ಪುರಸಭೆಯಿಂದ ವಿದ್ಯುತ್‌ ಕಳವು: ಆರೋಪ


Team Udayavani, May 26, 2017, 12:40 PM IST

mys5.jpg

ತಿ.ನರಸೀಪುರ: ಹೈ ಮಾಸ್ಕ್ ಬೀದಿ ದೀಪಗಳಿಗೆ ಅನಧಿಕೃತವಾಗಿ ಸಂಪರ್ಕ ಪಡೆಯುವ ಮೂಲಕ ಪುರಸಭೆಯಿಂದ ವಿದ್ಯುತ್‌ ಕಳವು ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಪಟ್ಟಣದ ಸೆಸ್ಕ್ನ ಉಪವಿಭಾದ ಕಚೇರಿ ಆವರಣದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದಲೇ ಕೇಳಿಬಂದಿತು.

ಪಟ್ಟಣದಲ್ಲಿರುವ ಶ್ರೀ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ಉಪ ವಿಭಾಗದ ಕಚೇರಿ ಆವರಣದಲ್ಲಿ ನಡೆದ ಉಪ ವಿಭಾಗ ಮಟ್ಟದ ಜನಸಂಪರ್ಕ ಸಭೆಯಲ್ಲಿ ಹೈ ಮಾಸ್ಕ್ ಬೀದಿ ದೀಪಗಳು ಸೇರಿದಂತೆ ಕೆಲವು ಕಾಮಗಾರಿಗಳಿಗೆ ರಸ್ತೆಗಳಲ್ಲಿ ಹಾದು ಹೋಗಿರುವ ವಿದ್ಯುತ್‌ ಮೇನ್‌ ಲೈನ್‌ನಿಂದಲೇ ಅನಧಿಕೃತ ಸಂಪರ್ಕ ಪಡೆದುಕೊಂಡು ವಿದ್ಯುತ್‌ ಬಳಕೆ ಮಾಡಲಿಕ್ಕೆ ಪುರಸಭೆ ವಿದ್ಯುತ್‌ ಕಳ್ಳತನ ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ದಸಂಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಆಲಗೂಡು ಚಂದ್ರಶೇಖರ್‌ ಆರೋಪಿಸಿದರು.

ಕಬ್ಬು ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷ ಕಿರಗಸೂರು ಶಂಕರ್‌ ಮಾತನಾಡಿ, ಕಿರಗಸೂರು ಗ್ರಾಪಂ ವ್ಯಾಪ್ತಿಗೆ ಬರುವ ಹಳ್ಳಿಗಳಿಗೆ ಟೌನ್‌2 ನಿಂದ ವಿದ್ಯುತ್‌ ಸರಬರಾಜು ಆಗುತ್ತಿದ್ದುದ್ದನ್ನು ಸ್ಥಗಿತಗೊಳಿಸಿ, ಡಣಾಯಕಪುರ ಲೈನ್‌ ನೀಡಲಾಗಿದೆ. ಇದರಿಂದಾಗಿ ವಿದ್ಯುತ್‌ ಸರಬರಾಜು ಸಮರ್ಪಕವಾಗಿ ಸಿಗುತ್ತಿಲ್ಲದ್ದ ರಿಂದ ಕೂಡಲೇ ಟೌನ್‌ 2 ಲೈನ್‌ ಸಂಪರ್ಕ ಕಲ್ಪಿಸಬೇಕು. ಇಲ್ಲದಿದ್ದರೆ ವಿದ್ಯುತ್‌ ಬಿಲ್ಲನ್ನು ಪಾವತಿಸದ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. 

ಹೊಸ ಬೆಳಕು ಯೋಜನೆ ಎಲ್‌ಇಡಿ ಬಲ್ಬ್ಗಳು ಖಾತರಿಯಿದ್ದರೂ ಕೆಟ್ಟು ಹೋಗಿ ಬಾಳಿಕೆಗೆ ಬರುತ್ತಿಲ್ಲವಾದ್ದರಿಂದ ಬದಲಾಯಿಸಿಕೊಡುವ ವ್ಯವಸ್ಥೆಯನ್ನು ಮಾಡಿಕೊಡಬೇಕೆಂದು ಆಗ್ರಹಿಸಿದರು. ದಸಂಸ ತಾಲೂಕು ಸಂಚಾಲಕ ಕುಕ್ಕೂರು ರಾಜು ಹಾಗೂ ಡಿವೈಎಫ್ಐ ಅಧ್ಯಕ್ಷ ಸಿ.ಪುಟ್ಟಮಲ್ಲಯ್ಯ ಮಾತನಾಡಿ, ರಸ್ತೆಮಧ್ಯೆ ವಿದ್ಯುತ್‌ ಕಂಬಗಳಿದ್ದರೂ ಅವುಗಳನ್ನು ತೆರವುಗೊಳಿಸದೆ ಸಿಮೆಂಟ್‌ ರಸ್ತೆ ಕಾಮಗಾರಿ ನಡೆಸಲಾಗಿದೆ.

