ನಾಗರಹೊಳೆಯಲ್ಲಿ ಹುಲಿಗಣತಿ ಅಂತ್ಯ


Team Udayavani, Jan 15, 2018, 4:30 PM IST

mys-.jpg

ಹುಣಸೂರು: ಆರು ದಿನಗಳ ಕಾಲ ನಾಗರಹೊಳೆ ರಾಷ್ಟ್ರೀಯ ಉದ್ಯಾನ ದಲ್ಲಿ ನಡೆದ ರಾಷ್ಟ್ರೀಯ ಹುಲಿಗಣತಿ ಅಂತ್ಯಗೊಂಡಿತು. ವನ್ಯಜೀವಿ ಆಸಕ್ತ ಸ್ವಯಂಸೇವಕರು ಹಾಗೂ ಪೊನ್ನಂ ಪೇಟೆ ಅರಣ್ಯ ತರಬೇತಿ ಕಾಲೇಜಿನ
ವಿದ್ಯಾರ್ಥಿಗಳು ಗಣತತಿ ವೇಳೆ ಹುಲಿಕಂಡ ಖುಷಿಯಲ್ಲಿ ವಾಪಸ್‌ ಆದರು.

ಮೊದಲ ಮೂರುದಿನ ಮಾಂಸಹಾರಿ, ನಂತರದ ಮೂರು ದಿನ ಸಸ್ಯಹಾರಿ ಪ್ರಾಣಿಗಳ ಗಣತಿ ಹಾಗೂ ಉದ್ಯಾನದಲ್ಲಿ ವನ್ಯಜೀವಿಗಳ ಆಹಾರ ಹಾಗೂ ಜೀವ ವೈವಿಧ್ಯತೆ ಮತ್ತು ಉದ್ಯಾನದ ಪರಿಸರ, ಸ್ಥಿತಿಗತಿ ಬಗ್ಗೆ ಗಣತಿ ನಡೆಸಿ, ವೆಜ್ಞಾನಿಕವಾಗಿ ದಾಖಲು ಮಾಡಿರುವ ಎಲ್ಲ ಮಾಹಿತಿಯನ್ನು ಇಲಾಖೆಗೆ ಸಲ್ಲಿಸಿದ್ದಾರೆ. 

ಗಣತಿ ವಿವರ ದಾಖಲು: ಕಡಿಮೆ ಪ್ರದೇಶದಲ್ಲಿ ಹೆಚ್ಚು ಹುಲಿ ಸಾಂದ್ರತೆ ಇರುವ ನಾಗರಹೊಳೆ ಉದ್ಯಾನದಲ್ಲಿ
ಒಟ್ಟಾರೆ ಗಣತಿಯಲ್ಲಿ 15ಕ್ಕೂ ಹೆಚ್ಚು ಹುಲಿ, ಮೂರು ಚಿರತೆ ಸೇರಿದಂತೆ ಸಾಕಷ್ಟು ಆನೆ, ಜಿಂಕೆ, ಸಾಂಬಾರ್‌
ಜಿಂಕೆ, ಕಾಡೆಮ್ಮೆ, ಕಾಡುಕುರಿ, ಕಾಡುಹಂದಿ, ಮುಳ್ಳುಹಂದಿ, ಕಾಡು ಕೋಳಿ, ಉಡ, ಪಕ್ಷಿಗಳು ಸೇರಿದಂತೆ ಉದ್ಯಾನದಲ್ಲಿನ ವನ್ಯಜೀವಿಗಳನ್ನು ಕಂಡಿದ್ದಾರೆ. ಇವೆಲ್ಲದರ ಜೊತೆಗೆ ಗಣತಿ ದಾರರು ಪ್ರಾಣಿಗಳಿಗೆ ಕಾಡಿನೊಳಗೆ ಲಭ್ಯವಿರುವ ಹುಲ್ಲು, ವಿವಿಧ ಜಾತಿಯ ಮರಗಳ ವಿವರ ದಾಖಲಿಸಿದರು.

