ರಾತ್ರಿ ವೇಳೆಯೂ ಸ್ವಚ್ಛ ಸರ್ವೇಕ್ಷಣಾ ಸ್ವಚ್ಛತಾ ಕಾರ್ಯ
Team Udayavani, Nov 24, 2017, 1:09 PM IST
ಎಚ್.ಡಿ.ಕೋಟೆ: ಪಟ್ಟಣವು ಸ್ವಚ್ಛ ಸರ್ವೇಕ್ಷಣಾ-2018 ಕ್ಕೆ ಸೇರ್ಪಡೆಯಾಗಿದ್ದು, ಹೆಚ್ಚಿನ ಶ್ರೇಯಾಂಕಗಳಿಸುವ ನಿಟ್ಟಿನಲ್ಲಿ ರಾತ್ರಿ ವೇಳೆಯಲ್ಲೂ ವಾಣಿಜ್ಯ ಸಂಕೀರ್ಣಗಳು ಹೆಚ್ಚಿರುವ ಕಡೆಗಳಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಗಿ ಪುರಸಭೆ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯ ಕೈಗೊಂಡರು.
ಪುರಸಭೆ ಮುಖ್ಯಾಧಿಕಾರಿ ಡಿ.ಎನ್.ವಿಜಯ್ಕುಮಾರ್ ರಾತ್ರಿ ವೇಳೆ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಸ್ವಚ್ಛ ಸರ್ವೇಕ್ಷಣಾ ಯೋಜನೆಯಡಿ ರಾತ್ರಿ ವೇಳೆಯಲ್ಲೂ ವ್ಯಾಪಾರ ವಾಹಿವಾಟು ಹೆಚ್ಚಿರುವ ವಾಣಿಜ್ಯ ಸಂಕೀರ್ಣ ಮತ್ತು ಮುಖ್ಯ ರಸ್ತೆಗಳು ಹಾಗೂ ಹೆದ್ದಾರಿ ರಸ್ತೆಗಳಲ್ಲಿ ಸ್ವಚ್ಛತೆ ಕೈಗೊಳ್ಳಲು ಅವಕಾಶವಿದೆ.
ಮುಂದಿನ ವರ್ಷದ ಜನವರಿ-2018,ಕ್ಕೆ ಪಟ್ಟಣಕ್ಕೆ ಸ್ವಚ್ಛ ಸರ್ವೇಕ್ಷಣಾ ತಂಡ ಪಟ್ಟಣಕ್ಕೆ ಆಗಮಿಸುತ್ತಿದ್ದು ಇಲ್ಲಿ ಸ್ವಚ್ಛತಾ ಪರಿಶೀಲನೆ ನಡೆಸಲಿದ್ದಾರೆ. ಹಾಗಾಗಿ ಪಟ್ಟಣದ ಸ್ವಚ್ಛತೆ ಜೊತೆಗೆ ಸ್ವಚ್ಛ ಸರ್ವೇಕ್ಷಣಾ ಯೋಜನೆಯಡಿ ಹೆಚ್ಚಿನ ಶ್ರೇಯಾಂಕಗಳಿಸುವ ನಿಟ್ಟಿನಲ್ಲಿ ರಾತ್ರಿ ವೇಳೆಯೂ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು.
ಈ ಸಂದರ್ಭ ಎಚ್.ಡಿ.ಕೋಟೆ ಪೊಲೀಸ್ ಠಾಣೆ ಆರಕ್ಷಕ ಉಪನಿರೀಕ್ಷಕರಾದ ಆಶೋಕ್ ಸೇರಿದಂತೆ ಪುರಸಭೆ ಪೌರಕಾರ್ಮಿಕ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