20 ದಿನದಲ್ಲಿ ಎರಡು ಸಾವಿರ ಕ್ವಿಂಟಾಲ್‌ ರಾಗಿ ಖರೀದಿ


Team Udayavani, Feb 21, 2018, 1:08 PM IST

m5-20-dinallli.jpg

ಹುಣಸೂರು: ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹುಣಸೂರು ತಾಲೂಕಿನಲ್ಲಿ ಈವರೆಗೆ ಸುಮಾರು ಎರಡು ಸಾವಿರ ಕ್ವಿಂಟಾಲ್‌ನಷ್ಟು ರಾಗಿ ಖರೀದಿಸಿದೆ. ಈ ಬಾರಿ ಹಿಂಗಾರು ಮಳೆ ಉತ್ತಮವಾಗಿದ್ದರಿಂದ ರೈತರು ಎರಡನೇ ಬೆಳೆಯಾಗಿ ರಾಗಿಯನ್ನು ಸಾಕಷ್ಟು ಬೆಳೆದಿದ್ದಾರೆ.

ಇದೀಗ ಸರ್ಕಾರದ ಆದೇಶದಂತೆ ನಗರದ ಎಪಿಎಂಸಿಯಲ್ಲಿರುವ ಉಗ್ರಾಣ ಕಚೇರಿವತಿಯಿಂದ ಜ.29 ರಿಂದ ಖರೀದಿಸಲಾಗುತ್ತಿದ್ದು, ಇಲ್ಲಿಯವರೆಗೆ 548 ಮಂದಿ ರೈತರು ನೋಂದಾಯಿಸಿಕೊಂಡಿದ್ದಾರೆ. ಎಲ್ಲ ವ್ಯವಹಾರವು ಪಾರದರ್ಶಕತೆಯಿಂದ ಕೂಡಿದ್ದು, ರೈತರ ಬ್ಯಾಂಕ್‌ ಖಾತೆಗೆ ನೇರವಾಗಿ ಹಣ ಜಮಾವಣೆಯಾಗಲಿದೆ.

ಒಬ್ಬ ರೈತನಿಂದ 75 ಕ್ವಿ ಖರೀದಿ: ಸರ್ಕಾರ ಪ್ರತಿ ಕ್ವಿಂಟಾಲ್‌ಗೆ 1900 ರೂ. ಹಾಗೂ ಬೆಂಬಲ ಬೆಲೆ 400ರೂ. ಸೇರಿ ಒಟ್ಟು 2300ರೂ.ಗೆ ಖರೀದಿ ಮಾಡಲಾಗುತ್ತಿದೆ. ಪ್ರತಿ ರೈತರು ಎಕರೆಗೆ ತರಿ 10 ಕ್ವಿ, ನೀರಾವರಿ 15 ಕ್ವಿ, ರಾಗಿಯನ್ನು ಮಾರಾಟ ಮಾಡಬಹುದು, ಒಬ್ಬ ರೈತರಿಂದ ಅತೀ ಹೆಚ್ಚು ಎಂದರೆ 75 ಕ್ವಿ.ರಾಗಿಯನ್ನು ಮಾತ್ರ ಖರೀದಿಸಲಾಗುವುದು.

