ಸಾವಯವ ಕೃಷಿಯಿಂದ ಲಾಭ: ರೇವಣ್ಣ 


Team Udayavani, Sep 28, 2017, 1:00 PM IST

mys44.jpg

ಬನ್ನೂರು: ರೈತ ದೇಶದ ಬೆನ್ನೆಲುಬು. ಆದರೆ ಅವನು ಬೆಳೆಯುವ ಬೆಳೆ ಒಮ್ಮೆ ಕೈ ಕೊಟ್ಟಾಗ ವ್ಯವಸಾಯವೇ ಸಾಕೆಂದು ನಿರ್ಧರಿಸುವುದು ಸಹಜ. ಆದರೆ ಭೂಮಿಯನ್ನು ನಂಬಿದ ರೈತನಿಗೆ ಭೂಮಿ ತಾಯಿ ಎಂದಿಗೂ ಆತನ ಕೈ ಬಿಡುವುದಿಲ್ಲ. ಇದಕ್ಕೆ ತಾವೇ ಸಾಕ್ಷಿ ಎಂದು ಪ್ರಗತಿಪರ ರೈತ ರಂಗಸಮುದ್ರದ ರೇವಣ್ಣ ತಿಳಿಸಿದರು. 

ಪಟ್ಟಣದ ಸಮೀಪದ ರಂಗಸಮುದ್ರ ಗ್ರಾಮದ ರೇವಣ್ಣನವರ ಬಾಳೆ ತೋಟದಲ್ಲಿ ಮೈಸೂರು, ಮಂಡ್ಯ ಚಾಮರಾಜನಗರ ಜಿಲ್ಲೆಗಳ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟ, ಮೂಸೂರು ತೋಟಗಾರಿಕಾ ಇಲಾಖೆ, ಜೆಎಸ್‌ಎಸ್‌ ಕೃಷಿ ವಿಜಾnನ ಕೇಂದ್ರ ಹಾಗೂ ರಂಗಸಮುದ್ರದ ಚೇತನ ಸಾವಯವ ಕೃಷಿಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾವಯವ ಬಾಳೆ ಬೆಳೆ ಹಾಗೂ ಪಪ್ಪಾಯ ಬೆಳೆಯ ಕ್ಷೇತ್ರೋತ್ಸವದಲ್ಲಿ ಮಾತನಾಡಿದರು.

ನಾವು ಕೃಷಿ ಮಾಡಲು ಆರಂಭಿಸಿದ ದಿನಗಳಲ್ಲಿ ಅಪಾರ ಪ್ರಮಾಣದಲ್ಲಿ ನಷ್ಟವನ್ನು ಅನುಭಿಸಿದರೂ ತಾವು ಅದರಿಂದ ಕುಗ್ಗಲಿಲ್ಲ. ಎಲ್ಲೆಡೆ ರೈತರಿಗಾಗಿ ನಡೆಯುವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ರೈತರಿಗೆ ಅಧಿಕಾರಿಗಳು ನೀಡುವ ಮಾಹಿತಿಗಳನ್ನು ಸಂಗ್ರಹಿಸಿಕೊಂಡು ತನ್ನದೇ ಆದ ಮಾರ್ಗ ರೂಪಿಸಿಕೊಂಡು ಆ ಮೂಲಕ ಕೃಷಿ ಮಾಡಲು ಮುಂದಾಗಿದ್ದೆ. ಹೀಗಾಗಿ ಉತ್ಕೃಷ್ಟ ಮಟ್ಟದ ಪಪ್ಪಾಯ ಹಾಗೂ ಬಾಳೆ ಬೆಳೆದಿರುವುದಾಗಿ ತಿಳಿಸಿದರು.

ರೈತರು ಎಂದಿಗೂ ತಮ್ಮ ಮನಸ್ಸಿನಲ್ಲಿ ಗೊಂದಲ ಮಾಡಿಕೊಳ್ಳಬಾರದು ಎಂದು ತಿಳಿಸಿದ ಅವರು, ಇಂದಿನ ಕೃಷಿ ಪದ್ಧತಿಯಲ್ಲಿ ಸ್ವಲ್ಪ$ಬದಲಾವಣೆ ಮಾಡಿಕೊಂಡು ಕೃಷಿಯಲ್ಲಿ ನವೀನ ಸುಧಾರಣೆ ರೂಢಿಸಿಕೊಳ್ಳುವಂತೆ ಕರೆ ನೀಡಿದರು. ತಾವು ಬೆಳೆದಿರುವ ಏಲಕ್ಕಿ ಬಾಳೆ ಇಂದು 25 ರಿಂದ 30 ಕೆಜಿಯಷ್ಟು ತೂಗುತ್ತಿರುವುದು ತಮಗೆ ವೈಯಕ್ತಿಕವಾಗಿ ಸಂತಸ ನೀಡಿದೆ ಎಂದರು.

