ಸಂವಿಧಾನ, ಕಾನೂನು ತಿಳಿಯದೆ ಅಪರಾಧ: ಎಸ್‌ಪಿ


Team Udayavani, Mar 1, 2017, 12:46 PM IST

mys2.jpg

ಹುಣಸೂರು: ದೇಶದ ಬಹುತೇಕ ಮಂದಿ ಇಂದಿಗೂ ನಮ್ಮ ದೇಶದ ಸಂವಿಧಾನ, ಕಾನೂನು ಕಾಯ್ದೆಗಳನ್ನು ಅರಿಯದ ಪರಿಣಾಮ ಪ್ರತಿ ವರ್ಷ ಶೇ 6-8ರಷ್ಟು ಪ್ರಕರಣಗಳು ಹೆಚ್ಚುತ್ತಿವೆ ಎಂದು ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ. ಡಿ. ಚನ್ನಣ್ಣನವರ್‌ ಆತಂಕ ವ್ಯಕ್ತಪಡಿಸಿದರು.

ನಗರದ ಶಿಕ್ಷಕರ ಭವನದಲ್ಲಿ ಮೈಸೂರು ಜಿಲ್ಲಾ ಪೊಲೀಸ್‌ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಮುಖ್ಯ ಶಿಕ್ಷಕರಿಗಾಗಿ ಆಯೋಜಿಸಿದ್ದ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಮತ್ತು ಪೋಕ್ಸೊ ಕಾಯ್ದೆ-2012 ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.  

ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚುತ್ತಿದ್ದು, ಇದಕ್ಕೆ ಶಾಲಾ ಆವರಣದಲ್ಲಿ ಆಗುವ ಘಟನೆಗಳಿಗೆ ಶಿಕ್ಷಕರು, ಶಾಲಾ ಆಡಳಿತ ಮಂಡಳಿ ನೇರ ಹೊಣೆಗಾರರಾಗಲಿದ್ದಾರೆ. ಪೋಕ್ಸೊ ಕಾಯ್ದೆಯಲ್ಲಿ ತೊಂದರೆಗೊಳಗಾದ ಮಗುವಿನ ಹೇಳಿಕೆ ಅಂತಿಮ. ಶಾಲಾ ಆವರಣದಲ್ಲಿ ಘಟನೆಗಳು ಸಂಭವಿಸಿದಲ್ಲಿ ಕೂಡಲೇ ದೂರು ದಾಖಲಿಸಬೇಕು. ಮಕ್ಕಳ ಜವಾಬ್ದಾರಿಯನ್ನು ಪೋಷಕರು, ಶಿಕ್ಷಕರು ಸಮಪಾಲಾಗಿ ಹೊರಬೇಕು ಎಂದರು.

ದತ್ತುಗ್ರಾಮ: ಎಚ್‌.ಡಿ.ಕೋಟೆಯ ಎನ್‌.ಬೇಗೂರು, ಕಾರಾಪುರ ಗ್ರಾಮದ ಶಾಲೆಯನ್ನು ದತ್ತು ಪಡೆದಿದ್ದು, ಈ ಶಾಲೆಗಳಿಂದ ಕನಿಷ್ಟ 10 ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಮಹತ್ತರ ಜವಾಬ್ದಾರಿ ಹೊರಲಿದೆ. ಮುಂದಿನ ದಿನಗಳಲ್ಲಿ ಪ್ರತಿ ಗುರುವಾರ ಆಯಾ ಸರಹದ್ದಿನ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ತೆರೆದ ಮನೆ ಕಾರ್ಯಕ್ರಮದಲ್ಲಿ  ಪೊಲೀಸ್‌ ಇಲಾಖೆ ಬಗ್ಗೆ ಇರುವ ಭಯವನ್ನು ದೂರಗೊಳಿಸಲಿದ್ದಾರೆಂದರು.

ಕನಕಪುರದ ಹಿರಿಯ ನ್ಯಾಯವಾದಿ ಗೋಪಾಲಗೌಡ ಪೋಕ್ಸೊ ಕಾಯ್ದೆ-2012ರ ಕುರಿತು ಮಾಹಿತಿ ಒದಗಿಸಿದರು. ಹುಣಸೂರು ಎಎಸ್‌ಪಿ ಹರೀಶ್‌ಪಾಂಡೆ ಮಾತನಾಡಿದರು. ಡಿಡಿಪಿಐ ಕಚೇರಿಯ ಇಒ ನಾಗರಾಜು, ಬಿಇಒಗಳಾದ ಆರ್‌.ಕರೀಗೌಡ, ರೇವಣ್ಣ, ಉದಯಕುಮಾರ್‌, ಕೇಂಬ್ರಿಡ್ಜ್ ಶಾಲೆಯ ಮುಖ್ಯಸ್ಥ ತಮ್ಮಣ್ಣೇಗೌಡ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹದೇವಯ್ಯ, ಹುಣಸೂರು ಬಿಇಒ ಬಿ.ಕೆ.ಶಿವಣ್ಣ, ಸಿಆರ್‌ಪಿ, ಬಿಆರ್‌ಪಿ, ಬಿಆರ್‌ಸಿ, ಇಸಿಒ, ಹಾಗೂ ಮುಖ್ಯಶಿಕ್ಷಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.