ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದ ದಿಟ್ಟಗಾತಿ ಪುಲೆ 


Team Udayavani, Jan 21, 2018, 12:02 PM IST

m3-hennumakk.jpg

ಹುಣಸೂರು: ಹೆಣ್ಣುಮಕ್ಕಳ ಓದಿಗೆ ವಿರೋಧವಿದ್ದ 18ನೇ ಶತಮಾನದಲ್ಲಿ ಪೇಶಾ ಹಾಗೂ ಇತರೆ ಬಲಿಷ್ಠ ಸಮಾಜದ ವಿರೋಧ ಕಟ್ಟಿಕೊಂಡು ಸಾಕಷ್ಟು ಸಂಕಟ ಅನುಭವಿಸಿ ಹೆಣ್ಣು ಮಕ್ಕಳು ಶಿಕ್ಷಣ ವಂತರಾಗಬೇಕು ಎಂದು ಹೋರಾಟ ನಡೆಸಿದ ದಿಟ್ಟಗಾತಿ ಸಾವಿತ್ರಜ್ಯೋತಿಬಾಪುಲೆ ಎಂದು ರಾಜ್ಯ ಸೋಲಿಗ ಮಹಿಳಾ ಸಂಘದ ಅಧ್ಯಕ್ಷೆ ರತ್ನಮ್ಮ ಬಣ್ಣಿಸಿದರು.

ನಗರದ ಮಹಿಳಾ ಸರಕಾರಿ ಪದವಿ ಕಾಲೇಜಿನಲ್ಲಿ ಐಕ್ಯೂ.ಎ.ಸಿ ಮತ್ತು ಮಹಿಳಾ ದೌರ್ಜನ್ಯ ತಡೆ ಸಮಿತಿಯಿಂದ ಸಾವಿತ್ರಿಜ್ಯೋತಿ ಬಾಪುಲೆ ಜಯಂತಿ ಸಮಾರಂಭದಲ್ಲಿ ಮಾತನಾಡಿ, ಮಹಿಳೆಯರಿಗಾಗಿ 18ನೇ ಶತಮಾನದಲ್ಲೇ ಶಿಕ್ಷಣ ಕ್ರಾಂತಿ ನಡೆಸಿದ ಸಾವಿತ್ರಿ ಜ್ಯೋತಿಬಾಪುಲೆ ಮಹಿಳೆಯರ ಶಿಕ್ಷಣದ ಮೊದಲ ಗುರು, ಅವರ ಹೋರಾಟವೇ ಇಂದಿನ ಹೆಣ್ಣುಮಕ್ಕಳ ಶೈಕ್ಷಣಿಕ ಕ್ರಾಂತಿ ಎಂದರು.

ನಮ್ಮ ವಿದ್ಯಾರ್ಥಿಗಳು ಅವರ ಹೋರಾಟದ ಬದುಕನ್ನು ಅರಿಯಬೇಕು ಹಾಗೂ ಅಂಬೇಡ್ಕರರ ಆಶಯದಂತೆ ದೇವಸ್ಥಾನದ ಬದಲು ಗ್ರಂಥಾಲಯ ಮುಂದೆ ಸಾಲು ಇದ್ದಾಗಮಾತ್ರ ದೇಶದ ಪ್ರಗತಿ ಸಾಧ್ಯವೆಂದಿದ್ದ ಅವರ ಆಶಯವನ್ನು ವಿದ್ಯಾರ್ಥಿಗಳು ಪಾಲಿಸಬೇಕು ಎಂದು ತಿಳಿಸಿದರು.

ಜಿಪಂ ಸದಸ್ಯೆ ಡಾ.ಪುಷ್ಪಾ$ಅಮರ್‌ನಾಥ್‌ ಮಾತನಾಡಿ, ಜ್ಯೋತಿ ಬಾಪುಲೆಯವರು ದೇಶದ ಮಹಿಳಾ ಪ್ರಥಮ ಶಿಕ್ಷಕಿ, ಅಂತರ್ಜಾತಿ ವಿವಾಹವಾಗಿದ್ದ ಅವರು ಲಿಂಗ ಸಮಾನತೆಗಾಗಿ, ಹೆಣ್ಣು ಬ್ರೂಣ ಹತ್ಯೆ, ಸತಿ ಸಹಗಮನ ಪದ್ಧತಿ, ವರದಕ್ಷಿಣೆ ವಿರುದ್ಧ ಹೋರಾಟ ನಡೆಸಿದ ಇವರು  ಕ್ರಾಂತಿಕಾರಕ ಬದಲಾವಣೆ ತಂದ ಸಾಕ್ಷರತೆಯ ಮಹಾನ್‌ ಸಾಧಕಿಯೆಂದು ಅಭಿಪ್ರಾಯಪಟ್ಟರು.

ಪ್ರಮಾಣ ಪತ್ರ ವಿತರಣೆ: ವಿದ್ಯಾರ್ಥಿಗಳಲ್ಲಿ ಸ್ವಯಂ ಉದ್ಯೋಗ ಸೃಷ್ಟಿಸಿಕೊಳ್ಳುವ ಹಿನ್ನೆಲೆಯಲ್ಲಿ ಬಿಜೆಎಸ್‌ ಜೈನ್‌ ಸಂಸ್ಥೆಯಿಂದ ವಿವಿಧ ಕೌಶಲ್ಯ ತರಬೇತಿ ಪಡೆದ 60 ವಿದ್ಯಾರ್ಥಿನಿಯರಿಗೆ ಪ್ರಮಾಣಪತ್ರ ವಿತರಿಸಿದ ಶಾಸಕ ಎಚ್‌.ಪಿ.ಮಂಜುನಾಥ್‌, ವಿದ್ಯಾರ್ಥಿಗಳು ಸೋಲಿಗ ಮಹಿಳೆ ರತ್ನಮ್ಮರನ್ನು ಮಾದರಿಯಾಗಿಸಿಕೊಳ್ಳಬೇಕು, ಅಸಡ್ಡೆ, ನಿರಾಸಕ್ತಿ ಬಿಟ್ಟು ಓದುವ ಛಲವಿರಬೇಕು, ಹೆಣ್ಣು ಮಕ್ಕಳು ಗುರಿಸಾಧನೆಯ ನಂತರ ಮದುವೆ ಆಲೋಚನೆ ಮಾಡಬೇಕು, ಮದುವೆ ಸಂದರ್ಭದಲ್ಲಿ ಸಂಗಾತಿಯಾಗುವವರ ಬಗ್ಗೆ ಪೂರ್ಣ ತಿಳಿದುಕೊಳ್ಳುವುದು ಒಳಿತೆಂದು ಹೇಳಿದರು.

ಪ್ರಾಚಾರ್ಯ ಜ್ಞಾನಪ್ರಕಾಶ್‌, ಉಪನ್ಯಾಸಕರಾದ ಐಕ್ಯೂ.ಎ.ಸಿ.ಸಂಚಾಲಕ ಪುಟ್ಟಶೆಟ್ಟಿ, ಮಹಿಳಾ ದೌರ್ಜನ್ಯ ತಡೆ ಸಮಿತಿ ಸಂಚಾಲಕ ನಂಜುಂಡಸ್ವಾಮಿ, ಕ್ಷೇಮಪಾಲನಾ ಸಮಿತಿ ಸಂಚಾಲಕ ಬಿ.ಎಂ.ನಾಗರಾಜ್‌, ಸಿಡಿಸಿ ಕಾರ್ಯಾಧ್ಯಕ್ಷ ಗೋವಿಂದರಾಜಗುಪ್ತ ಇತರರು ಇದ್ದರು.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.