ಗ್ರಾಮೀಣ ಸೊಗಡು ನಗರಗಳನ್ನು ವ್ಯಾಪಿಸಬೇಕು


Team Udayavani, Jan 21, 2018, 12:02 PM IST

m1-gramina.jpg

ತಿ.ನರಸೀಪುರ: ಗಣಕೀಕೃತ ಕ್ರೀಡೆಗಳಿಗೆ ಸಿಮೀತರಾಗಿ, ಕೆಲಸದೊತ್ತಡದಿಂದ ಬಳಲುತ್ತಿರುವ ನಗರ ವಾಸಿಗಳು ಗ್ರಾಮೀಣರಂತೆ ಸದೃಢ ಆರೋಗ್ಯ  ಹೊಂದಲು ಗ್ರಾಮೀಣ ಸೊಗಡು ನಗರ ಪ್ರದೇಶಗಳನ್ನು ವ್ಯಾಪಿಸುವ ಅಗತ್ಯವಿದೆ ಎಂದು ಮಾಜಿ ಶಾಸಕ ಡಾ.ಎನ್‌.ಎಲ್‌.ಭಾರತೀಶಂಕರ್‌ ಹೇಳಿದರು.

ಪಟ್ಟಣದ ಹಳೇ ತಿರುಮಕೂಡಲಿನ ಬಳಿ ರಾಷ್ಟ್ರೀಯ ಹೆದ್ದಾರಿ 212ರ ಬದಿಯಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರ ಹಬ್ಬದ ಪ್ರಯುಕ್ತ ಯುವಕರ ಸ್ನೇಹ ಬಳಗದಿಂದ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಹಚ್ಚ ಹಸಿರಿನ ನಡುವೆ ದುಡಿಮೆಮಾಡಿ, ದೇಹಕ್ಕೆ ಸದೃಢತೆಯನ್ನು ನೀಡುವ ಕ್ರೀಡಾಕಕೂಟಗಳಲ್ಲಿ ಭಾಗವಹಿಸುವ ಹಳ್ಳಿಗಾಡಿನ ಜನರ ಬದುಕು ನಗರವಾಸಿಗಳಿಗೆ ಸಿಗಬೇಕಾದ ಗ್ರಾಮೀಣ ಸೊಗಡನ್ನು ನಗರಗಳಿಗೆ ಕೊಂಡೋಯ್ಯಬೇಕಿದೆ ಎಂದರು. 

ಕಾರ್ಮಿಕ ಹಾಗೂ ಐತಿಹಾಸಿಕ ಹಿನ್ನಲೆಯಲ್ಲಿರುವ ತಿರುಮಕೂಡಲು ನರಸೀಪುರ ರಾಜ್ಯ ಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಗೂ ಹೆಸರುವಾಸಿಯಾಗುತ್ತಿದೆ. ದುಡಿಯುವ ರೈತ ಸಮೂಹಕ್ಕೆ ಹಾಗೂ ಜಾನುವಾರುಗಳಿಗೆ ಕ್ರೀಡಾಕೂಟಗಳು ಅನಿವಾರ್ಯತೆಯಿದೆ.

ಗ್ರಾಮ ದೇವತೆ ಶ್ರೀ ಚೌಡೇಶ್ವರಿ ಅಮ್ಮನವರ ಜಾತ್ರೋತ್ಸವ ಸಂಭ್ರಮದ ನಡುವೆ ಯುವಕರ ಸ್ನೇಹ ಬಳಗ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ಆಯೋಜಿಸಿರುವುದು ಸೂಕ್ತವಾಗಿದೆ. ಇಂತಹ ಗ್ರಾಮೀಣ ಕ್ರೀಡಾಕೂಟಗಳಿಗೆ ನಮ್ಮ ನಿರಂತರ ಬೆಂಬಲದೊಂದಿಗೆ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು.

ಜಿಪಂ ಸದಸ್ಯ ಎಂ.ಅಶ್ವಿ‌ನ್‌ಕುಮಾರ್‌ ಮಾತನಾಡಿ, ಕ್ರೀಡಾಕೂಟಗಳಲ್ಲಿ ಸೋಲು ಗೆಲುವು ಎರಡನ್ನೂ ಸಮಾನತೆಯ ಭಾವನೆಯಿಂದ ಸ್ವೀಕರಿಸುವ ಕ್ರೀಡಾ ಮನೋಭಾವನೆ ಮುಖ್ಯವಾಗಿರಬೇಕು. ಪ್ರತಿ ವರ್ಷವೂ ತಿರುಮಕೂಡಲು ನರಸೀಪುರದಲ್ಲಿ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಬರಲಾಗುತ್ತಿದೆ.

