“ಗಾಂಧಿ, ಅಂಬೇಡ್ಕರ್‌ ಹೈಜಾಕ್‌ ಮಾಡಿದ ಮೋದಿ’


Team Udayavani, Jan 31, 2017, 12:21 PM IST

mys2.jpg

ಮೈಸೂರು: ಪ್ರಧಾನಿ ನರೇಂದ್ರಮೋದಿ ಅವರು ಗಾಂಧಿ, ಅಂಬೇಡ್ಕರ್‌, ಜೆಪಿ, ಲೋಹಿಯಾ ಅವರನ್ನೆಲ್ಲ ವೈಚಾರಿಕವಾಗಿ ಹೈಜಾಕ್‌ ಮಾಡಿದ್ದಾರೆ ಎಂದು ಕರ್ನಾಟಕ ಸರ್ವೋದಯ ಮಂಡಲದ ಅಧ್ಯಕ್ಷ ಸುರೇಂದ್ರ ಕೌಲಗಿ ಟೀಕಿಸಿದರು.

ಹುತಾತ್ಮ ದಿನಾಚರಣೆ ಅಂಗವಾಗಿ ಸಮುದಾಯ ಮೈಸೂರು ಸೋಮವಾರ ನಗರದಲ್ಲಿ ಆಯೋಜಿ ಸಿದ್ದ “ಕಳೆದು ಹೋಗುತ್ತಿರುವ ಗಾಂಧಿ; ಆವರಿಸಿ ಕೊಳ್ಳುತ್ತಿರುವ ಗೋಡ್ಸೆ’ ಸಂವಾದದಲ್ಲಿ ಮಾತನಾಡಿದರು. ಜೆ.ಪಿ ಎಲ್ಲ ಕ್ಷೇತ್ರಗಳಲ್ಲಿ ಸಂಪೂರ್ಣ ಕ್ರಾಂತಿ ಯನ್ನು ಪ್ರತಿಪಾದಿಸಿದರೆ, ಮೋದಿ ಎಲ್ಲ ಕಡೆ ಏಕಸ್ವಾಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಖಾದಿ ಮಂಡಳಿಯ ಕ್ಯಾಲೆಂಡರ್‌ನಲ್ಲಿ ಗಾಂಧೀಜಿ ಚಿತ್ರ ಹೋಗಿ, ಪ್ರಧಾನಿಯ ಚಿತ್ರ ಬಂತು. ಕ್ಯಾಲೆಂಡರ್‌ನಲ್ಲಿ ತಮ್ಮ ಚಿತ್ರ ಹಾಕಿಕೊಂಡ ಮಾತ್ರಕ್ಕೆ ಗಾಂಧೀಜಿಯನ್ನು ಬದಲಿಸಲಾಗಲ್ಲ. ಖಾದಿ ಹಾಕಿದ ಮಾತ್ರಕ್ಕೆ ಗಾಂಧಿ ವಿಚಾರವನ್ನು ಒಪ್ಪಿದಂತಲ್ಲ ಎಂದು ಟೀಕಾ ಪ್ರಹಾರ ನಡೆಸಿದ ಅವರು, ಅಕ್ಟೋಬರ್‌ 2, ಜನವರಿ 30ರಂದು ಮಾತ್ರ ಗಾಂಧೀಜಿ ನೆನೆಯು ತ್ತಿದ್ದೇವೆ. ಈ ಎರಡು ದಿನಗಳಲ್ಲಿ ಪ್ರಧಾನಿ ರಾಜ್‌ಘಾಟ್‌ಗೆ ತೆರಳಿ ಪುಷ್ಪಗುತ್ಛ ಇರಿಸಿ ಬಂದರಾಯಿತೇ, ಅ.2ರಂದು ರಾಜ್‌ಘಾಟ್‌ನಲ್ಲಿ 2 ಗಂಟೆ ಕಾಲ ಕುಳಿತು ಪ್ರಧಾನಿ ಚರಕದಿಂದ ನೂಲಲಿ ಎಂದರು.

ದೇಶದಲ್ಲಿ ಉತ್ಪಾದನೆಯಾಗುತ್ತಿರುವ ಖಾದಿಯಲ್ಲಿ ಶೇಕಡ 90ರಷ್ಟು ನಕಲಿ ಇದೆ. ಪಾಲಿಸ್ಟರ್‌ ಸೇರಿದಂತೆ ಕೃತಕ ವಸ್ತುಗಳನ್ನು ಬೆರೆಸಲಾಗುತ್ತಿದೆ. ಇದನ್ನು ತಪ್ಪಿಸಿ ಶುದ್ಧ ಖಾದಿ ತರುವ ಸಂಕಲ್ಪವನ್ನು ಪ್ರಧಾನಿ ಮೋದಿ ಮಾಡಬೇಕು. ದೇಶದಲ್ಲಿ ಗಾಂಧಿ ವಿಚಾರದ ವಿರುದ್ಧ ನಡೆಯುತ್ತಿರುವ ಹುನ್ನಾರವನ್ನು ತಿಳಿದುಕೊಂಡು ವಿರೋಧಿಸಬೇಕಿದೆ. ಸಮಾಜ ಪ್ರಶ್ನಿಸುವ ಧೈರ್ಯವನ್ನೇ ಕಳೆದುಕೊಂಡಿದೆ. ರಾಜ್ಯ ಸರ್ಕಾರದ ಭಾಗ್ಯಗಳಿಂದ ಯಾರಿಗೆ ಒಳ್ಳೆಯದಾಗುತ್ತದೆ ಎಂದು ಪ್ರಶ್ನಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ದೇಶ ಹೋಗುತ್ತಿರುವ ದಿಕ್ಕು ಸರಿಯಿಲ್ಲ. ಆದರ್ಶ ಸಮಾಜದ ಕಡೆಗೆ ಭಾರತವನ್ನು ತರಬೇಕಿದೆ. ಗಾಂಧೀಜಿ ಒಬ್ಬರೇ ದೇಶಕ್ಕೆ ಸ್ವಾತಂತ್ರÂ ತಂದು ಕೊಡಲಿಲ್ಲ. ಅವರ ಹಿಂದೆ ಕೋಟ್ಯಂತರ ಜನರಿದ್ದರು. ಹುತಾತ್ಮ ದಿನದಂದು ಅವರೆಲ್ಲರನ್ನೂ ಸ್ಮರಿಸುವ ಕೆಲಸವಾಗಬೇಕು. ಗಡಿಕಾಯುವಾಗ ಹುತಾತ್ಮರಾಗುವ ಯೋಧರನ್ನು ನೆನೆಯಬೇಕು. ಅವರಿಲ್ಲದಿದ್ದರೆ ನಾವಿಲ್ಲಿ ನಿಶ್ಚಿಂತೆಯಿಂದ ಬದುಕಲಾಗುತ್ತಿರಲಿಲ್ಲ ಎಂದರು.

