“ಮಾತೃಪೂರ್ಣ’ ಯಶಸ್ವಿ ಎಂದ ಸಿಡಿಪಿಒಗೆ ತರಾಟೆ 


Team Udayavani, Nov 19, 2017, 12:14 PM IST

m5-mathru.jpg

ಎಚ್‌.ಡಿ.ಕೋಟೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಮಾತೃಪೂರ್ಣ ಯೋಜನೆ ಅಧಿಕಾರಿಗಳ ಪರಿಶ್ರಮದಿಂದಾಗಿ ತಾಲೂಕಿನಲ್ಲಿ ಶೇ.62ರಷ್ಟು ಗುರಿ ಸಾಧಿಸಿದ್ದು ಯೋಜನೆ ತಾಲೂಕಿನಲ್ಲಿ ಯಶಸ್ವಿಯಾಗಿದೆ ಎಂದು ಸಿಡಿಪಿಒ ಶೇಷಾದ್ರಿ ಹೇಳಿದರು.

ತಾಪಂ ಸಭಾಂಗಣದಲ್ಲಿ ತಾಪಂ ಅಧ್ಯಕ್ಷೆ ಮಂಜುಳಾ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಈ ವೇಳೆ ಕೆಲ ತಾಪಂ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ಏನ್ರಿ ಸಾಹೇಬರೇ ಸಭೆಗೆ ಸುಳ್ಳು ಮಾಹಿತಿ ನೀಡುತ್ತಿದ್ದೀರಿ. ಯೋಜನೆ ನಮ್ಮೂರಿನಲ್ಲಿ ಶೇ.30 ರಷ್ಟು ಕಾರ್ಯರೂಪಕ್ಕೆ ಬಂದಿಲ್ಲ.

ಇನ್ನೆಂಲ್ಲಿಂದ ಶೇ 62.ರಷ್ಟಾಗಿದೆ ಎಂದು ಅಧಿಕಾರಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ನಂತರ ಮಾತನಾಡಿದ ಸದಸ್ಯರು, ಸಂಬಂಧಪಟ್ಟ ಮೇಲಧಿಕಾರಿಗಳನ್ನು ಕರೆತಂದು ಆಯಾ ಸ್ಥಳಗಳಲ್ಲಿ ಸಭೆ ಮಾಡಿ. ಯೋಜನೆ ಯಶಸ್ವಿಗೆ ಇನ್ನಾದರೂ ಪ್ರಾಮಾಣಿಕವಾಗಿ ಶ್ರಮಿಸಿ ಎಂದು ಸೂಚಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್‌, ವೈದ್ಯನ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿನಿಯೊಬ್ಬಳು ಗ್ಯಾಗ್ರಿಂನ್‌ಗೆ ತುತ್ತಾಗಿ ಸಾವನ್ನಪ್ಪಿದ ಹಿನ್ನೆ°ಲೆಯಲ್ಲಿ ಆರೋಗ್ಯ ಇಲಾಖೆ ತಾಲೂಕು ಆಡಳಿತ ಮತ್ತು ಪೊಲೀಸ್‌ ಇಲಾಖೆ ಸಹಕಾರದೊಂದಿಗೆ ಹಂಪಾಪುರ, ಹ್ಯಾಂಡ್‌ಪೋಸ್ಟ್‌, ಹಾಗೂ ಇನ್ನಿತರ ಕಡೆ ಕಾರ್ಯನಿರ್ವಹಿಸುತ್ತಿದ್ದ ನಕಲಿ ವೈದ್ಯರ ಕ್ಲಿನಿಕ್‌ ಗಳನ್ನು ಮುಚ್ಚಿಸಲಾಗಿದೆ. ಯುವತಿ ಸಾವಿಗೆ ಕಾರಣರಾಗಿರುವ ನಕಲಿ ವೈದ್ಯನ ಮೇಲೆ ಕೇಸು ದಾಖಲಿಸಲಾಗಿದೆ ಎಂದು ತಿಳಿಸಿದರು. 