ಕ್ರೀಡಾಕೂಟವನ್ನು ಆಯೋಜಿಸುವ ಸಂದರ್ಭದಲ್ಲಿ ಸವಾಲುಗಳು ಮತ್ತು ಸಮಸ್ಯೆಗಳು ಎದುರಾಗುತ್ತವೆ. ಎಲ್ಲವನ್ನೂ ಸಹನೆ ಮತ್ತು ತಾಳ್ಮೆಯಿಂದ ಎದುರಿಸಿ ಮುನ್ನೇಡೆಯಬೇಕೆಂದು ಸಲಹೆ ನೀಡಿದರು. ವಾಟಾಳು ಮಠದ ಸಿದ್ಧಲಿಂಗಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಅಪರ ಆಯುಕ್ತ ಹೆಳವರಹುಂಡಿ ಸಿದ್ಧಪ್ಪ, ಪಪಂ ಮಾಜಿ ಅಧ್ಯಕ್ಷ ವಿರೇಶ್‌, ಹಂಚ್ಯಾ ಗ್ರಾಪಂ ಅಧ್ಯಕ್ಷ ಮಂಜು, ಪುರಸಭೆ ಸದಸ್ಯ ಟಿ.ಜಿ.ಪುಟ್ಟಸ್ವಾಮಿ, ಕಸಾಪ ಯೋಜನಾ ಸಮಿತಿ ಅಧ್ಯಕ್ಷ ಕನ್ನಡ ಪುಟ್ಟಸ್ವಾಮಿ, ಉಪನ್ಯಾಸಕ ಕುಮಾರಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ವಿ.ಶಿವಶಂಕರಮೂರ್ತಿ, ಶ್ರೀ ಬಸವೇಶ್ವರ ಗ್ಯಾಸ್‌ ಏಜೆನ್ಸಿ ಮಾಲೀಕ ಕೆ.ಎಸ್‌.ಜಗದೀಶ್‌,

ಗ್ರಾಪಂ ಸದಸ್ಯ ಎಂ.ಬಿ.ಸಾಗರ್‌, ಯಜಮಾನ್‌ ಕೃಷ್ಣಪ್ಪ, ಶ್ರೀ ಚೌಡೇಶ್ವರಿ ಯುವಕರ ಸ್ನೇಹ ಬಳಗದ ಅಧ್ಯಕ್ಷ ಮಣಿಕಂಠರಾಜ್‌ಗೌಡ, ಬ್ಲಿಸ್ಸಡ್‌ ಟ್ರಸ್ಟ್‌ನ ಅಧ್ಯಕ್ಷ ಡಿ.ನಿಂಗರಾಜು, ಗೌಡ್ರು ಮಲ್ಲಪ್ಪ, ಮುಖಂಡರಾದ ದಕ್ಷಿಣಾಮೂರ್ತಿ, ಭೈರಾಪುರ ದಿಲೀಪ್‌, ಬಾಗಳಿ ಯೋಗೇಶ್‌, ತಲಕಾಡು ಸುಂದರನಾಯಕ, ಮಾವಿನಹಳ್ಳಿ ರಾಜೇಶ್‌ ಹಾಗೂ ಇನ್ನಿತರರು ಹಾಜರಿದ್ದರು.

ಕಿಡಿಗೇಡಿಗಳ ಅಪಪ್ರಚಾರಕ್ಕೆ ಕಿಡಿ: ಹಳೇ ತಿರುಮಕೂಡಲಿನಲ್ಲಿ ರಾಜ್ಯ ಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ರದ್ದುಗೊಳಿಸಲಾಗಿದೆ ಎಂದು ಕೆಲವು ಕಿಡಿಗೇಡಿಗಳು ಅಪಪ್ರಚಾರವನ್ನು ಮಾಡಿದ್ದರಿಂದ ಸ್ಪರ್ಧೆ ಎರಡು ತಾಸುಗಳ ಕಾಲ ತಡವಾಗಿ ಆರಂಭವಾಯಿತು.

ಹಣವನ್ನು ಮಾಡಲಿಕ್ಕೆ ಕ್ರೀಡಾಕೂಟವನ್ನು ಆಯೋಜಿಸಿದ್ದೇನೆ ಎಲ್ಲಿ ಬೆಳೆದುಬಿಡುತ್ತೇನೆ ಎಂಬ ಭಾವನೆಯಿಂದ ನಿನ್ನೆಯಿಂದಲೇ ಅಪಪ್ರಚಾರವನ್ನು ಆರಂಭಿಸಿದ್ದರು. ನಾನೂ ಯಾವತ್ತೂ ಒಬ್ಬರಿಗೆ ಕೆಟ್ಟದ್ದನ್ನು ಬಯಸಿಲ್ಲ. ಬ್ಲಿಸ್‌ಡ್‌ ಚಾರಿಟಬಲ್‌ ಟ್ರಸ್ಟ್‌ನ ಅನಾಥ ಮಕ್ಕಳಿಗಾಗಿ ಈ ಸ್ಪರ್ಧೆಯನ್ನು ನಡೆಸುತ್ತಿದ್ದೇನೆ ಎಂದು ಶ್ರೀಚೌಡೇಶ್ವರಿ ಯುವಕರ ಸ್ನೇಹ ಬಳಗದ ಅಧ್ಯಕ್ಷ ಆರ್‌.ಮಣಿಕಂಠರಾಜ್‌ಗೌಡ ತಿಳಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.