ಪರಿಣಾಮ ನಡು ರಸ್ತೆಯಲ್ಲಿ ವಿದ್ಯುತ್‌ ಕಂಬಗಳು ಅಪಾಯಕಾರಿಯಾಗಿ ನಿಂತಿವೆ. ಕಾಮಗಾರಿ ನಡೆಸುವ ಗುತ್ತಿಗೆದಾರರು ಮತ್ತು ಅಧಿಕಾರಿಗಳು ಇಬ್ಬರೂ ಸೆಸ್ಕ್ ಮೇಲೆ ಆರೋಪ ಹೊರಿಸುತ್ತಾರೆ ಎಂದು ಆರೋಪಿಸಿದರು. ಅಲ್ಲದೆ ಸಭೆಯಲ್ಲಿದ್ದ ಬಹುತೇಕ ಸಾರ್ವಜನಿಕರು ಮಳೆಯಿಂದ ಮತ್ತು ಮರದ ಕೊಬ್ಬೆಗಳು ಬಿದ್ದು ರಸ್ತೆಗೆ ಬಾಗಿ ಬೀಳುವ ಸ್ಥಿತಿಯಲ್ಲಿರುವ ವಿದ್ಯುತ್‌ ಕಂಬಗಳ ಬದಲಾವಣೆಗೆ ಕಿರಿಯ ಎಂಜಿನಿಯರ್‌ಗಳು ಗಮನ ಹರಿಸುತ್ತಿಲ್ಲ.

ವಿದ್ಯುತ್‌ ಕಂಬಗಳ ಸಾಲು ಇರುವ ಜಾಗಗಳತ್ತ ಓಡಾಡುವುದನ್ನು ಮರೆತು ಬಿಟ್ಟಿದ್ದಾರೆ. ಸಹಾಯಕ ಕಾರ್ಯನಿರ್ವಹಕ ಎಂಜಿನಿಯರ್‌ ಅವರಿಗೆ ಗ್ರಾಮೀಣ ಪ್ರದೇಶಗಳತ್ತ ಸಂಚರಿಸುವಂತೆ ಸೂಚನೆ ನೀಡಬೇಕೆಂದು ಒತ್ತಾಯಿಸಿದರು. ಜನರ ಅಹವಾಲು ಸ್ವೀಕರಿಸಿದ ಸೆಸ್ಕ್ನ ಅಧೀಕ್ಷಕ ಎಂಜಿನಿಯರ್‌ ಎನ್‌.ನರಸಿಂಹೇಗೌಡ ಮಾತನಾಡಿದರು. 

ಸಾಮೂಹಿಕ ಸಮಸ್ಯೆಗಳಿಗಿಂತ ವಿದ್ಯುತ್‌ ಬಳಕೆ ಮಾಡುವ ಗ್ರಾಹಕರು ನೇರವಾಗಿ ದೂರು ನೀಡುವಂತಾಗಬೇಕು. ಪುರಸಭೆ ವಿದ್ಯುತ್‌ ಕಳ್ಳತನವನ್ನು ಪರಿಶೀಲಿಸಿ, ಕೆಟ್ಟಿರುವ ಎಲ್‌ಇಡಿ ಬಲ್ಬ್ಗಳ ಬದಲಾವಣೆಗೆ ಕ್ರಮ ಕೈಗೊಳ್ಳಲಾಗುವುದು. ಕೇಳಿಬಂದ ದೂರುಗಳನ್ನು ನಿಗದಿತ ಅವಧಿಯಲ್ಲಿ ಪರಿಹರಿಸಲಾಗುವುದು. ಮೂರು ತಿಂಗಳಿಗೊಮ್ಮೆ ಸಾರ್ವಜನಿಕ ಸಂಪರ್ಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಕಾರ್ಯನಿರ್ವಹಕ ಎಂಜಿನಿಯರ್‌ ಎ.ಎ.ಸುನೀಲ್‌ಕುಮಾರ್‌, ಸಹಾಯಕ ಎಂಜಿನಿಯರ್‌ಗಳಾದ ದೊರೆಸ್ವಾಮಿ, ಸೋಮ, ಸೈಯದ್‌ ಕೌಸರ್‌ ಬೇಗಂ, ಕಿರಿಯ ಎಂಜಿನಿಯರ್‌ ಗೀತಾ, ಸಿದ್ದಮಹದೇವ, ನಾಗರಾಜು, ಹಿರಿಯ ಸಹಾಯಕ ಹೆಚ್‌.ಎನ್‌.ಶ್ಯಾಮು, ಕಿರಿಯ ಸಹಾಯಕ ಸಿ.ರವಿಕುಮಾರ್‌, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಸಿದ್ದೇಶ್‌, ಕರಾದಸಂಸ ತಾಲೂಕು ಸಂಚಾಲಕ ಬನ್ನಹಳ್ಳಿ ಸೋಮಣ್ಣ ಹಾಗೂ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.