ಇತ್ತ ಮೈಸೂರು, ಕೊಡಗು, ಕೇರಳದ ಮಧಮಲೆ, ತಮಿಳುನಾಡಿನ ವೈನಾಡುಗಡಿ ಭಾಗದವರೆಗೆ ಪಶ್ಚಿಮಘಟ್ಟಗಳ (ಬ್ರಹ್ಮಗಿರಿ) ಸಾಲಿನಲ್ಲಿ ಸೇರಿ ಹಸಿರು ಹಾಸು ಹೊಕ್ಕಾಗಿರುವ ಈ ವಿಶ್ವ ವಿಖ್ಯಾತ ನಾಗರಹೊಳೆ (ರಾಜೀವ್‌ ಗಾಂಧಿ) ರಾಷ್ಟ್ರೀಯ ಉದ್ಯಾನವನದ 643 ಚದರ ಕಿ.ಮೀ ವ್ಯಾಪ್ತಿಯ 8 ವಲಯಗಳಲ್ಲಿ ಕೊಡಗು ಜಿಲ್ಲೆಗೆ ಸೇರಿದ ಆನೆಚೌಕೂರು, ಕಲ್ಲಹಳ್ಳ, ವೀರನಹೊಸಹಳ್ಳಿ, ನಾಗರ ಹೊಳೆ, ಡಿ.ಬಿ.ಕುಪ್ಪೆ, ಅಂತರಸಂತೆ, ಮೇಟಿಕುಪ್ಪೆಗಳಲ್ಲಿ ಹುಣಸೂರು ವಲಯಗಳನ್ನಾಗಿ ವಿಂಗಡಿಸಿದ್ದು, ನಾಗರಹೊಳೆ ಉದ್ಯಾನದ ನುಗು ಜಲಾಶಯ, ಕಬಿನಿ ಹಿನ್ನೀರು ಪ್ರದೇಶದ ದಟ್ಟ ಕಾಡಿರುವ ಡಿ,ಬಿ,ಕುಪ್ಪೆ, ಮೇಟಿಕುಪ್ಪೆ, ಅಂತರ ಸಂತೆಯಲ್ಲಿ ಮತ್ತು ಹೆಚ್ಚಾಗಿ ಹುಲಿಗಳು ಕಾಣಿಸಿದೆ, ಕಲ್ಲಹಳ್ಳ ವಲಯದಲ್ಲಿ ರಸ್ತೆ ಬದಿಯೇ ಹುಲಿ ಕಾಣಿಸಿಕೊಂಡಿದ್ದರೆ, ಹುಣಸೂರು ವಲಯದಲ್ಲಿ ಎರಡು, ವೀರನಹೊಸಹಳ್ಳಿಯಲ್ಲಿ ಒಂದು ಮಾತ್ರ ಗಣತಿ ವೇಳೆ ಗೋಚರಿಸಿದೆ. ಹಲವು ಸ್ವಯಂ ಸೇವಕರು ಹಾಗೂ ಸಿಬ್ಬಂದಿಗಳು ಮತ್ತು ವನ್ಯಜೀವಿ ಛಾಯಾ ಚಿತ್ರಗ್ರಾಹಕರು ನೇರವಾಗಿ ಕಂಡ ಪ್ರಾಣಿಗಳನ್ನು ಸೆರೆ ಹಿಡಿದಿದ್ದಾರೆ.

ಉದ್ಯಾನದ 8 ವಲಯಗಳಲ್ಲೂ ಆಯಾ ವಲಯದ ವಲಯ ಅರಣ್ಯಾಕಾರಿಗಳ ಮೇಲುಸ್ತು ವಾರಿಯಲ್ಲಿ ಗಣತಿ ಕಾರ್ಯ ನಡೆದಿದೆ. ಆಯಾ ವಿಭಾಗದ ಎಸಿಎಫ್ಗಳಾದ ಪ್ರಸನ್ನಕುಮಾರ್‌,ಆಂಥೋಣಿ ಪೌಲ್‌, ಪೂವಯ್ಯ ಅವರು ಸ್ಥಳದಲ್ಲೇ ಮೊಕ್ಕಾಂ ಹೂಡಿ ವ್ಯವಸ್ಥಿತ ಗಣತಿಗೆ ಹಾಗೂ ಆಗಮಿಸಿದ್ದವರಿಗೆ ಸೌಕರ್ಯ ಒದಗಿಸಲು ಶ್ರಮಹಾಕಿದರು. 

„ ಸಂಪತ್‌ ಕುಮಾರ್‌

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.