ರಾಗಿ ಮಾರಾಟ ಮಾಡಲು ಕಂದಾಯ ಇಲಾಖೆಯಿಂದ ಬೆಳೆ ಧೃಡೀಕರಣಪತ್ರ, ಪ್ರಸ್ತುತ ಸಾಲಿನ ಪಹಣಿ, ಆಧಾರ್‌ ಕಾರ್ಡ್‌, ಬ್ಯಾಂಕ್‌ ಖಾತೆ ನಂಬರ್‌, ಪಾಸ್‌ ಪೋರ್ಟ್‌ ಭಾವಚಿತ್ರದೊಂದಿಗೆ ನೋಂದಣಿ ಮಾಡಿಸಿಕೊಳ್ಳಬೇಕಿದೆ. ನಿಗದಿಗೊಳಿಸಿದ ದಿನಾಂಕದಂದು 50 ಕೆ.ಜಿ. ಚೀಲದಲ್ಲಿ ತುಂಬಿ ಉಗ್ರಾಣಕ್ಕೆ ತರಬೇಕು. ಪ್ರತಿಖಾಲಿ ಚೀಲಕ್ಕೆ 12 ರೂ ಪಾವತಿಸಲಾಗುವುದು. ರಾಗಿಯ ಗುಣಮಟ್ಟವನ್ನು ಕೃಷಿ ಇಲಾಖೆ ಅಧಿಕಾರಿಗಳು ಪರಿಶೀಲಿಸಿದ ನಂತರವೇ ಖರೀದಿಸಲಾಗುತ್ತಿದೆ.

540 ನೋಂದಣಿ: ಫೆ.18 ರ ವರೆಗೆ 540 ಮಂದಿ ನೋಂದಾಯಿಸಿಕೊಂಡಿದ್ದು, ರೈತರು ಟ್ರಾಕ್ಟರ್‌ಗಳಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಖರೀದಿ ಕೇಂದ್ರದ ಉಗ್ರಾಣಕ್ಕೆ ರಾಗಿ ಮೂಟೆ ತರುತ್ತಿದ್ದು, ಈಗಾಗಲೇ 300ಕ್ಕೂ ಹೆಚ್ಚು ರೈತರು ಮಾರಾಟ ಮಾಡಿದ್ದಾರೆ.

ಫೆ.28ರವರೆಗೆ ನೋಂದಣಿಗೆ ವಿಸ್ತರಣೆ: ರಾಗಿ ಖರೀದಿ ವ್ಯವಸ್ಥೆಯನ್ನು ಸರ್ಕಾರದ ನಿರ್ದೇಶನದಂತೆ ಫೆ.28 ರವರೆಗೆ ವಿಸ್ತರಿಸಲಾಗಿದ್ದು, ರೈತರು ಸೂಕ್ತ ದಾಖಲಾತಿಯೊಂದಿಗೆ ಎಪಿಎಂಸಿ ಯಾರ್ಡ್‌ ನಲ್ಲಿರುವ ಉಗ್ರಾಣ ಕಚೇರಿಯಲ್ಲಿ ನೋಂದಾಯಿಸಿಕೊಂಡು ನಿಗದಿತ ದಿನಾಂಕದಂದು ತರುವಂತೆ ಉಗ್ರಾಣದ ಉಪ ವ್ಯವಸ್ಥಾಪಕಿ ಗೌರಮ್ಮ ಮನವಿ ಮಾಡಿದ್ದಾರೆ.

ಬಯೋಮೆಟ್ರಿಕ್‌ಗಾಗಿ ಹೆಬ್ಬೆಟ್ಟು ಮಾದರಿ ಅಪ್‌ಲೋಡ್‌ ಆಗದೆ ತೊಂದರೆಯಾಗುತ್ತಿದೆ.ಇದಕ್ಕಾಗಿ ಜಿಲ್ಲಾಧಿಕಾರಿಗಳು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕಲ್ಲದೆ ಇನ್ನೂ ಸಾಕಷ್ಟು ರೈತರ ಬಳಿ ರಾಗಿ ಇದ್ದು, ಮಾರ್ಚ್‌ ಅಂತ್ಯದ ವರೆಗೆ ನೋಂದಣಿಗೆ ಅವಕಾಶ ಕಲ್ಪಿಸಬೇಕು.
-ಅಸ್ವಾಳು ಶಂಕರೇಗೌಡ, ರೈತ ಸಂಘದ ಕಾರ್ಯದರ್ಶಿ 

* ಸಂಪತ್‌ ಕುಮಾರ್‌ ಹುಣಸೂರು

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.