ಪ್ರತ್ಯೇಕ ಧರ್ಮ, ಚುನಾವಣಾ ರಣತಂತ್ರ; ನಾಳೆ ಒಕ್ಕಲಿಗರು ಕೇಳ್ತಾರೆ:HDK
Team Udayavani, Jul 25, 2017, 4:06 PM IST
ಮೈಸೂರು:ಪ್ರತ್ಯೇಕ ಲಿಂಗಾಯತ ಧರ್ಮ ಪ್ರಚಾರಕ್ಕೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಯತ್ನಿಸುತ್ತಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮಂಗಳವಾರ ವಾಗ್ದಾಳಿ ನಡೆಸಿ, ಇದು ರಾಜ್ಯ ಸರ್ಕಾರದ ಕೀಳುಮಟ್ಟದ ಚಿಂತನೆಯಾಗಿದೆ ಎಂದು ಹೇಳಿದರು.
ಪ್ರತ್ಯೇಕ ಲಿಂಗಾಯತ ಧರ್ಮ ಕುರಿತ ವಿವಾದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಪ್ರಶ್ನಿಸಿದಾಗ, ಇದು ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರವಾಗಿದೆ. ಧರ್ಮ ಪ್ರಚಾರ ಸಚಿವರ ಕರ್ತವ್ಯ ಅಲ್ಲ. ರಾಜ್ಯದಲ್ಲಿನ ಬರದ ಬಗ್ಗೆ ಗಮನ ಹರಿಸಲಿ ಎಂದು ಸಲಹೆ ನೀಡಿದರು.
ಲಿಂಗಾಯತರಿಗೆ ಪ್ರತ್ಯೇಕ ಧರ್ಮಕ್ಕೆ ಅವಕಾಶ ಕೊಟ್ಟರೆ, ನಾಳೆ ಒಕ್ಕಲಿಗರು ಪ್ರತ್ಯೇಕ ಧರ್ಮಕ್ಕೆ ಮನವಿ ಮಾಡುತ್ತಾರೆ. ಆಗ ಎಲ್ಲ ಧರ್ಮಕ್ಕೂ ಪ್ರತ್ಯೇಕ ಸ್ಥಾನ ಮಾನ ಕೊಡಲಿಕ್ಕೆ ಆಗುತ್ತಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕೆಂಬುದು ಕಾಂಗ್ರೆಸ್ ಪಕ್ಷದ ಚುನಾವಣಾ ರಣತಂತ್ರವಾಗಿದೆ. ಸರ್ಕಾರದ ಈ ನಿರ್ಧಾರ ಇತರೆ ಜಾತಿಗಳಿಗೆ ಪ್ರಚೋದನೆ ನೀಡಿದಂತಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