ಆವರಿಸಿಕೊಳ್ಳುತ್ತಿರುವ ಗೋಡ್ಸೆ ವಿಚಾರಗಳೊಂದಿಗೆ ಗಾಂಧಿಯನ್ನು ಮುಖಾಮುಖೀಯಾಗಿಸಬೇಕಿದೆ. ದೇಶದಲ್ಲಿ ಕೋಮು ಭಾವನೆ ಬೆಳೆಯುತ್ತಿದ್ದು, ಗಾಂಧಿಯ ಬಗ್ಗೆ ಗೌರವ ಇದ್ದರೆ ಕೋಮು ಸೌಹಾರ್ದತೆಗೆ ಒತ್ತು ಕೊಡಬೇಕು. ಮಹಮ್ಮದ್‌ ಆಲಿ ಜಿನ್ನಾನ ಹಠಮಾರಿತನದಿಂದ ಅಂದು ದೇಶ ಇಬ್ಟಾಗವಾದರೆ, ಇಂದು ಹಿಂದೂ ರಾಷ್ಟ್ರ ಎಂಬ ವಾದದಿಂದ ಮತ್ತೂಮ್ಮೆ ದೇಶ ವಿಭಜನೆಯ ಆತಂಕ ಎದುರಾಗಿದೆ ಎಂದು ಹೇಳಿದರು.

ಮೈಸೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಮುಜಾಫ‌ರ್‌ ಅಸಾದಿ ಮಾತನಾಡಿ, ಗಾಂಧಿ ಮತ್ತು ಗೋಡ್ಸೆ ಎರಡು ರೂಪಕಗಳು. ಗಾಂಧಿ ಮತ್ತು ಗೋಡ್ಸೆಯನ್ನು ಸಮನಾಗಿ ಕಾಣುವುದೇ ದೊಡ್ಡ ತಪ್ಪು. ಜಾತಿಗಳ ಮೂಲಕ ಗೋಡ್ಸೆ ರೂಪಕ ಕೆಳ, ಮಧ್ಯಮ ವರ್ಗಗಳನ್ನು ಆವರಿಸಿಕೊಳ್ಳುತ್ತಿದ್ದು, ತನ್ನ ಸಾಮಾಜಿಕ ತಳಹದಿಯನ್ನು ವಿಸ್ತರಿಸಿಕೊಳ್ಳುತ್ತಿದೆ. ಗಾಂಧಿಯನ್ನೂ ತನ್ನ ರಾಜಕೀಯದ ಭಾಗವಾಗಿ ನೋಡಲಾಗುತ್ತಿದೆ.

ಹೀಗಾಗಿ ಗೋಡ್ಸೆಯನ್ನು ಓಡಿಸುವ ಶಕ್ತಿಶಾಲಿ ಗಾಂಧಿ ನಮಗೆ ಬೇಕಿದೆ. ಅದಕ್ಕಾಗಿ ನಾವು ಹೊಸ ಗಾಂಧಿಯನ್ನು ಹುಡುಕಿಕೊಳ್ಳಬೇಕಿದೆ ಎಂದರು. ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಕೆ.ಬಸವರಾಜು ಅಧ್ಯಕ್ಷತೆವಹಿಸಿದ್ದರು. ಸಮುದಾಯ ಸಂಚಾಲಕ ವಜ್ರಮುನಿ ಹಾಜರಿದ್ದರು.

ಚರಕದ ಮುಂದೆ ನೂಲುತ್ತ ಕೂತ ಗಾಂಧಿಗೆ ನಮಿಸುವುದರ ಬದಲು, ಪ್ರಧಾನಿ ನರೇಂದ್ರ ಮೋದಿಯವರು ತಾವೇ ಚರಕದ ಮುಂದೆ ಫ್ಯಾನ್ಸಿಡ್ರೆಸ್‌ ಬಾಲಕನಂತೆ ಕೂತು ನೂಲಿಲ್ಲದೆ ನೂತಿದ್ದು! ಈ ಛದ್ಮವೇಷಕ್ಕೆ ಗಾಂಧಿಯನ್ನು ಬದಲಿಸಬಹುದಾದ ಶಕ್ತಿ ಇದೆಯೇ? ಅಸಲಿ ಅಸಲಿಯೇ; ನಕಲಿ ನಕಲಿಯೆ. ನಕಲಿಯ ಸ್ವಭಾವದಲ್ಲಿ ಥಳಕು ಹೆಚ್ಚಾಗಿರುತ್ತದೆ ಅಷ್ಟೆ.
-ದೇವನೂರ ಮಹಾದೇವ, ಸಾಹಿತಿ

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.