ನಿಮ್ಮ ಅಧಿಕಾರಿ ಎಲ್ಲಿ?: ಇನ್ನೂ ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕರು ಸಭೆಗೆ ಬಾರದೆ ಕಚೇರಿ ಸಿಬ್ಬಂದಿಯನ್ನು ಸಭೆಗೆ ಕಳುಹಿಸಿದ್ದರು. ಈ ವೇಳೆ, ಕೆಲ ಸದಸ್ಯರು ಸಭೆಗೆ ಬಂದಿದ್ದವರನ್ನು ನಿಮ್ಮ ಅಧಿಕಾರಿ ಎಲ್ಲಿ, ನೀವ್ಯಾಕೆ ಬಂದಿದ್ದೀರಿ. ತಾಲೂಕಿನಲ್ಲಿ ರೇಷ್ಮೆ ಬೆಳೆದ ರೈತ ಕಳೆದ 3ಬೆಳೆಗಳಲ್ಲೂ ಸಂಪೂರ್ಣವಾಗಿ ನಷ್ಟ ಅನುಭವಿಸಿದ್ದಾನೆ ಎಂದು ಪ್ರಶ್ನೆ ಮೇಲೆ ಪ್ರಶ್ನೆ ಹಾಕಿದಾಗ, ಸಭೆಗೆ ಬಂದಿದ್ದವರು ತಬ್ಬಿಬ್ಟಾದರು. 

ಜೊತೆಗೆ ಇಲಾಖೆಯಿಂದ ರೈತರಿಗೆ ನೀಡಿರುವ ರೇಷ್ಮೆ ಪರಿಕರ ತುಂಬಾ ಕಳಪೆ ಗುಣಮಟ್ಟದ್ದಾಗಿವೆ. 5 ಸಾವಿರ ರೂ., ಮುಖ ಬೆಲೆ ಮೋಟರ್‌ ಗೆ 25 ಸಾವಿರ ರೂ. ಬಿಲ್‌ ಹಾಕಿದ್ದೀರಿ ಹೇಗೆ ಎಂದು ಹಿಗ್ಗಾಮುಗ್ಗಾ ತರಟೆ ತಗೆದುಕೊಂಡರು. ನಂತರ ಸಭೆಗೆ ಬಂದ ಅಧಿಕಾರಿ ಮಾತನಾಡಿ, ರೇಷ್ಮೆ ಬೆಳೆ 3ಬಾರಿಯೂ ಕೈಕೊಡಲು ಜಾಗದ ತೊಂದರೆ ಇರಬಹುದು. ಇನ್ನೂ ರೇಷ್ಮೆ ಚಂದ್ರಿಕೆ ಸೇರಿದಂತೆ ಪರಿಕರ ಕಳಪೆಯಾಗಿರುವುದು ಕಂಡು ಬಂದಿದೆ ಎಂದರು. 

ತಾಪಂ ಉಪಾಧ್ಯಕ್ಷೆ ಮಂಜುಳಾ, ಸ್ಥಾಯಿ ಸಮಿತಿ ಅಧ್ಯಕ್ಷ ಶಂಬೇಗೌಡ, ಸದಸ್ಯರಾದ ಅಂಕನಾಯ್ಕ, ಸುಂದರನಾಯ್ಕ, ಸ್ಟ್ಯಾನಿ ಬಿಟ್ಟೋ, ಬಿ.ಸಿ.ರಾಜು, ಸೇರಿದಂತೆ ಎಲ್ಲಾ ಸದಸ್ಯರಿದ್ದರು. ತಾಲೂಕು ಅಧಿಕಾರಿಗಳಾದ ಕೃಷಿ ಅಧಿಕಾರಿ ಜಯರಾಮಯ್ಯ, ತೋಟಗಾರಿಕೆ ಅಧಿಕಾರಿ ಸಿದ್ದರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಸುಂದರ, ತಾಪಂ ಇಒ ಶ್ರೀಕಂಠರಾಜೇಅರಸ್‌, ತಾಲೂಕು ಅರಣ್ಯಾಧಿಕಾರಿ ಗೀತಾಮಣಿ, ಎಇಇ ಸುನೀಲ್‌, ಪ್ರದೀಪ್‌, ತಾಪಂ ಸಿಬ್ಬಂದಿ ಮಂಜುನಾಥ್‌, ಗುರು, ಸಿದ್ದು, ನಂಜುಂಡಸ್ವಾಮಿ ಇದ್ದರು. 

ತಾಲೂಕಿನಲ್ಲಿ ಲ್ಯಾಬ್‌ಗಳು ಮತ್ತು ಕ್ಲಿನಿಕ್‌ಗಳು ಸೇರಿ ಒಟ್ಟು 42 ನಕಲಿ ಕ್ಲಿನಿಕ್‌ಗಳು ಇದ್ದು, ಎಲ್ಲಾ ಕಡೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ. ಮುಂದೆ 2 ತಿಂಗಳಿಗೊಮ್ಮೆ ಭೇಟಿ ನೀಡಿ ನಕಲಿ ವೈದ್ಯರು ತಾಲೂಕಿನಲ್ಲಿ ಕಂಡು ಬಾರದಂತೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
-ಡಾ.ರವಿಕುಮಾರ್‌, ತಾಲೂಕು ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.