ರೈತ ಮುಖಂಡ ನಾರಾಯಣ್‌, ಯಾವುದೇ ಪ್ರಶಸ್ತಿ ಬಹುಮಾನಗಳಿಗಾಗಿ ರೇವಣ್ಣ ಕೃಷಿಯಲ್ಲಿ ತೊಡಗದೇ ಕೃಷಿಯಲ್ಲಿ ಸಾವಯವ ಪದ್ಧತಿ ಅಳವಡಿಕೆ ಮಾಡಿಕೊಂಡಿದ್ದಾರೆಂದರು. ಕೃಷಿ ಪಂಡಿತ ಪುರಸ್ಕೃತ, ಸಾವಯವ ಒಕ್ಕೂಟದ ಅಧ್ಯಕ್ಷ ರಮೇಶ್‌, ಸಾವಯವ ಬೆಳೆಗೆ ಎಲ್ಲೆಡೆಯಿಂದಲೂ ಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ.

ರೈತರು ಸಾವಯ ಪದ್ಧತಿಯಲ್ಲಿ ಬೆಳೆದ ಬೆಳೆಯನ್ನು ಮಾರಾಟ ಮಾಡಲು ಸೂಕ್ತವಾದ ಒಂದು ಯೋಜನೆಯನ್ನು ರೂಪಿಸುತ್ತಿದ್ದು, ಅದು ಜಾರಿಯಾದರೆ ಸಾವಯವ ಪದ್ಧತಿಯಲ್ಲಿ ಬೆಳೆಯುವ ರೈತನ ಆರ್ಥಿಕ ಸ್ಥಿತಿ ಉತ್ತಮವಾಗುತ್ತದೆ ಎಂದು ತಿಳಿಸಿದರು. ಯಾವುದೇ ಒಬ್ಬ ರೈತ ಉತ್ತಮವಾದ ಬೆಳೆಯನ್ನು ಬೆಳೆಯುತ್ತಿದ್ದಾನೆಂದರೆ ಮತ್ತೂಬ್ಬ ರೈತ ಅಲ್ಲಿಗೆ ಭೇಟಿ ನೀಡಿ ಅವರಿಂದ ಸೂಕ್ತವಾದ ಮಾರ್ಗದರ್ಶನ ಪಡೆದುಕೊಳ್ಳುವಂತೆ ಸಲಹೆ ನೀಡಿದರು. 

ಸಹಾಯಕ ಕೃಷಿ ನಿರ್ದೇಶಕ ಡಾ.ಕೃಷ್ಣಮೂರ್ತಿ, ಸಹಾಯಕ ತೋಟಗಾರಿಕ ನಿರ್ದೇಶಕ ಫ‌ಣೀಂದ್ರ, ತೋಟಗಾರಿಕ ವಿಜಾnನಿ ಶ್ರೀನಿವಾಸ ಮಂಕಣಿ, ನಾರಾಯಣ್‌, ಮೇಗಳಕೊಪ್ಪಲು ರಂಗಸ್ವಾಮಿ, ಬನ್ನೂರು ಕೃಷ್ಣಪ್ಪ, ಜಿಪಂ ಸದಸ್ಯ ಪ್ರಶಾಂತ್‌ಬಾಬು, ಮಂಜುನಾಥ್‌, ರಂಗಸಮುದ್ರ ಗ್ರಾಮದ ಮಾಜಿ ಅಧ್ಯಕ್ಷ ರೇವಣ್ಣ, ರವಿಕುಮಾರ್‌, ಜಿಯಾವುಲ್‌ಹಕ್‌ ಮತ್ತಿತರರಿದ್ದರು.
 
ಕೃಷಿಯಲ್ಲಿ ಮಣ್ಣು ಹಾಗೂ ನೀರು ಅತ್ಯಂತ ಮುಖ್ಯವಾಗಿದೆ. ಮಳೆ ಸಂದರ್ಭದಲ್ಲಿ ಜಮೀನುಗಳಲ್ಲಿ ನೀರನ್ನು ಇಂಗಿಸಲು ಎಷ್ಟು ಸಾಧ್ಯವಿದೆಯೋ ಅಷ್ಟು ಪ್ರಮಾಣದಲ್ಲಿ ನೀರನ್ನು ಇಂಗಿಸಬೇಕು.
-ಮಂಜುನಾಥ್‌, ತೋಟಗಾರಿಕೆ ಇಲಾಖೆ ಉಪನಿರ್ದೇಶಕ

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.