೆ ವಿಭೂತಿ, ಹೆಗಲ ಮೆಲೆ ಒಂದು ಕಂಬಳ, ಕೊರಳಲ್ಲಿ ರುದ್ರಾಕ್ಷಿ$ ಹಾಗೂ ಶಿವನ ಮಂತ್ರವನ್ನು ಜಪಿಸುತ್ತಾ ಕಲುºರ್ಗಿಯ ಕಡೆ ಪ್ರಯಾಣ ಬೆಳೆಸಿದರು.

 ಅವರು ದಾರಿಯುದ್ದಕ್ಕೂ ಹಲವಾರು ಪವಾಡಗಳನ್ನು ಮಾಡಿ, ದಾಸೋಹವನ್ನು ನಡೆಸಿದರು.  ಔರಾದ್‌ನ ದಂಡರಾಯರು ಕೂಡ ಇವರ ದಾಸೋಹಕ್ಕೆ  ಕೈ ಜೋಡಿಸಿದರು. ಒಂದು ದಿನ ಹೈದ್ರಾಬಾದಿನ ರಾಜನು ತನ್ನ ಸೇನಾನಿಗಳೊಂದಿಗೆ ಕಂದಾಯ ಕರವನ್ನು ಕೇಳಲು ಬಂದರು. ಆಗ ಶರಣರ ದಾಸೋಹವನ್ನು ಕಂಡು ಬೆರಗಾಗಿ ಪಾದಗಳಿಗೆ ನಮಿಸಿ ಬರಿಗೈಯಲ್ಲಿ ಹೊರಟು ಹೋದರಂತೆ. ಈ ಕಾಯಕದಿಂದ ಶರಣರ ಹೆಸರು ಎಲ್ಲಡೆ ಹರಡಿತು. ಇದನ್ನು ಗಮನಿಸಿದ ಕಲುºರ್ಗಿಯ ದೊಡ್ಡಪ್ಪಗೌಡರು ಶರಣಬಸವೇಶ್ವರರನ್ನು ಕಲಬುರಗಿಗೆ ಆಹ್ವಾನಿಸಿ, ದಾಸೋಹ ನಡೆಸಲು ಮತ್ತು ಅವರು ನೆಲೆಸಲು ಜಾಗವನ್ನು ನೀಡಿದರು. ಅನ್ನ, ಜ್ಞಾನ ದಾಸೋಹ ಮಾಡುತ್ತಲೇ ಬೆಳಕಾದ ಶರಣಬಸವೇಶ್ವರರು 1824ರಲ್ಲಿ ಅನಾರೋಗ್ಯದಿಂದಾಗಿ ಲಿಂಗೈಕ್ಯರಾದರು. ನಂತರ ಅಲ್ಲಿ ಸಮಾಧಿ ನಿರ್ಮಾಣವಾಯಿತು. ಗೋಪುರ ಬಂತು. ಅದುವೇ ಇಂದು ಪವಿತ್ರವಾದ ಶ್ರೀ ಶರಣಬಸವೇಶ್ವರ ದೇವಸ್ಥಾನವಾಗಿದೆ. ಪ್ರತಿ ನಿತ್ಯ ಬೆಳಗ್ಗೆ, ಸಂಜೆ ಪೂಜೆ, ವರ್ಷದ 365 ದಿನಗಳೂ ಅನ್ನದಾಸೋಹ ನಡೆಯುತ್ತಿರುತ್ತದೆ.   ಹೋಳಿ ಹುಣ್ಣಿಮೆ ಮುಗಿದ ಐದನೇ ದಿನಕ್ಕೆ (ಈ ಸಲ ಮಾರ್ಚ್‌ 25) ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಭವ್ಯ 
ರಥೋತ್ಸವ ಜರಗುತ್ತದೆ. 

 ಮಲ್ಲಿಕಾರ್ಜುನ ಮೇತ್ರಿ, ಹಿಂಚಗೇರಾ                                                               
 

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.